ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ. ಆ ಮಟ್ಟಿಗೆ ನಮ್ಮ ಗಂಟಲು ತನ್ನ ಶಕ್ತಿ ಸಾಮರ್ಥ್ಯಗಳನ್ನು ಕಳೆದುಕೊಂಡು ಬಿಡುತ್ತದೆ. ಯೋಚನೆ ಮಾಡ ಬೇಡಿ ಮನೆಯಲ್ಲೆ ಸುಲಭ ರೀತಿಯಲ್ಲಿ ಸರಿಯಾದ ಔಷಧ ತಯಾರಿಸ ಬಹುದು.
ಗಂಟಲು ನೋವಿಗೆ ರಾಮಬಾಣ ಎನಿಸಿಕೊಂಡಿರುವ ಪರಿಹಾರ ಉಪ್ಪು ನೀರು. ಹೌದು ನೀರಿಗೆ ಸ್ವಲ್ಪ ಉಪ್ಪನ್ನು ಬೆರೆಸಿಕೊಂಡು ಅದನ್ನು ಮುಕ್ಕಳಿಸುವ ಮೂಲಕ ನಿಮ್ಮ ಗಂಟಲ ನೋವನ್ನು ನಿವಾರಿಸಿಕೊಳ್ಳಬಹುದು. ಹೇಳಿ ಕೇಳಿ ಉಪ್ಪು ಆಂಟಿಸೆಪ್ಟಿಕ್ ಗುಣಗಳನ್ನು ಹೊಂದಿರುವ ಉತ್ಪನ್ನವಾಗಿದ್ದು, ಅದು ನಿಮ್ಮ ಗಂಟಲಿನಲ್ಲಿರುವ ಸಿಂಬಳದ ಪೊರೆಯು ನಿವಾರಣೆಯಾಗಲು ಸಹಾಯ ಮಾಡುತ್ತದೆ. ಜೊತೆಗೆ ಇದು ನಿಮ್ಮ ಗಂಟಲಿನಲ್ಲಿರುವ ಕಫವು ಸಹ ನಿವಾರಣೆಯಾಗುವಂತೆ ಮಾಡುತ್ತದೆ ಮತ್ತು ಉರಿಬಾವು ನಿಮ್ಮನ್ನು ಕಾಡದಂತೆ ತಡೆಯು ತ್ತದೆ.
ಇಷ್ಟೆ ಅಲ್ಲದೆ ಇದು ನಿಮ್ಮ ಗಂಟಲ ನೋವಿಗೆ ತಕ್ಷಣದ ಪರಿಹಾರವನ್ನು ನೀಡುತ್ತದೆ. ಒಂದು ವೇಳೆ ನಿಮಗೆ ಉಪ್ಪು ಅಷ್ಟಾಗಿ ರುಚಿಸದಿದ್ದಲ್ಲಿ, ಈ ನೀರಿಗೆ ಸ್ವಲ್ಪ ಪ್ರಮಾಣದ ಜೇನು ತುಪ್ಪವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು ಮುಕ್ಕಳಿಸಿ, ಆದರೆ ನುಂಗಬೇಡಿ. ಮುಕ್ಕಳಿಸಿದ ನೀರನ್ನು ಹೊರಗೆ ಉಗಿಯಿರಿ. ದಿನಕ್ಕೆ ನಾಲ್ಕೈದು ಬಾರಿ ಇದನ್ನು ಮಾಡಿದರೆ ನಿಮ್ಮ ಗಂಟಲು ನೋವು ನಿವಾರಣೆಯಾಗುತ್ತದೆ.
ಬೆಳ್ಳುಳ್ಳಿಯು ಒಂದು ಆಂಟಿ ಬ್ಯಾಕ್ಟೀರಿಯಾ ಅಂಶಗಳು ಇರುವ ಪದಾರ್ಥವಾಗಿದೆ. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣ ಗಳು ಮತ್ತು ಔ?ಂಯ ಗುಣಗಳು ಗಂಟಲು ನೋವಿಗೆ ಒಳ್ಳೆಯ ಆರಾಮವನ್ನು ನೀಡುತ್ತವೆ. ಅಲ್ಲದೆ ಇದು ಈ ನೋವನ್ನು ಬೇಗ ನಿವಾರಿಸುವ ಮನೆ ಮದ್ದು ಸಹ ಆಗಿದೆ. ಕಚ್ಛಾ ಬೆಳ್ಳುಳ್ಳಿಯನ್ನು ಪ್ರತಿದಿನ ಸೇವಿಸುವುದರಿಂದ ಅಲ್ಲಿಸಿನ್ ಎಂಬ ರಾಸಾಯನಿಕವು ಬಿಡುಗಡೆಯಾಗುತ್ತದೆ. ಇದು ಗಂಟಲಿನಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ನಿವಾರಿಸಲು ಸಹಾಯ ಮಾಡಿ, ಗಂಟಲು ನೋವು ಬರದಂತೆ ತಡೆಯುತ್ತದೆ.
ಬದಲಿಯಾಗಿ, ನೀವು ಬೆಳ್ಳುಳ್ಳಿ ಎಣ್ಣೆಯನ್ನು ಸಹ ಬಳಸಬಹುದು. ಒಂದು ಲೋಟ ನೀರಿಗೆ ನಾಲ್ಕನೇ ಒಂದು ಭಾಗ ಬೆಳ್ಳುಳ್ಳಿ ರಸವನ್ನು ಬೆರೆಸಿಕೊಳ್ಳಿ. ಇದನ್ನು ದಿನಕ್ಕೊಮ್ಮೆ ಬಾಯಿ ಮುಕ್ಕಳಿಸಲು ಬಳಸಿ. ಅಲ್ಲದೆ ಇದರ ಜೊತೆಗೆ ಆಹಾರದಲ್ಲಿ ದೊರೆಯುವ ಬೆಳ್ಳುಳ್ಳಿಯನ್ನು ಸಹ ಸೇವಿಸಿ. ಒಂದು ವೇಳೆ ನಿಮಗೆ ಇದರ ರುಚಿ ಹಿಡಿಸಲಿಲ್ಲವಾದಲ್ಲಿ, ಬೆಳ್ಳುಳ್ಳಿಯ ಮಾತ್ರೆಗಳನ್ನು ಸೇವಿಸಿ.
ಚಕ್ಕೆಯನ್ನು ಸಹ ಗಂಟಲು ನೋವು ನಿವಾರಿಸಿಕೊಳ್ಳಲು ಬಳಸಬಹುದು. ಒಂದು ಟೀ ಸ್ಪೂನ್ ಚಕ್ಕೆಯ ಪುಡಿಗೆ, ಕರಿ ಮೆಣಸಿನ ಪುಡಿಯನ್ನು ಸೇರಿಸಿ, ಒಂದು ಲೋಟ ಬಿಸಿ ನೀರಿನಲ್ಲಿ ಬೆರೆಸಿಕೊಳ್ಳಿ. ಇದಕ್ಕೆ ನಿಮಗೆ ಅಗತ್ಯವಾದಲ್ಲಿ ಏಲಕ್ಕಿಯನ್ನು ಸಹ ಬೆರೆಸಿಕೊಳ್ಳಿ. ಈ ಎಲ್ಲಾ ಮಿಶ್ರಣವನ್ನು ಚೆನ್ನಾಗಿ ಬೆರೆಸಿ, ನಂತರ ಶೋಧಿಸಿಕೊಳ್ಳಿ. ಈ ಮಿಶ್ರಣವನ್ನು ದಿನಕ್ಕೆ ಎರಡು ಮೂರು ಬಾರಿ ಬಾಯಿ ಮುಕ್ಕಳಿಸಲು ಬಳಸಿ. ಮತ್ತೊಂದು ಆಯ್ಕೆ ಎಂದರೆ ಕೆಲವೊಂದು ಹನಿ ಚಕ್ಕೆ ಎಣ್ಣೆಯನ್ನು ಮತ್ತು ಒಂದು ಟೀ ಸ್ಪೂನ್ ಜೇನುತುಪ್ಪವನ್ನು ಬೆರೆಸಿಕೊಳ್ಳಿ ಇದನ್ನು ದಿನಕ್ಕೆ ಎರಡು ಬಾರಿ ಸೇವಿಸಿ, ಗಂಟಲು ನೋವು ಮತ್ತು ಉರಿಬಾವುನಿಂದ ವಿಮುಕ್ತಿಯನ್ನು ಪಡೆಯಿರಿ.
ಗಂಟಲು ನೋವಿನಿಂದ ಗುಣಮುಖರಾಗಲು ಲಿಂಬೆ ಹಣ್ಣನ್ನು ಬಳಸಬಹುದು. ಇದು ನಿಮ್ಮ ಗಂಟಲಿನಲ್ಲಿರುವ ಸಿಂಬಳವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲಿಂಬೆರಸ ವನ್ನು ಬಿಸಿ ನೀರಿಗೆ ಬೆರೆಸಿ, ಅದಕ್ಕೆ ಸ್ವಲ್ಪ ಜೇನು ತುಪ್ಪವನ್ನು ಸೇರಿಸಿ ಸೇವಿಸಿ. ಒಂದು ಕಪ್ ಬಿಸಿ ನೀರಿಗೆ ಒಂದು ಟೀ ಸ್ಪೂನ್ ಜೇನು ತುಪ್ಪ ಮತ್ತು ಅದಕ್ಕೆ ಅರ್ಧ ಹೋಳು ಲಿಂಬೆ ಹಣ್ಣಿನ ರಸದ ಅನುಪಾತದಲ್ಲಿ ಇದನ್ನು ತಯಾರಿಸಿಕೊಳ್ಳಿ.
ಚಳಿಗಾಲ ಹತ್ತಿರವಾಗುತ್ತಿದ್ದು, ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆ ಗಳಿಂದಾಗಿ ನಮ್ಮ ದೇಹದಲ್ಲಿ ಆರೋಗ್ಯವು ಸಹ ಬದಲಾಗು ತ್ತದೆ. ಅದರಲ್ಲಿ ಶೀತ, ಗಂಟಲು ನೋವು, ಕೆಮ್ಮು ಮತ್ತು ಒಮ್ಮೊಮ್ಮೆ ಜ್ವರವು ಸಹ ನಮ್ಮನ್ನು ಭಾದಿಸಬಹುದು ಎಚ್ಚರ ವಹಿಸಿ ಮನೆ ಮದ್ದು ತಯಾರಿಸಿ ತಡೆಗಟ್ಟಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….