ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಆದರೆ ಇದು ಆರೋಗ್ಯಕರವೇ? ತಜ್ಞರಲ್ಲಿ ಈ ಪ್ರಶ್ನೆಯನ್ನು ಕೇಳಿದರೆ ಖಾಲಿ ಹೊಟ್ಟೆಯಲ್ಲಿ ಟೀ ಸೇವಿಸುವುದು ಅತ್ಯಂತ ಅನಾರೋಗ್ಯಕರ ಅಭ್ಯಾಸ ಎಂಬ ಉತ್ತರ ಸಿಗುತ್ತದೆ.ಹಾಗಾದರೆ ಟೀ ಯಾವಾಗ ಕುಡಿಯಬೇಕು ಎಂಬ ಪ್ರಶ್ನೆಗೆ ತಜ್ಞರು ಬೆಳಗ್ಗಿನ ಉಪಾಹಾರದ ಬಳಿಕ ಸೇವಿಸುವುದು ಉತ್ತಮ ಎಂಬ ಉತ್ತರ ನೀಡುತ್ತಾರೆ. ಆದರೆ ಟೀ ಸೇವನೆಯ ಪ್ರಮಾಣ ಇಡಿಯ ದಿನದಲ್ಲಿ ಮಿತವಾಗಿರುವುದೂ ಅಗತ್ಯ.
ಹಾಗಾದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಹುದೇ? ಮುಂದೆ ಓದಿ….
ವಾಕರಿಕೆ ಬರುತ್ತದೆಯೇ?
ಟೀ ಕ್ಷಾರೀಯವೂ ಆಗಿದೆ ಕೊಂಚ ಆಮ್ಲೀಯವೂ ಆಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಜೀರ್ಣರಸಗಳ ಪ್ರಭಾವ ಏರುಪೇರಾಗುತ್ತದೆ. ಈ ಏರುಪೇರು ವಾಕರಿಕೆ ಬರಿಸುತ್ತದೆ.
ಕಪ್ಪು (ಬ್ಲಾಕ್) ಟೀ ಸುರಕ್ಷಿತವೇ?
ಕಪ್ಪು ಟೀ ಎಂದರೆ ಹೆಚ್ಚು ಕುದಿಸದ ಮತ್ತು ಹಾಲು ಸೇರಿಸದ ಟೀ. ಇದು ತೂಕ ಇಳಿಸಲು ಉತ್ತಮವಾದರೂ ಖಾಲಿ ಹೊಟ್ಟೆಯಲ್ಲಿ ಕುಡಿಯುವ ಮೂಲಕ ಆಮ್ಲೀಯತೆ ಹೆಚ್ಚುತ್ತದೆ, ಇದರಿಂದ ಹೊಟ್ಟೆಯ ಜೀರ್ಣರಸಗಳೂ ಪ್ರಭಾವಕ್ಕೊಳಗಾಗಿ ಹೊಟ್ಟೆಯುಬ್ಬರಿಕೆ ಮತ್ತು ಹೊಟ್ಟೆ ತುಂಬಿರುವ ಹುಸಿಭಾವನೆಯನ್ನು ಮೂಡಿಸುತ್ತದೆ.
ಹಾಲು ಸೇರಿಸಿದ ಟೀ ಕುಡಿದರೆ ಆಗುವ ಅಡ್ಡಪರಿಣಾಮಗಳೇನು?
ಭಾರತದಲ್ಲಿ ಟೀ ಕುಡಿಯುವ ತೊಂಭತ್ತು ಶೇಖಡಾ ಜನರಲ್ಲಿ ಎಂಭತ್ತೊಂಭತ್ತು ಶೇಖಡಾ ಜನರು ಹಾಲು ಸೇರಿಸಿದ ಟೀ ಕುಡಿಯುತ್ತಾರೆ. ಆದರೆ ದಿನಕ್ಕೆ ಮೂರಕ್ಕಿಂತ ಹೆಚ್ಚು ಕಪ್ ಕುಡಿದರೆ ಇದು ಅನಗತ್ಯ ಕೊಬ್ಬು, ಆಮ್ಲೀಯತೆ ಮತ್ತು ಟಿನ್ನಿಟಸ್ ಅಥವಾ ಕಿವಿಗಳಲ್ಲಿ ಗುಂಯ್ಗುಡುವ ತೊಂದರೆಯನ್ನು ತಂದಿಡುತ್ತದೆ.
ಅದರಲ್ಲೂ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಸುಸ್ತಾದ ಭಾವನೆ, ಹೊಟ್ಟೆಯುಬ್ಬರಿಕೆ, ಜೀರ್ಣರಸಗಳು ಪ್ರಭಾವ ಕಳೆದುಕೊಳ್ಳುವುದು ಮೊದಲಾದ ತೊಂದರೆಗಳು ಎದುರಾಗಬಹುದು. ಇಲ್ಲಿ ಓದಿ :- ಗರ್ಭಿಣಿ ಮಹಿಳೆಯರು ಇವನ್ನು ಬಳಸಿದರೆ, ಹುಟ್ಟುವ ಮಕ್ಕಳಿಗೆ ಅಪಾಯ..!
ಸ್ಟ್ರಾಂಗ್ ಟೀ ಕುಡಿದರೆ ಯಾವ ದುಷ್ಪರಿಣಾಮಗಳಾಗುತ್ತವೆ?
ಹೆಚ್ಚಿನ ರುಚಿ ಪಡೆಯಲು ಎರಡು ವಿಧಾನಗಳಿವೆ. ಮೊದಲನೆಯದು ಟೀಪುಡಿಯನ್ನು ಹೆಚ್ಚು ಸಮಯದವರೆಗೆ ಕುದಿಸುವುದು. ಎರಡನೆಯದು ಹೆಚ್ಚಿನ ಪ್ರಮಾಣದ ಟೀ ಪುಡಿಹಾಕಿ ಕೊಂಚ ಸಮಯದ ವರೆಗೆ ಕುದಿಸುವುದು. ಆದರೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದಾದರೆ ಎರಡೂ ವಿಧಾನಗಳು ಮಾರಕವಾಗಿವೆ. ಅದರಲ್ಲೂ ಹಾಲಿಲ್ಲದ ಸ್ಟ್ರಾಂಗ್ ಟೀ ಕುಡಿಯುವುದರ ಮೂಲಕ ಜೀರ್ಣವ್ಯವಸ್ಥೆ ಹಾಳಾಗುತ್ತದೆ. ಏಕೆಂದರೆ ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಆಮ್ಲಗಳು ಜೀರ್ಣರಸಗಳ ರಚನೆಯನ್ನು ಬದಲಿಸಿಬಿಡುತ್ತವೆ. ಇದು ಅಲ್ಸರ್, ಹುಳಿತೇಗು, ಹೊಟ್ಟೆಯುರಿ, ಎದೆಯುರಿ ಮೊದಲಾದವುಗಳಿಗೆ ನೇರವಾಗಿ ಕಾರಣವಾಗುತ್ತದೆ.
ನಾಲ್ಕೈದು ಬಗೆಯ ಟೀಪುಡಿ ಬೆರೆಸಿದರೆ ಏನಾಗುತ್ತದೆ
ಫ್ಯಾಕ್ಟರಿಯಲ್ಲಿ ತ್ಯಾಜ್ಯವಾಗಿ ಹೋಗಬಹುದಾದ, ಆದರೆ ಕೊಂಚ ಟೀ ಅಂಶವಿರುವ ಪುಡಿಯನ್ನು ಅಲ್ಪ ಪ್ರಮಾಣದಲ್ಲಿ ಟೀಪುಡಿಯಲ್ಲಿ ಬೆರೆಸಿ ಲಾಭ ಮಾಡಿಕೊಳ್ಳಲಾಗುತ್ತದೆ. ಅಗ್ಗದ ಟೀಪುಡಿಯನ್ನು ದುಬಾರಿ ಟೀಪುಡಿಯೊಂದಿಗೂ ಬೆರೆಸಿ ಮಾರಾಟ ಮಾಡುತ್ತಾರೆ.
ಆದರೆ ಪ್ರತಿಷ್ಠಿತ ಸಂಸ್ಥೆಗಳು ನುರಿತ ಚಹಾ ರುಚಿ ನೋಡುವವರ ಮೂಲಕ , ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಎರಡು ಅಥವಾ ಹೆಚ್ಚು ಪುಡಿಗಳನ್ನು ಬೆರೆಸಿ ಪರೀಕ್ಷಿಸಿ ಸುರಕ್ಷಿತ ಎಂದು ಖಚಿತಪಡಿಸಿದ ಮೇಲೆ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಾರೆ. ಇದಕ್ಕೆ ಬ್ಲೆಂಡ್ಎಂದು ಕರೆಯುತ್ತಾರೆ.
ಈ ಬ್ಲೆಂಡ್ ಟೀಪುಡಿ ಕುಡಿಯುವುದು ಸುರಕ್ಷಿತವೇ ಹೊರತು ನಾವಾಗಿ ನಮ್ಮ ಮನಸ್ಸಿಗೆ ಬಂದಂತೆ ಎರಡು ಅಥವಾ ಹೆಚ್ಚಿನ ಟೀಪುಡಿಗಳನ್ನು ಸೇರಿಸಿ ಕುಡಿಯುವುದು ಆರೋಗ್ಯಕ್ಕೆ ಮಾರಕ ಹಾಗೂ ಇದು ಪಾನಮತ್ತನಾಗಿರುವ ಅನುಭವವನ್ನೂ ನೀಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಥ್ರೀಮಿಕ್ಸ್, ಸೆವೆನ್ ಮಿಕ್ಸ್ ಎಲ್ಲವೂ ವ್ಯಾಪಾರದ ತಂತ್ರಗಳೇ ಹೊರತು ಆರೋಗ್ಯಕರವಲ್ಲ.
ಟೀ ಮತ್ತು ಬಿಸ್ಕತ್
ಭಾರತದಲ್ಲಿ ಅತಿ ಸಾಮಾನ್ಯವಾದ ಧಿಡೀರ್ ತಿಂಡಿ ಎಂದರೆ ಟೀ ಮತ್ತು ಬಿಸ್ಕತ್. ಟೀ ಮತ್ತು ಬಿಸ್ಕತ್ ತಿನ್ನುವುದು ಉತ್ತಮ ಅಭ್ಯಾಸ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಬಿಸ್ಕತ್ ಬದಲಿಗೆ ಟೋಸ್ಟ್, ರಸ್ಕ್ ಮೊದಲಾದವುಗಳನ್ನೂ ಸೇವಿಸಬಹುದು. ಇವುಗಳಲ್ಲಿರುವ ಹಿಟ್ಟಿನ ಅಂಶ ಟೀ ಯಲ್ಲಿರುವ ಆಮ್ಲೀಯತೆಯನ್ನು ಹೀರಿಕೊಳ್ಳುವ ಕಾರಣ ಜೀರ್ಣರಸಗಳು ಹೆಚ್ಚು ಪ್ರಭಾವಕ್ಕೊಳಗಾಗುವುದಿಲ್ಲ. ಟೀ ಒಟ್ಟಿಗೆ ಸಿಹಿ ಅಥವಾ ಉಪ್ಪಿನ ಅಂಶವಿರುವ ತಿಂಡಿಗಳನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಸೋಡಿಯಂ ಅಂಶವನ್ನು ಪಡೆದುಕೊಂಡು ಹೊಟ್ಟೆಯ ಮತ್ತು ಕರುಳಿನ ಹುಣ್ಣು (ಅಲ್ಸರ್) ನಿಂದ ಪಾರಾಗಬಹುದು
ಟೀ ಕುಡಿಯುವುದರಲ್ಲಿ ಅತಿಕೆಟ್ಟ ಅಭ್ಯಾಸ
ಆಹಾರ ಸೇವನೆಯ ಬಳಿಕ ಟೀ ಕುಡಿಯುವುದು ಕೆಟ್ಟ ಅಭ್ಯಾಸವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…