ಜೀವನಶೈಲಿ

ಖಾಲಿ ಹೊಟ್ಟೆಯಲ್ಲಿ ಚಹಾ(ಟೀ) ಕುಡಿದರೆ ಏನಾಗುತ್ತೆ ಗೊತ್ತಾ?

5283

ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು.  ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ.  ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.

ಆದರೆ ಇದು ಆರೋಗ್ಯಕರವೇ? ತಜ್ಞರಲ್ಲಿ ಈ ಪ್ರಶ್ನೆಯನ್ನು ಕೇಳಿದರೆ ಖಾಲಿ ಹೊಟ್ಟೆಯಲ್ಲಿ ಟೀ ಸೇವಿಸುವುದು ಅತ್ಯಂತ ಅನಾರೋಗ್ಯಕರ ಅಭ್ಯಾಸ ಎಂಬ ಉತ್ತರ ಸಿಗುತ್ತದೆ.ಹಾಗಾದರೆ ಟೀ ಯಾವಾಗ ಕುಡಿಯಬೇಕು ಎಂಬ ಪ್ರಶ್ನೆಗೆ ತಜ್ಞರು ಬೆಳಗ್ಗಿನ ಉಪಾಹಾರದ ಬಳಿಕ ಸೇವಿಸುವುದು ಉತ್ತಮ ಎಂಬ ಉತ್ತರ ನೀಡುತ್ತಾರೆ. ಆದರೆ ಟೀ ಸೇವನೆಯ ಪ್ರಮಾಣ ಇಡಿಯ ದಿನದಲ್ಲಿ ಮಿತವಾಗಿರುವುದೂ ಅಗತ್ಯ.

ಹಾಗಾದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಹುದೇ? ಮುಂದೆ ಓದಿ….

 ವಾಕರಿಕೆ ಬರುತ್ತದೆಯೇ?

ಟೀ ಕ್ಷಾರೀಯವೂ ಆಗಿದೆ ಕೊಂಚ ಆಮ್ಲೀಯವೂ ಆಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಜೀರ್ಣರಸಗಳ ಪ್ರಭಾವ ಏರುಪೇರಾಗುತ್ತದೆ. ಈ ಏರುಪೇರು ವಾಕರಿಕೆ ಬರಿಸುತ್ತದೆ.

ಕಪ್ಪು (ಬ್ಲಾಕ್) ಟೀ ಸುರಕ್ಷಿತವೇ?

ಕಪ್ಪು ಟೀ ಎಂದರೆ ಹೆಚ್ಚು ಕುದಿಸದ ಮತ್ತು ಹಾಲು ಸೇರಿಸದ ಟೀ. ಇದು ತೂಕ ಇಳಿಸಲು ಉತ್ತಮವಾದರೂ ಖಾಲಿ ಹೊಟ್ಟೆಯಲ್ಲಿ ಕುಡಿಯುವ ಮೂಲಕ ಆಮ್ಲೀಯತೆ ಹೆಚ್ಚುತ್ತದೆ, ಇದರಿಂದ ಹೊಟ್ಟೆಯ ಜೀರ್ಣರಸಗಳೂ ಪ್ರಭಾವಕ್ಕೊಳಗಾಗಿ ಹೊಟ್ಟೆಯುಬ್ಬರಿಕೆ ಮತ್ತು ಹೊಟ್ಟೆ ತುಂಬಿರುವ ಹುಸಿಭಾವನೆಯನ್ನು ಮೂಡಿಸುತ್ತದೆ.

ಹಾಲು ಸೇರಿಸಿದ ಟೀ ಕುಡಿದರೆ ಆಗುವ ಅಡ್ಡಪರಿಣಾಮಗಳೇನು?

ಭಾರತದಲ್ಲಿ ಟೀ ಕುಡಿಯುವ ತೊಂಭತ್ತು ಶೇಖಡಾ ಜನರಲ್ಲಿ ಎಂಭತ್ತೊಂಭತ್ತು ಶೇಖಡಾ ಜನರು ಹಾಲು ಸೇರಿಸಿದ ಟೀ ಕುಡಿಯುತ್ತಾರೆ. ಆದರೆ ದಿನಕ್ಕೆ ಮೂರಕ್ಕಿಂತ ಹೆಚ್ಚು ಕಪ್ ಕುಡಿದರೆ ಇದು ಅನಗತ್ಯ ಕೊಬ್ಬು, ಆಮ್ಲೀಯತೆ ಮತ್ತು ಟಿನ್ನಿಟಸ್  ಅಥವಾ ಕಿವಿಗಳಲ್ಲಿ ಗುಂಯ್ಗುಡುವ ತೊಂದರೆಯನ್ನು ತಂದಿಡುತ್ತದೆ.

ಅದರಲ್ಲೂ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಸುಸ್ತಾದ ಭಾವನೆ, ಹೊಟ್ಟೆಯುಬ್ಬರಿಕೆ, ಜೀರ್ಣರಸಗಳು ಪ್ರಭಾವ ಕಳೆದುಕೊಳ್ಳುವುದು ಮೊದಲಾದ ತೊಂದರೆಗಳು ಎದುರಾಗಬಹುದು. ಇಲ್ಲಿ ಓದಿ :- ಗರ್ಭಿಣಿ ಮಹಿಳೆಯರು ಇವನ್ನು ಬಳಸಿದರೆ, ಹುಟ್ಟುವ ಮಕ್ಕಳಿಗೆ ಅಪಾಯ..!

ಸ್ಟ್ರಾಂಗ್ ಟೀ ಕುಡಿದರೆ ಯಾವ ದುಷ್ಪರಿಣಾಮಗಳಾಗುತ್ತವೆ?

ಹೆಚ್ಚಿನ ರುಚಿ ಪಡೆಯಲು ಎರಡು ವಿಧಾನಗಳಿವೆ. ಮೊದಲನೆಯದು ಟೀಪುಡಿಯನ್ನು ಹೆಚ್ಚು ಸಮಯದವರೆಗೆ ಕುದಿಸುವುದು. ಎರಡನೆಯದು ಹೆಚ್ಚಿನ ಪ್ರಮಾಣದ ಟೀ ಪುಡಿಹಾಕಿ ಕೊಂಚ ಸಮಯದ ವರೆಗೆ ಕುದಿಸುವುದು. ಆದರೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದಾದರೆ ಎರಡೂ ವಿಧಾನಗಳು ಮಾರಕವಾಗಿವೆ. ಅದರಲ್ಲೂ ಹಾಲಿಲ್ಲದ ಸ್ಟ್ರಾಂಗ್ ಟೀ ಕುಡಿಯುವುದರ ಮೂಲಕ ಜೀರ್ಣವ್ಯವಸ್ಥೆ ಹಾಳಾಗುತ್ತದೆ. ಏಕೆಂದರೆ ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಆಮ್ಲಗಳು ಜೀರ್ಣರಸಗಳ ರಚನೆಯನ್ನು ಬದಲಿಸಿಬಿಡುತ್ತವೆ. ಇದು ಅಲ್ಸರ್, ಹುಳಿತೇಗು, ಹೊಟ್ಟೆಯುರಿ, ಎದೆಯುರಿ ಮೊದಲಾದವುಗಳಿಗೆ ನೇರವಾಗಿ ಕಾರಣವಾಗುತ್ತದೆ.

ನಾಲ್ಕೈದು ಬಗೆಯ ಟೀಪುಡಿ ಬೆರೆಸಿದರೆ ಏನಾಗುತ್ತದೆ

ಫ್ಯಾಕ್ಟರಿಯಲ್ಲಿ ತ್ಯಾಜ್ಯವಾಗಿ ಹೋಗಬಹುದಾದ, ಆದರೆ ಕೊಂಚ ಟೀ ಅಂಶವಿರುವ ಪುಡಿಯನ್ನು ಅಲ್ಪ ಪ್ರಮಾಣದಲ್ಲಿ ಟೀಪುಡಿಯಲ್ಲಿ ಬೆರೆಸಿ ಲಾಭ ಮಾಡಿಕೊಳ್ಳಲಾಗುತ್ತದೆ. ಅಗ್ಗದ ಟೀಪುಡಿಯನ್ನು ದುಬಾರಿ ಟೀಪುಡಿಯೊಂದಿಗೂ ಬೆರೆಸಿ ಮಾರಾಟ ಮಾಡುತ್ತಾರೆ.

ಆದರೆ ಪ್ರತಿಷ್ಠಿತ ಸಂಸ್ಥೆಗಳು ನುರಿತ ಚಹಾ ರುಚಿ ನೋಡುವವರ ಮೂಲಕ , ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಎರಡು ಅಥವಾ ಹೆಚ್ಚು ಪುಡಿಗಳನ್ನು ಬೆರೆಸಿ ಪರೀಕ್ಷಿಸಿ ಸುರಕ್ಷಿತ ಎಂದು ಖಚಿತಪಡಿಸಿದ ಮೇಲೆ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಾರೆ. ಇದಕ್ಕೆ ಬ್ಲೆಂಡ್ಎಂದು ಕರೆಯುತ್ತಾರೆ.

ಈ ಬ್ಲೆಂಡ್ ಟೀಪುಡಿ ಕುಡಿಯುವುದು ಸುರಕ್ಷಿತವೇ ಹೊರತು ನಾವಾಗಿ ನಮ್ಮ ಮನಸ್ಸಿಗೆ ಬಂದಂತೆ ಎರಡು ಅಥವಾ ಹೆಚ್ಚಿನ ಟೀಪುಡಿಗಳನ್ನು ಸೇರಿಸಿ ಕುಡಿಯುವುದು ಆರೋಗ್ಯಕ್ಕೆ ಮಾರಕ ಹಾಗೂ ಇದು ಪಾನಮತ್ತನಾಗಿರುವ ಅನುಭವವನ್ನೂ ನೀಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಥ್ರೀಮಿಕ್ಸ್, ಸೆವೆನ್ ಮಿಕ್ಸ್ ಎಲ್ಲವೂ ವ್ಯಾಪಾರದ ತಂತ್ರಗಳೇ ಹೊರತು ಆರೋಗ್ಯಕರವಲ್ಲ.

ಟೀ ಮತ್ತು ಬಿಸ್ಕತ್
ಭಾರತದಲ್ಲಿ ಅತಿ ಸಾಮಾನ್ಯವಾದ ಧಿಡೀರ್ ತಿಂಡಿ ಎಂದರೆ ಟೀ ಮತ್ತು ಬಿಸ್ಕತ್.  ಟೀ ಮತ್ತು ಬಿಸ್ಕತ್ ತಿನ್ನುವುದು ಉತ್ತಮ ಅಭ್ಯಾಸ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಬಿಸ್ಕತ್ ಬದಲಿಗೆ ಟೋಸ್ಟ್, ರಸ್ಕ್ ಮೊದಲಾದವುಗಳನ್ನೂ ಸೇವಿಸಬಹುದು. ಇವುಗಳಲ್ಲಿರುವ ಹಿಟ್ಟಿನ ಅಂಶ ಟೀ ಯಲ್ಲಿರುವ ಆಮ್ಲೀಯತೆಯನ್ನು ಹೀರಿಕೊಳ್ಳುವ ಕಾರಣ ಜೀರ್ಣರಸಗಳು ಹೆಚ್ಚು ಪ್ರಭಾವಕ್ಕೊಳಗಾಗುವುದಿಲ್ಲ. ಟೀ ಒಟ್ಟಿಗೆ ಸಿಹಿ ಅಥವಾ ಉಪ್ಪಿನ ಅಂಶವಿರುವ ತಿಂಡಿಗಳನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಸೋಡಿಯಂ ಅಂಶವನ್ನು ಪಡೆದುಕೊಂಡು ಹೊಟ್ಟೆಯ ಮತ್ತು ಕರುಳಿನ ಹುಣ್ಣು (ಅಲ್ಸರ್) ನಿಂದ ಪಾರಾಗಬಹುದು

ಟೀ ಕುಡಿಯುವುದರಲ್ಲಿ ಅತಿಕೆಟ್ಟ ಅಭ್ಯಾಸ 

ಆಹಾರ ಸೇವನೆಯ ಬಳಿಕ ಟೀ ಕುಡಿಯುವುದು ಕೆಟ್ಟ ಅಭ್ಯಾಸವಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್, ತಂತ್ರಜ್ಞಾನ

    ಈಗ ಯೂಟ್ಯೂಬ್ ವಿಡಿಯೋವನ್ನು ವಾಟ್ಸ್‌ಆಪ್‌ನಲ್ಲೇ ನೋಡಬಹುದು..!ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ ..

    ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್‌ಬುಕ್‌ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.

  • ಉಪಯುಕ್ತ ಮಾಹಿತಿ

    ನೀವೂ ಪ್ರತೀ ದಿವಸ ತಪ್ಪದೆ ಸ್ನಾನ ಮಾಡುತ್ತೀರಾ.!

    ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • govt

    ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ

    ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌…

  • ಆಧ್ಯಾತ್ಮ

    ದರ್ಭೆಯ ಬಗ್ಗೆ ಮಾಹಿತಿ.!

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…