News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜೀವನಶೈಲಿ

ಖಾಲಿ ಹೊಟ್ಟೆಯಲ್ಲಿ ಚಹಾ(ಟೀ) ಕುಡಿದರೆ ಏನಾಗುತ್ತೆ ಗೊತ್ತಾ?

5319

ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು.  ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ.  ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.

ಆದರೆ ಇದು ಆರೋಗ್ಯಕರವೇ? ತಜ್ಞರಲ್ಲಿ ಈ ಪ್ರಶ್ನೆಯನ್ನು ಕೇಳಿದರೆ ಖಾಲಿ ಹೊಟ್ಟೆಯಲ್ಲಿ ಟೀ ಸೇವಿಸುವುದು ಅತ್ಯಂತ ಅನಾರೋಗ್ಯಕರ ಅಭ್ಯಾಸ ಎಂಬ ಉತ್ತರ ಸಿಗುತ್ತದೆ.ಹಾಗಾದರೆ ಟೀ ಯಾವಾಗ ಕುಡಿಯಬೇಕು ಎಂಬ ಪ್ರಶ್ನೆಗೆ ತಜ್ಞರು ಬೆಳಗ್ಗಿನ ಉಪಾಹಾರದ ಬಳಿಕ ಸೇವಿಸುವುದು ಉತ್ತಮ ಎಂಬ ಉತ್ತರ ನೀಡುತ್ತಾರೆ. ಆದರೆ ಟೀ ಸೇವನೆಯ ಪ್ರಮಾಣ ಇಡಿಯ ದಿನದಲ್ಲಿ ಮಿತವಾಗಿರುವುದೂ ಅಗತ್ಯ.

ಹಾಗಾದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಹುದೇ? ಮುಂದೆ ಓದಿ….

 ವಾಕರಿಕೆ ಬರುತ್ತದೆಯೇ?

ಟೀ ಕ್ಷಾರೀಯವೂ ಆಗಿದೆ ಕೊಂಚ ಆಮ್ಲೀಯವೂ ಆಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಜೀರ್ಣರಸಗಳ ಪ್ರಭಾವ ಏರುಪೇರಾಗುತ್ತದೆ. ಈ ಏರುಪೇರು ವಾಕರಿಕೆ ಬರಿಸುತ್ತದೆ.

ಕಪ್ಪು (ಬ್ಲಾಕ್) ಟೀ ಸುರಕ್ಷಿತವೇ?

ಕಪ್ಪು ಟೀ ಎಂದರೆ ಹೆಚ್ಚು ಕುದಿಸದ ಮತ್ತು ಹಾಲು ಸೇರಿಸದ ಟೀ. ಇದು ತೂಕ ಇಳಿಸಲು ಉತ್ತಮವಾದರೂ ಖಾಲಿ ಹೊಟ್ಟೆಯಲ್ಲಿ ಕುಡಿಯುವ ಮೂಲಕ ಆಮ್ಲೀಯತೆ ಹೆಚ್ಚುತ್ತದೆ, ಇದರಿಂದ ಹೊಟ್ಟೆಯ ಜೀರ್ಣರಸಗಳೂ ಪ್ರಭಾವಕ್ಕೊಳಗಾಗಿ ಹೊಟ್ಟೆಯುಬ್ಬರಿಕೆ ಮತ್ತು ಹೊಟ್ಟೆ ತುಂಬಿರುವ ಹುಸಿಭಾವನೆಯನ್ನು ಮೂಡಿಸುತ್ತದೆ.

ಹಾಲು ಸೇರಿಸಿದ ಟೀ ಕುಡಿದರೆ ಆಗುವ ಅಡ್ಡಪರಿಣಾಮಗಳೇನು?

ಭಾರತದಲ್ಲಿ ಟೀ ಕುಡಿಯುವ ತೊಂಭತ್ತು ಶೇಖಡಾ ಜನರಲ್ಲಿ ಎಂಭತ್ತೊಂಭತ್ತು ಶೇಖಡಾ ಜನರು ಹಾಲು ಸೇರಿಸಿದ ಟೀ ಕುಡಿಯುತ್ತಾರೆ. ಆದರೆ ದಿನಕ್ಕೆ ಮೂರಕ್ಕಿಂತ ಹೆಚ್ಚು ಕಪ್ ಕುಡಿದರೆ ಇದು ಅನಗತ್ಯ ಕೊಬ್ಬು, ಆಮ್ಲೀಯತೆ ಮತ್ತು ಟಿನ್ನಿಟಸ್  ಅಥವಾ ಕಿವಿಗಳಲ್ಲಿ ಗುಂಯ್ಗುಡುವ ತೊಂದರೆಯನ್ನು ತಂದಿಡುತ್ತದೆ.

ಅದರಲ್ಲೂ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಸುಸ್ತಾದ ಭಾವನೆ, ಹೊಟ್ಟೆಯುಬ್ಬರಿಕೆ, ಜೀರ್ಣರಸಗಳು ಪ್ರಭಾವ ಕಳೆದುಕೊಳ್ಳುವುದು ಮೊದಲಾದ ತೊಂದರೆಗಳು ಎದುರಾಗಬಹುದು. ಇಲ್ಲಿ ಓದಿ :- ಗರ್ಭಿಣಿ ಮಹಿಳೆಯರು ಇವನ್ನು ಬಳಸಿದರೆ, ಹುಟ್ಟುವ ಮಕ್ಕಳಿಗೆ ಅಪಾಯ..!

ಸ್ಟ್ರಾಂಗ್ ಟೀ ಕುಡಿದರೆ ಯಾವ ದುಷ್ಪರಿಣಾಮಗಳಾಗುತ್ತವೆ?

ಹೆಚ್ಚಿನ ರುಚಿ ಪಡೆಯಲು ಎರಡು ವಿಧಾನಗಳಿವೆ. ಮೊದಲನೆಯದು ಟೀಪುಡಿಯನ್ನು ಹೆಚ್ಚು ಸಮಯದವರೆಗೆ ಕುದಿಸುವುದು. ಎರಡನೆಯದು ಹೆಚ್ಚಿನ ಪ್ರಮಾಣದ ಟೀ ಪುಡಿಹಾಕಿ ಕೊಂಚ ಸಮಯದ ವರೆಗೆ ಕುದಿಸುವುದು. ಆದರೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದಾದರೆ ಎರಡೂ ವಿಧಾನಗಳು ಮಾರಕವಾಗಿವೆ. ಅದರಲ್ಲೂ ಹಾಲಿಲ್ಲದ ಸ್ಟ್ರಾಂಗ್ ಟೀ ಕುಡಿಯುವುದರ ಮೂಲಕ ಜೀರ್ಣವ್ಯವಸ್ಥೆ ಹಾಳಾಗುತ್ತದೆ. ಏಕೆಂದರೆ ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಆಮ್ಲಗಳು ಜೀರ್ಣರಸಗಳ ರಚನೆಯನ್ನು ಬದಲಿಸಿಬಿಡುತ್ತವೆ. ಇದು ಅಲ್ಸರ್, ಹುಳಿತೇಗು, ಹೊಟ್ಟೆಯುರಿ, ಎದೆಯುರಿ ಮೊದಲಾದವುಗಳಿಗೆ ನೇರವಾಗಿ ಕಾರಣವಾಗುತ್ತದೆ.

ನಾಲ್ಕೈದು ಬಗೆಯ ಟೀಪುಡಿ ಬೆರೆಸಿದರೆ ಏನಾಗುತ್ತದೆ

ಫ್ಯಾಕ್ಟರಿಯಲ್ಲಿ ತ್ಯಾಜ್ಯವಾಗಿ ಹೋಗಬಹುದಾದ, ಆದರೆ ಕೊಂಚ ಟೀ ಅಂಶವಿರುವ ಪುಡಿಯನ್ನು ಅಲ್ಪ ಪ್ರಮಾಣದಲ್ಲಿ ಟೀಪುಡಿಯಲ್ಲಿ ಬೆರೆಸಿ ಲಾಭ ಮಾಡಿಕೊಳ್ಳಲಾಗುತ್ತದೆ. ಅಗ್ಗದ ಟೀಪುಡಿಯನ್ನು ದುಬಾರಿ ಟೀಪುಡಿಯೊಂದಿಗೂ ಬೆರೆಸಿ ಮಾರಾಟ ಮಾಡುತ್ತಾರೆ.

ಆದರೆ ಪ್ರತಿಷ್ಠಿತ ಸಂಸ್ಥೆಗಳು ನುರಿತ ಚಹಾ ರುಚಿ ನೋಡುವವರ ಮೂಲಕ , ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಎರಡು ಅಥವಾ ಹೆಚ್ಚು ಪುಡಿಗಳನ್ನು ಬೆರೆಸಿ ಪರೀಕ್ಷಿಸಿ ಸುರಕ್ಷಿತ ಎಂದು ಖಚಿತಪಡಿಸಿದ ಮೇಲೆ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಾರೆ. ಇದಕ್ಕೆ ಬ್ಲೆಂಡ್ಎಂದು ಕರೆಯುತ್ತಾರೆ.

ಈ ಬ್ಲೆಂಡ್ ಟೀಪುಡಿ ಕುಡಿಯುವುದು ಸುರಕ್ಷಿತವೇ ಹೊರತು ನಾವಾಗಿ ನಮ್ಮ ಮನಸ್ಸಿಗೆ ಬಂದಂತೆ ಎರಡು ಅಥವಾ ಹೆಚ್ಚಿನ ಟೀಪುಡಿಗಳನ್ನು ಸೇರಿಸಿ ಕುಡಿಯುವುದು ಆರೋಗ್ಯಕ್ಕೆ ಮಾರಕ ಹಾಗೂ ಇದು ಪಾನಮತ್ತನಾಗಿರುವ ಅನುಭವವನ್ನೂ ನೀಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಥ್ರೀಮಿಕ್ಸ್, ಸೆವೆನ್ ಮಿಕ್ಸ್ ಎಲ್ಲವೂ ವ್ಯಾಪಾರದ ತಂತ್ರಗಳೇ ಹೊರತು ಆರೋಗ್ಯಕರವಲ್ಲ.

ಟೀ ಮತ್ತು ಬಿಸ್ಕತ್
ಭಾರತದಲ್ಲಿ ಅತಿ ಸಾಮಾನ್ಯವಾದ ಧಿಡೀರ್ ತಿಂಡಿ ಎಂದರೆ ಟೀ ಮತ್ತು ಬಿಸ್ಕತ್.  ಟೀ ಮತ್ತು ಬಿಸ್ಕತ್ ತಿನ್ನುವುದು ಉತ್ತಮ ಅಭ್ಯಾಸ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಬಿಸ್ಕತ್ ಬದಲಿಗೆ ಟೋಸ್ಟ್, ರಸ್ಕ್ ಮೊದಲಾದವುಗಳನ್ನೂ ಸೇವಿಸಬಹುದು. ಇವುಗಳಲ್ಲಿರುವ ಹಿಟ್ಟಿನ ಅಂಶ ಟೀ ಯಲ್ಲಿರುವ ಆಮ್ಲೀಯತೆಯನ್ನು ಹೀರಿಕೊಳ್ಳುವ ಕಾರಣ ಜೀರ್ಣರಸಗಳು ಹೆಚ್ಚು ಪ್ರಭಾವಕ್ಕೊಳಗಾಗುವುದಿಲ್ಲ. ಟೀ ಒಟ್ಟಿಗೆ ಸಿಹಿ ಅಥವಾ ಉಪ್ಪಿನ ಅಂಶವಿರುವ ತಿಂಡಿಗಳನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಸೋಡಿಯಂ ಅಂಶವನ್ನು ಪಡೆದುಕೊಂಡು ಹೊಟ್ಟೆಯ ಮತ್ತು ಕರುಳಿನ ಹುಣ್ಣು (ಅಲ್ಸರ್) ನಿಂದ ಪಾರಾಗಬಹುದು

ಟೀ ಕುಡಿಯುವುದರಲ್ಲಿ ಅತಿಕೆಟ್ಟ ಅಭ್ಯಾಸ 

ಆಹಾರ ಸೇವನೆಯ ಬಳಿಕ ಟೀ ಕುಡಿಯುವುದು ಕೆಟ್ಟ ಅಭ್ಯಾಸವಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನೆ

    ಗೃಹಿಣಿ ನೆನಪಿಟ್ಟುಕೊಳ್ಳಬೇಕಾದ 10 ಸಂಗತಿಗಳು ಯಾವುವು ಗೋತಾ..?ತಿಳಿಯಲು ಈ ಲೇಖನ ಓದಿ ..

    ಜಾಮ್‌ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.

  • ಸುದ್ದಿ

    ನೀರಿನ ಕೊರತೆಯನ್ನು ನೀಗಿಸಲು 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ‘ಭಗೀರಥ’ ರೈಲು ಚನ್ನೈ ಗೆ ಆಗಮಿಸಿದೆ…!

    ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್‌ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್‌ ಪೇಟೆಯಿಂದ ಬರೊಬ್ಬರಿ 25…

  • ಸುದ್ದಿ

    ನವ ವಧು ವರರ ಮೇಲೆ ಲಕ್ಷಾಂತರ ರೂ ನೋಟುಗಳ ಸುರಿಮಳೆ ಮಾಡಿದ್ರು!ಈ ಸುದ್ದಿ ನೋಡಿ…

    ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್‍ನಲ್ಲಿ ನೋಟುಗಳನ್ನು ತೆಗೆದುಕೊಂಡು…

  • ಮನರಂಜನೆ

    ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

    ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..  ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what   …