ಆರೋಗ್ಯ

ಗಂಟಲು ನೋವಿಗೆ ಮನೆಯಲ್ಲೇ ಔಷಧಿ ಸುಲಭವಾಗಿ ತಯಾರಿಸ ಬಹುದು ಈ ಲೇಖನ ಓದಿ ತಿಳಿಯಿರಿ….

1236

ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ. ಆ ಮಟ್ಟಿಗೆ ನಮ್ಮ ಗಂಟಲು ತನ್ನ ಶಕ್ತಿ ಸಾಮರ್ಥ್ಯಗಳನ್ನು ಕಳೆದುಕೊಂಡು ಬಿಡುತ್ತದೆ. ಯೋಚನೆ ಮಾಡ ಬೇಡಿ ಮನೆಯಲ್ಲೆ ಸುಲಭ ರೀತಿಯಲ್ಲಿ ಸರಿಯಾದ  ಔಷಧ ತಯಾರಿಸ ಬಹುದು.

ಉಪ್ಪು ನೀರು :-

ಗಂಟಲು ನೋವಿಗೆ ರಾಮಬಾಣ ಎನಿಸಿಕೊಂಡಿರುವ ಪರಿಹಾರ ಉಪ್ಪು ನೀರು. ಹೌದು ನೀರಿಗೆ ಸ್ವಲ್ಪ ಉಪ್ಪನ್ನು ಬೆರೆಸಿಕೊಂಡು ಅದನ್ನು ಮುಕ್ಕಳಿಸುವ ಮೂಲಕ ನಿಮ್ಮ ಗಂಟಲ ನೋವನ್ನು ನಿವಾರಿಸಿಕೊಳ್ಳಬಹುದು. ಹೇಳಿ ಕೇಳಿ ಉಪ್ಪು ಆಂಟಿಸೆಪ್ಟಿಕ್ ಗುಣಗಳನ್ನು ಹೊಂದಿರುವ ಉತ್ಪನ್ನವಾಗಿದ್ದು, ಅದು ನಿಮ್ಮ ಗಂಟಲಿನಲ್ಲಿರುವ ಸಿಂಬಳದ ಪೊರೆಯು ನಿವಾರಣೆಯಾಗಲು ಸಹಾಯ ಮಾಡುತ್ತದೆ. ಜೊತೆಗೆ ಇದು ನಿಮ್ಮ ಗಂಟಲಿನಲ್ಲಿರುವ ಕಫವು ಸಹ ನಿವಾರಣೆಯಾಗುವಂತೆ ಮಾಡುತ್ತದೆ ಮತ್ತು ಉರಿಬಾವು ನಿಮ್ಮನ್ನು ಕಾಡದಂತೆ ತಡೆಯು ತ್ತದೆ.

ಇಷ್ಟೆ ಅಲ್ಲದೆ ಇದು ನಿಮ್ಮ ಗಂಟಲ ನೋವಿಗೆ ತಕ್ಷಣದ ಪರಿಹಾರವನ್ನು ನೀಡುತ್ತದೆ. ಒಂದು ವೇಳೆ ನಿಮಗೆ ಉಪ್ಪು ಅಷ್ಟಾಗಿ ರುಚಿಸದಿದ್ದಲ್ಲಿ, ಈ ನೀರಿಗೆ ಸ್ವಲ್ಪ ಪ್ರಮಾಣದ ಜೇನು ತುಪ್ಪವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು ಮುಕ್ಕಳಿಸಿ, ಆದರೆ ನುಂಗಬೇಡಿ. ಮುಕ್ಕಳಿಸಿದ ನೀರನ್ನು ಹೊರಗೆ ಉಗಿಯಿರಿ. ದಿನಕ್ಕೆ ನಾಲ್ಕೈದು ಬಾರಿ ಇದನ್ನು ಮಾಡಿದರೆ ನಿಮ್ಮ ಗಂಟಲು ನೋವು ನಿವಾರಣೆಯಾಗುತ್ತದೆ.

ಬೆಳ್ಳುಳ್ಳಿ ರಸ:-

ಬೆಳ್ಳುಳ್ಳಿಯು ಒಂದು ಆಂಟಿ ಬ್ಯಾಕ್ಟೀರಿಯಾ ಅಂಶಗಳು ಇರುವ ಪದಾರ್ಥವಾಗಿದೆ. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣ ಗಳು ಮತ್ತು ಔ?ಂಯ ಗುಣಗಳು ಗಂಟಲು ನೋವಿಗೆ ಒಳ್ಳೆಯ ಆರಾಮವನ್ನು ನೀಡುತ್ತವೆ. ಅಲ್ಲದೆ ಇದು ಈ ನೋವನ್ನು ಬೇಗ ನಿವಾರಿಸುವ ಮನೆ ಮದ್ದು ಸಹ ಆಗಿದೆ. ಕಚ್ಛಾ ಬೆಳ್ಳುಳ್ಳಿಯನ್ನು ಪ್ರತಿದಿನ ಸೇವಿಸುವುದರಿಂದ ಅಲ್ಲಿಸಿನ್ ಎಂಬ ರಾಸಾಯನಿಕವು ಬಿಡುಗಡೆಯಾಗುತ್ತದೆ. ಇದು ಗಂಟಲಿನಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ನಿವಾರಿಸಲು ಸಹಾಯ ಮಾಡಿ, ಗಂಟಲು ನೋವು ಬರದಂತೆ ತಡೆಯುತ್ತದೆ.

ಬದಲಿಯಾಗಿ, ನೀವು ಬೆಳ್ಳುಳ್ಳಿ ಎಣ್ಣೆಯನ್ನು ಸಹ ಬಳಸಬಹುದು. ಒಂದು ಲೋಟ ನೀರಿಗೆ ನಾಲ್ಕನೇ ಒಂದು ಭಾಗ ಬೆಳ್ಳುಳ್ಳಿ ರಸವನ್ನು ಬೆರೆಸಿಕೊಳ್ಳಿ. ಇದನ್ನು ದಿನಕ್ಕೊಮ್ಮೆ ಬಾಯಿ ಮುಕ್ಕಳಿಸಲು ಬಳಸಿ. ಅಲ್ಲದೆ ಇದರ ಜೊತೆಗೆ ಆಹಾರದಲ್ಲಿ ದೊರೆಯುವ ಬೆಳ್ಳುಳ್ಳಿಯನ್ನು ಸಹ ಸೇವಿಸಿ. ಒಂದು ವೇಳೆ ನಿಮಗೆ ಇದರ ರುಚಿ ಹಿಡಿಸಲಿಲ್ಲವಾದಲ್ಲಿ, ಬೆಳ್ಳುಳ್ಳಿಯ ಮಾತ್ರೆಗಳನ್ನು ಸೇವಿಸಿ.

ಚಕ್ಕೆ :-

ಚಕ್ಕೆಯನ್ನು ಸಹ ಗಂಟಲು ನೋವು ನಿವಾರಿಸಿಕೊಳ್ಳಲು ಬಳಸಬಹುದು. ಒಂದು ಟೀ ಸ್ಪೂನ್ ಚಕ್ಕೆಯ ಪುಡಿಗೆ, ಕರಿ ಮೆಣಸಿನ ಪುಡಿಯನ್ನು ಸೇರಿಸಿ, ಒಂದು ಲೋಟ ಬಿಸಿ ನೀರಿನಲ್ಲಿ ಬೆರೆಸಿಕೊಳ್ಳಿ. ಇದಕ್ಕೆ ನಿಮಗೆ ಅಗತ್ಯವಾದಲ್ಲಿ ಏಲಕ್ಕಿಯನ್ನು ಸಹ ಬೆರೆಸಿಕೊಳ್ಳಿ. ಈ ಎಲ್ಲಾ ಮಿಶ್ರಣವನ್ನು ಚೆನ್ನಾಗಿ ಬೆರೆಸಿ, ನಂತರ ಶೋಧಿಸಿಕೊಳ್ಳಿ. ಈ ಮಿಶ್ರಣವನ್ನು ದಿನಕ್ಕೆ ಎರಡು ಮೂರು ಬಾರಿ ಬಾಯಿ ಮುಕ್ಕಳಿಸಲು ಬಳಸಿ. ಮತ್ತೊಂದು ಆಯ್ಕೆ ಎಂದರೆ ಕೆಲವೊಂದು ಹನಿ ಚಕ್ಕೆ ಎಣ್ಣೆಯನ್ನು ಮತ್ತು ಒಂದು ಟೀ ಸ್ಪೂನ್ ಜೇನುತುಪ್ಪವನ್ನು ಬೆರೆಸಿಕೊಳ್ಳಿ ಇದನ್ನು ದಿನಕ್ಕೆ ಎರಡು ಬಾರಿ ಸೇವಿಸಿ, ಗಂಟಲು ನೋವು ಮತ್ತು ಉರಿಬಾವುನಿಂದ ವಿಮುಕ್ತಿಯನ್ನು ಪಡೆಯಿರಿ.

ಲಿಂಬೆ ಹಣ್ಣು :-

ಗಂಟಲು ನೋವಿನಿಂದ ಗುಣಮುಖರಾಗಲು ಲಿಂಬೆ ಹಣ್ಣನ್ನು ಬಳಸಬಹುದು. ಇದು ನಿಮ್ಮ ಗಂಟಲಿನಲ್ಲಿರುವ ಸಿಂಬಳವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲಿಂಬೆರಸ ವನ್ನು ಬಿಸಿ ನೀರಿಗೆ ಬೆರೆಸಿ, ಅದಕ್ಕೆ ಸ್ವಲ್ಪ ಜೇನು ತುಪ್ಪವನ್ನು ಸೇರಿಸಿ ಸೇವಿಸಿ. ಒಂದು ಕಪ್ ಬಿಸಿ ನೀರಿಗೆ ಒಂದು ಟೀ ಸ್ಪೂನ್ ಜೇನು ತುಪ್ಪ ಮತ್ತು ಅದಕ್ಕೆ ಅರ್ಧ ಹೋಳು ಲಿಂಬೆ ಹಣ್ಣಿನ ರಸದ ಅನುಪಾತದಲ್ಲಿ ಇದನ್ನು ತಯಾರಿಸಿಕೊಳ್ಳಿ.

ಚಳಿಗಾಲ ಹತ್ತಿರವಾಗುತ್ತಿದ್ದು, ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆ ಗಳಿಂದಾಗಿ ನಮ್ಮ ದೇಹದಲ್ಲಿ ಆರೋಗ್ಯವು ಸಹ ಬದಲಾಗು ತ್ತದೆ. ಅದರಲ್ಲಿ ಶೀತ, ಗಂಟಲು ನೋವು, ಕೆಮ್ಮು ಮತ್ತು ಒಮ್ಮೊಮ್ಮೆ ಜ್ವರವು ಸಹ ನಮ್ಮನ್ನು ಭಾದಿಸಬಹುದು ಎಚ್ಚರ ವಹಿಸಿ ಮನೆ ಮದ್ದು ತಯಾರಿಸಿ ತಡೆಗಟ್ಟಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!

    ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು.  ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.‌ ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು.  ರಾಯಚೂರು…

  • ವಿಸ್ಮಯ ಜಗತ್ತು

    ಪೂರ್ವ ಜನ್ಮದಲ್ಲಿ ನೀವು ಏನು ಆಗಿದ್ದೀರಿ ಅಂತ ನಿಮಗೆ ಗೊತ್ತಾ ?ಈ ಲೇಖನಿ ಓದಿ…

    ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..

  • ಶ್ರದ್ಧಾಂಜಲಿ

    ಪ್ರಧಾನಿ ನರೇಂದ್ರ ಮೋದಿಯವರ ತಾಯಿ ನಿಧನ

    ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ  ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ‌ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ  ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…

  • ಸುದ್ದಿ

    ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

    ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…

  • ಉಪಯುಕ್ತ ಮಾಹಿತಿ

    ಯಾವುದೇ ಕೆಮಿಕಲ್ ಸೇರಿಸದೆ ಮನೆಯಲ್ಲೇ ಸಿಗುವ ಆರೋಗ್ಯಕರ ಪದಾರ್ಥಗಳಿಂದ ಲಿಪ್ ಬಾಮ್ ತಯಾರಿಸುವ ಅತಿ ಸರಳ ವಿಧಾನ..ಇದನ್ನು ತಯಾರಿಸಲು ಕೇವಲ ಎರಡು ವಸ್ತುಗಳು ಮಾತ್ರ ಸಾಕು

    ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…

  • ಸುದ್ದಿ

    ಭಾರತೀಯ ಸೇನೆ ಪಾಕ್ ನೆಲದಲ್ಲಿ ದಾಳಿ ನಡೆಸಿದ ವೇಳೆ ನರೇಂದ್ರ ಮೋದಿ ಏನ್ ಮಾಡ್ತಾ ಇದ್ರು ಗೊತ್ತಾ..?

    ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….