ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.

ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಆಗುವ ಆಕ್ಸಿಡೇಟಿವ್ ಹಾನಿಯನ್ನು ಕಡಿಮೆ ಮಾಡುವ ಸ್ಪೋರಾಮಿನ್ ಪ್ರೋಟಿನ್ಗಳನ್ನು ಉತ್ಪಾದಿಸುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದೆ. ಗೆಣಸಿನ ಈ ಆರೋಗ್ಯಲಾಭಗಳು ಗೊತ್ತಾದರೆ ನೀವು ಖಂಡಿತ ನಿಮ್ಮ ಆಹಾರದಲ್ಲಿ ಅದನ್ನೂ ಸೇರಿಸಿಕೊಳ್ಳುತ್ತೀರಿ.

ಗೆಣಸು ತನ್ನ ಪ್ರಬಲ ಉರಿಯೂತ ನಿವಾರಕ ಗುಣಕ್ಕಾಗಿ ಹೆಸರಾಗಿರುವ ಆ್ಯಂಥೊಸೈನಿನ್ ಅನ್ನು ಒಳಗೊಂಡಿದೆ. ಇದು ಅಂಗಾಂಗಗಳ ಉರಿಯೂತವನ್ನು ತಗ್ಗಿಸಿ ಅವುಗಳಿಗೆ ಹಾನಿಯಾಗುವುದನ್ನು ತಡೆಯುತ್ತದೆ. ಗೆಣಸಿನಲ್ಲಿರುವ ಫೈಬ್ರಿನೋಜೆನ್ ರಕ್ತ ಹೆಪ್ಪುಗಟ್ಟಲು ನೆರವಾಗುತ್ತದೆ.

ಗೆಣಸಿನಲ್ಲಿ ಕ್ಯಾರೊಟೆನಾಯ್ಡಾ ಮತ್ತು ಬಿಟಾ-ಕ್ಯಾರೊಟಿನ್ ಅಧಿಕ ಪ್ರಮಾಣದಲ್ಲಿದ್ದು, ಅವು ಶರೀರದಲ್ಲಿ ವಿಟಾಮಿನ್ ಎ ತಯಾರಿಕೆಗೆ ನೆರವಾಗುವ ಮೂಲಕ ಕಣ್ಣುಗಳ ದೃಷ್ಟಿಯನ್ನು ಮತ್ತು ಶರೀರದ ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತವೆ. ಪ್ರಬಲ ಉತ್ಕರ್ಷಣ ನಿರೋಧಕಗಳಾಗಿಯೂ ಕೆಲಸ ಮಾಡುವ ಅವು ನಮ್ಮ ಶರೀರದಲ್ಲಿ ಫ್ರೀ ರ್ಯಾಡಿಕಲ್ಗಳ ಪರಿಣಾಮವನ್ನು ಕಡಿಮೆ ಮಾಡುತ್ತವೆ ಮತ್ತು ವಯಸ್ಸಾಗುತ್ತಿರುವುದರ ಲಕ್ಷಣಗಳನ್ನು ತಗ್ಗಿಸುತ್ತವೆ.

ನಮ್ಮ ಶರೀರಕ್ಕೆ ಅತ್ಯಗತ್ಯ ಖನಿಜವಾಗಿರುವ ಕಬ್ಬಿಣ ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿದೆ . ಹೀಗಾಗಿ ಅದು ನಮ್ಮ ಶರೀರದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ಸಾಗಿಸುವ ಕೋಶಗಳ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ನಮ್ಮ ನಿರೋಧಕ ಶಕ್ತಿಯ ಪ್ರಮುಖ ಭಾಗವಾಗಿರುವ ಬಿಳಿಯ ರಕ್ತಕಣಗಳ ಉತ್ಪಾದನೆಯಲ್ಲಿಯೂ ಅದು ನೆರವಾಗುತ್ತದೆ.

ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿರುವ ಪೊಟ್ಯಾಷಿಯಂ ಹೃದಯ ಬಡಿತವನ್ನು ಕ್ರಮಬದ್ಧಗೊಳಿಸಲು ನೆರವಾಗುತ್ತದೆ. ನಮ್ಮ ಶರೀರದಲ್ಲಿನ ಸ್ನಾಯುಗಳು ಮತ್ತು ನರಗಳ ಕಾರ್ಯ ನಿರ್ವಹಣೆಯನ್ನು ಉತ್ತಮಗೊಳಿಸುವ ಜೊತೆಗೆ ಗಾಯದಿಂದ ಹಾನಿಗೊಳಗಾದ ಸ್ನಾಯುಗಳು ಬೇಗನೇ ಚೇತರಿಸಿಕೊಳ್ಳುವಂತೆ ಮಾಡುತ್ತದೆ. ಗೆಣಸಿನಲ್ಲಿರುವ ಮ್ಯಾಗ್ನೀಷಿಯಂ ಆರೋಗ್ಯಕರ ರಕ್ತನಾಳಗಳು ಮತ್ತು ಹೃದಯದ ಸ್ನಾಯುಗಳಿಗೆ ಅಗತ್ಯವಾಗಿದೆ.
![]()
ವಿಟಾಮಿನ್ ಡಿ ಸಮೃದ್ಧವಾಗಿರುವ ಗೆಣಸು ಮೂಳೆಗಳನ್ನು ಸದೃಢಗೊಳಿಸುವಲ್ಲಿ ನೆರವಾಗುತ್ತದೆ. ಆಹಾರದ ಮೂಲಕ ದೊರೆಯುವ ಕ್ಯಾಲ್ಶಿಯಂ ಅನ್ನು ಸಂಸ್ಕರಿಸಲು ನಮ್ಮ ಶರೀರಕ್ಕೆ ವಿಟಾಮಿನ್ ಡಿ ಅಗತ್ಯವಾಗಿದೆ ಮತ್ತು ಅದು ಗೆಣಸಿನಲ್ಲಿದೆ.

ಗೆಣಸಿನಲ್ಲಿಯ ಕೆಲವು ಸಂಯುಕ್ತಗಳು ಚರ್ಮದ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುವ ಮೂಲಕ ವಯಸ್ಸಾಗುತ್ತಿರುವ ಲಕ್ಷಣಗಳನ್ನು ದೂರಮಾಡುತ್ತವೆ. ಚರ್ಮದಲ್ಲಿಯ ಕಪ್ಪುಕಲೆಗಳನ್ನೂ ಅವು ನಿವಾರಿಸುತ್ತವೆ. ದಪ್ಪ ತಲೆಗೂದಲಿಗಾಗಿ ಮತ್ತು ತಲೆಗೂದಲಿನ ಬೆಳವಣಿಗೆಗಾಗಿ ಶತಮಾನಗಳಿಂದಲೂ ಗೆಣಸು ಬಳಕೆಯಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…
ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.