News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕ್ರೀಡೆ

ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

1076

ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು. ಹಾಗೂ ಸಿಂಧು ಅವರನ್ನು ಗ್ರೂಪ್-1 ಹುದ್ದೆಗೆ ನೇಮಕ ಮಾಡಲು ರಾಜ್ಯ ಸಾರ್ವಜನಿಕ ಸೇವಾ ಕಾಯ್ದೆಯನ್ನು ಜಾರಿ ಮಾಡಲಾಗಿತ್ತು.

ಇದಕ್ಕೆ ಪ್ರತಿಕ್ರಯಿಸಿದ್ದ ಸಿಂಧುರವರು, ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದರು ಹಾಗೂ ಬ್ಯಾಡ್ಮಿಂಟನ್ ಗೆ ತಮ್ಮ ಮೊದಲ ಆದ್ಯತೆ ಅಂತಾ ಹೇಳಿದ್ದರು. ಆಗ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುರವರು ಸಿಂಧುಗೆ ಶುಭ ಹಾರೈಸಿ, ದೇಶಕ್ಕೆ ಮತ್ತಷ್ಟು ಪದಕಗಳನ್ನು ಗೆದ್ದು ತರಲಿ ಅಂತಾ ಹೇಳಿದ್ರು.

ಹೀಗಾಗಿ ಭಾರತದ ಖ್ಯಾತ ಶಟಲ್‌ ಬ್ಯಾಡ್ಮಿಂಟನ್‌ ಆಟಗಾರ್ತಿ, ಒಲಿಂಪಿಕ್‌ ಪದಕ ವಿಜೇತೆ, ಪಿ ವಿ ಸಿಂಧು ಆಂಧ್ರ ಪ್ರದೇಶ ಸರಕಾರದಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಸಿಂಧು ಅವರಿಗೆ ಕಳೆದ ಜು.27ರಂದೇ ಜಿಲ್ಲಾಧಿಕಾರಿಯಾಗಿ ಅಧಿಕೃತ ನೇಮಕಾತಿ ಪತ್ರವನ್ನು ನೀಡಲಾಗಿತ್ತು. ಆದರೆ ಅವರು ನಿನ್ನೆ ಬುಧವಾರ ಔಪಚಾರಿಕವಾಗಿ ತಮ್ಮ ಅಧಿಕಾರ ವಹಿಸಿಕೊಂಡರು.

ಪಿ ವಿ ಸಿಂಧುರವರ ಬಾಲ್ಯದ ಬಗ್ಗೆ ತಿಳಿಯೋಣ:-

ಪಿ.ವಿ ಸಿಂಧುರವರು, 5 ಜುಲೈ 1995ರಂದು ಹೈದರಾಬಾದ್ನoಲ್ಲಿ ಜನಿಸಿದರು. ತಂದೆ ಪಿ.ವಿ. ರಮಣ ಮತ್ತು ತಾಯಿ ಪಿ. ವಿಜಯ. ಸಿಂಧುವಿನ ತಂದೆ-ತಾಯಿ ಇಬ್ಬರೂ ಸಹ ಮಾಜಿ ವಾಲಿಬಾಲ್ ಆಟಗಾರರಾಗಿರುವುದೊಂದು ವಿಶೇಷ. ಭಾರತ ಸರ್ಕಾರವು ಕೊಡಮಾಡುವ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಪಿ.ರಮಣರು 2000 ನೆಯ ಇಸವಿಯಲ್ಲಿ ಭಾಜನರಾಗಿದ್ದಾರೆ. ತಂದೆ ವೃತ್ತಿಪರ ವಾಲಿಬಾಲ್ ಆಟಗಾರರಾಗಿದ್ದರೂ ಸಹ ಸಿಂಧು ಮಾತ್ರ ಬ್ಯಾಡ್ಮಿಂಟನ್ ನಡೆಗೆ ಆಕರ್ಷಿತರಾದರು.ಅದಕ್ಕೆ ಕಾರಣ, 2001 ರ ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ಪುಲ್ಲೇಲ ಗೋಪಿಚಂದ್‍‍ರ ಯಶಸ್ಸು ಮತ್ತು ಅವರಿಂದ ಪಡೆದ ಸ್ಫೂರ್ತಿ. ತನ್ನ ಎಂಟನೆಯ ವಯಸ್ಸಿನಲ್ಲೇ ಸಿಂಧು ಬ್ಯಾಡ್ಮಿಂಟನ್ ಆಡಲು ಪ್ರಾರಂಭಿಸಿದ್ದರು, ಇದೂ ಸಹ ಅವರನ್ನು ಬ್ಯಾಡ್ಮಿಂಟನ್ ಕಡೆಗೆ ಸೆಳೆಯಲು ಕಾರಣವಾಯಿತು.

ಪಿ.ವಿ ಸಿಂಧುರವರ ಬ್ಯಾಡ್ಮಿಂಟನ್ ಸಾಧನೆ:-

ಪಿ.ವಿ ಸಿಂಧುರವರು ಅಂತರರಾಷ್ಟ್ರೀಯ ಖ್ಯಾತಿಯ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ. ಹೈದರಾಬಾದ್ ನ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತಿ ಪಡೆಯುವ ಇವರು, ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವ ಸ್ವಸಹಾಯ ಸಂಸ್ಥೆಯಾದ ಒಲಿಂಪಿಕ್ ಗೋಲ್ಡ್ ಕ್ವೆಸ್ಟ್ ನ ಭಾಗವಾಗಿದ್ದಾರೆ. 10 ಆಗಸ್ಟ್ 2012 ರಂದು ಇವರು ಚೀನಾ ದಲ್ಲಿ ಜರುಗಿದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ (ಪ್ರಕಾಶ್ ಪಡುಕೋಣೆ 1983 ರಲ್ಲಿ ಕಂಚು ಗೆದ್ದಿದ್ದಾರೆ. ಅನಂತರ ಭಾರತದ ಮೊದಲ ಸಿಂಗಲ್ಸ್ ಪದಕ) ನ ಸಿಂಗಲ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ. ಸೆಪ್ಟೆಂಬರ್ 21,2012 ರಂದು ಬಿಡುಗಡೆ ಮಾಡಲಾದ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಶ್ರೇಯಾಂಕಗಳಲ್ಲಿ ಮೊದಲ 20ರೊಳಗಿನ ಶ್ರೇಣಿಯಲ್ಲಿದ್ದರು. ಬಿಡಬ್ಲ್ಯೂಎಫ್ ಜೂನಿಯರ್ ಶ್ರೇಯಾಂಕಗಳಲ್ಲಿ 3 ನೇ ಸ್ಥಾನದಲ್ಲಿದ್ದಾರೆ.

ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ:-

ಭೂ ಆಡಳಿತೆಯ ಮುಖ್ಯ ಆಯುಕ್ತರಾಗಿರುವ ಅನಿಲ್‌ ಚಂದ್ರ ಪುನೇತ ಅವರಿಗೆ ಪಿ ವಿ ಸಿಂಧು ತಮ್ಮ ನೇಮಕಾತಿ ಪತ್ರವನ್ನು ಸಲ್ಲಿಸಿ ಗ್ರೂಪ್‌ 1 ಸರಕಾರಿ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಸರಕಾರಿ ಆಡಳಿತೆಯಲ್ಲಿನ ತಮ್ಮ ಜೀವನದ ಹೊಸ ಪಾತ್ರವನ್ನು ಆರಂಭಿಸಿದರು.

ಸಿಂಧು ಅವರ ತನ್ನ ಹೆತ್ತವರೊಡಗೂಡಿ ಸರಕಾರದ ಭೂ ಆಡಳಿತೆಯ ಮುಖ್ಯ ಆಯುಕ್ತರ ಕಚೇರಿಗೆ ತೆರಳಿ ಗೊಲ್ಲಪುಡಿಯಲ್ಲಿನ ಸರಕಾರಿ ಸಚಿವಾಲಯದಲ್ಲಿ ಅಧಿಕಾರ ಗ್ರಹಣ ಮಾಡಿದರು.

 

ಸಿಂಧು ಎರಡು ಬಾರಿಯ ಕಂಚಿನ ಪದಕ ವಿಜೇತೆಯಾಗಿದ್ದಾರೆ.

ಸ್ನೇಹಿತರೆ ನಮ್ಮ ಪ್ರಕಾರ ಯಾವುದೇ ಕ್ರೀಡೆಯಲ್ಲಿ ಯಾರೇ ಆಗಲಿ, ನಮ್ಮ ದೇಶಕ್ಕೆ ಪದಕ ತಂದು ಕೊಡುವಲ್ಲಿ ಸಫಲ ರಾಗಿದ್ದಲ್ಲಿ, ಅಂತಹ ಕ್ರೀಡಾ ಪಟುಗಳಿಗೆ ಅದೇ ಕ್ರೀಡೆಯಲ್ಲಿ ಮುಂದುವರಿಯಲು, ಅವರಿಗೆ ಆರ್ಥಿಕವಾಗಲಿ, ಅಥವಾ ಬೇರೆ ಯಾವುದೇ ರೀತಿಯಿಂದಾಗಲಿ, ಸರಕಾರಗಳು ಪ್ರೋತ್ಸಾಹ ಕೊಡಬೇಕು ಮತ್ತು ಅವರನ್ನು ಬೆಳೆಸಬೇಕು.

ಅದು ಬಿಟ್ಟು ಸರಕಾರಗಳು ತಮ್ಮ ತೋರಿಕೆಗಾಗಿ ಅಧಿಕಾರದ ಗದ್ದುಗೆಯನ್ನು ಕೊಟ್ಟರೆ, ಈ ಅಧಿಕಾರದ ಮಾಯೆ ಕ್ರೀಡೆಯಲ್ಲಿ ಮುಂದುವರಿಯಲು ಅವಕಾಶ ಮಾಡಿಕೊಡುತ್ತದಯೇ? ಹಾಗೂ ಇನ್ನಷ್ಟು ಮತ್ತಷ್ಟು ಪದಕಗಳು ನಮ್ಮ ದೇಶಕ್ಕೆ ಬರಲು ಸಾಧ್ಯವೇ? ನಾವು ನಮ್ಮ ದೇಶದ ಹೆಸರನ್ನು ಸಾಗರದಾಚೆ ಕೊಂಡಯ್ಯುವಂತ, ಉತ್ತಮ ಕ್ರೀಡಾಪಟುವನ್ನು ಕಳೆದುಕೊಂಡಂತೆ ಆಗುವುದಿಲ್ಲವೇ? ಇದಕ್ಕೆ ನಿಮ್ಮ ಅಭಿಪ್ರಾಯವನ್ನು ನಿಮ್ಮ ಕಾಮೆಂಟ್ ಮೂಲಕ ತಿಳಿಸಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂತರ್ಜಾತಿ ಮದುವೆ ಆದ್ರೆ ಸಿಗುತ್ತೆ ಲಕ್ಷ ಲಕ್ಷ ಹಣ…ಹೆಚ್ಚಿನ ಮಾಹಿತಿಗೆ ಈ ಸುದ್ದಿ ನೋಡಿ

    ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…

  • ಆರೋಗ್ಯ

    ಕಡಿಮೆ ವೆಚ್ಚದಲ್ಲಿ ಮೂತ್ರ ಪಿಂಡ ಶುದ್ದೀಕರಿಸುವ ಮನೆಮದ್ದು. ಈ ಮಾಹಿತಿ ನೋಡಿ.

    ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಪ್ರೇಮ

    ಆಕೆ ನನಗೆ ಸ್ವಲ್ಪ ಉಸಿರಾಟದ ತೊಂದರೆಯಾಗಿದೆ ಎಂದಳು – ಒಂದು ಪ್ರೆಮ ಕಥೆ 2 ನಿಮಿಷ ಸಮಯ ವಿದ್ದರೆ ಓದಿ

    ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.

  • ಉದ್ಯೋಗ

    ಯುವ ಪರಿವರ್ತಕರಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು ನಿಮ್ಹಾನ್ಸ್‌ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ  ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…

  • ಸ್ಪೂರ್ತಿ

    ಫುಟ್ಪಾತ್ ಮೇಲೆ ಭಿಕ್ಷೆ ಬೇಡುತ್ತಿದ್ದ ಹುಡುಗನ ಇವತ್ತಿನ ಸಾಧನೆ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..