News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಗಂಟಲು ನೋವಿಗೆ ಮನೆಯಲ್ಲೇ ಔಷಧಿ ಸುಲಭವಾಗಿ ತಯಾರಿಸ ಬಹುದು ಈ ಲೇಖನ ಓದಿ ತಿಳಿಯಿರಿ….

1249

ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ. ಆ ಮಟ್ಟಿಗೆ ನಮ್ಮ ಗಂಟಲು ತನ್ನ ಶಕ್ತಿ ಸಾಮರ್ಥ್ಯಗಳನ್ನು ಕಳೆದುಕೊಂಡು ಬಿಡುತ್ತದೆ. ಯೋಚನೆ ಮಾಡ ಬೇಡಿ ಮನೆಯಲ್ಲೆ ಸುಲಭ ರೀತಿಯಲ್ಲಿ ಸರಿಯಾದ  ಔಷಧ ತಯಾರಿಸ ಬಹುದು.

ಉಪ್ಪು ನೀರು :-

ಗಂಟಲು ನೋವಿಗೆ ರಾಮಬಾಣ ಎನಿಸಿಕೊಂಡಿರುವ ಪರಿಹಾರ ಉಪ್ಪು ನೀರು. ಹೌದು ನೀರಿಗೆ ಸ್ವಲ್ಪ ಉಪ್ಪನ್ನು ಬೆರೆಸಿಕೊಂಡು ಅದನ್ನು ಮುಕ್ಕಳಿಸುವ ಮೂಲಕ ನಿಮ್ಮ ಗಂಟಲ ನೋವನ್ನು ನಿವಾರಿಸಿಕೊಳ್ಳಬಹುದು. ಹೇಳಿ ಕೇಳಿ ಉಪ್ಪು ಆಂಟಿಸೆಪ್ಟಿಕ್ ಗುಣಗಳನ್ನು ಹೊಂದಿರುವ ಉತ್ಪನ್ನವಾಗಿದ್ದು, ಅದು ನಿಮ್ಮ ಗಂಟಲಿನಲ್ಲಿರುವ ಸಿಂಬಳದ ಪೊರೆಯು ನಿವಾರಣೆಯಾಗಲು ಸಹಾಯ ಮಾಡುತ್ತದೆ. ಜೊತೆಗೆ ಇದು ನಿಮ್ಮ ಗಂಟಲಿನಲ್ಲಿರುವ ಕಫವು ಸಹ ನಿವಾರಣೆಯಾಗುವಂತೆ ಮಾಡುತ್ತದೆ ಮತ್ತು ಉರಿಬಾವು ನಿಮ್ಮನ್ನು ಕಾಡದಂತೆ ತಡೆಯು ತ್ತದೆ.

ಇಷ್ಟೆ ಅಲ್ಲದೆ ಇದು ನಿಮ್ಮ ಗಂಟಲ ನೋವಿಗೆ ತಕ್ಷಣದ ಪರಿಹಾರವನ್ನು ನೀಡುತ್ತದೆ. ಒಂದು ವೇಳೆ ನಿಮಗೆ ಉಪ್ಪು ಅಷ್ಟಾಗಿ ರುಚಿಸದಿದ್ದಲ್ಲಿ, ಈ ನೀರಿಗೆ ಸ್ವಲ್ಪ ಪ್ರಮಾಣದ ಜೇನು ತುಪ್ಪವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು ಮುಕ್ಕಳಿಸಿ, ಆದರೆ ನುಂಗಬೇಡಿ. ಮುಕ್ಕಳಿಸಿದ ನೀರನ್ನು ಹೊರಗೆ ಉಗಿಯಿರಿ. ದಿನಕ್ಕೆ ನಾಲ್ಕೈದು ಬಾರಿ ಇದನ್ನು ಮಾಡಿದರೆ ನಿಮ್ಮ ಗಂಟಲು ನೋವು ನಿವಾರಣೆಯಾಗುತ್ತದೆ.

ಬೆಳ್ಳುಳ್ಳಿ ರಸ:-

ಬೆಳ್ಳುಳ್ಳಿಯು ಒಂದು ಆಂಟಿ ಬ್ಯಾಕ್ಟೀರಿಯಾ ಅಂಶಗಳು ಇರುವ ಪದಾರ್ಥವಾಗಿದೆ. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣ ಗಳು ಮತ್ತು ಔ?ಂಯ ಗುಣಗಳು ಗಂಟಲು ನೋವಿಗೆ ಒಳ್ಳೆಯ ಆರಾಮವನ್ನು ನೀಡುತ್ತವೆ. ಅಲ್ಲದೆ ಇದು ಈ ನೋವನ್ನು ಬೇಗ ನಿವಾರಿಸುವ ಮನೆ ಮದ್ದು ಸಹ ಆಗಿದೆ. ಕಚ್ಛಾ ಬೆಳ್ಳುಳ್ಳಿಯನ್ನು ಪ್ರತಿದಿನ ಸೇವಿಸುವುದರಿಂದ ಅಲ್ಲಿಸಿನ್ ಎಂಬ ರಾಸಾಯನಿಕವು ಬಿಡುಗಡೆಯಾಗುತ್ತದೆ. ಇದು ಗಂಟಲಿನಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ನಿವಾರಿಸಲು ಸಹಾಯ ಮಾಡಿ, ಗಂಟಲು ನೋವು ಬರದಂತೆ ತಡೆಯುತ್ತದೆ.

ಬದಲಿಯಾಗಿ, ನೀವು ಬೆಳ್ಳುಳ್ಳಿ ಎಣ್ಣೆಯನ್ನು ಸಹ ಬಳಸಬಹುದು. ಒಂದು ಲೋಟ ನೀರಿಗೆ ನಾಲ್ಕನೇ ಒಂದು ಭಾಗ ಬೆಳ್ಳುಳ್ಳಿ ರಸವನ್ನು ಬೆರೆಸಿಕೊಳ್ಳಿ. ಇದನ್ನು ದಿನಕ್ಕೊಮ್ಮೆ ಬಾಯಿ ಮುಕ್ಕಳಿಸಲು ಬಳಸಿ. ಅಲ್ಲದೆ ಇದರ ಜೊತೆಗೆ ಆಹಾರದಲ್ಲಿ ದೊರೆಯುವ ಬೆಳ್ಳುಳ್ಳಿಯನ್ನು ಸಹ ಸೇವಿಸಿ. ಒಂದು ವೇಳೆ ನಿಮಗೆ ಇದರ ರುಚಿ ಹಿಡಿಸಲಿಲ್ಲವಾದಲ್ಲಿ, ಬೆಳ್ಳುಳ್ಳಿಯ ಮಾತ್ರೆಗಳನ್ನು ಸೇವಿಸಿ.

ಚಕ್ಕೆ :-

ಚಕ್ಕೆಯನ್ನು ಸಹ ಗಂಟಲು ನೋವು ನಿವಾರಿಸಿಕೊಳ್ಳಲು ಬಳಸಬಹುದು. ಒಂದು ಟೀ ಸ್ಪೂನ್ ಚಕ್ಕೆಯ ಪುಡಿಗೆ, ಕರಿ ಮೆಣಸಿನ ಪುಡಿಯನ್ನು ಸೇರಿಸಿ, ಒಂದು ಲೋಟ ಬಿಸಿ ನೀರಿನಲ್ಲಿ ಬೆರೆಸಿಕೊಳ್ಳಿ. ಇದಕ್ಕೆ ನಿಮಗೆ ಅಗತ್ಯವಾದಲ್ಲಿ ಏಲಕ್ಕಿಯನ್ನು ಸಹ ಬೆರೆಸಿಕೊಳ್ಳಿ. ಈ ಎಲ್ಲಾ ಮಿಶ್ರಣವನ್ನು ಚೆನ್ನಾಗಿ ಬೆರೆಸಿ, ನಂತರ ಶೋಧಿಸಿಕೊಳ್ಳಿ. ಈ ಮಿಶ್ರಣವನ್ನು ದಿನಕ್ಕೆ ಎರಡು ಮೂರು ಬಾರಿ ಬಾಯಿ ಮುಕ್ಕಳಿಸಲು ಬಳಸಿ. ಮತ್ತೊಂದು ಆಯ್ಕೆ ಎಂದರೆ ಕೆಲವೊಂದು ಹನಿ ಚಕ್ಕೆ ಎಣ್ಣೆಯನ್ನು ಮತ್ತು ಒಂದು ಟೀ ಸ್ಪೂನ್ ಜೇನುತುಪ್ಪವನ್ನು ಬೆರೆಸಿಕೊಳ್ಳಿ ಇದನ್ನು ದಿನಕ್ಕೆ ಎರಡು ಬಾರಿ ಸೇವಿಸಿ, ಗಂಟಲು ನೋವು ಮತ್ತು ಉರಿಬಾವುನಿಂದ ವಿಮುಕ್ತಿಯನ್ನು ಪಡೆಯಿರಿ.

ಲಿಂಬೆ ಹಣ್ಣು :-

ಗಂಟಲು ನೋವಿನಿಂದ ಗುಣಮುಖರಾಗಲು ಲಿಂಬೆ ಹಣ್ಣನ್ನು ಬಳಸಬಹುದು. ಇದು ನಿಮ್ಮ ಗಂಟಲಿನಲ್ಲಿರುವ ಸಿಂಬಳವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲಿಂಬೆರಸ ವನ್ನು ಬಿಸಿ ನೀರಿಗೆ ಬೆರೆಸಿ, ಅದಕ್ಕೆ ಸ್ವಲ್ಪ ಜೇನು ತುಪ್ಪವನ್ನು ಸೇರಿಸಿ ಸೇವಿಸಿ. ಒಂದು ಕಪ್ ಬಿಸಿ ನೀರಿಗೆ ಒಂದು ಟೀ ಸ್ಪೂನ್ ಜೇನು ತುಪ್ಪ ಮತ್ತು ಅದಕ್ಕೆ ಅರ್ಧ ಹೋಳು ಲಿಂಬೆ ಹಣ್ಣಿನ ರಸದ ಅನುಪಾತದಲ್ಲಿ ಇದನ್ನು ತಯಾರಿಸಿಕೊಳ್ಳಿ.

ಚಳಿಗಾಲ ಹತ್ತಿರವಾಗುತ್ತಿದ್ದು, ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆ ಗಳಿಂದಾಗಿ ನಮ್ಮ ದೇಹದಲ್ಲಿ ಆರೋಗ್ಯವು ಸಹ ಬದಲಾಗು ತ್ತದೆ. ಅದರಲ್ಲಿ ಶೀತ, ಗಂಟಲು ನೋವು, ಕೆಮ್ಮು ಮತ್ತು ಒಮ್ಮೊಮ್ಮೆ ಜ್ವರವು ಸಹ ನಮ್ಮನ್ನು ಭಾದಿಸಬಹುದು ಎಚ್ಚರ ವಹಿಸಿ ಮನೆ ಮದ್ದು ತಯಾರಿಸಿ ತಡೆಗಟ್ಟಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಒಂದು ಕಾಲದಲ್ಲಿ ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ಒಡೆಯನಾಗಿದ್ದು ಹೇಗೆ ಗೋತ್ತಾ?ತಿಳಿಯಲು ಈ ಲೇಖನ ಓದಿ..

    ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
    ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.

  • ರಾಜಕೀಯ

    ಅಬ್ಬಾ! ಬೃಹತ್ ಸೇಬಿನ ಹಾರ ಹಾಕಿ ಹೆಚ್.ಡಿ.ಕೆ ಅವರಿಗೆ ಸ್ವಾಗತ…ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ…ನೀವೂ ನೋಡಿ…

    ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು  ಅದ್ಧೂರಿ ಬೈಕ್ ರ‍್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…

  • ಸುದ್ದಿ

    ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

    ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ…

  • inspirational

    ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಬದಲಿಗೆ ಕೋಕಾಕೋಲಾ ತುಂಬಿಸಿದ ಭೂಪ- ಮುಂದೇನಾಯ್ತು?

    ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್‌ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.