ಜೀವನಶೈಲಿ

ಖಾಲಿ ಹೊಟ್ಟೆಯಲ್ಲಿ ಚಹಾ(ಟೀ) ಕುಡಿದರೆ ಏನಾಗುತ್ತೆ ಗೊತ್ತಾ?

5306

ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು.  ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ.  ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.

ಆದರೆ ಇದು ಆರೋಗ್ಯಕರವೇ? ತಜ್ಞರಲ್ಲಿ ಈ ಪ್ರಶ್ನೆಯನ್ನು ಕೇಳಿದರೆ ಖಾಲಿ ಹೊಟ್ಟೆಯಲ್ಲಿ ಟೀ ಸೇವಿಸುವುದು ಅತ್ಯಂತ ಅನಾರೋಗ್ಯಕರ ಅಭ್ಯಾಸ ಎಂಬ ಉತ್ತರ ಸಿಗುತ್ತದೆ.ಹಾಗಾದರೆ ಟೀ ಯಾವಾಗ ಕುಡಿಯಬೇಕು ಎಂಬ ಪ್ರಶ್ನೆಗೆ ತಜ್ಞರು ಬೆಳಗ್ಗಿನ ಉಪಾಹಾರದ ಬಳಿಕ ಸೇವಿಸುವುದು ಉತ್ತಮ ಎಂಬ ಉತ್ತರ ನೀಡುತ್ತಾರೆ. ಆದರೆ ಟೀ ಸೇವನೆಯ ಪ್ರಮಾಣ ಇಡಿಯ ದಿನದಲ್ಲಿ ಮಿತವಾಗಿರುವುದೂ ಅಗತ್ಯ.

ಹಾಗಾದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಹುದೇ? ಮುಂದೆ ಓದಿ….

 ವಾಕರಿಕೆ ಬರುತ್ತದೆಯೇ?

ಟೀ ಕ್ಷಾರೀಯವೂ ಆಗಿದೆ ಕೊಂಚ ಆಮ್ಲೀಯವೂ ಆಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಜೀರ್ಣರಸಗಳ ಪ್ರಭಾವ ಏರುಪೇರಾಗುತ್ತದೆ. ಈ ಏರುಪೇರು ವಾಕರಿಕೆ ಬರಿಸುತ್ತದೆ.

ಕಪ್ಪು (ಬ್ಲಾಕ್) ಟೀ ಸುರಕ್ಷಿತವೇ?

ಕಪ್ಪು ಟೀ ಎಂದರೆ ಹೆಚ್ಚು ಕುದಿಸದ ಮತ್ತು ಹಾಲು ಸೇರಿಸದ ಟೀ. ಇದು ತೂಕ ಇಳಿಸಲು ಉತ್ತಮವಾದರೂ ಖಾಲಿ ಹೊಟ್ಟೆಯಲ್ಲಿ ಕುಡಿಯುವ ಮೂಲಕ ಆಮ್ಲೀಯತೆ ಹೆಚ್ಚುತ್ತದೆ, ಇದರಿಂದ ಹೊಟ್ಟೆಯ ಜೀರ್ಣರಸಗಳೂ ಪ್ರಭಾವಕ್ಕೊಳಗಾಗಿ ಹೊಟ್ಟೆಯುಬ್ಬರಿಕೆ ಮತ್ತು ಹೊಟ್ಟೆ ತುಂಬಿರುವ ಹುಸಿಭಾವನೆಯನ್ನು ಮೂಡಿಸುತ್ತದೆ.

ಹಾಲು ಸೇರಿಸಿದ ಟೀ ಕುಡಿದರೆ ಆಗುವ ಅಡ್ಡಪರಿಣಾಮಗಳೇನು?

ಭಾರತದಲ್ಲಿ ಟೀ ಕುಡಿಯುವ ತೊಂಭತ್ತು ಶೇಖಡಾ ಜನರಲ್ಲಿ ಎಂಭತ್ತೊಂಭತ್ತು ಶೇಖಡಾ ಜನರು ಹಾಲು ಸೇರಿಸಿದ ಟೀ ಕುಡಿಯುತ್ತಾರೆ. ಆದರೆ ದಿನಕ್ಕೆ ಮೂರಕ್ಕಿಂತ ಹೆಚ್ಚು ಕಪ್ ಕುಡಿದರೆ ಇದು ಅನಗತ್ಯ ಕೊಬ್ಬು, ಆಮ್ಲೀಯತೆ ಮತ್ತು ಟಿನ್ನಿಟಸ್  ಅಥವಾ ಕಿವಿಗಳಲ್ಲಿ ಗುಂಯ್ಗುಡುವ ತೊಂದರೆಯನ್ನು ತಂದಿಡುತ್ತದೆ.

ಅದರಲ್ಲೂ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಸುಸ್ತಾದ ಭಾವನೆ, ಹೊಟ್ಟೆಯುಬ್ಬರಿಕೆ, ಜೀರ್ಣರಸಗಳು ಪ್ರಭಾವ ಕಳೆದುಕೊಳ್ಳುವುದು ಮೊದಲಾದ ತೊಂದರೆಗಳು ಎದುರಾಗಬಹುದು. ಇಲ್ಲಿ ಓದಿ :- ಗರ್ಭಿಣಿ ಮಹಿಳೆಯರು ಇವನ್ನು ಬಳಸಿದರೆ, ಹುಟ್ಟುವ ಮಕ್ಕಳಿಗೆ ಅಪಾಯ..!

ಸ್ಟ್ರಾಂಗ್ ಟೀ ಕುಡಿದರೆ ಯಾವ ದುಷ್ಪರಿಣಾಮಗಳಾಗುತ್ತವೆ?

ಹೆಚ್ಚಿನ ರುಚಿ ಪಡೆಯಲು ಎರಡು ವಿಧಾನಗಳಿವೆ. ಮೊದಲನೆಯದು ಟೀಪುಡಿಯನ್ನು ಹೆಚ್ಚು ಸಮಯದವರೆಗೆ ಕುದಿಸುವುದು. ಎರಡನೆಯದು ಹೆಚ್ಚಿನ ಪ್ರಮಾಣದ ಟೀ ಪುಡಿಹಾಕಿ ಕೊಂಚ ಸಮಯದ ವರೆಗೆ ಕುದಿಸುವುದು. ಆದರೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದಾದರೆ ಎರಡೂ ವಿಧಾನಗಳು ಮಾರಕವಾಗಿವೆ. ಅದರಲ್ಲೂ ಹಾಲಿಲ್ಲದ ಸ್ಟ್ರಾಂಗ್ ಟೀ ಕುಡಿಯುವುದರ ಮೂಲಕ ಜೀರ್ಣವ್ಯವಸ್ಥೆ ಹಾಳಾಗುತ್ತದೆ. ಏಕೆಂದರೆ ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಆಮ್ಲಗಳು ಜೀರ್ಣರಸಗಳ ರಚನೆಯನ್ನು ಬದಲಿಸಿಬಿಡುತ್ತವೆ. ಇದು ಅಲ್ಸರ್, ಹುಳಿತೇಗು, ಹೊಟ್ಟೆಯುರಿ, ಎದೆಯುರಿ ಮೊದಲಾದವುಗಳಿಗೆ ನೇರವಾಗಿ ಕಾರಣವಾಗುತ್ತದೆ.

ನಾಲ್ಕೈದು ಬಗೆಯ ಟೀಪುಡಿ ಬೆರೆಸಿದರೆ ಏನಾಗುತ್ತದೆ

ಫ್ಯಾಕ್ಟರಿಯಲ್ಲಿ ತ್ಯಾಜ್ಯವಾಗಿ ಹೋಗಬಹುದಾದ, ಆದರೆ ಕೊಂಚ ಟೀ ಅಂಶವಿರುವ ಪುಡಿಯನ್ನು ಅಲ್ಪ ಪ್ರಮಾಣದಲ್ಲಿ ಟೀಪುಡಿಯಲ್ಲಿ ಬೆರೆಸಿ ಲಾಭ ಮಾಡಿಕೊಳ್ಳಲಾಗುತ್ತದೆ. ಅಗ್ಗದ ಟೀಪುಡಿಯನ್ನು ದುಬಾರಿ ಟೀಪುಡಿಯೊಂದಿಗೂ ಬೆರೆಸಿ ಮಾರಾಟ ಮಾಡುತ್ತಾರೆ.

ಆದರೆ ಪ್ರತಿಷ್ಠಿತ ಸಂಸ್ಥೆಗಳು ನುರಿತ ಚಹಾ ರುಚಿ ನೋಡುವವರ ಮೂಲಕ , ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಎರಡು ಅಥವಾ ಹೆಚ್ಚು ಪುಡಿಗಳನ್ನು ಬೆರೆಸಿ ಪರೀಕ್ಷಿಸಿ ಸುರಕ್ಷಿತ ಎಂದು ಖಚಿತಪಡಿಸಿದ ಮೇಲೆ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಾರೆ. ಇದಕ್ಕೆ ಬ್ಲೆಂಡ್ಎಂದು ಕರೆಯುತ್ತಾರೆ.

ಈ ಬ್ಲೆಂಡ್ ಟೀಪುಡಿ ಕುಡಿಯುವುದು ಸುರಕ್ಷಿತವೇ ಹೊರತು ನಾವಾಗಿ ನಮ್ಮ ಮನಸ್ಸಿಗೆ ಬಂದಂತೆ ಎರಡು ಅಥವಾ ಹೆಚ್ಚಿನ ಟೀಪುಡಿಗಳನ್ನು ಸೇರಿಸಿ ಕುಡಿಯುವುದು ಆರೋಗ್ಯಕ್ಕೆ ಮಾರಕ ಹಾಗೂ ಇದು ಪಾನಮತ್ತನಾಗಿರುವ ಅನುಭವವನ್ನೂ ನೀಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಥ್ರೀಮಿಕ್ಸ್, ಸೆವೆನ್ ಮಿಕ್ಸ್ ಎಲ್ಲವೂ ವ್ಯಾಪಾರದ ತಂತ್ರಗಳೇ ಹೊರತು ಆರೋಗ್ಯಕರವಲ್ಲ.

ಟೀ ಮತ್ತು ಬಿಸ್ಕತ್
ಭಾರತದಲ್ಲಿ ಅತಿ ಸಾಮಾನ್ಯವಾದ ಧಿಡೀರ್ ತಿಂಡಿ ಎಂದರೆ ಟೀ ಮತ್ತು ಬಿಸ್ಕತ್.  ಟೀ ಮತ್ತು ಬಿಸ್ಕತ್ ತಿನ್ನುವುದು ಉತ್ತಮ ಅಭ್ಯಾಸ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಬಿಸ್ಕತ್ ಬದಲಿಗೆ ಟೋಸ್ಟ್, ರಸ್ಕ್ ಮೊದಲಾದವುಗಳನ್ನೂ ಸೇವಿಸಬಹುದು. ಇವುಗಳಲ್ಲಿರುವ ಹಿಟ್ಟಿನ ಅಂಶ ಟೀ ಯಲ್ಲಿರುವ ಆಮ್ಲೀಯತೆಯನ್ನು ಹೀರಿಕೊಳ್ಳುವ ಕಾರಣ ಜೀರ್ಣರಸಗಳು ಹೆಚ್ಚು ಪ್ರಭಾವಕ್ಕೊಳಗಾಗುವುದಿಲ್ಲ. ಟೀ ಒಟ್ಟಿಗೆ ಸಿಹಿ ಅಥವಾ ಉಪ್ಪಿನ ಅಂಶವಿರುವ ತಿಂಡಿಗಳನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಸೋಡಿಯಂ ಅಂಶವನ್ನು ಪಡೆದುಕೊಂಡು ಹೊಟ್ಟೆಯ ಮತ್ತು ಕರುಳಿನ ಹುಣ್ಣು (ಅಲ್ಸರ್) ನಿಂದ ಪಾರಾಗಬಹುದು

ಟೀ ಕುಡಿಯುವುದರಲ್ಲಿ ಅತಿಕೆಟ್ಟ ಅಭ್ಯಾಸ 

ಆಹಾರ ಸೇವನೆಯ ಬಳಿಕ ಟೀ ಕುಡಿಯುವುದು ಕೆಟ್ಟ ಅಭ್ಯಾಸವಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…

  • ಸುದ್ದಿ

    ಎಲೆಕ್ಷನ್ ಅಕ್ರಮ ಹಣ ಸಾಗಾಟಕ್ಕೆ ಬ್ರೆಕ್ ಹಾಕಲು ಐಪಿಎಸ್ ಅಧಿಕಾರಿ ರೂಪಾರವರ ಮಾಸ್ಟರ್ ಪ್ಲಾನ್ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…

  • ಸುದ್ದಿ

    ಈ ಏಡಿಯ ಬೆಲೆ ಕೇಳಿದ್ರೆ ಅಚ್ಚರಿ ಪಡೋದಲ್ಲಾ ಶಾಕ್ ಆಗೋದಂತು ಗ್ಯಾರಂಟಿ,ಇಷ್ಟು ಲಕ್ಷಾನಾ,.!

    ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್‌ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ಉಪಯುಕ್ತ ಮಾಹಿತಿ

    ವಿಧ್ಯಾರ್ಥಿಗಳೇ ವೋಟ್ ಮಾಡಿ, ಉಚಿತ ಇಂಟರ್ನೆಟ್ ಜೊತೆಗೆ, ದಿನಸಿಯನ್ನು ಪಡೆಯಿರಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…

  • ಸುದ್ದಿ

    ಸೀರೆಯನ್ನುಟ್ಟು ಬೆತ್ತಲೆಯ ಬೆನ್ನನ್ನು ತೋರಿಸಿದ ಬೆಡಗಿ ..,ಯಾರು ಗೊತ್ತಾ…?

    ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…