News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

328

ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರು
ಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ ಮಾಡುವುದಿಲ್ಲ. ಅಲ್ಲದೇ ಆತ ಯಾವುದೇ ಹೊರಗಿನ ಪ್ರಪಂಚಕ್ಕೆ ಮೋಹಿತನಾಗಬಾರದೆಂಬ ಭಯದಿಂದ ಶುದ್ಧೋದನನು ತನ್ನ ಮಗನಿಗಾಗಿ ಎಲ್ಲಾ ರೀತಿಯ ಸಕಲ ಸೌಕರ್ಯಗಳನ್ನು ಒಳಗೊಂಡ ವೈಭವದಿಂದ ಕೂಡಿದ ಮೂರು ಅರಮನೆಗಳನ್ನು ಕಟ್ಟಿಸುತ್ತಾನೆ. ಹೀಗಾಗಿ ಗೌತಮ ಬುದ್ಧನು ಹೊರಗಿನ ಜಗತ್ತಿನ ಅರಿವಿಲ್ಲದೆಯೇ ಅರಮನೆಯಲ್ಲಿ ಬಂಧನಕ್ಕೆ ಒಳಗಾದಂತೆ ಬದುಕುತ್ತಾನೆ.


ಆದರೆ ಬುದ್ಧನು ಯಾವುದೇ ಧಾರ್ಮಿಕವಾದ ಭೋಧನೆಗಳನ್ನು ಪಡೆದುಕೊಳ್ಳದಿದ್ದರೂ ಕೂಡ ಒಂದು ದಿನ ಜಗತ್ತೇ ಮೆಚ್ಚುವಂತಹ ಮಹಾಪುರುಷನಾಗುವ ಎಲ್ಲಾ ಲಕ್ಷಣಗಳನ್ನು ಹೊಂದಿರುತ್ತಾನೆ. ಅತ್ಯಂತ ಸರಳ ಜೀವನವನ್ನು ನಡೆಸಿದ ಈತ ನೇಪಾಳದ ಶಾಕ್ಯ ಕುಲದ ರಾಜ ಶುದ್ಧೋದನ ಹಾಗೂ ರಾಣಿ ಮಾಯಾದೇವಿಯ ಪುತ್ರನಾದರೂ ಕೂಡ ಅಲ್ಲಿಯ ಜನರಿಗೆ ಈ ವಿಚಾರದ ಬಗೆಗೆ ಮಾಹಿತಿ ಇರುವುದಿಲ್ಲ. ನೇಪಾಳದ ಲುಂಬಿನಿ ಗ್ರಾಮದಲ್ಲಿ ಜನಿಸಿದ ಗೌತಮನು ಯಶೋಧರೆಯನ್ನು ಮದುವೆಯಾಗಿ ರಾಹುಲ ಎಂಬ ಪುತ್ರನ ತಂದೆಯಾಗುತ್ತಾನೆ.

ಆಧ್ಯಾತ್ಮದತ್ತ ಒಲವು
ತಾನು ಒಬ್ಬ ಮಹಾ ಯೋಗಿಯಾಗಬೇಕು, ಜ್ಞಾನಿಯಾಗಬೇಕೆಂಬ ತುಡಿತ ಇದ್ದುದರಿಂದ ಗೌತಮ ಬುದ್ದನು ಈ ವೈಭೋಗದ ಜೀವನದಿಂದ ಮುಕ್ತಿ‌ ಪಡೆಯಲು ಹಾತೊರೆಯುತ್ತಾನೆ. ಅಲ್ಲದೇ ತಾನಿರುವ ಅರಮನೆಯ ಹೊರಗೆ ಏನಿದೆ ಎಂಬ ಕೌತುಕ‌ವೂ ತನ್ನಲ್ಲಿ ಹುಟ್ಟಿಕೊಳ್ಳಲಾರಂಭಿಸುತ್ತದೆ. ಹೀಗಿರುವಾಗ ಒಂದು ದಿನ ತನ್ನ 29 ನೇ ವಯಸ್ಸಿನಲ್ಲಿ ವಾಯುವಿಹಾರಕ್ಕಾಗಿ ಅರಮನೆಯಿಂದ ಹೊರಗಡೆ ಬಂದಾಗ ಅಲ್ಲಿ ನಾಲ್ಕು ವಿಚಾರಗಳನ್ನು ನೋಡಿ ಜೀವನದಲ್ಲಿ ತನಗರಿವಿಲ್ಲದೆಯೇ ಮೊದಲ ಬಾರಿಗೆ ಜಿಗುಪ್ಸೆಗೊಳ್ಳುತ್ತಾನೆ.ಅದೇನೆಂದರೆ ಓರ್ವ ಮುದುಕ, ರೋಗಿ, ಶವಯಾತ್ರೆ ಹಾಗೂ ಅಲೆದಾಡುವ ಓರ್ವ ತಪಸ್ವಿಯನ್ನು ಕಂಡು ದಿವ್ಯದರ್ಶನವಾಗುತ್ತದೆ. ಈ ನಾಲ್ಕು ವಿಚಾರಗಳನ್ನು ಕಂಡ ಕೂಡಲೇ ಗೌತಮನು ಕುತೂಹಲಕ್ಕೆ ಒಳಗಾಗುತ್ತಾನೆ.ನಂತರ ಅರಮನೆಗೆ ಹಿಂತಿರುಗಿ ನಿಜ ಜೀವನದ ಬಗೆಗೆ ತಿಳಿದುಕೊಳ್ಳಲು ಗುರುಗಳ ಹುಡುಕಾಟ ಮಾಡಲು ಬಹಳಷ್ಟು ಕಷ್ಟಪಡುತ್ತಾನೆ.ಆದರೆ ಯಾರೂ ಕೂಡ ಗೌತಮನಿಗೆ ಜೀವನದ ಬಗೆಗೆ ಸತ್ಯ ವಿಚಾರಗಳನ್ನು ತಿಳಿಸದೇ ಇದ್ದುದರಿಂದ ಬೇಸರಗೊಂಡ ಬುದ್ಧ ಸಂಸಾರ ಹಾಗೂ ಅರಮನೆಯನ್ನು ತ್ಯಾಗ ಮಾಡಿ ಜೀವನದ ಬಗೆಗೆ ತನಗಿರುವ ಪ್ರಶ್ನೆಗಳಿಗೆ ಉತ್ತರ ಹುಡುಕಲು ಒಂಟಿಯಾಗಿ ತೆರಳುತ್ತಾನೆ.

ಆಧ್ಯಾತ್ಮಕ್ಕಾಗಿ

 ನಾಲ್ಕು ವಿಚಾರಗಳನ್ನು ಕಂಡ ನಂತರ ಬುದ್ಧನಿಗೆ ಜೀವನದ ಸತ್ಯತೆಯನ್ನು ತಿಳಿದುಕೊಳ್ಳುವ ಕುತೂಹಲ ಆತನ ಮನಸ್ಸನ್ನು ಬೆಂಬಿಡದೆ ಕಾಡಲಾರಂಭಿಸುತ್ತದೆ.ಹೀಗಾಗಿ ಜೀವನದ ಬಗೆಗೆ ಸಾಕ್ಷಾತ್ಕಾರ ಮಾಡಲು ತಾನು ಸನ್ಯಾಸಿಯಾಗುವ ವಿಚಾರವನ್ನು ತನ್ನ ತಂದೆ ಶುದ್ಧೋದನ ಹಾಗೂ ಮಡದಿ ಯಶೋಧರೆಗೆ ತಿಳಿಸಿ ಮನ‌ ಒಲಿಸಲು ಪ್ರಯತ್ನಿಸುತ್ತಾನೆ.ಅಲ್ಲದೇ ಆತನ ಮಗ ರಾಹುಲನು ಕೂಡ ತನ್ನ ಏಳನೇಯ ವಯಸ್ಸಿಗೆ ಸನ್ಯಾಸಿಯಾಗಲು ತಂದೆಯೊಂದಿಗೆ ತೆರಳುತ್ತಾನೆ.

ಸತ್ಯ ಶೋಧಕ್ಕಾಗಿ ಪ್ರಪಂಚ ಪರ್ಯಟನೆ
ಜೀವನದ ಸತ್ಯತೆಯನ್ನು ತಿಳಿಯುವುದಕ್ಕಾಗಿ ಬುದ್ಧನು ತನ್ನ ಎಂಭತ್ತು ವರ್ಷದವರೆಗೆ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಪರ್ಯಟನೆಯ ಜೊತೆಜೊತೆಗೆ ಸತ್ಯ ದರ್ಶನದ ಬಗೆಗೆ ಜನರಿಗೆ ಭೋಧನೆಗಳನ್ನು ನಿರಂತರವಾಗಿ ಮಾಡುತ್ತಾನೆ ಹಾಗೂ ಬಡವ ಹಾಗೂ ದುರ್ಬಲರ ಸೇವೆಯನ್ನು ಮಾಡುತ್ತಾನೆ.ವಿಮೋಚನೆಗಾಗಿ ಕೆಲಸ ಕಾರ್ಯಗಳನ್ನು ಮಾಡಬೇಕು ಹಾಗೂ ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ ಹಾಗಾಗಿ ನಾವು ಪರರಿಗೆ ಹಾಗೂ ಮಾನವೀಯತೆಗೆ ಬೆಲೆ ಕೊಡಬೇಕು ಎಂಬುವುದು ಗೌತಮ ಬುದ್ಧನು ಭೋಧಿಸಿದ ಮುಖ್ಯ ತತ್ವಗಳು.

ಬುದ್ಧನು ಇಹ ಲೋಕವನ್ನು ತ್ಯಜಿಸುವಾಗ ಎಂಭತ್ತು ವರುಷಗಳಾಗಿದ್ದರೂ ಕೂಡ ಯಾವುದೇ ದಣಿವಿಲ್ಲದೇ ಸತ್ಯ ದರ್ಶನಕ್ಕಾಗಿ ನಿರಂತವಾದ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಕೊನೆಗೆ ತನ್ನ ಅನುಯಾಯಿಗಳಿಗೆ ಈ ಜಗತ್ತಿನಲ್ಲಿ ಯಾವುದೂ ಶಾಶ್ವತ ಅಲ್ಲ.ಹಾಗಾಗಿ ನಿಮ್ಮ ವಿಮೋಚನೆಗಾಗಿ‌ ಮಾತ್ರ ಕೆಲಸ ಮಾಡಿ ಎಂಬ ಕೊನೆಯ ನುಡಿಗಳನ್ನು ನೀಡಿ ಲೋಕದಲ್ಲಿ ಅಜರಾಮರನಾಗುತ್ತಾನೆ.

Published by : MAYOON N

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜುಲೈ 2ಕ್ಕೆ ಸೂರ್ಯ ಗ್ರಹಣ; ಕಡ್ಡಾಯವಾಗಿ ಅನುಸರಿಸಬೇಕಾದ ನಿಯಮಗಳೇನು?

    ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…

  • Sports

    ಶಿವಂದುಬೆಗೆ ಕೋವಿಡ್-19

    ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ  

    Loading

  • ಜ್ಯೋತಿಷ್ಯ

    ದೇವರು ಕನಸಿನಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

    ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…

  • ಜೀವನಶೈಲಿ

    ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಿದ್ರೆ ಏನಾಗುತ್ತೆ..?ಅವರಿಗಿಂತ ಚಿಕ್ಕವರನ್ನು ಮದುವೆ ಆಗಬಹುದೇ..?ತಿಳಿಯಲು ಈ ಲೇಖನ ಓದಿ…

    ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.