ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರು
ಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ ಮಾಡುವುದಿಲ್ಲ. ಅಲ್ಲದೇ ಆತ ಯಾವುದೇ ಹೊರಗಿನ ಪ್ರಪಂಚಕ್ಕೆ ಮೋಹಿತನಾಗಬಾರದೆಂಬ ಭಯದಿಂದ ಶುದ್ಧೋದನನು ತನ್ನ ಮಗನಿಗಾಗಿ ಎಲ್ಲಾ ರೀತಿಯ ಸಕಲ ಸೌಕರ್ಯಗಳನ್ನು ಒಳಗೊಂಡ ವೈಭವದಿಂದ ಕೂಡಿದ ಮೂರು ಅರಮನೆಗಳನ್ನು ಕಟ್ಟಿಸುತ್ತಾನೆ. ಹೀಗಾಗಿ ಗೌತಮ ಬುದ್ಧನು ಹೊರಗಿನ ಜಗತ್ತಿನ ಅರಿವಿಲ್ಲದೆಯೇ ಅರಮನೆಯಲ್ಲಿ ಬಂಧನಕ್ಕೆ ಒಳಗಾದಂತೆ ಬದುಕುತ್ತಾನೆ.
ಆದರೆ ಬುದ್ಧನು ಯಾವುದೇ ಧಾರ್ಮಿಕವಾದ ಭೋಧನೆಗಳನ್ನು ಪಡೆದುಕೊಳ್ಳದಿದ್ದರೂ ಕೂಡ ಒಂದು ದಿನ ಜಗತ್ತೇ ಮೆಚ್ಚುವಂತಹ ಮಹಾಪುರುಷನಾಗುವ ಎಲ್ಲಾ ಲಕ್ಷಣಗಳನ್ನು ಹೊಂದಿರುತ್ತಾನೆ. ಅತ್ಯಂತ ಸರಳ ಜೀವನವನ್ನು ನಡೆಸಿದ ಈತ ನೇಪಾಳದ ಶಾಕ್ಯ ಕುಲದ ರಾಜ ಶುದ್ಧೋದನ ಹಾಗೂ ರಾಣಿ ಮಾಯಾದೇವಿಯ ಪುತ್ರನಾದರೂ ಕೂಡ ಅಲ್ಲಿಯ ಜನರಿಗೆ ಈ ವಿಚಾರದ ಬಗೆಗೆ ಮಾಹಿತಿ ಇರುವುದಿಲ್ಲ. ನೇಪಾಳದ ಲುಂಬಿನಿ ಗ್ರಾಮದಲ್ಲಿ ಜನಿಸಿದ ಗೌತಮನು ಯಶೋಧರೆಯನ್ನು ಮದುವೆಯಾಗಿ ರಾಹುಲ ಎಂಬ ಪುತ್ರನ ತಂದೆಯಾಗುತ್ತಾನೆ.
ಆಧ್ಯಾತ್ಮದತ್ತ ಒಲವು
ತಾನು ಒಬ್ಬ ಮಹಾ ಯೋಗಿಯಾಗಬೇಕು, ಜ್ಞಾನಿಯಾಗಬೇಕೆಂಬ ತುಡಿತ ಇದ್ದುದರಿಂದ ಗೌತಮ ಬುದ್ದನು ಈ ವೈಭೋಗದ ಜೀವನದಿಂದ ಮುಕ್ತಿ ಪಡೆಯಲು ಹಾತೊರೆಯುತ್ತಾನೆ. ಅಲ್ಲದೇ ತಾನಿರುವ ಅರಮನೆಯ ಹೊರಗೆ ಏನಿದೆ ಎಂಬ ಕೌತುಕವೂ ತನ್ನಲ್ಲಿ ಹುಟ್ಟಿಕೊಳ್ಳಲಾರಂಭಿಸುತ್ತದೆ. ಹೀಗಿರುವಾಗ ಒಂದು ದಿನ ತನ್ನ 29 ನೇ ವಯಸ್ಸಿನಲ್ಲಿ ವಾಯುವಿಹಾರಕ್ಕಾಗಿ ಅರಮನೆಯಿಂದ ಹೊರಗಡೆ ಬಂದಾಗ ಅಲ್ಲಿ ನಾಲ್ಕು ವಿಚಾರಗಳನ್ನು ನೋಡಿ ಜೀವನದಲ್ಲಿ ತನಗರಿವಿಲ್ಲದೆಯೇ ಮೊದಲ ಬಾರಿಗೆ ಜಿಗುಪ್ಸೆಗೊಳ್ಳುತ್ತಾನೆ.ಅದೇನೆಂದರೆ ಓರ್ವ ಮುದುಕ, ರೋಗಿ, ಶವಯಾತ್ರೆ ಹಾಗೂ ಅಲೆದಾಡುವ ಓರ್ವ ತಪಸ್ವಿಯನ್ನು ಕಂಡು ದಿವ್ಯದರ್ಶನವಾಗುತ್ತದೆ. ಈ ನಾಲ್ಕು ವಿಚಾರಗಳನ್ನು ಕಂಡ ಕೂಡಲೇ ಗೌತಮನು ಕುತೂಹಲಕ್ಕೆ ಒಳಗಾಗುತ್ತಾನೆ.ನಂತರ ಅರಮನೆಗೆ ಹಿಂತಿರುಗಿ ನಿಜ ಜೀವನದ ಬಗೆಗೆ ತಿಳಿದುಕೊಳ್ಳಲು ಗುರುಗಳ ಹುಡುಕಾಟ ಮಾಡಲು ಬಹಳಷ್ಟು ಕಷ್ಟಪಡುತ್ತಾನೆ.ಆದರೆ ಯಾರೂ ಕೂಡ ಗೌತಮನಿಗೆ ಜೀವನದ ಬಗೆಗೆ ಸತ್ಯ ವಿಚಾರಗಳನ್ನು ತಿಳಿಸದೇ ಇದ್ದುದರಿಂದ ಬೇಸರಗೊಂಡ ಬುದ್ಧ ಸಂಸಾರ ಹಾಗೂ ಅರಮನೆಯನ್ನು ತ್ಯಾಗ ಮಾಡಿ ಜೀವನದ ಬಗೆಗೆ ತನಗಿರುವ ಪ್ರಶ್ನೆಗಳಿಗೆ ಉತ್ತರ ಹುಡುಕಲು ಒಂಟಿಯಾಗಿ ತೆರಳುತ್ತಾನೆ.
ಆಧ್ಯಾತ್ಮಕ್ಕಾಗಿ
ನಾಲ್ಕು ವಿಚಾರಗಳನ್ನು ಕಂಡ ನಂತರ ಬುದ್ಧನಿಗೆ ಜೀವನದ ಸತ್ಯತೆಯನ್ನು ತಿಳಿದುಕೊಳ್ಳುವ ಕುತೂಹಲ ಆತನ ಮನಸ್ಸನ್ನು ಬೆಂಬಿಡದೆ ಕಾಡಲಾರಂಭಿಸುತ್ತದೆ.ಹೀಗಾಗಿ ಜೀವನದ ಬಗೆಗೆ ಸಾಕ್ಷಾತ್ಕಾರ ಮಾಡಲು ತಾನು ಸನ್ಯಾಸಿಯಾಗುವ ವಿಚಾರವನ್ನು ತನ್ನ ತಂದೆ ಶುದ್ಧೋದನ ಹಾಗೂ ಮಡದಿ ಯಶೋಧರೆಗೆ ತಿಳಿಸಿ ಮನ ಒಲಿಸಲು ಪ್ರಯತ್ನಿಸುತ್ತಾನೆ.ಅಲ್ಲದೇ ಆತನ ಮಗ ರಾಹುಲನು ಕೂಡ ತನ್ನ ಏಳನೇಯ ವಯಸ್ಸಿಗೆ ಸನ್ಯಾಸಿಯಾಗಲು ತಂದೆಯೊಂದಿಗೆ ತೆರಳುತ್ತಾನೆ.
ಸತ್ಯ ಶೋಧಕ್ಕಾಗಿ ಪ್ರಪಂಚ ಪರ್ಯಟನೆ
ಜೀವನದ ಸತ್ಯತೆಯನ್ನು ತಿಳಿಯುವುದಕ್ಕಾಗಿ ಬುದ್ಧನು ತನ್ನ ಎಂಭತ್ತು ವರ್ಷದವರೆಗೆ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಪರ್ಯಟನೆಯ ಜೊತೆಜೊತೆಗೆ ಸತ್ಯ ದರ್ಶನದ ಬಗೆಗೆ ಜನರಿಗೆ ಭೋಧನೆಗಳನ್ನು ನಿರಂತರವಾಗಿ ಮಾಡುತ್ತಾನೆ ಹಾಗೂ ಬಡವ ಹಾಗೂ ದುರ್ಬಲರ ಸೇವೆಯನ್ನು ಮಾಡುತ್ತಾನೆ.ವಿಮೋಚನೆಗಾಗಿ ಕೆಲಸ ಕಾರ್ಯಗಳನ್ನು ಮಾಡಬೇಕು ಹಾಗೂ ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ ಹಾಗಾಗಿ ನಾವು ಪರರಿಗೆ ಹಾಗೂ ಮಾನವೀಯತೆಗೆ ಬೆಲೆ ಕೊಡಬೇಕು ಎಂಬುವುದು ಗೌತಮ ಬುದ್ಧನು ಭೋಧಿಸಿದ ಮುಖ್ಯ ತತ್ವಗಳು.
ಬುದ್ಧನು ಇಹ ಲೋಕವನ್ನು ತ್ಯಜಿಸುವಾಗ ಎಂಭತ್ತು ವರುಷಗಳಾಗಿದ್ದರೂ ಕೂಡ ಯಾವುದೇ ದಣಿವಿಲ್ಲದೇ ಸತ್ಯ ದರ್ಶನಕ್ಕಾಗಿ ನಿರಂತವಾದ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಕೊನೆಗೆ ತನ್ನ ಅನುಯಾಯಿಗಳಿಗೆ ಈ ಜಗತ್ತಿನಲ್ಲಿ ಯಾವುದೂ ಶಾಶ್ವತ ಅಲ್ಲ.ಹಾಗಾಗಿ ನಿಮ್ಮ ವಿಮೋಚನೆಗಾಗಿ ಮಾತ್ರ ಕೆಲಸ ಮಾಡಿ ಎಂಬ ಕೊನೆಯ ನುಡಿಗಳನ್ನು ನೀಡಿ ಲೋಕದಲ್ಲಿ ಅಜರಾಮರನಾಗುತ್ತಾನೆ.
Published by : MAYOON N
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.