News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

328

ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರು
ಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ ಮಾಡುವುದಿಲ್ಲ. ಅಲ್ಲದೇ ಆತ ಯಾವುದೇ ಹೊರಗಿನ ಪ್ರಪಂಚಕ್ಕೆ ಮೋಹಿತನಾಗಬಾರದೆಂಬ ಭಯದಿಂದ ಶುದ್ಧೋದನನು ತನ್ನ ಮಗನಿಗಾಗಿ ಎಲ್ಲಾ ರೀತಿಯ ಸಕಲ ಸೌಕರ್ಯಗಳನ್ನು ಒಳಗೊಂಡ ವೈಭವದಿಂದ ಕೂಡಿದ ಮೂರು ಅರಮನೆಗಳನ್ನು ಕಟ್ಟಿಸುತ್ತಾನೆ. ಹೀಗಾಗಿ ಗೌತಮ ಬುದ್ಧನು ಹೊರಗಿನ ಜಗತ್ತಿನ ಅರಿವಿಲ್ಲದೆಯೇ ಅರಮನೆಯಲ್ಲಿ ಬಂಧನಕ್ಕೆ ಒಳಗಾದಂತೆ ಬದುಕುತ್ತಾನೆ.


ಆದರೆ ಬುದ್ಧನು ಯಾವುದೇ ಧಾರ್ಮಿಕವಾದ ಭೋಧನೆಗಳನ್ನು ಪಡೆದುಕೊಳ್ಳದಿದ್ದರೂ ಕೂಡ ಒಂದು ದಿನ ಜಗತ್ತೇ ಮೆಚ್ಚುವಂತಹ ಮಹಾಪುರುಷನಾಗುವ ಎಲ್ಲಾ ಲಕ್ಷಣಗಳನ್ನು ಹೊಂದಿರುತ್ತಾನೆ. ಅತ್ಯಂತ ಸರಳ ಜೀವನವನ್ನು ನಡೆಸಿದ ಈತ ನೇಪಾಳದ ಶಾಕ್ಯ ಕುಲದ ರಾಜ ಶುದ್ಧೋದನ ಹಾಗೂ ರಾಣಿ ಮಾಯಾದೇವಿಯ ಪುತ್ರನಾದರೂ ಕೂಡ ಅಲ್ಲಿಯ ಜನರಿಗೆ ಈ ವಿಚಾರದ ಬಗೆಗೆ ಮಾಹಿತಿ ಇರುವುದಿಲ್ಲ. ನೇಪಾಳದ ಲುಂಬಿನಿ ಗ್ರಾಮದಲ್ಲಿ ಜನಿಸಿದ ಗೌತಮನು ಯಶೋಧರೆಯನ್ನು ಮದುವೆಯಾಗಿ ರಾಹುಲ ಎಂಬ ಪುತ್ರನ ತಂದೆಯಾಗುತ್ತಾನೆ.

ಆಧ್ಯಾತ್ಮದತ್ತ ಒಲವು
ತಾನು ಒಬ್ಬ ಮಹಾ ಯೋಗಿಯಾಗಬೇಕು, ಜ್ಞಾನಿಯಾಗಬೇಕೆಂಬ ತುಡಿತ ಇದ್ದುದರಿಂದ ಗೌತಮ ಬುದ್ದನು ಈ ವೈಭೋಗದ ಜೀವನದಿಂದ ಮುಕ್ತಿ‌ ಪಡೆಯಲು ಹಾತೊರೆಯುತ್ತಾನೆ. ಅಲ್ಲದೇ ತಾನಿರುವ ಅರಮನೆಯ ಹೊರಗೆ ಏನಿದೆ ಎಂಬ ಕೌತುಕ‌ವೂ ತನ್ನಲ್ಲಿ ಹುಟ್ಟಿಕೊಳ್ಳಲಾರಂಭಿಸುತ್ತದೆ. ಹೀಗಿರುವಾಗ ಒಂದು ದಿನ ತನ್ನ 29 ನೇ ವಯಸ್ಸಿನಲ್ಲಿ ವಾಯುವಿಹಾರಕ್ಕಾಗಿ ಅರಮನೆಯಿಂದ ಹೊರಗಡೆ ಬಂದಾಗ ಅಲ್ಲಿ ನಾಲ್ಕು ವಿಚಾರಗಳನ್ನು ನೋಡಿ ಜೀವನದಲ್ಲಿ ತನಗರಿವಿಲ್ಲದೆಯೇ ಮೊದಲ ಬಾರಿಗೆ ಜಿಗುಪ್ಸೆಗೊಳ್ಳುತ್ತಾನೆ.ಅದೇನೆಂದರೆ ಓರ್ವ ಮುದುಕ, ರೋಗಿ, ಶವಯಾತ್ರೆ ಹಾಗೂ ಅಲೆದಾಡುವ ಓರ್ವ ತಪಸ್ವಿಯನ್ನು ಕಂಡು ದಿವ್ಯದರ್ಶನವಾಗುತ್ತದೆ. ಈ ನಾಲ್ಕು ವಿಚಾರಗಳನ್ನು ಕಂಡ ಕೂಡಲೇ ಗೌತಮನು ಕುತೂಹಲಕ್ಕೆ ಒಳಗಾಗುತ್ತಾನೆ.ನಂತರ ಅರಮನೆಗೆ ಹಿಂತಿರುಗಿ ನಿಜ ಜೀವನದ ಬಗೆಗೆ ತಿಳಿದುಕೊಳ್ಳಲು ಗುರುಗಳ ಹುಡುಕಾಟ ಮಾಡಲು ಬಹಳಷ್ಟು ಕಷ್ಟಪಡುತ್ತಾನೆ.ಆದರೆ ಯಾರೂ ಕೂಡ ಗೌತಮನಿಗೆ ಜೀವನದ ಬಗೆಗೆ ಸತ್ಯ ವಿಚಾರಗಳನ್ನು ತಿಳಿಸದೇ ಇದ್ದುದರಿಂದ ಬೇಸರಗೊಂಡ ಬುದ್ಧ ಸಂಸಾರ ಹಾಗೂ ಅರಮನೆಯನ್ನು ತ್ಯಾಗ ಮಾಡಿ ಜೀವನದ ಬಗೆಗೆ ತನಗಿರುವ ಪ್ರಶ್ನೆಗಳಿಗೆ ಉತ್ತರ ಹುಡುಕಲು ಒಂಟಿಯಾಗಿ ತೆರಳುತ್ತಾನೆ.

ಆಧ್ಯಾತ್ಮಕ್ಕಾಗಿ

 ನಾಲ್ಕು ವಿಚಾರಗಳನ್ನು ಕಂಡ ನಂತರ ಬುದ್ಧನಿಗೆ ಜೀವನದ ಸತ್ಯತೆಯನ್ನು ತಿಳಿದುಕೊಳ್ಳುವ ಕುತೂಹಲ ಆತನ ಮನಸ್ಸನ್ನು ಬೆಂಬಿಡದೆ ಕಾಡಲಾರಂಭಿಸುತ್ತದೆ.ಹೀಗಾಗಿ ಜೀವನದ ಬಗೆಗೆ ಸಾಕ್ಷಾತ್ಕಾರ ಮಾಡಲು ತಾನು ಸನ್ಯಾಸಿಯಾಗುವ ವಿಚಾರವನ್ನು ತನ್ನ ತಂದೆ ಶುದ್ಧೋದನ ಹಾಗೂ ಮಡದಿ ಯಶೋಧರೆಗೆ ತಿಳಿಸಿ ಮನ‌ ಒಲಿಸಲು ಪ್ರಯತ್ನಿಸುತ್ತಾನೆ.ಅಲ್ಲದೇ ಆತನ ಮಗ ರಾಹುಲನು ಕೂಡ ತನ್ನ ಏಳನೇಯ ವಯಸ್ಸಿಗೆ ಸನ್ಯಾಸಿಯಾಗಲು ತಂದೆಯೊಂದಿಗೆ ತೆರಳುತ್ತಾನೆ.

ಸತ್ಯ ಶೋಧಕ್ಕಾಗಿ ಪ್ರಪಂಚ ಪರ್ಯಟನೆ
ಜೀವನದ ಸತ್ಯತೆಯನ್ನು ತಿಳಿಯುವುದಕ್ಕಾಗಿ ಬುದ್ಧನು ತನ್ನ ಎಂಭತ್ತು ವರ್ಷದವರೆಗೆ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಪರ್ಯಟನೆಯ ಜೊತೆಜೊತೆಗೆ ಸತ್ಯ ದರ್ಶನದ ಬಗೆಗೆ ಜನರಿಗೆ ಭೋಧನೆಗಳನ್ನು ನಿರಂತರವಾಗಿ ಮಾಡುತ್ತಾನೆ ಹಾಗೂ ಬಡವ ಹಾಗೂ ದುರ್ಬಲರ ಸೇವೆಯನ್ನು ಮಾಡುತ್ತಾನೆ.ವಿಮೋಚನೆಗಾಗಿ ಕೆಲಸ ಕಾರ್ಯಗಳನ್ನು ಮಾಡಬೇಕು ಹಾಗೂ ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ ಹಾಗಾಗಿ ನಾವು ಪರರಿಗೆ ಹಾಗೂ ಮಾನವೀಯತೆಗೆ ಬೆಲೆ ಕೊಡಬೇಕು ಎಂಬುವುದು ಗೌತಮ ಬುದ್ಧನು ಭೋಧಿಸಿದ ಮುಖ್ಯ ತತ್ವಗಳು.

ಬುದ್ಧನು ಇಹ ಲೋಕವನ್ನು ತ್ಯಜಿಸುವಾಗ ಎಂಭತ್ತು ವರುಷಗಳಾಗಿದ್ದರೂ ಕೂಡ ಯಾವುದೇ ದಣಿವಿಲ್ಲದೇ ಸತ್ಯ ದರ್ಶನಕ್ಕಾಗಿ ನಿರಂತವಾದ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಕೊನೆಗೆ ತನ್ನ ಅನುಯಾಯಿಗಳಿಗೆ ಈ ಜಗತ್ತಿನಲ್ಲಿ ಯಾವುದೂ ಶಾಶ್ವತ ಅಲ್ಲ.ಹಾಗಾಗಿ ನಿಮ್ಮ ವಿಮೋಚನೆಗಾಗಿ‌ ಮಾತ್ರ ಕೆಲಸ ಮಾಡಿ ಎಂಬ ಕೊನೆಯ ನುಡಿಗಳನ್ನು ನೀಡಿ ಲೋಕದಲ್ಲಿ ಅಜರಾಮರನಾಗುತ್ತಾನೆ.

Published by : MAYOON N

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…

  • ಆಧ್ಯಾತ್ಮ

    ಹೆಣ್ಣುಮಕ್ಕಳು ತಮ್ಮ ಪತಿಯ ಒಳಿತಗಾಗಿ ಮಾಡುವ ವ್ರತವಿದು!ಈ ವ್ರತದ ಹಿನ್ನಲೆ ಏನು ಗೊತ್ತಾ???

    ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ನೀವು ಇವುಗಳನ್ನು ನೋಡಲೆಬೇಡಿ!ನೋಡಿದ್ರೆ ದಾರಿದ್ರ ಖಂಡಿತ…

    ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…