ಕ್ರೀಡೆ

ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

1070

ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು. ಹಾಗೂ ಸಿಂಧು ಅವರನ್ನು ಗ್ರೂಪ್-1 ಹುದ್ದೆಗೆ ನೇಮಕ ಮಾಡಲು ರಾಜ್ಯ ಸಾರ್ವಜನಿಕ ಸೇವಾ ಕಾಯ್ದೆಯನ್ನು ಜಾರಿ ಮಾಡಲಾಗಿತ್ತು.

ಇದಕ್ಕೆ ಪ್ರತಿಕ್ರಯಿಸಿದ್ದ ಸಿಂಧುರವರು, ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದರು ಹಾಗೂ ಬ್ಯಾಡ್ಮಿಂಟನ್ ಗೆ ತಮ್ಮ ಮೊದಲ ಆದ್ಯತೆ ಅಂತಾ ಹೇಳಿದ್ದರು. ಆಗ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುರವರು ಸಿಂಧುಗೆ ಶುಭ ಹಾರೈಸಿ, ದೇಶಕ್ಕೆ ಮತ್ತಷ್ಟು ಪದಕಗಳನ್ನು ಗೆದ್ದು ತರಲಿ ಅಂತಾ ಹೇಳಿದ್ರು.

ಹೀಗಾಗಿ ಭಾರತದ ಖ್ಯಾತ ಶಟಲ್‌ ಬ್ಯಾಡ್ಮಿಂಟನ್‌ ಆಟಗಾರ್ತಿ, ಒಲಿಂಪಿಕ್‌ ಪದಕ ವಿಜೇತೆ, ಪಿ ವಿ ಸಿಂಧು ಆಂಧ್ರ ಪ್ರದೇಶ ಸರಕಾರದಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಸಿಂಧು ಅವರಿಗೆ ಕಳೆದ ಜು.27ರಂದೇ ಜಿಲ್ಲಾಧಿಕಾರಿಯಾಗಿ ಅಧಿಕೃತ ನೇಮಕಾತಿ ಪತ್ರವನ್ನು ನೀಡಲಾಗಿತ್ತು. ಆದರೆ ಅವರು ನಿನ್ನೆ ಬುಧವಾರ ಔಪಚಾರಿಕವಾಗಿ ತಮ್ಮ ಅಧಿಕಾರ ವಹಿಸಿಕೊಂಡರು.

ಪಿ ವಿ ಸಿಂಧುರವರ ಬಾಲ್ಯದ ಬಗ್ಗೆ ತಿಳಿಯೋಣ:-

ಪಿ.ವಿ ಸಿಂಧುರವರು, 5 ಜುಲೈ 1995ರಂದು ಹೈದರಾಬಾದ್ನoಲ್ಲಿ ಜನಿಸಿದರು. ತಂದೆ ಪಿ.ವಿ. ರಮಣ ಮತ್ತು ತಾಯಿ ಪಿ. ವಿಜಯ. ಸಿಂಧುವಿನ ತಂದೆ-ತಾಯಿ ಇಬ್ಬರೂ ಸಹ ಮಾಜಿ ವಾಲಿಬಾಲ್ ಆಟಗಾರರಾಗಿರುವುದೊಂದು ವಿಶೇಷ. ಭಾರತ ಸರ್ಕಾರವು ಕೊಡಮಾಡುವ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಪಿ.ರಮಣರು 2000 ನೆಯ ಇಸವಿಯಲ್ಲಿ ಭಾಜನರಾಗಿದ್ದಾರೆ. ತಂದೆ ವೃತ್ತಿಪರ ವಾಲಿಬಾಲ್ ಆಟಗಾರರಾಗಿದ್ದರೂ ಸಹ ಸಿಂಧು ಮಾತ್ರ ಬ್ಯಾಡ್ಮಿಂಟನ್ ನಡೆಗೆ ಆಕರ್ಷಿತರಾದರು.ಅದಕ್ಕೆ ಕಾರಣ, 2001 ರ ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ಪುಲ್ಲೇಲ ಗೋಪಿಚಂದ್‍‍ರ ಯಶಸ್ಸು ಮತ್ತು ಅವರಿಂದ ಪಡೆದ ಸ್ಫೂರ್ತಿ. ತನ್ನ ಎಂಟನೆಯ ವಯಸ್ಸಿನಲ್ಲೇ ಸಿಂಧು ಬ್ಯಾಡ್ಮಿಂಟನ್ ಆಡಲು ಪ್ರಾರಂಭಿಸಿದ್ದರು, ಇದೂ ಸಹ ಅವರನ್ನು ಬ್ಯಾಡ್ಮಿಂಟನ್ ಕಡೆಗೆ ಸೆಳೆಯಲು ಕಾರಣವಾಯಿತು.

ಪಿ.ವಿ ಸಿಂಧುರವರ ಬ್ಯಾಡ್ಮಿಂಟನ್ ಸಾಧನೆ:-

ಪಿ.ವಿ ಸಿಂಧುರವರು ಅಂತರರಾಷ್ಟ್ರೀಯ ಖ್ಯಾತಿಯ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ. ಹೈದರಾಬಾದ್ ನ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತಿ ಪಡೆಯುವ ಇವರು, ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವ ಸ್ವಸಹಾಯ ಸಂಸ್ಥೆಯಾದ ಒಲಿಂಪಿಕ್ ಗೋಲ್ಡ್ ಕ್ವೆಸ್ಟ್ ನ ಭಾಗವಾಗಿದ್ದಾರೆ. 10 ಆಗಸ್ಟ್ 2012 ರಂದು ಇವರು ಚೀನಾ ದಲ್ಲಿ ಜರುಗಿದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ (ಪ್ರಕಾಶ್ ಪಡುಕೋಣೆ 1983 ರಲ್ಲಿ ಕಂಚು ಗೆದ್ದಿದ್ದಾರೆ. ಅನಂತರ ಭಾರತದ ಮೊದಲ ಸಿಂಗಲ್ಸ್ ಪದಕ) ನ ಸಿಂಗಲ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ. ಸೆಪ್ಟೆಂಬರ್ 21,2012 ರಂದು ಬಿಡುಗಡೆ ಮಾಡಲಾದ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಶ್ರೇಯಾಂಕಗಳಲ್ಲಿ ಮೊದಲ 20ರೊಳಗಿನ ಶ್ರೇಣಿಯಲ್ಲಿದ್ದರು. ಬಿಡಬ್ಲ್ಯೂಎಫ್ ಜೂನಿಯರ್ ಶ್ರೇಯಾಂಕಗಳಲ್ಲಿ 3 ನೇ ಸ್ಥಾನದಲ್ಲಿದ್ದಾರೆ.

ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ:-

ಭೂ ಆಡಳಿತೆಯ ಮುಖ್ಯ ಆಯುಕ್ತರಾಗಿರುವ ಅನಿಲ್‌ ಚಂದ್ರ ಪುನೇತ ಅವರಿಗೆ ಪಿ ವಿ ಸಿಂಧು ತಮ್ಮ ನೇಮಕಾತಿ ಪತ್ರವನ್ನು ಸಲ್ಲಿಸಿ ಗ್ರೂಪ್‌ 1 ಸರಕಾರಿ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಸರಕಾರಿ ಆಡಳಿತೆಯಲ್ಲಿನ ತಮ್ಮ ಜೀವನದ ಹೊಸ ಪಾತ್ರವನ್ನು ಆರಂಭಿಸಿದರು.

ಸಿಂಧು ಅವರ ತನ್ನ ಹೆತ್ತವರೊಡಗೂಡಿ ಸರಕಾರದ ಭೂ ಆಡಳಿತೆಯ ಮುಖ್ಯ ಆಯುಕ್ತರ ಕಚೇರಿಗೆ ತೆರಳಿ ಗೊಲ್ಲಪುಡಿಯಲ್ಲಿನ ಸರಕಾರಿ ಸಚಿವಾಲಯದಲ್ಲಿ ಅಧಿಕಾರ ಗ್ರಹಣ ಮಾಡಿದರು.

 

ಸಿಂಧು ಎರಡು ಬಾರಿಯ ಕಂಚಿನ ಪದಕ ವಿಜೇತೆಯಾಗಿದ್ದಾರೆ.

ಸ್ನೇಹಿತರೆ ನಮ್ಮ ಪ್ರಕಾರ ಯಾವುದೇ ಕ್ರೀಡೆಯಲ್ಲಿ ಯಾರೇ ಆಗಲಿ, ನಮ್ಮ ದೇಶಕ್ಕೆ ಪದಕ ತಂದು ಕೊಡುವಲ್ಲಿ ಸಫಲ ರಾಗಿದ್ದಲ್ಲಿ, ಅಂತಹ ಕ್ರೀಡಾ ಪಟುಗಳಿಗೆ ಅದೇ ಕ್ರೀಡೆಯಲ್ಲಿ ಮುಂದುವರಿಯಲು, ಅವರಿಗೆ ಆರ್ಥಿಕವಾಗಲಿ, ಅಥವಾ ಬೇರೆ ಯಾವುದೇ ರೀತಿಯಿಂದಾಗಲಿ, ಸರಕಾರಗಳು ಪ್ರೋತ್ಸಾಹ ಕೊಡಬೇಕು ಮತ್ತು ಅವರನ್ನು ಬೆಳೆಸಬೇಕು.

ಅದು ಬಿಟ್ಟು ಸರಕಾರಗಳು ತಮ್ಮ ತೋರಿಕೆಗಾಗಿ ಅಧಿಕಾರದ ಗದ್ದುಗೆಯನ್ನು ಕೊಟ್ಟರೆ, ಈ ಅಧಿಕಾರದ ಮಾಯೆ ಕ್ರೀಡೆಯಲ್ಲಿ ಮುಂದುವರಿಯಲು ಅವಕಾಶ ಮಾಡಿಕೊಡುತ್ತದಯೇ? ಹಾಗೂ ಇನ್ನಷ್ಟು ಮತ್ತಷ್ಟು ಪದಕಗಳು ನಮ್ಮ ದೇಶಕ್ಕೆ ಬರಲು ಸಾಧ್ಯವೇ? ನಾವು ನಮ್ಮ ದೇಶದ ಹೆಸರನ್ನು ಸಾಗರದಾಚೆ ಕೊಂಡಯ್ಯುವಂತ, ಉತ್ತಮ ಕ್ರೀಡಾಪಟುವನ್ನು ಕಳೆದುಕೊಂಡಂತೆ ಆಗುವುದಿಲ್ಲವೇ? ಇದಕ್ಕೆ ನಿಮ್ಮ ಅಭಿಪ್ರಾಯವನ್ನು ನಿಮ್ಮ ಕಾಮೆಂಟ್ ಮೂಲಕ ತಿಳಿಸಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ವೈರಲ್ ಆಯ್ತು ಟೆನಿಸ್ ತಾರೆ ಸಾನಿಯಾ ಮಿರ್ಜಾ, ತನ್ನ ಮಗುವಿನೊಂದಿಗೆ ಇರುವ ಫೋಟೋ..!ಮಗು ಹೇಗಿದೆ ಗೊತ್ತಾ..?

    ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.

  • inspirational

    ಮಂಗಳ ಗ್ರಹ

    ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…

  • ಆಧ್ಯಾತ್ಮ

    ದೀಪಗಳ ಹಬ್ಬದ ಹಿನ್ನಲೆ ಏನು ಗೊತ್ತಾ?ಪಟಾಕಿ ಹೊಡೆಯುವವರಿಗೆ ಇಲ್ಲಿವೆ, ಕೆಲವು ಸಲಹೆಗಳು…ತಿಳಿಯಲು ಇದನ್ನು ಓದಿ…

    ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.