ಜೀವನಶೈಲಿ

ಖಾಲಿ ಹೊಟ್ಟೆಯಲ್ಲಿ ಚಹಾ(ಟೀ) ಕುಡಿದರೆ ಏನಾಗುತ್ತೆ ಗೊತ್ತಾ?

5294

ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು.  ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ.  ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.

ಆದರೆ ಇದು ಆರೋಗ್ಯಕರವೇ? ತಜ್ಞರಲ್ಲಿ ಈ ಪ್ರಶ್ನೆಯನ್ನು ಕೇಳಿದರೆ ಖಾಲಿ ಹೊಟ್ಟೆಯಲ್ಲಿ ಟೀ ಸೇವಿಸುವುದು ಅತ್ಯಂತ ಅನಾರೋಗ್ಯಕರ ಅಭ್ಯಾಸ ಎಂಬ ಉತ್ತರ ಸಿಗುತ್ತದೆ.ಹಾಗಾದರೆ ಟೀ ಯಾವಾಗ ಕುಡಿಯಬೇಕು ಎಂಬ ಪ್ರಶ್ನೆಗೆ ತಜ್ಞರು ಬೆಳಗ್ಗಿನ ಉಪಾಹಾರದ ಬಳಿಕ ಸೇವಿಸುವುದು ಉತ್ತಮ ಎಂಬ ಉತ್ತರ ನೀಡುತ್ತಾರೆ. ಆದರೆ ಟೀ ಸೇವನೆಯ ಪ್ರಮಾಣ ಇಡಿಯ ದಿನದಲ್ಲಿ ಮಿತವಾಗಿರುವುದೂ ಅಗತ್ಯ.

ಹಾಗಾದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಹುದೇ? ಮುಂದೆ ಓದಿ….

 ವಾಕರಿಕೆ ಬರುತ್ತದೆಯೇ?

ಟೀ ಕ್ಷಾರೀಯವೂ ಆಗಿದೆ ಕೊಂಚ ಆಮ್ಲೀಯವೂ ಆಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಜೀರ್ಣರಸಗಳ ಪ್ರಭಾವ ಏರುಪೇರಾಗುತ್ತದೆ. ಈ ಏರುಪೇರು ವಾಕರಿಕೆ ಬರಿಸುತ್ತದೆ.

ಕಪ್ಪು (ಬ್ಲಾಕ್) ಟೀ ಸುರಕ್ಷಿತವೇ?

ಕಪ್ಪು ಟೀ ಎಂದರೆ ಹೆಚ್ಚು ಕುದಿಸದ ಮತ್ತು ಹಾಲು ಸೇರಿಸದ ಟೀ. ಇದು ತೂಕ ಇಳಿಸಲು ಉತ್ತಮವಾದರೂ ಖಾಲಿ ಹೊಟ್ಟೆಯಲ್ಲಿ ಕುಡಿಯುವ ಮೂಲಕ ಆಮ್ಲೀಯತೆ ಹೆಚ್ಚುತ್ತದೆ, ಇದರಿಂದ ಹೊಟ್ಟೆಯ ಜೀರ್ಣರಸಗಳೂ ಪ್ರಭಾವಕ್ಕೊಳಗಾಗಿ ಹೊಟ್ಟೆಯುಬ್ಬರಿಕೆ ಮತ್ತು ಹೊಟ್ಟೆ ತುಂಬಿರುವ ಹುಸಿಭಾವನೆಯನ್ನು ಮೂಡಿಸುತ್ತದೆ.

ಹಾಲು ಸೇರಿಸಿದ ಟೀ ಕುಡಿದರೆ ಆಗುವ ಅಡ್ಡಪರಿಣಾಮಗಳೇನು?

ಭಾರತದಲ್ಲಿ ಟೀ ಕುಡಿಯುವ ತೊಂಭತ್ತು ಶೇಖಡಾ ಜನರಲ್ಲಿ ಎಂಭತ್ತೊಂಭತ್ತು ಶೇಖಡಾ ಜನರು ಹಾಲು ಸೇರಿಸಿದ ಟೀ ಕುಡಿಯುತ್ತಾರೆ. ಆದರೆ ದಿನಕ್ಕೆ ಮೂರಕ್ಕಿಂತ ಹೆಚ್ಚು ಕಪ್ ಕುಡಿದರೆ ಇದು ಅನಗತ್ಯ ಕೊಬ್ಬು, ಆಮ್ಲೀಯತೆ ಮತ್ತು ಟಿನ್ನಿಟಸ್  ಅಥವಾ ಕಿವಿಗಳಲ್ಲಿ ಗುಂಯ್ಗುಡುವ ತೊಂದರೆಯನ್ನು ತಂದಿಡುತ್ತದೆ.

ಅದರಲ್ಲೂ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಸುಸ್ತಾದ ಭಾವನೆ, ಹೊಟ್ಟೆಯುಬ್ಬರಿಕೆ, ಜೀರ್ಣರಸಗಳು ಪ್ರಭಾವ ಕಳೆದುಕೊಳ್ಳುವುದು ಮೊದಲಾದ ತೊಂದರೆಗಳು ಎದುರಾಗಬಹುದು. ಇಲ್ಲಿ ಓದಿ :- ಗರ್ಭಿಣಿ ಮಹಿಳೆಯರು ಇವನ್ನು ಬಳಸಿದರೆ, ಹುಟ್ಟುವ ಮಕ್ಕಳಿಗೆ ಅಪಾಯ..!

ಸ್ಟ್ರಾಂಗ್ ಟೀ ಕುಡಿದರೆ ಯಾವ ದುಷ್ಪರಿಣಾಮಗಳಾಗುತ್ತವೆ?

ಹೆಚ್ಚಿನ ರುಚಿ ಪಡೆಯಲು ಎರಡು ವಿಧಾನಗಳಿವೆ. ಮೊದಲನೆಯದು ಟೀಪುಡಿಯನ್ನು ಹೆಚ್ಚು ಸಮಯದವರೆಗೆ ಕುದಿಸುವುದು. ಎರಡನೆಯದು ಹೆಚ್ಚಿನ ಪ್ರಮಾಣದ ಟೀ ಪುಡಿಹಾಕಿ ಕೊಂಚ ಸಮಯದ ವರೆಗೆ ಕುದಿಸುವುದು. ಆದರೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದಾದರೆ ಎರಡೂ ವಿಧಾನಗಳು ಮಾರಕವಾಗಿವೆ. ಅದರಲ್ಲೂ ಹಾಲಿಲ್ಲದ ಸ್ಟ್ರಾಂಗ್ ಟೀ ಕುಡಿಯುವುದರ ಮೂಲಕ ಜೀರ್ಣವ್ಯವಸ್ಥೆ ಹಾಳಾಗುತ್ತದೆ. ಏಕೆಂದರೆ ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಆಮ್ಲಗಳು ಜೀರ್ಣರಸಗಳ ರಚನೆಯನ್ನು ಬದಲಿಸಿಬಿಡುತ್ತವೆ. ಇದು ಅಲ್ಸರ್, ಹುಳಿತೇಗು, ಹೊಟ್ಟೆಯುರಿ, ಎದೆಯುರಿ ಮೊದಲಾದವುಗಳಿಗೆ ನೇರವಾಗಿ ಕಾರಣವಾಗುತ್ತದೆ.

ನಾಲ್ಕೈದು ಬಗೆಯ ಟೀಪುಡಿ ಬೆರೆಸಿದರೆ ಏನಾಗುತ್ತದೆ

ಫ್ಯಾಕ್ಟರಿಯಲ್ಲಿ ತ್ಯಾಜ್ಯವಾಗಿ ಹೋಗಬಹುದಾದ, ಆದರೆ ಕೊಂಚ ಟೀ ಅಂಶವಿರುವ ಪುಡಿಯನ್ನು ಅಲ್ಪ ಪ್ರಮಾಣದಲ್ಲಿ ಟೀಪುಡಿಯಲ್ಲಿ ಬೆರೆಸಿ ಲಾಭ ಮಾಡಿಕೊಳ್ಳಲಾಗುತ್ತದೆ. ಅಗ್ಗದ ಟೀಪುಡಿಯನ್ನು ದುಬಾರಿ ಟೀಪುಡಿಯೊಂದಿಗೂ ಬೆರೆಸಿ ಮಾರಾಟ ಮಾಡುತ್ತಾರೆ.

ಆದರೆ ಪ್ರತಿಷ್ಠಿತ ಸಂಸ್ಥೆಗಳು ನುರಿತ ಚಹಾ ರುಚಿ ನೋಡುವವರ ಮೂಲಕ , ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಎರಡು ಅಥವಾ ಹೆಚ್ಚು ಪುಡಿಗಳನ್ನು ಬೆರೆಸಿ ಪರೀಕ್ಷಿಸಿ ಸುರಕ್ಷಿತ ಎಂದು ಖಚಿತಪಡಿಸಿದ ಮೇಲೆ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಾರೆ. ಇದಕ್ಕೆ ಬ್ಲೆಂಡ್ಎಂದು ಕರೆಯುತ್ತಾರೆ.

ಈ ಬ್ಲೆಂಡ್ ಟೀಪುಡಿ ಕುಡಿಯುವುದು ಸುರಕ್ಷಿತವೇ ಹೊರತು ನಾವಾಗಿ ನಮ್ಮ ಮನಸ್ಸಿಗೆ ಬಂದಂತೆ ಎರಡು ಅಥವಾ ಹೆಚ್ಚಿನ ಟೀಪುಡಿಗಳನ್ನು ಸೇರಿಸಿ ಕುಡಿಯುವುದು ಆರೋಗ್ಯಕ್ಕೆ ಮಾರಕ ಹಾಗೂ ಇದು ಪಾನಮತ್ತನಾಗಿರುವ ಅನುಭವವನ್ನೂ ನೀಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಥ್ರೀಮಿಕ್ಸ್, ಸೆವೆನ್ ಮಿಕ್ಸ್ ಎಲ್ಲವೂ ವ್ಯಾಪಾರದ ತಂತ್ರಗಳೇ ಹೊರತು ಆರೋಗ್ಯಕರವಲ್ಲ.

ಟೀ ಮತ್ತು ಬಿಸ್ಕತ್
ಭಾರತದಲ್ಲಿ ಅತಿ ಸಾಮಾನ್ಯವಾದ ಧಿಡೀರ್ ತಿಂಡಿ ಎಂದರೆ ಟೀ ಮತ್ತು ಬಿಸ್ಕತ್.  ಟೀ ಮತ್ತು ಬಿಸ್ಕತ್ ತಿನ್ನುವುದು ಉತ್ತಮ ಅಭ್ಯಾಸ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಬಿಸ್ಕತ್ ಬದಲಿಗೆ ಟೋಸ್ಟ್, ರಸ್ಕ್ ಮೊದಲಾದವುಗಳನ್ನೂ ಸೇವಿಸಬಹುದು. ಇವುಗಳಲ್ಲಿರುವ ಹಿಟ್ಟಿನ ಅಂಶ ಟೀ ಯಲ್ಲಿರುವ ಆಮ್ಲೀಯತೆಯನ್ನು ಹೀರಿಕೊಳ್ಳುವ ಕಾರಣ ಜೀರ್ಣರಸಗಳು ಹೆಚ್ಚು ಪ್ರಭಾವಕ್ಕೊಳಗಾಗುವುದಿಲ್ಲ. ಟೀ ಒಟ್ಟಿಗೆ ಸಿಹಿ ಅಥವಾ ಉಪ್ಪಿನ ಅಂಶವಿರುವ ತಿಂಡಿಗಳನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಸೋಡಿಯಂ ಅಂಶವನ್ನು ಪಡೆದುಕೊಂಡು ಹೊಟ್ಟೆಯ ಮತ್ತು ಕರುಳಿನ ಹುಣ್ಣು (ಅಲ್ಸರ್) ನಿಂದ ಪಾರಾಗಬಹುದು

ಟೀ ಕುಡಿಯುವುದರಲ್ಲಿ ಅತಿಕೆಟ್ಟ ಅಭ್ಯಾಸ 

ಆಹಾರ ಸೇವನೆಯ ಬಳಿಕ ಟೀ ಕುಡಿಯುವುದು ಕೆಟ್ಟ ಅಭ್ಯಾಸವಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಸಿನಿಮಾ

    ಕಿಚ್ಚ ನಟಿಸುತ್ತಿರುವ ಈ ಹಾಲಿವುಡ್ ಚಿತ್ರದಲ್ಲಿ, ಖ್ಯಾತ ನಾಯಕಿ ಮತ್ತು ನಿರ್ದೇಶಕ ಯಾರು ಗೊತ್ತಾ..?ಈ ಲೇಖನ ಓದಿ ಶಾಕ್ ಆಗ್ತೀರಾ…

    ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.

  • ಉಪಯುಕ್ತ ಮಾಹಿತಿ

    ವೋಟರ್ ಕಾರ್ಡ್ ನಿಮ್ಮಲ್ಲಿ ಇಲ್ಲವೇ?ಚಿಂತೆ ಬೇಡ!ವೋಟರ್ ಐಡಿ ಇಲ್ಲದಿದ್ದರೂ ವೋಟ್ ಹಾಕೋದು ಹೇಗೆ ಗೊತ್ತಾ?

    ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…

  • ಸುದ್ದಿ, ಸ್ಪೂರ್ತಿ

    70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ, 3 ವರ್ಷದ ಬಾಲಕನ ಪ್ರಾಣ ಉಳಿಸಿದ ಅಂಬುಲೆನ್ಸ್ ಚಾಲಕ.

    21 ವರ್ಷದ ತಿರುಪುರ್ ಮೂಲಕದ  ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ  ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…

  • ಸುದ್ದಿ

    ತಂದೆಯಾದ ಕುಶಿಯಲ್ಲಿ ಲೂಸ್ ಮಾದ ಯೋಗಿ…….

    ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌ ಲಲಿತಾ ಅನಾಪುರ್‌, ಬೀದರ್-‌ ಈಶ್ವರ್‌ ಸಿಂಗ್‌ ಠಾಕೂರ್‌, ಭಾಲ್ಕಿ- ಪ್ರಕಾಶ್‌ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…