inspirational

ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

249

ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರು
ಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ ಮಾಡುವುದಿಲ್ಲ. ಅಲ್ಲದೇ ಆತ ಯಾವುದೇ ಹೊರಗಿನ ಪ್ರಪಂಚಕ್ಕೆ ಮೋಹಿತನಾಗಬಾರದೆಂಬ ಭಯದಿಂದ ಶುದ್ಧೋದನನು ತನ್ನ ಮಗನಿಗಾಗಿ ಎಲ್ಲಾ ರೀತಿಯ ಸಕಲ ಸೌಕರ್ಯಗಳನ್ನು ಒಳಗೊಂಡ ವೈಭವದಿಂದ ಕೂಡಿದ ಮೂರು ಅರಮನೆಗಳನ್ನು ಕಟ್ಟಿಸುತ್ತಾನೆ. ಹೀಗಾಗಿ ಗೌತಮ ಬುದ್ಧನು ಹೊರಗಿನ ಜಗತ್ತಿನ ಅರಿವಿಲ್ಲದೆಯೇ ಅರಮನೆಯಲ್ಲಿ ಬಂಧನಕ್ಕೆ ಒಳಗಾದಂತೆ ಬದುಕುತ್ತಾನೆ.


ಆದರೆ ಬುದ್ಧನು ಯಾವುದೇ ಧಾರ್ಮಿಕವಾದ ಭೋಧನೆಗಳನ್ನು ಪಡೆದುಕೊಳ್ಳದಿದ್ದರೂ ಕೂಡ ಒಂದು ದಿನ ಜಗತ್ತೇ ಮೆಚ್ಚುವಂತಹ ಮಹಾಪುರುಷನಾಗುವ ಎಲ್ಲಾ ಲಕ್ಷಣಗಳನ್ನು ಹೊಂದಿರುತ್ತಾನೆ. ಅತ್ಯಂತ ಸರಳ ಜೀವನವನ್ನು ನಡೆಸಿದ ಈತ ನೇಪಾಳದ ಶಾಕ್ಯ ಕುಲದ ರಾಜ ಶುದ್ಧೋದನ ಹಾಗೂ ರಾಣಿ ಮಾಯಾದೇವಿಯ ಪುತ್ರನಾದರೂ ಕೂಡ ಅಲ್ಲಿಯ ಜನರಿಗೆ ಈ ವಿಚಾರದ ಬಗೆಗೆ ಮಾಹಿತಿ ಇರುವುದಿಲ್ಲ. ನೇಪಾಳದ ಲುಂಬಿನಿ ಗ್ರಾಮದಲ್ಲಿ ಜನಿಸಿದ ಗೌತಮನು ಯಶೋಧರೆಯನ್ನು ಮದುವೆಯಾಗಿ ರಾಹುಲ ಎಂಬ ಪುತ್ರನ ತಂದೆಯಾಗುತ್ತಾನೆ.

ಆಧ್ಯಾತ್ಮದತ್ತ ಒಲವು
ತಾನು ಒಬ್ಬ ಮಹಾ ಯೋಗಿಯಾಗಬೇಕು, ಜ್ಞಾನಿಯಾಗಬೇಕೆಂಬ ತುಡಿತ ಇದ್ದುದರಿಂದ ಗೌತಮ ಬುದ್ದನು ಈ ವೈಭೋಗದ ಜೀವನದಿಂದ ಮುಕ್ತಿ‌ ಪಡೆಯಲು ಹಾತೊರೆಯುತ್ತಾನೆ. ಅಲ್ಲದೇ ತಾನಿರುವ ಅರಮನೆಯ ಹೊರಗೆ ಏನಿದೆ ಎಂಬ ಕೌತುಕ‌ವೂ ತನ್ನಲ್ಲಿ ಹುಟ್ಟಿಕೊಳ್ಳಲಾರಂಭಿಸುತ್ತದೆ. ಹೀಗಿರುವಾಗ ಒಂದು ದಿನ ತನ್ನ 29 ನೇ ವಯಸ್ಸಿನಲ್ಲಿ ವಾಯುವಿಹಾರಕ್ಕಾಗಿ ಅರಮನೆಯಿಂದ ಹೊರಗಡೆ ಬಂದಾಗ ಅಲ್ಲಿ ನಾಲ್ಕು ವಿಚಾರಗಳನ್ನು ನೋಡಿ ಜೀವನದಲ್ಲಿ ತನಗರಿವಿಲ್ಲದೆಯೇ ಮೊದಲ ಬಾರಿಗೆ ಜಿಗುಪ್ಸೆಗೊಳ್ಳುತ್ತಾನೆ.ಅದೇನೆಂದರೆ ಓರ್ವ ಮುದುಕ, ರೋಗಿ, ಶವಯಾತ್ರೆ ಹಾಗೂ ಅಲೆದಾಡುವ ಓರ್ವ ತಪಸ್ವಿಯನ್ನು ಕಂಡು ದಿವ್ಯದರ್ಶನವಾಗುತ್ತದೆ. ಈ ನಾಲ್ಕು ವಿಚಾರಗಳನ್ನು ಕಂಡ ಕೂಡಲೇ ಗೌತಮನು ಕುತೂಹಲಕ್ಕೆ ಒಳಗಾಗುತ್ತಾನೆ.ನಂತರ ಅರಮನೆಗೆ ಹಿಂತಿರುಗಿ ನಿಜ ಜೀವನದ ಬಗೆಗೆ ತಿಳಿದುಕೊಳ್ಳಲು ಗುರುಗಳ ಹುಡುಕಾಟ ಮಾಡಲು ಬಹಳಷ್ಟು ಕಷ್ಟಪಡುತ್ತಾನೆ.ಆದರೆ ಯಾರೂ ಕೂಡ ಗೌತಮನಿಗೆ ಜೀವನದ ಬಗೆಗೆ ಸತ್ಯ ವಿಚಾರಗಳನ್ನು ತಿಳಿಸದೇ ಇದ್ದುದರಿಂದ ಬೇಸರಗೊಂಡ ಬುದ್ಧ ಸಂಸಾರ ಹಾಗೂ ಅರಮನೆಯನ್ನು ತ್ಯಾಗ ಮಾಡಿ ಜೀವನದ ಬಗೆಗೆ ತನಗಿರುವ ಪ್ರಶ್ನೆಗಳಿಗೆ ಉತ್ತರ ಹುಡುಕಲು ಒಂಟಿಯಾಗಿ ತೆರಳುತ್ತಾನೆ.

ಆಧ್ಯಾತ್ಮಕ್ಕಾಗಿ

 ನಾಲ್ಕು ವಿಚಾರಗಳನ್ನು ಕಂಡ ನಂತರ ಬುದ್ಧನಿಗೆ ಜೀವನದ ಸತ್ಯತೆಯನ್ನು ತಿಳಿದುಕೊಳ್ಳುವ ಕುತೂಹಲ ಆತನ ಮನಸ್ಸನ್ನು ಬೆಂಬಿಡದೆ ಕಾಡಲಾರಂಭಿಸುತ್ತದೆ.ಹೀಗಾಗಿ ಜೀವನದ ಬಗೆಗೆ ಸಾಕ್ಷಾತ್ಕಾರ ಮಾಡಲು ತಾನು ಸನ್ಯಾಸಿಯಾಗುವ ವಿಚಾರವನ್ನು ತನ್ನ ತಂದೆ ಶುದ್ಧೋದನ ಹಾಗೂ ಮಡದಿ ಯಶೋಧರೆಗೆ ತಿಳಿಸಿ ಮನ‌ ಒಲಿಸಲು ಪ್ರಯತ್ನಿಸುತ್ತಾನೆ.ಅಲ್ಲದೇ ಆತನ ಮಗ ರಾಹುಲನು ಕೂಡ ತನ್ನ ಏಳನೇಯ ವಯಸ್ಸಿಗೆ ಸನ್ಯಾಸಿಯಾಗಲು ತಂದೆಯೊಂದಿಗೆ ತೆರಳುತ್ತಾನೆ.

ಸತ್ಯ ಶೋಧಕ್ಕಾಗಿ ಪ್ರಪಂಚ ಪರ್ಯಟನೆ
ಜೀವನದ ಸತ್ಯತೆಯನ್ನು ತಿಳಿಯುವುದಕ್ಕಾಗಿ ಬುದ್ಧನು ತನ್ನ ಎಂಭತ್ತು ವರ್ಷದವರೆಗೆ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಪರ್ಯಟನೆಯ ಜೊತೆಜೊತೆಗೆ ಸತ್ಯ ದರ್ಶನದ ಬಗೆಗೆ ಜನರಿಗೆ ಭೋಧನೆಗಳನ್ನು ನಿರಂತರವಾಗಿ ಮಾಡುತ್ತಾನೆ ಹಾಗೂ ಬಡವ ಹಾಗೂ ದುರ್ಬಲರ ಸೇವೆಯನ್ನು ಮಾಡುತ್ತಾನೆ.ವಿಮೋಚನೆಗಾಗಿ ಕೆಲಸ ಕಾರ್ಯಗಳನ್ನು ಮಾಡಬೇಕು ಹಾಗೂ ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ ಹಾಗಾಗಿ ನಾವು ಪರರಿಗೆ ಹಾಗೂ ಮಾನವೀಯತೆಗೆ ಬೆಲೆ ಕೊಡಬೇಕು ಎಂಬುವುದು ಗೌತಮ ಬುದ್ಧನು ಭೋಧಿಸಿದ ಮುಖ್ಯ ತತ್ವಗಳು.

ಬುದ್ಧನು ಇಹ ಲೋಕವನ್ನು ತ್ಯಜಿಸುವಾಗ ಎಂಭತ್ತು ವರುಷಗಳಾಗಿದ್ದರೂ ಕೂಡ ಯಾವುದೇ ದಣಿವಿಲ್ಲದೇ ಸತ್ಯ ದರ್ಶನಕ್ಕಾಗಿ ನಿರಂತವಾದ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಕೊನೆಗೆ ತನ್ನ ಅನುಯಾಯಿಗಳಿಗೆ ಈ ಜಗತ್ತಿನಲ್ಲಿ ಯಾವುದೂ ಶಾಶ್ವತ ಅಲ್ಲ.ಹಾಗಾಗಿ ನಿಮ್ಮ ವಿಮೋಚನೆಗಾಗಿ‌ ಮಾತ್ರ ಕೆಲಸ ಮಾಡಿ ಎಂಬ ಕೊನೆಯ ನುಡಿಗಳನ್ನು ನೀಡಿ ಲೋಕದಲ್ಲಿ ಅಜರಾಮರನಾಗುತ್ತಾನೆ.

Published by : MAYOON N

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಈ ನಟಿಯ ಮದುವೆಗೆ ಬೆತ್ತಲೆಯಾಗಿ ಹೋದ್ರೆ ಮಾತ್ರ ಪ್ರವೇಶವಂತೆ..!

    ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…

  • ಸಿನಿಮಾ

    ಡೇಟ್ ಫಿಕ್ಸ್ ಆಯ್ತು ಜೂನಿಯರ್ ರಾಕಿಂಗ್ ಸ್ಟಾರ್ ಆಗಮನಕ್ಕೆ..!

    ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ಸಿನಿಮಾ

    ಪಡ್ಡೆ ಹುಡುಗರ ನಿದ್ದೆ ಕದ್ದಿರೋ, ಕಣ್ ಸನ್ನೆ ನೋಟದ ಈ ಹುಡುಗಿಯ ಕತೆ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

    ಒಂದೇ ಒಂದು ವಿಡಿಯೋ ಕ್ಲಿಪ್‌ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

  • ಸುದ್ದಿ

    ಕಂಡಕ್ಟರ್‌ನಿಂದ ಬಸ್ಸಲ್ಲೇ ಸಂಗೀತ ಸುರಿಮಳೆ – ಯಾದಗಿರಿಯ ಪರಶುರಾಮ್ ಈಗ ಪಬ್ಲಿಕ್ ಹೀರೋ……

    ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…