News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಗಂಟಲು ನೋವಿಗೆ ಮನೆಯಲ್ಲೇ ಔಷಧಿ ಸುಲಭವಾಗಿ ತಯಾರಿಸ ಬಹುದು ಈ ಲೇಖನ ಓದಿ ತಿಳಿಯಿರಿ….

1251

ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ. ಆ ಮಟ್ಟಿಗೆ ನಮ್ಮ ಗಂಟಲು ತನ್ನ ಶಕ್ತಿ ಸಾಮರ್ಥ್ಯಗಳನ್ನು ಕಳೆದುಕೊಂಡು ಬಿಡುತ್ತದೆ. ಯೋಚನೆ ಮಾಡ ಬೇಡಿ ಮನೆಯಲ್ಲೆ ಸುಲಭ ರೀತಿಯಲ್ಲಿ ಸರಿಯಾದ  ಔಷಧ ತಯಾರಿಸ ಬಹುದು.

ಉಪ್ಪು ನೀರು :-

ಗಂಟಲು ನೋವಿಗೆ ರಾಮಬಾಣ ಎನಿಸಿಕೊಂಡಿರುವ ಪರಿಹಾರ ಉಪ್ಪು ನೀರು. ಹೌದು ನೀರಿಗೆ ಸ್ವಲ್ಪ ಉಪ್ಪನ್ನು ಬೆರೆಸಿಕೊಂಡು ಅದನ್ನು ಮುಕ್ಕಳಿಸುವ ಮೂಲಕ ನಿಮ್ಮ ಗಂಟಲ ನೋವನ್ನು ನಿವಾರಿಸಿಕೊಳ್ಳಬಹುದು. ಹೇಳಿ ಕೇಳಿ ಉಪ್ಪು ಆಂಟಿಸೆಪ್ಟಿಕ್ ಗುಣಗಳನ್ನು ಹೊಂದಿರುವ ಉತ್ಪನ್ನವಾಗಿದ್ದು, ಅದು ನಿಮ್ಮ ಗಂಟಲಿನಲ್ಲಿರುವ ಸಿಂಬಳದ ಪೊರೆಯು ನಿವಾರಣೆಯಾಗಲು ಸಹಾಯ ಮಾಡುತ್ತದೆ. ಜೊತೆಗೆ ಇದು ನಿಮ್ಮ ಗಂಟಲಿನಲ್ಲಿರುವ ಕಫವು ಸಹ ನಿವಾರಣೆಯಾಗುವಂತೆ ಮಾಡುತ್ತದೆ ಮತ್ತು ಉರಿಬಾವು ನಿಮ್ಮನ್ನು ಕಾಡದಂತೆ ತಡೆಯು ತ್ತದೆ.

ಇಷ್ಟೆ ಅಲ್ಲದೆ ಇದು ನಿಮ್ಮ ಗಂಟಲ ನೋವಿಗೆ ತಕ್ಷಣದ ಪರಿಹಾರವನ್ನು ನೀಡುತ್ತದೆ. ಒಂದು ವೇಳೆ ನಿಮಗೆ ಉಪ್ಪು ಅಷ್ಟಾಗಿ ರುಚಿಸದಿದ್ದಲ್ಲಿ, ಈ ನೀರಿಗೆ ಸ್ವಲ್ಪ ಪ್ರಮಾಣದ ಜೇನು ತುಪ್ಪವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು ಮುಕ್ಕಳಿಸಿ, ಆದರೆ ನುಂಗಬೇಡಿ. ಮುಕ್ಕಳಿಸಿದ ನೀರನ್ನು ಹೊರಗೆ ಉಗಿಯಿರಿ. ದಿನಕ್ಕೆ ನಾಲ್ಕೈದು ಬಾರಿ ಇದನ್ನು ಮಾಡಿದರೆ ನಿಮ್ಮ ಗಂಟಲು ನೋವು ನಿವಾರಣೆಯಾಗುತ್ತದೆ.

ಬೆಳ್ಳುಳ್ಳಿ ರಸ:-

ಬೆಳ್ಳುಳ್ಳಿಯು ಒಂದು ಆಂಟಿ ಬ್ಯಾಕ್ಟೀರಿಯಾ ಅಂಶಗಳು ಇರುವ ಪದಾರ್ಥವಾಗಿದೆ. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣ ಗಳು ಮತ್ತು ಔ?ಂಯ ಗುಣಗಳು ಗಂಟಲು ನೋವಿಗೆ ಒಳ್ಳೆಯ ಆರಾಮವನ್ನು ನೀಡುತ್ತವೆ. ಅಲ್ಲದೆ ಇದು ಈ ನೋವನ್ನು ಬೇಗ ನಿವಾರಿಸುವ ಮನೆ ಮದ್ದು ಸಹ ಆಗಿದೆ. ಕಚ್ಛಾ ಬೆಳ್ಳುಳ್ಳಿಯನ್ನು ಪ್ರತಿದಿನ ಸೇವಿಸುವುದರಿಂದ ಅಲ್ಲಿಸಿನ್ ಎಂಬ ರಾಸಾಯನಿಕವು ಬಿಡುಗಡೆಯಾಗುತ್ತದೆ. ಇದು ಗಂಟಲಿನಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ನಿವಾರಿಸಲು ಸಹಾಯ ಮಾಡಿ, ಗಂಟಲು ನೋವು ಬರದಂತೆ ತಡೆಯುತ್ತದೆ.

ಬದಲಿಯಾಗಿ, ನೀವು ಬೆಳ್ಳುಳ್ಳಿ ಎಣ್ಣೆಯನ್ನು ಸಹ ಬಳಸಬಹುದು. ಒಂದು ಲೋಟ ನೀರಿಗೆ ನಾಲ್ಕನೇ ಒಂದು ಭಾಗ ಬೆಳ್ಳುಳ್ಳಿ ರಸವನ್ನು ಬೆರೆಸಿಕೊಳ್ಳಿ. ಇದನ್ನು ದಿನಕ್ಕೊಮ್ಮೆ ಬಾಯಿ ಮುಕ್ಕಳಿಸಲು ಬಳಸಿ. ಅಲ್ಲದೆ ಇದರ ಜೊತೆಗೆ ಆಹಾರದಲ್ಲಿ ದೊರೆಯುವ ಬೆಳ್ಳುಳ್ಳಿಯನ್ನು ಸಹ ಸೇವಿಸಿ. ಒಂದು ವೇಳೆ ನಿಮಗೆ ಇದರ ರುಚಿ ಹಿಡಿಸಲಿಲ್ಲವಾದಲ್ಲಿ, ಬೆಳ್ಳುಳ್ಳಿಯ ಮಾತ್ರೆಗಳನ್ನು ಸೇವಿಸಿ.

ಚಕ್ಕೆ :-

ಚಕ್ಕೆಯನ್ನು ಸಹ ಗಂಟಲು ನೋವು ನಿವಾರಿಸಿಕೊಳ್ಳಲು ಬಳಸಬಹುದು. ಒಂದು ಟೀ ಸ್ಪೂನ್ ಚಕ್ಕೆಯ ಪುಡಿಗೆ, ಕರಿ ಮೆಣಸಿನ ಪುಡಿಯನ್ನು ಸೇರಿಸಿ, ಒಂದು ಲೋಟ ಬಿಸಿ ನೀರಿನಲ್ಲಿ ಬೆರೆಸಿಕೊಳ್ಳಿ. ಇದಕ್ಕೆ ನಿಮಗೆ ಅಗತ್ಯವಾದಲ್ಲಿ ಏಲಕ್ಕಿಯನ್ನು ಸಹ ಬೆರೆಸಿಕೊಳ್ಳಿ. ಈ ಎಲ್ಲಾ ಮಿಶ್ರಣವನ್ನು ಚೆನ್ನಾಗಿ ಬೆರೆಸಿ, ನಂತರ ಶೋಧಿಸಿಕೊಳ್ಳಿ. ಈ ಮಿಶ್ರಣವನ್ನು ದಿನಕ್ಕೆ ಎರಡು ಮೂರು ಬಾರಿ ಬಾಯಿ ಮುಕ್ಕಳಿಸಲು ಬಳಸಿ. ಮತ್ತೊಂದು ಆಯ್ಕೆ ಎಂದರೆ ಕೆಲವೊಂದು ಹನಿ ಚಕ್ಕೆ ಎಣ್ಣೆಯನ್ನು ಮತ್ತು ಒಂದು ಟೀ ಸ್ಪೂನ್ ಜೇನುತುಪ್ಪವನ್ನು ಬೆರೆಸಿಕೊಳ್ಳಿ ಇದನ್ನು ದಿನಕ್ಕೆ ಎರಡು ಬಾರಿ ಸೇವಿಸಿ, ಗಂಟಲು ನೋವು ಮತ್ತು ಉರಿಬಾವುನಿಂದ ವಿಮುಕ್ತಿಯನ್ನು ಪಡೆಯಿರಿ.

ಲಿಂಬೆ ಹಣ್ಣು :-

ಗಂಟಲು ನೋವಿನಿಂದ ಗುಣಮುಖರಾಗಲು ಲಿಂಬೆ ಹಣ್ಣನ್ನು ಬಳಸಬಹುದು. ಇದು ನಿಮ್ಮ ಗಂಟಲಿನಲ್ಲಿರುವ ಸಿಂಬಳವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲಿಂಬೆರಸ ವನ್ನು ಬಿಸಿ ನೀರಿಗೆ ಬೆರೆಸಿ, ಅದಕ್ಕೆ ಸ್ವಲ್ಪ ಜೇನು ತುಪ್ಪವನ್ನು ಸೇರಿಸಿ ಸೇವಿಸಿ. ಒಂದು ಕಪ್ ಬಿಸಿ ನೀರಿಗೆ ಒಂದು ಟೀ ಸ್ಪೂನ್ ಜೇನು ತುಪ್ಪ ಮತ್ತು ಅದಕ್ಕೆ ಅರ್ಧ ಹೋಳು ಲಿಂಬೆ ಹಣ್ಣಿನ ರಸದ ಅನುಪಾತದಲ್ಲಿ ಇದನ್ನು ತಯಾರಿಸಿಕೊಳ್ಳಿ.

ಚಳಿಗಾಲ ಹತ್ತಿರವಾಗುತ್ತಿದ್ದು, ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆ ಗಳಿಂದಾಗಿ ನಮ್ಮ ದೇಹದಲ್ಲಿ ಆರೋಗ್ಯವು ಸಹ ಬದಲಾಗು ತ್ತದೆ. ಅದರಲ್ಲಿ ಶೀತ, ಗಂಟಲು ನೋವು, ಕೆಮ್ಮು ಮತ್ತು ಒಮ್ಮೊಮ್ಮೆ ಜ್ವರವು ಸಹ ನಮ್ಮನ್ನು ಭಾದಿಸಬಹುದು ಎಚ್ಚರ ವಹಿಸಿ ಮನೆ ಮದ್ದು ತಯಾರಿಸಿ ತಡೆಗಟ್ಟಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿದರೆ ಏನು ಪ್ರಯೋಜನಗಳು ಗೊತ್ತಾ…?

    ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…

  • ದೇಶ-ವಿದೇಶ

    ಅಮೇರಿಕಾವನ್ನು ಧ್ವಂಸ ಮಾಡುವುದಾಗಿ, ಬಹಿರಂಗವಾಗಿ ಸವಾಲು ಹಾಕಿದ ಈ ಸರ್ವಾಧಿಕಾರಿ!

    ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.

  • ಸುದ್ದಿ

    ಅಂತರ್ಜಾತಿ ಮದುವೆ ಆದ್ರೆ ಸಿಗುತ್ತೆ ಲಕ್ಷ ಲಕ್ಷ ಹಣ…ಹೆಚ್ಚಿನ ಮಾಹಿತಿಗೆ ಈ ಸುದ್ದಿ ನೋಡಿ

    ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಸುದ್ದಿ

    ಸದ್ಯದಲ್ಲೇ ಪೂರ್ತಿಗೊಲ್ಲಲಿದೆ ಜಗತ್ತಿನ ಅತ್ಯಂತ ಎತ್ತರದ ಶಿವನ ಪ್ರತಿಮೆ…!

    ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…