ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಆದರೆ ಇದು ಆರೋಗ್ಯಕರವೇ? ತಜ್ಞರಲ್ಲಿ ಈ ಪ್ರಶ್ನೆಯನ್ನು ಕೇಳಿದರೆ ಖಾಲಿ ಹೊಟ್ಟೆಯಲ್ಲಿ ಟೀ ಸೇವಿಸುವುದು ಅತ್ಯಂತ ಅನಾರೋಗ್ಯಕರ ಅಭ್ಯಾಸ ಎಂಬ ಉತ್ತರ ಸಿಗುತ್ತದೆ.ಹಾಗಾದರೆ ಟೀ ಯಾವಾಗ ಕುಡಿಯಬೇಕು ಎಂಬ ಪ್ರಶ್ನೆಗೆ ತಜ್ಞರು ಬೆಳಗ್ಗಿನ ಉಪಾಹಾರದ ಬಳಿಕ ಸೇವಿಸುವುದು ಉತ್ತಮ ಎಂಬ ಉತ್ತರ ನೀಡುತ್ತಾರೆ. ಆದರೆ ಟೀ ಸೇವನೆಯ ಪ್ರಮಾಣ ಇಡಿಯ ದಿನದಲ್ಲಿ ಮಿತವಾಗಿರುವುದೂ ಅಗತ್ಯ.
ಹಾಗಾದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಹುದೇ? ಮುಂದೆ ಓದಿ….
ವಾಕರಿಕೆ ಬರುತ್ತದೆಯೇ?
ಟೀ ಕ್ಷಾರೀಯವೂ ಆಗಿದೆ ಕೊಂಚ ಆಮ್ಲೀಯವೂ ಆಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಜೀರ್ಣರಸಗಳ ಪ್ರಭಾವ ಏರುಪೇರಾಗುತ್ತದೆ. ಈ ಏರುಪೇರು ವಾಕರಿಕೆ ಬರಿಸುತ್ತದೆ.
ಕಪ್ಪು (ಬ್ಲಾಕ್) ಟೀ ಸುರಕ್ಷಿತವೇ?
ಕಪ್ಪು ಟೀ ಎಂದರೆ ಹೆಚ್ಚು ಕುದಿಸದ ಮತ್ತು ಹಾಲು ಸೇರಿಸದ ಟೀ. ಇದು ತೂಕ ಇಳಿಸಲು ಉತ್ತಮವಾದರೂ ಖಾಲಿ ಹೊಟ್ಟೆಯಲ್ಲಿ ಕುಡಿಯುವ ಮೂಲಕ ಆಮ್ಲೀಯತೆ ಹೆಚ್ಚುತ್ತದೆ, ಇದರಿಂದ ಹೊಟ್ಟೆಯ ಜೀರ್ಣರಸಗಳೂ ಪ್ರಭಾವಕ್ಕೊಳಗಾಗಿ ಹೊಟ್ಟೆಯುಬ್ಬರಿಕೆ ಮತ್ತು ಹೊಟ್ಟೆ ತುಂಬಿರುವ ಹುಸಿಭಾವನೆಯನ್ನು ಮೂಡಿಸುತ್ತದೆ.
ಹಾಲು ಸೇರಿಸಿದ ಟೀ ಕುಡಿದರೆ ಆಗುವ ಅಡ್ಡಪರಿಣಾಮಗಳೇನು?
ಭಾರತದಲ್ಲಿ ಟೀ ಕುಡಿಯುವ ತೊಂಭತ್ತು ಶೇಖಡಾ ಜನರಲ್ಲಿ ಎಂಭತ್ತೊಂಭತ್ತು ಶೇಖಡಾ ಜನರು ಹಾಲು ಸೇರಿಸಿದ ಟೀ ಕುಡಿಯುತ್ತಾರೆ. ಆದರೆ ದಿನಕ್ಕೆ ಮೂರಕ್ಕಿಂತ ಹೆಚ್ಚು ಕಪ್ ಕುಡಿದರೆ ಇದು ಅನಗತ್ಯ ಕೊಬ್ಬು, ಆಮ್ಲೀಯತೆ ಮತ್ತು ಟಿನ್ನಿಟಸ್ ಅಥವಾ ಕಿವಿಗಳಲ್ಲಿ ಗುಂಯ್ಗುಡುವ ತೊಂದರೆಯನ್ನು ತಂದಿಡುತ್ತದೆ.
ಅದರಲ್ಲೂ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಸುಸ್ತಾದ ಭಾವನೆ, ಹೊಟ್ಟೆಯುಬ್ಬರಿಕೆ, ಜೀರ್ಣರಸಗಳು ಪ್ರಭಾವ ಕಳೆದುಕೊಳ್ಳುವುದು ಮೊದಲಾದ ತೊಂದರೆಗಳು ಎದುರಾಗಬಹುದು. ಇಲ್ಲಿ ಓದಿ :- ಗರ್ಭಿಣಿ ಮಹಿಳೆಯರು ಇವನ್ನು ಬಳಸಿದರೆ, ಹುಟ್ಟುವ ಮಕ್ಕಳಿಗೆ ಅಪಾಯ..!
ಸ್ಟ್ರಾಂಗ್ ಟೀ ಕುಡಿದರೆ ಯಾವ ದುಷ್ಪರಿಣಾಮಗಳಾಗುತ್ತವೆ?
ಹೆಚ್ಚಿನ ರುಚಿ ಪಡೆಯಲು ಎರಡು ವಿಧಾನಗಳಿವೆ. ಮೊದಲನೆಯದು ಟೀಪುಡಿಯನ್ನು ಹೆಚ್ಚು ಸಮಯದವರೆಗೆ ಕುದಿಸುವುದು. ಎರಡನೆಯದು ಹೆಚ್ಚಿನ ಪ್ರಮಾಣದ ಟೀ ಪುಡಿಹಾಕಿ ಕೊಂಚ ಸಮಯದ ವರೆಗೆ ಕುದಿಸುವುದು. ಆದರೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದಾದರೆ ಎರಡೂ ವಿಧಾನಗಳು ಮಾರಕವಾಗಿವೆ. ಅದರಲ್ಲೂ ಹಾಲಿಲ್ಲದ ಸ್ಟ್ರಾಂಗ್ ಟೀ ಕುಡಿಯುವುದರ ಮೂಲಕ ಜೀರ್ಣವ್ಯವಸ್ಥೆ ಹಾಳಾಗುತ್ತದೆ. ಏಕೆಂದರೆ ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಆಮ್ಲಗಳು ಜೀರ್ಣರಸಗಳ ರಚನೆಯನ್ನು ಬದಲಿಸಿಬಿಡುತ್ತವೆ. ಇದು ಅಲ್ಸರ್, ಹುಳಿತೇಗು, ಹೊಟ್ಟೆಯುರಿ, ಎದೆಯುರಿ ಮೊದಲಾದವುಗಳಿಗೆ ನೇರವಾಗಿ ಕಾರಣವಾಗುತ್ತದೆ.
ನಾಲ್ಕೈದು ಬಗೆಯ ಟೀಪುಡಿ ಬೆರೆಸಿದರೆ ಏನಾಗುತ್ತದೆ
ಫ್ಯಾಕ್ಟರಿಯಲ್ಲಿ ತ್ಯಾಜ್ಯವಾಗಿ ಹೋಗಬಹುದಾದ, ಆದರೆ ಕೊಂಚ ಟೀ ಅಂಶವಿರುವ ಪುಡಿಯನ್ನು ಅಲ್ಪ ಪ್ರಮಾಣದಲ್ಲಿ ಟೀಪುಡಿಯಲ್ಲಿ ಬೆರೆಸಿ ಲಾಭ ಮಾಡಿಕೊಳ್ಳಲಾಗುತ್ತದೆ. ಅಗ್ಗದ ಟೀಪುಡಿಯನ್ನು ದುಬಾರಿ ಟೀಪುಡಿಯೊಂದಿಗೂ ಬೆರೆಸಿ ಮಾರಾಟ ಮಾಡುತ್ತಾರೆ.
ಆದರೆ ಪ್ರತಿಷ್ಠಿತ ಸಂಸ್ಥೆಗಳು ನುರಿತ ಚಹಾ ರುಚಿ ನೋಡುವವರ ಮೂಲಕ , ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಎರಡು ಅಥವಾ ಹೆಚ್ಚು ಪುಡಿಗಳನ್ನು ಬೆರೆಸಿ ಪರೀಕ್ಷಿಸಿ ಸುರಕ್ಷಿತ ಎಂದು ಖಚಿತಪಡಿಸಿದ ಮೇಲೆ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಾರೆ. ಇದಕ್ಕೆ ಬ್ಲೆಂಡ್ಎಂದು ಕರೆಯುತ್ತಾರೆ.
ಈ ಬ್ಲೆಂಡ್ ಟೀಪುಡಿ ಕುಡಿಯುವುದು ಸುರಕ್ಷಿತವೇ ಹೊರತು ನಾವಾಗಿ ನಮ್ಮ ಮನಸ್ಸಿಗೆ ಬಂದಂತೆ ಎರಡು ಅಥವಾ ಹೆಚ್ಚಿನ ಟೀಪುಡಿಗಳನ್ನು ಸೇರಿಸಿ ಕುಡಿಯುವುದು ಆರೋಗ್ಯಕ್ಕೆ ಮಾರಕ ಹಾಗೂ ಇದು ಪಾನಮತ್ತನಾಗಿರುವ ಅನುಭವವನ್ನೂ ನೀಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಥ್ರೀಮಿಕ್ಸ್, ಸೆವೆನ್ ಮಿಕ್ಸ್ ಎಲ್ಲವೂ ವ್ಯಾಪಾರದ ತಂತ್ರಗಳೇ ಹೊರತು ಆರೋಗ್ಯಕರವಲ್ಲ.
ಟೀ ಮತ್ತು ಬಿಸ್ಕತ್
ಭಾರತದಲ್ಲಿ ಅತಿ ಸಾಮಾನ್ಯವಾದ ಧಿಡೀರ್ ತಿಂಡಿ ಎಂದರೆ ಟೀ ಮತ್ತು ಬಿಸ್ಕತ್. ಟೀ ಮತ್ತು ಬಿಸ್ಕತ್ ತಿನ್ನುವುದು ಉತ್ತಮ ಅಭ್ಯಾಸ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಬಿಸ್ಕತ್ ಬದಲಿಗೆ ಟೋಸ್ಟ್, ರಸ್ಕ್ ಮೊದಲಾದವುಗಳನ್ನೂ ಸೇವಿಸಬಹುದು. ಇವುಗಳಲ್ಲಿರುವ ಹಿಟ್ಟಿನ ಅಂಶ ಟೀ ಯಲ್ಲಿರುವ ಆಮ್ಲೀಯತೆಯನ್ನು ಹೀರಿಕೊಳ್ಳುವ ಕಾರಣ ಜೀರ್ಣರಸಗಳು ಹೆಚ್ಚು ಪ್ರಭಾವಕ್ಕೊಳಗಾಗುವುದಿಲ್ಲ. ಟೀ ಒಟ್ಟಿಗೆ ಸಿಹಿ ಅಥವಾ ಉಪ್ಪಿನ ಅಂಶವಿರುವ ತಿಂಡಿಗಳನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಸೋಡಿಯಂ ಅಂಶವನ್ನು ಪಡೆದುಕೊಂಡು ಹೊಟ್ಟೆಯ ಮತ್ತು ಕರುಳಿನ ಹುಣ್ಣು (ಅಲ್ಸರ್) ನಿಂದ ಪಾರಾಗಬಹುದು
ಟೀ ಕುಡಿಯುವುದರಲ್ಲಿ ಅತಿಕೆಟ್ಟ ಅಭ್ಯಾಸ
ಆಹಾರ ಸೇವನೆಯ ಬಳಿಕ ಟೀ ಕುಡಿಯುವುದು ಕೆಟ್ಟ ಅಭ್ಯಾಸವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….
ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…
ಗುಜರಾತ್ನ ಜಾಮ್ನಗರದಲ್ಲಿ ಇದೇ ರೀತಿಯ ಲವ್ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….