ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್. ಆದಾಗ್ಯೂ, ಆಧುನಿಕ ವೈದ್ಯಕೀಯ ಕ್ಷೇತ್ರವು ಎಷ್ಟೊoದು ಮುಂದುವರೆದಿದೆ ಎಂದರೆ, ಒಂದು ವೇಳೆ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ.

ಧೂಮಪಾನ, ಮದ್ಯಪಾನಗಳಂತಹ ದುಶ್ಚಟಗಳೊoದಿಗೆ, ನಮ್ಮ ಆಹಾರಕ್ರಮವೂ ಕೂಡ ಅನೇಕ ಬಾರಿ ಕ್ಯಾನ್ಸರ್ಗೆ ಕಾರಣವಾಗಬಹುದು. ಆದ್ದರಿಂದ ಕ್ಯಾನ್ಸರ್ ಅನ್ನು ದೂರವಿರಿಸಲು ನೆರವಾಗುವ ಆಹಾರಕ್ರಮವು ಯಾವುದೆಂದು ತಿಳಿಯರಿ.
ಈರುಳ್ಳಿ ಮತ್ತು ಬೆಳ್ಳುಳ್ಳಿ:-
ಭಾರತೀಯ ಅಡುಗೆಗಳಲ್ಲಿ ಪ್ರಮುಖ ಪಾತ್ರವನ್ನು ಪಡೆದಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಔಷಧೀಯ ಗುಣಗಳು ಇದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ. ಹಲವಾರು ಶತಮಾನಗಳಿಂದಲೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಮನೆಮದ್ದಾಗಿ ಬಳಸಿಕೊಳ್ಳುತ್ತಾ ಇದ್ದಾರೆ. ಈರುಳ್ಳಿ ಮತ್ತು ಬೆಳ್ಳುಳ್ಳಿ ಕೆಲವರಿಗೆ ಇಷ್ಟವಾಗಲ್ಲ.

ಯಾಕೆಂದರೆ ಇದರ ಘಾಟು ವಾಸನೆ. ಅಲ್ಲಿಯುಮ್ಸ್ ಪ್ರಭೇದಕ್ಕೆ ಸೇರಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಕ್ಯಾನ್ಸರ್ ಅನ್ನು ತಡೆಯುವ ಗುಣಗಳು ಇವೆಯಂತೆ. ಇದರಲ್ಲಿ ಇರುವಂತಹ ಕೆಲವೊಂದು ನೈಸರ್ಗಿಕ ರಾಸಾಯನಿಕಗಳು ಕೆಲವು ಬಗೆಯ ಕ್ಯಾನ್ಸರ್ನ್ನು ತಡೆಯುತ್ತದೆ. ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಇರುವಂತಹ ಆ್ಯಂಟಿಆಕ್ಸಿಡೆಂಟ್ಗಳು ಡಿಎನ್ ಎ ಕೋಶಗಳಿಗೆ ಹಾನಿಯುಂಟು ಮಾಡುವ ಫ್ರೀ ರ್ಯಾಡಿಕಲ್ ಅನ್ನು ತಡೆಯುತ್ತದೆ.
ಎಲೆಕೋಸು:-
ಪ್ರತಿದಿನ ಎಲೆಕೋಸನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ಅದರಿಂದ ನಮ್ಮ ದೇಹವು ಹೆಚ್ಚಿನ ಪೋಷಕಾಂಶಗಳನ್ನು ಪಡೆದುಕೊಂಡು ಕ್ಯಾನ್ಸರ್ ಕಾಯಿಲೆಯಿಂದ ನಮ್ಮನ್ನು ಕಾಪಾಡುತ್ತದೆ. ಇದಕ್ಕೆಲ್ಲಾ ಕಾರಣ ಎಲೆಕೋಸಿನಲ್ಲಿ ಸಲ್ಫೋರಫನೆ ಎನ್ನುವ ಅಂಶವಿದ್ದು, ಇದು ಕ್ಯಾನ್ಸರ್ನಿಂದ ರಕ್ಷಿಸುತ್ತದೆ.

ಎಲೆಕೋಸಿನಲ್ಲಿ ಇರುವಂತಹ ಅತ್ಯಂತ ಶಕ್ತಿಶಾಲಿ ಆ್ಯಂಟಿಆಕ್ಸಿಡೆಂಟ್ ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಗೆ ಕಾರಣವಾಗುವಂತಹ ಫ್ರೀ ರ್ಯಾಡಿಕಲ್ ಗಳನ್ನು ನಿವಾರಣೆ ಮಾಡುತ್ತದೆ.
ಹಸಿರು ಬಟಾಣಿ:-
ಹಸಿರು ಬಟಾಣಿಗಳು ಕ್ಯಾನ್ಸರನ್ನು ನಿಯಂತ್ರಿಸಲು ಇರುವ ಅತ್ಯಂತ ಶಕ್ತಿಶಾಲಿ ತರಕಾರಿಗಳಾಗಿವೆ. ಅದರಲ್ಲೂ ಮುಖ್ಯವಾಗಿ ಜಠರದ ಕ್ಯಾನ್ಸರ್ ನಿವಾರಿಸಲು ಇವು ಸಹಾಯ ಮಾಡುತ್ತವೆ.

ಇದರಲ್ಲಿ ಪೊಟಾಶಿಯಂ, ಕಬ್ಬಿಣಾಂಶ ಮತ್ತು ವಿಟಮಿನ್ಗಳು ಯಥೇಚ್ಛವಾಗಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಶುದ್ಧಗೊಳಿಸಲು ಇವು ನೆರವು ನೀಡುತ್ತವೆ.
ಬೀನ್ಸ್:-
ಬೀನ್ಸ್ಗಳಲ್ಲಿ ವಿಟಮಿನ್ ಬಿಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇದು ಕ್ಯಾನ್ಸರ್ ನಿಯಂತ್ರಿಸಲು ಗಣನೀಯವಾದ ಕೊಡುಗೆಯನ್ನು ನೀಡುತ್ತದೆ.

ಇವುಗಳು ಕಾರ್ಸಿನೊಜೆನ್ಗಳನ್ನು ನಿವಾರಿಸುವ ಲುಲುಟೇನ್ ಮತ್ತು ವೈಯೊಲಕ್ಸಂಥಿನ್ ಮತ್ತು ಬೀಟಾ-ಕೆರೊಟಿನ್ಗಳು ಅಧಿಕ ಪ್ರಮಾಣದಲ್ಲಿರುತ್ತವೆ.
ಪಾಲಕ್ ಸೊಪ್ಪು:-
ಪಾಲಕ್ ಸೊಪ್ಪು ಸಹ ಪ್ರಪಂಚದಲ್ಲಿರುವ ಅತ್ಯಂತ ಆರೋಗ್ಯಕಾರಿ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಅದರಲ್ಲೂ ಇದು ಕ್ಯಾನ್ಸರನ್ನು ನಿಯಂತ್ರಿಸುವ ಆಹಾರ ಪದಾರ್ಥವಾಗಿರುವುದು ಸಹ ಇದರ ಹೆಚ್ಚುಗಾರಿಕೆ.

ಸ್ಪೈನಚ್ನಲ್ಲಿ ಪೊಟಾಶಿಯಂ, ಸತು, ವಿಟಮಿನ್ ಕೆ, ಇ, ಮತ್ತು ಎ ಗಳು ಅಧಿಕ ಪ್ರಮಾಣದಲ್ಲಿರುತ್ತವೆ.
ಬೀಟ್ರೂಟ್ಗಳು:-
ಬೀಟ್ರೂಟ್ಗಳು ರಕ್ತ ಪರಿಚಲನೆಯನ್ನು ಮತ್ತು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತವೆ. ಇವುಗಳು ರಕ್ತದೊತ್ತಡವನ್ನು ನಿವಾರಿಸುವ ಅಂಶಗಳನ್ನು ಸಹ ಹೊಂದಿರುತ್ತವೆ.

ತರಕಾರಿ ಮತ್ತು ಹಣ್ಣನ್ನು ಹೆಚ್ಚು ಹೆಚ್ಚು ಸೇವಿಸಿರಿ:-
ತಾಜಾ ತರಕಾರಿ ಮತ್ತು ಹಣ್ಣುಗಳನ್ನು ನಿಮ್ಮ ದಿನನಿತ್ಯದ ಆಹಾರದ ಕ್ರಮದಲ್ಲಿ ಸೇರಿಸಿಕೊಳ್ಳುವುದರ ಮೂಲಕ ನಿಮ್ಮ ಶರೀರಕ್ಕೆ ಅವಶ್ಯಕವಾಗಿರುವ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಒದಗಿಸಬಹುದು. ಈ ಪೋಷಕಾಂಶಗಳು ಮತ್ತು ವಿಟಮಿನ್ಗಳು , ನಿಮ್ಮ ರೋಗನಿರೋಧಕ ಮಟ್ಟವನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸೋಂಕುಗಳು ಮತ್ತು ಕ್ಯಾನ್ಸರ್ ನ ವಿರುದ್ಧ ಕಾದಾಡಲೂ ಕೂಡ ಸಹಕಾರಿಯಾಗಿವೆ. ಅಲ್ಲದೇ, ಇವು ಜಂಕ್ ಮತ್ತು ಕೊಬ್ಬುಯುಕ್ತ ಆಹಾರಗಳ ಬಗೆಗಿನ ನಿಮಗಿರುವ ಹಸಿವನ್ನು ತನ್ನಿಂತಾನಾಗಿಯೇ ಕಡಿಮೆ ಮಾಡುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.