inspirational, ಆರೋಗ್ಯ

ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಎಷ್ಟು ಉಪಯೋಗಕಾರಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

419

ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್‌ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್‌ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.

ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಆಗುವ ಆಕ್ಸಿಡೇಟಿವ್ ಹಾನಿಯನ್ನು ಕಡಿಮೆ ಮಾಡುವ ಸ್ಪೋರಾಮಿನ್ ಪ್ರೋಟಿನ್‌ಗಳನ್ನು ಉತ್ಪಾದಿಸುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದೆ. ಗೆಣಸಿನ ಈ ಆರೋಗ್ಯಲಾಭಗಳು ಗೊತ್ತಾದರೆ ನೀವು ಖಂಡಿತ ನಿಮ್ಮ ಆಹಾರದಲ್ಲಿ ಅದನ್ನೂ ಸೇರಿಸಿಕೊಳ್ಳುತ್ತೀರಿ.

1.ಗೆಣಸು ಉತ್ತಮ ಉರಿಯೂತ ನಿವಾರಕ:-

ಗೆಣಸು ತನ್ನ ಪ್ರಬಲ ಉರಿಯೂತ ನಿವಾರಕ ಗುಣಕ್ಕಾಗಿ ಹೆಸರಾಗಿರುವ ಆ್ಯಂಥೊಸೈನಿನ್ ಅನ್ನು ಒಳಗೊಂಡಿದೆ. ಇದು ಅಂಗಾಂಗಗಳ ಉರಿಯೂತವನ್ನು ತಗ್ಗಿಸಿ ಅವುಗಳಿಗೆ ಹಾನಿಯಾಗುವುದನ್ನು ತಡೆಯುತ್ತದೆ. ಗೆಣಸಿನಲ್ಲಿರುವ ಫೈಬ್ರಿನೋಜೆನ್ ರಕ್ತ ಹೆಪ್ಪುಗಟ್ಟಲು ನೆರವಾಗುತ್ತದೆ.

2.ವಯಸ್ಸಾಗುವಿಕೆಯ ಪರಿಣಾಮಗಳ ವಿರುದ್ಧ ರಕ್ಷಣೆ:-

ಗೆಣಸಿನಲ್ಲಿ ಕ್ಯಾರೊಟೆನಾಯ್ಡಾ ಮತ್ತು ಬಿಟಾ-ಕ್ಯಾರೊಟಿನ್ ಅಧಿಕ ಪ್ರಮಾಣದಲ್ಲಿದ್ದು, ಅವು ಶರೀರದಲ್ಲಿ ವಿಟಾಮಿನ್ ಎ ತಯಾರಿಕೆಗೆ ನೆರವಾಗುವ ಮೂಲಕ ಕಣ್ಣುಗಳ ದೃಷ್ಟಿಯನ್ನು ಮತ್ತು ಶರೀರದ ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತವೆ. ಪ್ರಬಲ ಉತ್ಕರ್ಷಣ ನಿರೋಧಕಗಳಾಗಿಯೂ ಕೆಲಸ ಮಾಡುವ ಅವು ನಮ್ಮ ಶರೀರದಲ್ಲಿ ಫ್ರೀ ರ್ಯಾಡಿಕಲ್‌ಗಳ ಪರಿಣಾಮವನ್ನು ಕಡಿಮೆ ಮಾಡುತ್ತವೆ ಮತ್ತು ವಯಸ್ಸಾಗುತ್ತಿರುವುದರ ಲಕ್ಷಣಗಳನ್ನು ತಗ್ಗಿಸುತ್ತವೆ.

3.ರೋಗ ನಿರೋಧಕ ಶಕ್ತಿಯನ್ನು ಬೆಂಬಲಿಸುತ್ತದೆ:-

ನಮ್ಮ ಶರೀರಕ್ಕೆ ಅತ್ಯಗತ್ಯ ಖನಿಜವಾಗಿರುವ ಕಬ್ಬಿಣ ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿದೆ . ಹೀಗಾಗಿ ಅದು ನಮ್ಮ ಶರೀರದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ಸಾಗಿಸುವ ಕೋಶಗಳ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ನಮ್ಮ ನಿರೋಧಕ ಶಕ್ತಿಯ ಪ್ರಮುಖ ಭಾಗವಾಗಿರುವ ಬಿಳಿಯ ರಕ್ತಕಣಗಳ ಉತ್ಪಾದನೆಯಲ್ಲಿಯೂ ಅದು ನೆರವಾಗುತ್ತದೆ.

 

4.ಹೃದಯದ ಆರೋಗ್ಯಕ್ಕೆ ಒಳ್ಳೆಯದು:-

ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿರುವ ಪೊಟ್ಯಾಷಿಯಂ ಹೃದಯ ಬಡಿತವನ್ನು ಕ್ರಮಬದ್ಧಗೊಳಿಸಲು ನೆರವಾಗುತ್ತದೆ. ನಮ್ಮ ಶರೀರದಲ್ಲಿನ ಸ್ನಾಯುಗಳು ಮತ್ತು ನರಗಳ ಕಾರ್ಯ ನಿರ್ವಹಣೆಯನ್ನು ಉತ್ತಮಗೊಳಿಸುವ ಜೊತೆಗೆ ಗಾಯದಿಂದ ಹಾನಿಗೊಳಗಾದ ಸ್ನಾಯುಗಳು ಬೇಗನೇ ಚೇತರಿಸಿಕೊಳ್ಳುವಂತೆ ಮಾಡುತ್ತದೆ. ಗೆಣಸಿನಲ್ಲಿರುವ ಮ್ಯಾಗ್ನೀಷಿಯಂ ಆರೋಗ್ಯಕರ ರಕ್ತನಾಳಗಳು ಮತ್ತು ಹೃದಯದ ಸ್ನಾಯುಗಳಿಗೆ ಅಗತ್ಯವಾಗಿದೆ.

5.ಮೂಳೆಗಳನ್ನು ಆರೋಗ್ಯಯುತವಾಗಿಸುತ್ತದೆ:-

ವಿಟಾಮಿನ್ ಡಿ ಸಮೃದ್ಧವಾಗಿರುವ ಗೆಣಸು ಮೂಳೆಗಳನ್ನು ಸದೃಢಗೊಳಿಸುವಲ್ಲಿ ನೆರವಾಗುತ್ತದೆ. ಆಹಾರದ ಮೂಲಕ ದೊರೆಯುವ ಕ್ಯಾಲ್ಶಿಯಂ ಅನ್ನು ಸಂಸ್ಕರಿಸಲು ನಮ್ಮ ಶರೀರಕ್ಕೆ ವಿಟಾಮಿನ್ ಡಿ ಅಗತ್ಯವಾಗಿದೆ ಮತ್ತು ಅದು ಗೆಣಸಿನಲ್ಲಿದೆ.

6.ಚರ್ಮ ಮತ್ತು ತಲೆಗೂದಲಿನ ಆರೋಗ್ಯಕ್ಕೆ ಸಹಕಾರಿ:-

ಗೆಣಸಿನಲ್ಲಿಯ ಕೆಲವು ಸಂಯುಕ್ತಗಳು ಚರ್ಮದ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುವ ಮೂಲಕ ವಯಸ್ಸಾಗುತ್ತಿರುವ ಲಕ್ಷಣಗಳನ್ನು ದೂರಮಾಡುತ್ತವೆ. ಚರ್ಮದಲ್ಲಿಯ ಕಪ್ಪುಕಲೆಗಳನ್ನೂ ಅವು ನಿವಾರಿಸುತ್ತವೆ. ದಪ್ಪ ತಲೆಗೂದಲಿಗಾಗಿ ಮತ್ತು ತಲೆಗೂದಲಿನ ಬೆಳವಣಿಗೆಗಾಗಿ ಶತಮಾನಗಳಿಂದಲೂ ಗೆಣಸು ಬಳಕೆಯಾಗುತ್ತಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…

  • inspirational

    ಮತ್ತೆ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ. ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ.

    ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…

  • Cinema

    ಶ್ರುತಿ ಹರಿಹರನ್ ಮಗಳ ನಾಮಕರಣ ಸಮಾರಂಭ : ಮಗಳ ಹೆಸರೇನು ಗೊತ್ತ?

    ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…

  • ಸರ್ಕಾರದ ಯೋಜನೆಗಳು

    “ವಾಸಿಸುವವನೇ ಮನೆ ಒಡೆಯ” ಯೋಜನೆಗೆ ರಾಷ್ಟ್ರಪತಿಗಳಿಂದ ಸಿಕ್ಕ ಅಂಕಿತದ ಬಗ್ಗೆ ತಿಳಿಯಬೇಕೆ…? ಹಾಗಾದ್ರೆ ಈ ಲೇಖನ ಓದಿ….!

    ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.

  • ಸುದ್ದಿ

    ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

    ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…