ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ. ಆ ಮಟ್ಟಿಗೆ ನಮ್ಮ ಗಂಟಲು ತನ್ನ ಶಕ್ತಿ ಸಾಮರ್ಥ್ಯಗಳನ್ನು ಕಳೆದುಕೊಂಡು ಬಿಡುತ್ತದೆ. ಯೋಚನೆ ಮಾಡ ಬೇಡಿ ಮನೆಯಲ್ಲೆ ಸುಲಭ ರೀತಿಯಲ್ಲಿ ಸರಿಯಾದ ಔಷಧ ತಯಾರಿಸ ಬಹುದು.

ಗಂಟಲು ನೋವಿಗೆ ರಾಮಬಾಣ ಎನಿಸಿಕೊಂಡಿರುವ ಪರಿಹಾರ ಉಪ್ಪು ನೀರು. ಹೌದು ನೀರಿಗೆ ಸ್ವಲ್ಪ ಉಪ್ಪನ್ನು ಬೆರೆಸಿಕೊಂಡು ಅದನ್ನು ಮುಕ್ಕಳಿಸುವ ಮೂಲಕ ನಿಮ್ಮ ಗಂಟಲ ನೋವನ್ನು ನಿವಾರಿಸಿಕೊಳ್ಳಬಹುದು. ಹೇಳಿ ಕೇಳಿ ಉಪ್ಪು ಆಂಟಿಸೆಪ್ಟಿಕ್ ಗುಣಗಳನ್ನು ಹೊಂದಿರುವ ಉತ್ಪನ್ನವಾಗಿದ್ದು, ಅದು ನಿಮ್ಮ ಗಂಟಲಿನಲ್ಲಿರುವ ಸಿಂಬಳದ ಪೊರೆಯು ನಿವಾರಣೆಯಾಗಲು ಸಹಾಯ ಮಾಡುತ್ತದೆ. ಜೊತೆಗೆ ಇದು ನಿಮ್ಮ ಗಂಟಲಿನಲ್ಲಿರುವ ಕಫವು ಸಹ ನಿವಾರಣೆಯಾಗುವಂತೆ ಮಾಡುತ್ತದೆ ಮತ್ತು ಉರಿಬಾವು ನಿಮ್ಮನ್ನು ಕಾಡದಂತೆ ತಡೆಯು ತ್ತದೆ.
ಇಷ್ಟೆ ಅಲ್ಲದೆ ಇದು ನಿಮ್ಮ ಗಂಟಲ ನೋವಿಗೆ ತಕ್ಷಣದ ಪರಿಹಾರವನ್ನು ನೀಡುತ್ತದೆ. ಒಂದು ವೇಳೆ ನಿಮಗೆ ಉಪ್ಪು ಅಷ್ಟಾಗಿ ರುಚಿಸದಿದ್ದಲ್ಲಿ, ಈ ನೀರಿಗೆ ಸ್ವಲ್ಪ ಪ್ರಮಾಣದ ಜೇನು ತುಪ್ಪವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು ಮುಕ್ಕಳಿಸಿ, ಆದರೆ ನುಂಗಬೇಡಿ. ಮುಕ್ಕಳಿಸಿದ ನೀರನ್ನು ಹೊರಗೆ ಉಗಿಯಿರಿ. ದಿನಕ್ಕೆ ನಾಲ್ಕೈದು ಬಾರಿ ಇದನ್ನು ಮಾಡಿದರೆ ನಿಮ್ಮ ಗಂಟಲು ನೋವು ನಿವಾರಣೆಯಾಗುತ್ತದೆ.

ಬೆಳ್ಳುಳ್ಳಿಯು ಒಂದು ಆಂಟಿ ಬ್ಯಾಕ್ಟೀರಿಯಾ ಅಂಶಗಳು ಇರುವ ಪದಾರ್ಥವಾಗಿದೆ. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣ ಗಳು ಮತ್ತು ಔ?ಂಯ ಗುಣಗಳು ಗಂಟಲು ನೋವಿಗೆ ಒಳ್ಳೆಯ ಆರಾಮವನ್ನು ನೀಡುತ್ತವೆ. ಅಲ್ಲದೆ ಇದು ಈ ನೋವನ್ನು ಬೇಗ ನಿವಾರಿಸುವ ಮನೆ ಮದ್ದು ಸಹ ಆಗಿದೆ. ಕಚ್ಛಾ ಬೆಳ್ಳುಳ್ಳಿಯನ್ನು ಪ್ರತಿದಿನ ಸೇವಿಸುವುದರಿಂದ ಅಲ್ಲಿಸಿನ್ ಎಂಬ ರಾಸಾಯನಿಕವು ಬಿಡುಗಡೆಯಾಗುತ್ತದೆ. ಇದು ಗಂಟಲಿನಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ನಿವಾರಿಸಲು ಸಹಾಯ ಮಾಡಿ, ಗಂಟಲು ನೋವು ಬರದಂತೆ ತಡೆಯುತ್ತದೆ.
ಬದಲಿಯಾಗಿ, ನೀವು ಬೆಳ್ಳುಳ್ಳಿ ಎಣ್ಣೆಯನ್ನು ಸಹ ಬಳಸಬಹುದು. ಒಂದು ಲೋಟ ನೀರಿಗೆ ನಾಲ್ಕನೇ ಒಂದು ಭಾಗ ಬೆಳ್ಳುಳ್ಳಿ ರಸವನ್ನು ಬೆರೆಸಿಕೊಳ್ಳಿ. ಇದನ್ನು ದಿನಕ್ಕೊಮ್ಮೆ ಬಾಯಿ ಮುಕ್ಕಳಿಸಲು ಬಳಸಿ. ಅಲ್ಲದೆ ಇದರ ಜೊತೆಗೆ ಆಹಾರದಲ್ಲಿ ದೊರೆಯುವ ಬೆಳ್ಳುಳ್ಳಿಯನ್ನು ಸಹ ಸೇವಿಸಿ. ಒಂದು ವೇಳೆ ನಿಮಗೆ ಇದರ ರುಚಿ ಹಿಡಿಸಲಿಲ್ಲವಾದಲ್ಲಿ, ಬೆಳ್ಳುಳ್ಳಿಯ ಮಾತ್ರೆಗಳನ್ನು ಸೇವಿಸಿ.

ಚಕ್ಕೆಯನ್ನು ಸಹ ಗಂಟಲು ನೋವು ನಿವಾರಿಸಿಕೊಳ್ಳಲು ಬಳಸಬಹುದು. ಒಂದು ಟೀ ಸ್ಪೂನ್ ಚಕ್ಕೆಯ ಪುಡಿಗೆ, ಕರಿ ಮೆಣಸಿನ ಪುಡಿಯನ್ನು ಸೇರಿಸಿ, ಒಂದು ಲೋಟ ಬಿಸಿ ನೀರಿನಲ್ಲಿ ಬೆರೆಸಿಕೊಳ್ಳಿ. ಇದಕ್ಕೆ ನಿಮಗೆ ಅಗತ್ಯವಾದಲ್ಲಿ ಏಲಕ್ಕಿಯನ್ನು ಸಹ ಬೆರೆಸಿಕೊಳ್ಳಿ. ಈ ಎಲ್ಲಾ ಮಿಶ್ರಣವನ್ನು ಚೆನ್ನಾಗಿ ಬೆರೆಸಿ, ನಂತರ ಶೋಧಿಸಿಕೊಳ್ಳಿ. ಈ ಮಿಶ್ರಣವನ್ನು ದಿನಕ್ಕೆ ಎರಡು ಮೂರು ಬಾರಿ ಬಾಯಿ ಮುಕ್ಕಳಿಸಲು ಬಳಸಿ. ಮತ್ತೊಂದು ಆಯ್ಕೆ ಎಂದರೆ ಕೆಲವೊಂದು ಹನಿ ಚಕ್ಕೆ ಎಣ್ಣೆಯನ್ನು ಮತ್ತು ಒಂದು ಟೀ ಸ್ಪೂನ್ ಜೇನುತುಪ್ಪವನ್ನು ಬೆರೆಸಿಕೊಳ್ಳಿ ಇದನ್ನು ದಿನಕ್ಕೆ ಎರಡು ಬಾರಿ ಸೇವಿಸಿ, ಗಂಟಲು ನೋವು ಮತ್ತು ಉರಿಬಾವುನಿಂದ ವಿಮುಕ್ತಿಯನ್ನು ಪಡೆಯಿರಿ.

ಗಂಟಲು ನೋವಿನಿಂದ ಗುಣಮುಖರಾಗಲು ಲಿಂಬೆ ಹಣ್ಣನ್ನು ಬಳಸಬಹುದು. ಇದು ನಿಮ್ಮ ಗಂಟಲಿನಲ್ಲಿರುವ ಸಿಂಬಳವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲಿಂಬೆರಸ ವನ್ನು ಬಿಸಿ ನೀರಿಗೆ ಬೆರೆಸಿ, ಅದಕ್ಕೆ ಸ್ವಲ್ಪ ಜೇನು ತುಪ್ಪವನ್ನು ಸೇರಿಸಿ ಸೇವಿಸಿ. ಒಂದು ಕಪ್ ಬಿಸಿ ನೀರಿಗೆ ಒಂದು ಟೀ ಸ್ಪೂನ್ ಜೇನು ತುಪ್ಪ ಮತ್ತು ಅದಕ್ಕೆ ಅರ್ಧ ಹೋಳು ಲಿಂಬೆ ಹಣ್ಣಿನ ರಸದ ಅನುಪಾತದಲ್ಲಿ ಇದನ್ನು ತಯಾರಿಸಿಕೊಳ್ಳಿ.

ಚಳಿಗಾಲ ಹತ್ತಿರವಾಗುತ್ತಿದ್ದು, ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆ ಗಳಿಂದಾಗಿ ನಮ್ಮ ದೇಹದಲ್ಲಿ ಆರೋಗ್ಯವು ಸಹ ಬದಲಾಗು ತ್ತದೆ. ಅದರಲ್ಲಿ ಶೀತ, ಗಂಟಲು ನೋವು, ಕೆಮ್ಮು ಮತ್ತು ಒಮ್ಮೊಮ್ಮೆ ಜ್ವರವು ಸಹ ನಮ್ಮನ್ನು ಭಾದಿಸಬಹುದು ಎಚ್ಚರ ವಹಿಸಿ ಮನೆ ಮದ್ದು ತಯಾರಿಸಿ ತಡೆಗಟ್ಟಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…
ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….