inspirational, ಆರೋಗ್ಯ

ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಎಷ್ಟು ಉಪಯೋಗಕಾರಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

422

ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್‌ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್‌ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.

ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಆಗುವ ಆಕ್ಸಿಡೇಟಿವ್ ಹಾನಿಯನ್ನು ಕಡಿಮೆ ಮಾಡುವ ಸ್ಪೋರಾಮಿನ್ ಪ್ರೋಟಿನ್‌ಗಳನ್ನು ಉತ್ಪಾದಿಸುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದೆ. ಗೆಣಸಿನ ಈ ಆರೋಗ್ಯಲಾಭಗಳು ಗೊತ್ತಾದರೆ ನೀವು ಖಂಡಿತ ನಿಮ್ಮ ಆಹಾರದಲ್ಲಿ ಅದನ್ನೂ ಸೇರಿಸಿಕೊಳ್ಳುತ್ತೀರಿ.

1.ಗೆಣಸು ಉತ್ತಮ ಉರಿಯೂತ ನಿವಾರಕ:-

ಗೆಣಸು ತನ್ನ ಪ್ರಬಲ ಉರಿಯೂತ ನಿವಾರಕ ಗುಣಕ್ಕಾಗಿ ಹೆಸರಾಗಿರುವ ಆ್ಯಂಥೊಸೈನಿನ್ ಅನ್ನು ಒಳಗೊಂಡಿದೆ. ಇದು ಅಂಗಾಂಗಗಳ ಉರಿಯೂತವನ್ನು ತಗ್ಗಿಸಿ ಅವುಗಳಿಗೆ ಹಾನಿಯಾಗುವುದನ್ನು ತಡೆಯುತ್ತದೆ. ಗೆಣಸಿನಲ್ಲಿರುವ ಫೈಬ್ರಿನೋಜೆನ್ ರಕ್ತ ಹೆಪ್ಪುಗಟ್ಟಲು ನೆರವಾಗುತ್ತದೆ.

2.ವಯಸ್ಸಾಗುವಿಕೆಯ ಪರಿಣಾಮಗಳ ವಿರುದ್ಧ ರಕ್ಷಣೆ:-

ಗೆಣಸಿನಲ್ಲಿ ಕ್ಯಾರೊಟೆನಾಯ್ಡಾ ಮತ್ತು ಬಿಟಾ-ಕ್ಯಾರೊಟಿನ್ ಅಧಿಕ ಪ್ರಮಾಣದಲ್ಲಿದ್ದು, ಅವು ಶರೀರದಲ್ಲಿ ವಿಟಾಮಿನ್ ಎ ತಯಾರಿಕೆಗೆ ನೆರವಾಗುವ ಮೂಲಕ ಕಣ್ಣುಗಳ ದೃಷ್ಟಿಯನ್ನು ಮತ್ತು ಶರೀರದ ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತವೆ. ಪ್ರಬಲ ಉತ್ಕರ್ಷಣ ನಿರೋಧಕಗಳಾಗಿಯೂ ಕೆಲಸ ಮಾಡುವ ಅವು ನಮ್ಮ ಶರೀರದಲ್ಲಿ ಫ್ರೀ ರ್ಯಾಡಿಕಲ್‌ಗಳ ಪರಿಣಾಮವನ್ನು ಕಡಿಮೆ ಮಾಡುತ್ತವೆ ಮತ್ತು ವಯಸ್ಸಾಗುತ್ತಿರುವುದರ ಲಕ್ಷಣಗಳನ್ನು ತಗ್ಗಿಸುತ್ತವೆ.

3.ರೋಗ ನಿರೋಧಕ ಶಕ್ತಿಯನ್ನು ಬೆಂಬಲಿಸುತ್ತದೆ:-

ನಮ್ಮ ಶರೀರಕ್ಕೆ ಅತ್ಯಗತ್ಯ ಖನಿಜವಾಗಿರುವ ಕಬ್ಬಿಣ ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿದೆ . ಹೀಗಾಗಿ ಅದು ನಮ್ಮ ಶರೀರದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ಸಾಗಿಸುವ ಕೋಶಗಳ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ನಮ್ಮ ನಿರೋಧಕ ಶಕ್ತಿಯ ಪ್ರಮುಖ ಭಾಗವಾಗಿರುವ ಬಿಳಿಯ ರಕ್ತಕಣಗಳ ಉತ್ಪಾದನೆಯಲ್ಲಿಯೂ ಅದು ನೆರವಾಗುತ್ತದೆ.

 

4.ಹೃದಯದ ಆರೋಗ್ಯಕ್ಕೆ ಒಳ್ಳೆಯದು:-

ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿರುವ ಪೊಟ್ಯಾಷಿಯಂ ಹೃದಯ ಬಡಿತವನ್ನು ಕ್ರಮಬದ್ಧಗೊಳಿಸಲು ನೆರವಾಗುತ್ತದೆ. ನಮ್ಮ ಶರೀರದಲ್ಲಿನ ಸ್ನಾಯುಗಳು ಮತ್ತು ನರಗಳ ಕಾರ್ಯ ನಿರ್ವಹಣೆಯನ್ನು ಉತ್ತಮಗೊಳಿಸುವ ಜೊತೆಗೆ ಗಾಯದಿಂದ ಹಾನಿಗೊಳಗಾದ ಸ್ನಾಯುಗಳು ಬೇಗನೇ ಚೇತರಿಸಿಕೊಳ್ಳುವಂತೆ ಮಾಡುತ್ತದೆ. ಗೆಣಸಿನಲ್ಲಿರುವ ಮ್ಯಾಗ್ನೀಷಿಯಂ ಆರೋಗ್ಯಕರ ರಕ್ತನಾಳಗಳು ಮತ್ತು ಹೃದಯದ ಸ್ನಾಯುಗಳಿಗೆ ಅಗತ್ಯವಾಗಿದೆ.

5.ಮೂಳೆಗಳನ್ನು ಆರೋಗ್ಯಯುತವಾಗಿಸುತ್ತದೆ:-

ವಿಟಾಮಿನ್ ಡಿ ಸಮೃದ್ಧವಾಗಿರುವ ಗೆಣಸು ಮೂಳೆಗಳನ್ನು ಸದೃಢಗೊಳಿಸುವಲ್ಲಿ ನೆರವಾಗುತ್ತದೆ. ಆಹಾರದ ಮೂಲಕ ದೊರೆಯುವ ಕ್ಯಾಲ್ಶಿಯಂ ಅನ್ನು ಸಂಸ್ಕರಿಸಲು ನಮ್ಮ ಶರೀರಕ್ಕೆ ವಿಟಾಮಿನ್ ಡಿ ಅಗತ್ಯವಾಗಿದೆ ಮತ್ತು ಅದು ಗೆಣಸಿನಲ್ಲಿದೆ.

6.ಚರ್ಮ ಮತ್ತು ತಲೆಗೂದಲಿನ ಆರೋಗ್ಯಕ್ಕೆ ಸಹಕಾರಿ:-

ಗೆಣಸಿನಲ್ಲಿಯ ಕೆಲವು ಸಂಯುಕ್ತಗಳು ಚರ್ಮದ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುವ ಮೂಲಕ ವಯಸ್ಸಾಗುತ್ತಿರುವ ಲಕ್ಷಣಗಳನ್ನು ದೂರಮಾಡುತ್ತವೆ. ಚರ್ಮದಲ್ಲಿಯ ಕಪ್ಪುಕಲೆಗಳನ್ನೂ ಅವು ನಿವಾರಿಸುತ್ತವೆ. ದಪ್ಪ ತಲೆಗೂದಲಿಗಾಗಿ ಮತ್ತು ತಲೆಗೂದಲಿನ ಬೆಳವಣಿಗೆಗಾಗಿ ಶತಮಾನಗಳಿಂದಲೂ ಗೆಣಸು ಬಳಕೆಯಾಗುತ್ತಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಮೇಕಪ್ ಮಾಡದ ದೃಶ್ಯಗಳನ್ನೆ ಹೆಚ್ಚು ತೋರಿಸಿದ್ದಾರೆ’ ಎಂದ ಚೈತ್ರಾ ಹೇಳಿಕೆಗೆ ಸುದೀಪ್ ಗರಂ..!

    ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…

  • ಸುದ್ದಿ

    ತಾಳಿ ಕಟ್ಟುವಾಗ ಪ್ರೇಮಿಯ ಎಂಟ್ರಿಗೆ ಸಿಕ್ತು ಟ್ವಿಸ್ಟ್! ಕೊನೆಗೂ ಒಂದಾದ ಪ್ರೇಮಿಗಳು…

    ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…

  • ಸುದ್ದಿ

    ಕೇವಲ 21 ವರ್ಷಕ್ಕೆ ಜಗತ್ತಿನ ಎಲ್ಲ ‘ದೇಶ’ ಸುತ್ತಿ ಬಂದಂತಹ ಯುವತಿ…!

    ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್‌ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…

  • ಸ್ಪೂರ್ತಿ

    ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಹಳ್ಳಿ ಹುಡುಗಿ ದ್ವಿತೀಯ ಪಿಯುಸಿನಲ್ಲಿ ರಾಜ್ಯಕ್ಕೆ ಪ್ರಥಮ..!

    ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್‌ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್‌ನಲ್ಲಿ ಪಂಕ್ಚರ್ ಹಾಕುವ ಕೆಲಸ…

  • inspirational

    ವಿಶ್ವದ ನಂಬರ್ 1 ಶ್ರೀಮಂತ ಬೆಜೋಸ್​ನ ಹಿಂದಿಕ್ಕಿದ ಬರ್ನಾರ್ಡ್ ಅರ್ನಾಲ್ಟ್

    ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…

  • ಸುದ್ದಿ

    ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಈ ಪುಟ್ಟ ಬಾಲಕನ ಹೃದಯ ಈಗ ಆ ಮೊಬೈಲ್‌ನಲ್ಲಿದೆ..?

    ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್​ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…