ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ. ಆ ಮಟ್ಟಿಗೆ ನಮ್ಮ ಗಂಟಲು ತನ್ನ ಶಕ್ತಿ ಸಾಮರ್ಥ್ಯಗಳನ್ನು ಕಳೆದುಕೊಂಡು ಬಿಡುತ್ತದೆ. ಯೋಚನೆ ಮಾಡ ಬೇಡಿ ಮನೆಯಲ್ಲೆ ಸುಲಭ ರೀತಿಯಲ್ಲಿ ಸರಿಯಾದ ಔಷಧ ತಯಾರಿಸ ಬಹುದು.

ಗಂಟಲು ನೋವಿಗೆ ರಾಮಬಾಣ ಎನಿಸಿಕೊಂಡಿರುವ ಪರಿಹಾರ ಉಪ್ಪು ನೀರು. ಹೌದು ನೀರಿಗೆ ಸ್ವಲ್ಪ ಉಪ್ಪನ್ನು ಬೆರೆಸಿಕೊಂಡು ಅದನ್ನು ಮುಕ್ಕಳಿಸುವ ಮೂಲಕ ನಿಮ್ಮ ಗಂಟಲ ನೋವನ್ನು ನಿವಾರಿಸಿಕೊಳ್ಳಬಹುದು. ಹೇಳಿ ಕೇಳಿ ಉಪ್ಪು ಆಂಟಿಸೆಪ್ಟಿಕ್ ಗುಣಗಳನ್ನು ಹೊಂದಿರುವ ಉತ್ಪನ್ನವಾಗಿದ್ದು, ಅದು ನಿಮ್ಮ ಗಂಟಲಿನಲ್ಲಿರುವ ಸಿಂಬಳದ ಪೊರೆಯು ನಿವಾರಣೆಯಾಗಲು ಸಹಾಯ ಮಾಡುತ್ತದೆ. ಜೊತೆಗೆ ಇದು ನಿಮ್ಮ ಗಂಟಲಿನಲ್ಲಿರುವ ಕಫವು ಸಹ ನಿವಾರಣೆಯಾಗುವಂತೆ ಮಾಡುತ್ತದೆ ಮತ್ತು ಉರಿಬಾವು ನಿಮ್ಮನ್ನು ಕಾಡದಂತೆ ತಡೆಯು ತ್ತದೆ.
ಇಷ್ಟೆ ಅಲ್ಲದೆ ಇದು ನಿಮ್ಮ ಗಂಟಲ ನೋವಿಗೆ ತಕ್ಷಣದ ಪರಿಹಾರವನ್ನು ನೀಡುತ್ತದೆ. ಒಂದು ವೇಳೆ ನಿಮಗೆ ಉಪ್ಪು ಅಷ್ಟಾಗಿ ರುಚಿಸದಿದ್ದಲ್ಲಿ, ಈ ನೀರಿಗೆ ಸ್ವಲ್ಪ ಪ್ರಮಾಣದ ಜೇನು ತುಪ್ಪವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು ಮುಕ್ಕಳಿಸಿ, ಆದರೆ ನುಂಗಬೇಡಿ. ಮುಕ್ಕಳಿಸಿದ ನೀರನ್ನು ಹೊರಗೆ ಉಗಿಯಿರಿ. ದಿನಕ್ಕೆ ನಾಲ್ಕೈದು ಬಾರಿ ಇದನ್ನು ಮಾಡಿದರೆ ನಿಮ್ಮ ಗಂಟಲು ನೋವು ನಿವಾರಣೆಯಾಗುತ್ತದೆ.

ಬೆಳ್ಳುಳ್ಳಿಯು ಒಂದು ಆಂಟಿ ಬ್ಯಾಕ್ಟೀರಿಯಾ ಅಂಶಗಳು ಇರುವ ಪದಾರ್ಥವಾಗಿದೆ. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣ ಗಳು ಮತ್ತು ಔ?ಂಯ ಗುಣಗಳು ಗಂಟಲು ನೋವಿಗೆ ಒಳ್ಳೆಯ ಆರಾಮವನ್ನು ನೀಡುತ್ತವೆ. ಅಲ್ಲದೆ ಇದು ಈ ನೋವನ್ನು ಬೇಗ ನಿವಾರಿಸುವ ಮನೆ ಮದ್ದು ಸಹ ಆಗಿದೆ. ಕಚ್ಛಾ ಬೆಳ್ಳುಳ್ಳಿಯನ್ನು ಪ್ರತಿದಿನ ಸೇವಿಸುವುದರಿಂದ ಅಲ್ಲಿಸಿನ್ ಎಂಬ ರಾಸಾಯನಿಕವು ಬಿಡುಗಡೆಯಾಗುತ್ತದೆ. ಇದು ಗಂಟಲಿನಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ನಿವಾರಿಸಲು ಸಹಾಯ ಮಾಡಿ, ಗಂಟಲು ನೋವು ಬರದಂತೆ ತಡೆಯುತ್ತದೆ.
ಬದಲಿಯಾಗಿ, ನೀವು ಬೆಳ್ಳುಳ್ಳಿ ಎಣ್ಣೆಯನ್ನು ಸಹ ಬಳಸಬಹುದು. ಒಂದು ಲೋಟ ನೀರಿಗೆ ನಾಲ್ಕನೇ ಒಂದು ಭಾಗ ಬೆಳ್ಳುಳ್ಳಿ ರಸವನ್ನು ಬೆರೆಸಿಕೊಳ್ಳಿ. ಇದನ್ನು ದಿನಕ್ಕೊಮ್ಮೆ ಬಾಯಿ ಮುಕ್ಕಳಿಸಲು ಬಳಸಿ. ಅಲ್ಲದೆ ಇದರ ಜೊತೆಗೆ ಆಹಾರದಲ್ಲಿ ದೊರೆಯುವ ಬೆಳ್ಳುಳ್ಳಿಯನ್ನು ಸಹ ಸೇವಿಸಿ. ಒಂದು ವೇಳೆ ನಿಮಗೆ ಇದರ ರುಚಿ ಹಿಡಿಸಲಿಲ್ಲವಾದಲ್ಲಿ, ಬೆಳ್ಳುಳ್ಳಿಯ ಮಾತ್ರೆಗಳನ್ನು ಸೇವಿಸಿ.

ಚಕ್ಕೆಯನ್ನು ಸಹ ಗಂಟಲು ನೋವು ನಿವಾರಿಸಿಕೊಳ್ಳಲು ಬಳಸಬಹುದು. ಒಂದು ಟೀ ಸ್ಪೂನ್ ಚಕ್ಕೆಯ ಪುಡಿಗೆ, ಕರಿ ಮೆಣಸಿನ ಪುಡಿಯನ್ನು ಸೇರಿಸಿ, ಒಂದು ಲೋಟ ಬಿಸಿ ನೀರಿನಲ್ಲಿ ಬೆರೆಸಿಕೊಳ್ಳಿ. ಇದಕ್ಕೆ ನಿಮಗೆ ಅಗತ್ಯವಾದಲ್ಲಿ ಏಲಕ್ಕಿಯನ್ನು ಸಹ ಬೆರೆಸಿಕೊಳ್ಳಿ. ಈ ಎಲ್ಲಾ ಮಿಶ್ರಣವನ್ನು ಚೆನ್ನಾಗಿ ಬೆರೆಸಿ, ನಂತರ ಶೋಧಿಸಿಕೊಳ್ಳಿ. ಈ ಮಿಶ್ರಣವನ್ನು ದಿನಕ್ಕೆ ಎರಡು ಮೂರು ಬಾರಿ ಬಾಯಿ ಮುಕ್ಕಳಿಸಲು ಬಳಸಿ. ಮತ್ತೊಂದು ಆಯ್ಕೆ ಎಂದರೆ ಕೆಲವೊಂದು ಹನಿ ಚಕ್ಕೆ ಎಣ್ಣೆಯನ್ನು ಮತ್ತು ಒಂದು ಟೀ ಸ್ಪೂನ್ ಜೇನುತುಪ್ಪವನ್ನು ಬೆರೆಸಿಕೊಳ್ಳಿ ಇದನ್ನು ದಿನಕ್ಕೆ ಎರಡು ಬಾರಿ ಸೇವಿಸಿ, ಗಂಟಲು ನೋವು ಮತ್ತು ಉರಿಬಾವುನಿಂದ ವಿಮುಕ್ತಿಯನ್ನು ಪಡೆಯಿರಿ.

ಗಂಟಲು ನೋವಿನಿಂದ ಗುಣಮುಖರಾಗಲು ಲಿಂಬೆ ಹಣ್ಣನ್ನು ಬಳಸಬಹುದು. ಇದು ನಿಮ್ಮ ಗಂಟಲಿನಲ್ಲಿರುವ ಸಿಂಬಳವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲಿಂಬೆರಸ ವನ್ನು ಬಿಸಿ ನೀರಿಗೆ ಬೆರೆಸಿ, ಅದಕ್ಕೆ ಸ್ವಲ್ಪ ಜೇನು ತುಪ್ಪವನ್ನು ಸೇರಿಸಿ ಸೇವಿಸಿ. ಒಂದು ಕಪ್ ಬಿಸಿ ನೀರಿಗೆ ಒಂದು ಟೀ ಸ್ಪೂನ್ ಜೇನು ತುಪ್ಪ ಮತ್ತು ಅದಕ್ಕೆ ಅರ್ಧ ಹೋಳು ಲಿಂಬೆ ಹಣ್ಣಿನ ರಸದ ಅನುಪಾತದಲ್ಲಿ ಇದನ್ನು ತಯಾರಿಸಿಕೊಳ್ಳಿ.

ಚಳಿಗಾಲ ಹತ್ತಿರವಾಗುತ್ತಿದ್ದು, ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆ ಗಳಿಂದಾಗಿ ನಮ್ಮ ದೇಹದಲ್ಲಿ ಆರೋಗ್ಯವು ಸಹ ಬದಲಾಗು ತ್ತದೆ. ಅದರಲ್ಲಿ ಶೀತ, ಗಂಟಲು ನೋವು, ಕೆಮ್ಮು ಮತ್ತು ಒಮ್ಮೊಮ್ಮೆ ಜ್ವರವು ಸಹ ನಮ್ಮನ್ನು ಭಾದಿಸಬಹುದು ಎಚ್ಚರ ವಹಿಸಿ ಮನೆ ಮದ್ದು ತಯಾರಿಸಿ ತಡೆಗಟ್ಟಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…
ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…
![]()
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…