ವ್ಯಕ್ತಿ ವಿಶೇಷಣ

‘ಗೂಗಲ್’ ಕಂಪನಿಯ ಸಿಇಒ ಭಾರತೀಯರಾದ ‘ಸುಂದರ್ ಪಿಚೈ ‘..!ಬಗ್ಗೆ ತಿಳಿಯಲು ಈ ಲೇಖನ ಓದಿ …

804

ಸುಂದರ್‌ ಪಿಚೈ ಅವರು ಮೊದಲು ಕಂಪನಿಯ ಇಂಟರ್‌ ನೆಟ್‌ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್‌ ಮತ್ತು ಇಂಜಿನಿಯರಿಂಗ್‌ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.


ಗೂಗಲ್ ಕಂಪನಿಯ ಸ್ಥಾಪಕ ಲ್ಯಾರಿ ಪೇಜ್ ಅವರು ಸುಂದರ್ ಪಿಚೈ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದ್ದಾರೆ. ಹೊಸ ಸಿಇಒ ನೇಮಕ ಮಾಡುವ ಜೊತೆಗೆ ಕಂಪನಿಯು ಇಂದು ಹೊಸ ಸಹ ಸಂಸ್ಥೆಯಾದ ‘ಆಲ್ಫಬೆಟ್‌’ ಕಂಪನಿಯನ್ನು ಆರಂಭಿಸಿದೆ.

ಸುಂದರ್ ಪಿಚೈ ಅವರ ಬಗ್ಗೆ ಕೆಲ ಮಾಹಿತಿ ಇಲ್ಲಿದೆ:-

* ಸುಂದರ್ ಪಿಚೈ ಅವರು ಭಾರತದ ತಮಿಳುನಾಡಿನ ಚೆನ್ನೈನಲ್ಲಿ 1972ರಲ್ಲಿ ಜನಿಸಿದರು. ಇಂದಿಗೂ ಭಾರತೀಯ ಪೌರತ್ವ ಉಳಿಸಿಕೊಂಡಿದ್ದಾರೆ.

* ಸುಂದರ್ ಪಿಚೈ ಅವರ ಪೂರ್ತಿ ಹೆಸರು ಪಿಚೈ ಸುಂದರಾಜನ್, ಜನಪ್ರಿಯ ಹೆಸರು ಸುಂದರ್ ಪಿಚೈ.

* 2004ರಲ್ಲಿ ಗೂಗಲ್ ಸೇರಿದ ಸುಂದರ್ ಅವರು ಮೊದಲಿಗೆ ಪ್ರಾಡೆಕ್ಟ್ ಹಾಗೂ ಇನ್ನೋವೇಷನ್ ಅಧಿಕಾರಿಯಾಗಿದ್ದರು.

* ಪೆನ್ನಿಸಿಲ್ವೆನಿಯಾದ ವಿಶ್ವವಿದ್ಯಾಲಯದಿಂದ ಸೈಬಲ್ ಸ್ಕಾಲರ್ ಎನಿಸಿಕೊಂಡಿದ್ದಾರೆ.

* ಖರಗ್ ಪುರದ ಐಐಟಿಯಿಂದ ಮೆಟರ್ಲರ್ಜಿ ವಿಷಯದಲ್ಲಿ ಪದವಿ ಪಡೆದುಕೊಂಡ ಪಿಚೈ ಅವರು ಆ ಬ್ಯಾಚಿನ ಬೆಳ್ಳಿ ಪದಕ ವಿಜೇತರಾಗಿದ್ದಾರೆ.

* ಅಮೆರಿಕದ ವಾರ್ಟನ್ ವಿಶ್ವವಿದ್ಯಾಲಯ ಹಾಗೂ ಸ್ಟಾನ್ ಫರ್ಡ್ ವಿಶ್ವವಿದ್ಯಾಲಯಿಂದ ಕ್ರಮವಾಗಿ ಎಂಬಿಎ ಹಾಗೂ ಎಂಎಸ್ ಪಡೆದುಕೊಂಡಿದ್ದಾರೆ.

* ಸದ್ಯ ಗೂಗಲ್ ನ ಆಪ್ಸ್, ಕ್ರೋಮ್ ಹಾಗೂ ಆಂಡ್ರಾಯ್ಡ್ ವಿಭಾಗದ ಉಪಾಧ್ಯಕ್ಷರಾಗಿದ್ದರು.

* ಗೂಗಲ್ ಡ್ರೈವ್, ಜೀಮೇಲ್ ಅಪ್ಲಿಕೇಷನ್, ಗೂಗಲ್ ವಿಡಿಯೋ ಕೊಡೆಕ್ ಎಲ್ಲದರ ಸೃಷ್ಟಿಗೆ ಬಹುತೇಕ ಸುಂದರ್ ಪಿಚೈ ಅವರೇ ಕಾರಣ.

* ಆದರೆ, ಪಿಚೈ ಅವರನ್ನು ಗೂಗಲ್ ನ ಕ್ರೋಮ್ ಆಪರೇಟಿಂಗ್ ಸಿಸ್ಟಮ್ ಹಾಗೂ ಆಂಡ್ರಾಯ್ಡ್ ಅಪ್ಲಿಕೇಷನ್ ನಿರ್ಮಾತೃವಾಗೇ ಗುರುತಿಸಲಾಗಿದೆ.

* ಟ್ವಿಟ್ಟರ್ ಸಂಸ್ಥೆ 2011ರಲ್ಲಿ ಪಿಚೈ ಅವರನ್ನು ತಮ್ಮ ಸಂಸ್ಥೆಗೆ ಸೇರಿಸಿಕೊಳ್ಳಲು ಯತ್ನಿಸಿತ್ತು. ಅದರೆ, ಗೂಗಲ್ ಅವರಿಗೆ 50 ಮಿಲಿಯನ್ ಡಾಲರ್ ಹೆಚ್ಚಿಗೆ ಮೊತ್ತ ನೀಡಿ ಗೂಗಲ್ ನಲ್ಲೇ ಉಳಿಸಿಕೊಂಡಿತ್ತು. ( ಒನ್ ಇಂಡಿಯಾ ಸುದ್ದಿ)
ಖಾಲಿ ಜೇಬಿನಲ್ಲಿ ಹುಟ್ಟಿದ ಗೂಗಲ್ ಸಿಇಒ ಸುಂದರ್ ಪಿಚೈ ಪ್ರೇಮ ಕಥೆ:-

ಅವರಿಬ್ಬರ ಪ್ರೀತಿ ಹುಟ್ಟಿಕೊಂಡಿದ್ದು ಕಾಲೇಜು ದಿನಗಳಲ್ಲಿ. ಆಕೆ ಹೆಸರು ಅಂಜಲಿ; ಆತನ ಹೆಸರು ಸುಂದರ್ ಪಿಚೈ; ಸದ್ಯ ಗೂಗಲ್ ಸಂಸ್ಥೆಯ ಸಿಇಒ. ಅವರ ಪ್ರತಿ ದಿನದ ಸಂಬಳವೇ 3.5 ಕೋಟಿ.
ಆದರೆ ಅಂಜಲಿ ಪ್ರೇಮದ ಬಲೆಯಲ್ಲಿ ಬಿದ್ದಾಗ ಪಿಚೈ ಜೇಬಿನಲ್ಲಿ ಏನೂ ಇರಲಿಲ್ಲ; ಖಾಲಿ ಜೇಬು. ಅವತ್ತಿಗೆ ಚೆನ್ನೈ ಅಪಾರ್ಟ್ಮೆಂಟ್ ಒಂದರಲ್ಲಿ ಪಿಚೈ ವಾಸವಾಗಿದ್ದರು. ಕಾರಿರಲಿಲ್ಲ, ಮನೆಯಲ್ಲೊಂದು ಟಿವಿಯೂ ಇರಲಿಲ್ಲ.


ಅಲ್ಲಿಂದ ಐಐಟಿ ಖರಗ್ ಪುರದಲ್ಲಿ ಎಂಜಿನಿಯರಿಂಗ್ ಅಭ್ಯಾಸ ಮಾಡಲು ಇಬ್ಬರೂ ತೆರಳಿದರು. ಅಲ್ಲಿ ಡೇಟಿಂಗ್ ಆರಂಭಿಸಿದರು. ಜೇಬಿನಲ್ಲಿ ಕಾಸಿಲ್ಲದಿದ್ದರೇನಂತೆ ಹೃದಯ ಶ್ರೀಮಂತವಾಗಿತ್ತು. ಪಿಚೈ ಅಂಜಲಿ ಮುಂದೆ ಮದುವೆ ಪ್ರಸ್ತಾಪ ಇಟ್ಟರು. ಅಂಜಲಿಯೂ ಅಷ್ಟೆ ಅತ್ತಿತ್ತ ನೋಡದೆ ಮದುವೆಗೆ ಒಪ್ಪಿಗೆ ನೀಡಿಯೇ ಬಟ್ಟರು. ಅಂಜಲಿಗೆ ಪಿಚೈ ಬಡತನದ ಬಗ್ಗೆ ಗೊತ್ತಿರಲಿಲ್ಲವೆಂದಲ್ಲ. ಸುಂದರ್ ಮನೆಯ ಎಲ್ಲಾ ಪರಿಸ್ಥಿತಿಯೂ ಅಂಜಲಿಗೆ ಗೊತ್ತಿತ್ತು. ಹೀಗಿದ್ದೂ ಮದುವೆಗೆ ಒಪ್ಪಿಕೊಂಡರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…

  • ತಂತ್ರಜ್ಞಾನ

    ಆಲೂಗಡ್ಡೆ ಮತ್ತು ಈರುಳ್ಳಿ ಉಪಯೋಗಿಸಿ ಟೇಬಲ್ ಫ್ಯಾನ್ ತಿರುಗಿಸಿದ ಭೂಪ..!ತಿಳಿಯಲು ಇದನ್ನು ಓದಿ..

    ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.

  • ಸಾಧನೆ, ಸ್ಪೂರ್ತಿ

    ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

    ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…

  • inspirational, ಸುದ್ದಿ

    ಬಿಗ್ ಶಾಕ್..!ಅಡುಗೆ ಅನಿಲ ಬಳಕೆದಾರರ ಜೇಬಿಗೆ ಬೀಳಲಿದೆ ಕತ್ತರಿ…ತಿಳಿಯಲು ಈ ಲೇಖನ ಓದಿ…

    ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ 4 ರೋಗಗಳನ್ನು ಗುಣಪಡಿಸುವ ಅದ್ಭುತ ಶಕ್ತಿ ಈ ಸೊಪ್ಪಿನಲ್ಲಿದೆ..!

    ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….