News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
govt, modi

ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

1275

ಇನ್ನು ಮುಂದೆ ಕಸಾಯಿಖಾನೆಗಳಿಗೆ ಗೋವುಗಳನ್ನು ಮಾರಾಟ ಮಾಡುವಂತಿಲ್ಲ

ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

ಮೋದಿ ಸರ್ಕಾರ ಕಸಾಯಿಖಾನೆಗಳಿಗೆ ಜಾನುವಾರುಗಳ ಮಾರಾಟವನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮೂರನೇ ವರ್ಷದ ಸಂಭ್ರಮದ ಹೊತ್ತಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.

ಪರಿಸರ ಖಾತೆ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಭಾರತ ಸರ್ಕಾರ ಒಮ್ಮತದಿಂದ ಈ ಹೊಸ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದ್ದು ಈ ವಾರವೇ ಅಧಿಸೂಚನೆ ಜಾರಿಯಗುವ ಸಾಧ್ಯತೆಯಿದೆ. ಜಾನುವಾರುಗಳನ್ನು ಕೃಷಿ ಉಪಯೋಗಕ್ಕೆ ಮಾತ್ರ ಮಾರಾಟ ಮಾಡಬೇಕು, ಕಸಾಯಿಖಾನೆಗೆ ಮಾರುವಂತಿಲ್ಲ ಎಂದು ಪ್ರಾಣಿ ಹಿಂಸೆ ತಡೆ (ಪಿಸಿಎ) ಕಾಯ್ದೆಯ 1960ರ ಸೆಕ್ಷನ್ ಅಡಿಯಲ್ಲಿ ಈ ನಿರ್ಬಂಧ ಹೇರಲಾಗಿದೆ.

ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ತೆಗೆದುಕೊಂಡು ಹೋಗುವಾಗ ಆ ರಾಜ್ಯ ಸರ್ಕಾರದ ವಿಶೇಷ ಅನುಮತಿಯನ್ನು ಪಡೆಯಬೇಕು. ಧಾರ್ಮಿಕ ಕಾರ್ಯಕ್ರಮದಲ್ಲೂ ಈ ಮೇಲೆ ತಿಳಿಸಿದ ಜಾನುವಾರುಗಳ ಹತ್ಯೆಯನ್ನು ನಿಷೇಧಿಸಲಾಗಿದೆ.

ಹೊಸ ನಿಯಮದಲ್ಲಿರುವ ಪ್ರಮುಖ ಅಂಶಗಳು
ಇನ್ನು ಮುಂದೆ ಜಾನುವಾರುಗಳನ್ನು ವ್ಯಾಪಾರ ಮಾಡುವ ಮಾರಾಟಗಾರರು ಮತ್ತು ಖರೀದಿ ಮಾಡುವವರು ಗುರುತಿನ ಚೀಟಿ ಮತ್ತು ಮಾಲೀಕತ್ವದ ದಾಖಲೆಗಳನ್ನು ತೋರಿಸಬೇಕಾಗುತ್ತದೆ.

ಖರೀದಿಸಿದ ಜಾನುವಾರನ್ನು 6 ತಿಂಗಳೊಳಗೆ ಮತ್ತೊಮ್ಮೆ ಮಾರಾಟ ಮಾಡುವಂತಿಲ್ಲ. ರೈತರಿಗೆ ಮಾತ್ರ ಜಾನುವರನ್ನು ಮಾರಾಟ ಮಾಡಬೇಕು. ಖರೀದಿಸುವಾಗ ಕಡ್ಡಾಯವಾಗಿ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಎಳೆ ಕರುಗಳನ್ನು ಅಥವಾ ಅನಾರೋಗ್ಯ ಪೀಡಿತ ಹಸುಗಳನ್ನು ಮಾರಾಟ ಮಾಡುವಂತಿಲ್ಲ.

5 ಪ್ರತಿಗಳನ್ನು ಇಟ್ಟುಕೊಳ್ಳಬೇಕು:
ಒಂದು ಹಸುವನ್ನು ಕೊಂಡುಕೊಂಡರೆ, ಜಾನುವಾರು ವ್ಯಾಪಾರಿಯು ಮಾರಾಟ ಮಾಡಿದ ದಾಖಲೆಗಳ 5 ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ. ಒಂದು ಪ್ರತಿಯನ್ನು ಸ್ಥಳೀಯ ಕಂದಾಯ ಅಧಿಕಾರಿಗೆ, ಎರಡನೇ ಪ್ರತಿಯನ್ನು ಹಸು ಖರೀದಿ ಮಾಡಿದ ವ್ಯಕ್ತಿಯ ಜಿಲ್ಲೆಯ ಸ್ಥಳೀಯ ಪಶು ವೈದ್ಯರಿಗೆ, ಮೂರನೇ ಪ್ರತಿಯನ್ನು ಜಾನುವಾರು ಮಾರುಕಟ್ಟೆ ಸಮಿತಿಗೆ ನೀಡಬೇಕಾಗುತ್ತದೆ. ಮಾರಾಟಗಾರ ಮತ್ತು ಖರೀದಿಸಿದ ವ್ಯಕ್ತಿಯೂ ಒಂದೊಂದು ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ.

ಸಂಕ್ಷಿಪ್ತ ವಾಗಿ ಏನಿದು ಇಲ್ಲಿ ನೋಡಿ.

  • ಗೋವುಗಳನ್ನು ಅಕ್ರಮವಾಗಿ ಮಾರಾಟ ಮಾಡಿದರೆ 7 ವರ್ಷ ಶಿಕ್ಷೆ ಹಾಗೂ 3 ಲಕ್ಷ ರೂ. ದಂಡ ವಿಧಿಸಬಹುದಾಗಿದೆ.
  • ಗೋವು ಮಾಲೀಕ ಮಾರಾಟ ಮಾಡಿದ್ದು ಹಾಗೂ ಖರೀದಿದಾರ ರಸೀದಿ ಹೊಂದಿರಬೇಕು.
  • ಗೋವು ಮಾರಾಟಕ್ಕೆ ಯೋಗ್ಯವೇ ಎಂಬುದನ್ನು ಮೆಟರ್ನಿಟಿ ವೈದ್ಯರು ನಿರ್ಧರಿಸಬೇಕು. ಅವರ ಅನುಮತಿ ಇಲ್ಲದೇ ಮಾರುವಂತಿಲ್ಲ.
  • ಜಾನುವಾರು ಸಾಗಿಸಲು ಸೂಕ್ತ ದಾಖಲೆ ಹೊಂದಿರುವ ವಾಹನಗಳಲ್ಲೇ ಸಾಗಿಸಬೇಕು.
  • ಹಸು, ದನ ಅಥವಾ ಕರುಗಳ ಕೊಂಬುಗಳಿಗೆ, ಕಾಲುಗಳಿಗೆ ಅಥವಾ ದೇಹದ ಯಾವುದೇ ಭಾಗಗಳಿಗೆ ಯಾವುದೇ ರೀತಿಯ ಬಣ್ಣಗಳನ್ನು ಹಚ್ಚುವಂತಿಲ್ಲ.
  • ಅವುಗಳನ್ನು ಅನವಶ್ಯಕವಾಗಿ ಕೊರಳಿಗೆ ಹಗ್ಗ ಬಿಗಿದು ಕಟ್ಟುವಂತಿಲ್ಲ.
  • ಗೋವು ವಾಸಿಸುವ ಸ್ಥಳಗಳಲ್ಲಿ ಉತ್ತಮ ಗಾಳಿ, ಬೆಳಕಿನ ವ್ಯವಸ್ಥೆ, ಉತ್ತಮ ಆಹಾರ, ಶುದ್ಧ ನೀರು ಕೊಡತಕ್ಕದ್ದು.
  • ಪ್ರಾಣಿಗಳಿಗೆ ಯಾವುದೇ ರೀತಿಯ ಅಲಂಕಾರ ಮಾಡುವಂತಿಲ್ಲ. ಒಡವೆ, ಹಾರ ಮುಂತಾದ ಯಾವುದೇ ಅಲಂಕಾರಿಕ ವಸ್ತುಗಳನ್ನು ಹಾಕುವಂತಿಲ್ಲ.
  • ಹಸುವಿನ ಹಾಲು ಕುಡಿಯದಂತೆ ಕರುಗಳ ಬಾಯನ್ನು ಯಾವುದೇ ರೀತಿಯಲ್ಲಿ ಬಂದ್ ಮಾಡುವ ಹಾಗಿಲ್ಲ.
  • ಆ ನಿರ್ದಿಷ್ಟ ಪ್ರಾಣಿಯ ಉಸ್ತುವಾರಿ ಹೊತ್ತಿರುವ ಮನುಷ್ಯ, ಪ್ರಾಣಿಗೆ ಈ ಮೇಲ್ಕಂಡ ಯಾವುದೇ ತೊಂದರೆ ನೀಡಲಾಗಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಂಡಿರಬೇಕು. ಉತ್ತಮ ಆಹಾರ, ನೀರು, ಬೆಳಕು ಸಿಗುತ್ತಿರುವ ಬಗ್ಗೆ ಅರಿವು ಹೊಂದಿರಬೇಕು.
  • ಪ್ರಾಣಿಗಳು ಯಾವುದೇ ರೀತಿಯ ದುರವಸ್ಥೆಯಲ್ಲಿದ್ದರೆ, ಆ ಪ್ರಾಣಿಗಳ ಉಸ್ತುವಾರಿ ಹೊತ್ತಿರುವ ವ್ಯಕ್ತಿಗಳೇ ಆ ತಪ್ಪುಗಳಿಗೆ ಹೊಣೆಗಾರರಾಗುತ್ತಾರೆ.

ಕೇರಳದಲ್ಲಿ ಬಾರಿ ವಿರೋಧ 

ಹಸುವಿನ ವಧೆ ನಿಷೇಧದ ಬಗ್ಗೆ ಕೇರಳ ಸರ್ಕಾರ ಕೋಪ ವ್ಯಕ್ತಪಡಿಸಿದೆ. ಸುದ್ದಿಗೆ ಪ್ರತಿಕ್ರಿಯಿಸಿದ ಕೇರಳದ ಎಡಪಕ್ಷ ಸರ್ಕಾರವು ಅದು ಫ್ಯಾಸಿಸ್ಟ್ ಚಳುವಳಿ ಎಂದು ಹೇಳಿದೆ.
ವಾಸ್ತವವಾಗಿ, ಕೇರಳದ ಮುಖ್ಯಮಂತ್ರಿ ಪಿನಾರೈ ವಿಜಯನ್ ಅವರು ಟ್ವೀಟ್ ಮಾಡಿದರು: “ಆರ್ಎಸ್ಎಸ್ ಮತ್ತು ಇತರ ಅಂಚುಗಳ ಫ್ಯಾಸಿಸ್ಟ್ ನೀತಿಗಳನ್ನು ಜಾರಿಗೆ ತರಲು ನಾವು (ಕೇಂದ್ರ) ಸರ್ಕಾರವನ್ನು ಅನುಮತಿಸುವುದಿಲ್ಲ. ಇಂತಹ ಹಲವು ಅಧಿಸೂಚನೆಗಳನ್ನು ನಾವು ಬಿಡುಗಡೆ ಮಾಡೋಣ, ನಾವು ಅವರನ್ನು ಅನುಸರಿಸುವುದಿಲ್ಲ “ಎಂದು ಕೇರಳ ಕೃಷಿ ಸಚಿವ ವಿ.ಎಸ್.ಸುನಿಲ್ ಕುಮಾರ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸ್ಪೂರ್ತಿ

    ಫೆಬ್ರವರಿ 26-27 ನನ್ನ ಕೊನೆಯ ದಿನ ಆಮೇಲೆ ನನ್ನ ಮೇಲೆ ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ.” ಕೋತಿರಾಜ್​ ಅವರೇ ನೀಡಿದ ಹೇಳಿಕೆ ಯಾಕೆ ಗೊತ್ತಾ.

    ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್​ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಸುದ್ದಿ

    ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

    ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…

  • ಜ್ಯೋತಿಷ್ಯ

    ಮಾತೆ ಅನ್ನಪೂರ್ಣಾ ದೇವಿಯ ಕೃಪೆಯಿಂದ ಶುಭಯೋಗ, ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…

  • ಸುದ್ದಿ

    ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

    ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…