News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಕ್ಯಾನ್ಸರ್ ರೋಗ ನಿಯಂತ್ರಿಸುವ ಪವರ್ ಈ ತರಕಾರಿಗಳಿಗಿವೆ..!ತಿಳಿಯಲು ಈ ಲೇಖನ ಓದಿ…

345

ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್. ಆದಾಗ್ಯೂ, ಆಧುನಿಕ ವೈದ್ಯಕೀಯ ಕ್ಷೇತ್ರವು ಎಷ್ಟೊoದು ಮುಂದುವರೆದಿದೆ ಎಂದರೆ, ಒಂದು ವೇಳೆ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ.

ಧೂಮಪಾನ, ಮದ್ಯಪಾನಗಳಂತಹ ದುಶ್ಚಟಗಳೊoದಿಗೆ, ನಮ್ಮ ಆಹಾರಕ್ರಮವೂ ಕೂಡ ಅನೇಕ ಬಾರಿ ಕ್ಯಾನ್ಸರ್‌ಗೆ ಕಾರಣವಾಗಬಹುದು. ಆದ್ದರಿಂದ ಕ್ಯಾನ್ಸರ್ ಅನ್ನು ದೂರವಿರಿಸಲು ನೆರವಾಗುವ ಆಹಾರಕ್ರಮವು ಯಾವುದೆಂದು ತಿಳಿಯರಿ.

ಈರುಳ್ಳಿ ಮತ್ತು ಬೆಳ್ಳುಳ್ಳಿ:-

ಭಾರತೀಯ ಅಡುಗೆಗಳಲ್ಲಿ ಪ್ರಮುಖ ಪಾತ್ರವನ್ನು ಪಡೆದಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಔಷಧೀಯ ಗುಣಗಳು ಇದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ. ಹಲವಾರು ಶತಮಾನಗಳಿಂದಲೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಮನೆಮದ್ದಾಗಿ ಬಳಸಿಕೊಳ್ಳುತ್ತಾ ಇದ್ದಾರೆ. ಈರುಳ್ಳಿ ಮತ್ತು ಬೆಳ್ಳುಳ್ಳಿ ಕೆಲವರಿಗೆ ಇಷ್ಟವಾಗಲ್ಲ.

ಯಾಕೆಂದರೆ ಇದರ ಘಾಟು ವಾಸನೆ. ಅಲ್ಲಿಯುಮ್ಸ್ ಪ್ರಭೇದಕ್ಕೆ ಸೇರಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಕ್ಯಾನ್ಸರ್ ಅನ್ನು ತಡೆಯುವ ಗುಣಗಳು ಇವೆಯಂತೆ. ಇದರಲ್ಲಿ ಇರುವಂತಹ ಕೆಲವೊಂದು ನೈಸರ್ಗಿಕ ರಾಸಾಯನಿಕಗಳು ಕೆಲವು ಬಗೆಯ ಕ್ಯಾನ್ಸರ್‌ನ್ನು ತಡೆಯುತ್ತದೆ. ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಇರುವಂತಹ ಆ್ಯಂಟಿಆಕ್ಸಿಡೆಂಟ್‌ಗಳು ಡಿಎನ್ ಎ ಕೋಶಗಳಿಗೆ ಹಾನಿಯುಂಟು ಮಾಡುವ ಫ್ರೀ ರ್ಯಾಡಿಕಲ್ ಅನ್ನು ತಡೆಯುತ್ತದೆ.

ಎಲೆಕೋಸು:-

ಪ್ರತಿದಿನ ಎಲೆಕೋಸನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ಅದರಿಂದ ನಮ್ಮ ದೇಹವು ಹೆಚ್ಚಿನ ಪೋಷಕಾಂಶಗಳನ್ನು ಪಡೆದುಕೊಂಡು ಕ್ಯಾನ್ಸರ್ ಕಾಯಿಲೆಯಿಂದ ನಮ್ಮನ್ನು ಕಾಪಾಡುತ್ತದೆ. ಇದಕ್ಕೆಲ್ಲಾ ಕಾರಣ ಎಲೆಕೋಸಿನಲ್ಲಿ ಸಲ್ಫೋರಫನೆ ಎನ್ನುವ ಅಂಶವಿದ್ದು, ಇದು ಕ್ಯಾನ್ಸರ್‌ನಿಂದ ರಕ್ಷಿಸುತ್ತದೆ.

ಎಲೆಕೋಸಿನಲ್ಲಿ ಇರುವಂತಹ ಅತ್ಯಂತ ಶಕ್ತಿಶಾಲಿ ಆ್ಯಂಟಿಆಕ್ಸಿಡೆಂಟ್ ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಗೆ ಕಾರಣವಾಗುವಂತಹ ಫ್ರೀ ರ್ಯಾಡಿಕಲ್ ಗಳನ್ನು ನಿವಾರಣೆ ಮಾಡುತ್ತದೆ.

ಹಸಿರು ಬಟಾಣಿ:-

ಹಸಿರು ಬಟಾಣಿಗಳು ಕ್ಯಾನ್ಸರನ್ನು ನಿಯಂತ್ರಿಸಲು ಇರುವ ಅತ್ಯಂತ ಶಕ್ತಿಶಾಲಿ ತರಕಾರಿಗಳಾಗಿವೆ. ಅದರಲ್ಲೂ ಮುಖ್ಯವಾಗಿ ಜಠರದ ಕ್ಯಾನ್ಸರ್ ನಿವಾರಿಸಲು ಇವು ಸಹಾಯ ಮಾಡುತ್ತವೆ.

ಇದರಲ್ಲಿ ಪೊಟಾಶಿಯಂ, ಕಬ್ಬಿಣಾಂಶ ಮತ್ತು ವಿಟಮಿನ್‍ಗಳು ಯಥೇಚ್ಛವಾಗಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಶುದ್ಧಗೊಳಿಸಲು ಇವು ನೆರವು ನೀಡುತ್ತವೆ.

ಬೀನ್ಸ್:-

ಬೀನ್ಸ್‌ಗಳಲ್ಲಿ ವಿಟಮಿನ್ ಬಿಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇದು ಕ್ಯಾನ್ಸರ್ ನಿಯಂತ್ರಿಸಲು ಗಣನೀಯವಾದ ಕೊಡುಗೆಯನ್ನು ನೀಡುತ್ತದೆ.

ಇವುಗಳು ಕಾರ್ಸಿನೊಜೆನ್‍ಗಳನ್ನು ನಿವಾರಿಸುವ ಲುಲುಟೇನ್ ಮತ್ತು ವೈಯೊಲಕ್ಸಂಥಿನ್ ಮತ್ತು ಬೀಟಾ-ಕೆರೊಟಿನ್‍ಗಳು ಅಧಿಕ ಪ್ರಮಾಣದಲ್ಲಿರುತ್ತವೆ.

ಪಾಲಕ್ ಸೊಪ್ಪು:-

ಪಾಲಕ್ ಸೊಪ್ಪು ಸಹ ಪ್ರಪಂಚದಲ್ಲಿರುವ ಅತ್ಯಂತ ಆರೋಗ್ಯಕಾರಿ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಅದರಲ್ಲೂ ಇದು ಕ್ಯಾನ್ಸರನ್ನು ನಿಯಂತ್ರಿಸುವ ಆಹಾರ ಪದಾರ್ಥವಾಗಿರುವುದು ಸಹ ಇದರ ಹೆಚ್ಚುಗಾರಿಕೆ.

ಸ್ಪೈನಚ್‍ನಲ್ಲಿ ಪೊಟಾಶಿಯಂ, ಸತು, ವಿಟಮಿನ್ ಕೆ, ಇ, ಮತ್ತು ಎ ಗಳು ಅಧಿಕ ಪ್ರಮಾಣದಲ್ಲಿರುತ್ತವೆ.

ಬೀಟ್‍ರೂಟ್‍ಗಳು:-

ಬೀಟ್‍ರೂಟ್‍ಗಳು ರಕ್ತ ಪರಿಚಲನೆಯನ್ನು ಮತ್ತು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತವೆ. ಇವುಗಳು ರಕ್ತದೊತ್ತಡವನ್ನು ನಿವಾರಿಸುವ ಅಂಶಗಳನ್ನು ಸಹ ಹೊಂದಿರುತ್ತವೆ.

ತರಕಾರಿ ಮತ್ತು ಹಣ್ಣನ್ನು ಹೆಚ್ಚು ಹೆಚ್ಚು ಸೇವಿಸಿರಿ:-

ತಾಜಾ ತರಕಾರಿ ಮತ್ತು ಹಣ್ಣುಗಳನ್ನು ನಿಮ್ಮ ದಿನನಿತ್ಯದ ಆಹಾರದ ಕ್ರಮದಲ್ಲಿ ಸೇರಿಸಿಕೊಳ್ಳುವುದರ ಮೂಲಕ ನಿಮ್ಮ ಶರೀರಕ್ಕೆ ಅವಶ್ಯಕವಾಗಿರುವ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಒದಗಿಸಬಹುದು. ಈ ಪೋಷಕಾಂಶಗಳು ಮತ್ತು ವಿಟಮಿನ್‌ಗಳು , ನಿಮ್ಮ ರೋಗನಿರೋಧಕ ಮಟ್ಟವನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸೋಂಕುಗಳು ಮತ್ತು ಕ್ಯಾನ್ಸರ್ ನ ವಿರುದ್ಧ ಕಾದಾಡಲೂ ಕೂಡ ಸಹಕಾರಿಯಾಗಿವೆ. ಅಲ್ಲದೇ, ಇವು ಜಂಕ್ ಮತ್ತು ಕೊಬ್ಬುಯುಕ್ತ ಆಹಾರಗಳ ಬಗೆಗಿನ ನಿಮಗಿರುವ ಹಸಿವನ್ನು ತನ್ನಿಂತಾನಾಗಿಯೇ ಕಡಿಮೆ ಮಾಡುತ್ತವೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    2018ರ ಮೊದಲ ದಿನದ ಯಾವ ದೇಶದಲ್ಲಿ ಎಷ್ಟು ಶಿಶುಗಳ ಜನನ..!ತಿಳಿಯಲು ಈ ಲೇಖನ ಓದಿ..

    2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

  • ಸುದ್ದಿ

    ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

    ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….

  • ಉಪಯುಕ್ತ ಮಾಹಿತಿ

    ಮಾರ್ಚ್ ಬಂತು.ಪರೀಕ್ಷೆ ಭಯವೇ..?ಭಯ ಬೇಡ?ಈ ಕ್ರಮಗಳನ್ನು ಅನುಸರಿಸಿ ಎಕ್ಸಾಮ್ ಭಯದಿಂದ ದೂರವಿರಿ…

    ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.

  • ಸಿನಿಮಾ

    KGF ಚಿತ್ರದ ಬಗ್ಗೆ ಪುನೀತ್ ರಾಜ್ ಸೇರಿದಂತೆ ಕನ್ನಡದ ಸ್ಟಾರ್ ನಟರು ಹೇಳಿದ್ದೇನು ಗೊತ್ತಾ..!

    ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…

  • ಸುದ್ದಿ

    ‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

    ‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ!…