News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

327

ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರು
ಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ ಮಾಡುವುದಿಲ್ಲ. ಅಲ್ಲದೇ ಆತ ಯಾವುದೇ ಹೊರಗಿನ ಪ್ರಪಂಚಕ್ಕೆ ಮೋಹಿತನಾಗಬಾರದೆಂಬ ಭಯದಿಂದ ಶುದ್ಧೋದನನು ತನ್ನ ಮಗನಿಗಾಗಿ ಎಲ್ಲಾ ರೀತಿಯ ಸಕಲ ಸೌಕರ್ಯಗಳನ್ನು ಒಳಗೊಂಡ ವೈಭವದಿಂದ ಕೂಡಿದ ಮೂರು ಅರಮನೆಗಳನ್ನು ಕಟ್ಟಿಸುತ್ತಾನೆ. ಹೀಗಾಗಿ ಗೌತಮ ಬುದ್ಧನು ಹೊರಗಿನ ಜಗತ್ತಿನ ಅರಿವಿಲ್ಲದೆಯೇ ಅರಮನೆಯಲ್ಲಿ ಬಂಧನಕ್ಕೆ ಒಳಗಾದಂತೆ ಬದುಕುತ್ತಾನೆ.


ಆದರೆ ಬುದ್ಧನು ಯಾವುದೇ ಧಾರ್ಮಿಕವಾದ ಭೋಧನೆಗಳನ್ನು ಪಡೆದುಕೊಳ್ಳದಿದ್ದರೂ ಕೂಡ ಒಂದು ದಿನ ಜಗತ್ತೇ ಮೆಚ್ಚುವಂತಹ ಮಹಾಪುರುಷನಾಗುವ ಎಲ್ಲಾ ಲಕ್ಷಣಗಳನ್ನು ಹೊಂದಿರುತ್ತಾನೆ. ಅತ್ಯಂತ ಸರಳ ಜೀವನವನ್ನು ನಡೆಸಿದ ಈತ ನೇಪಾಳದ ಶಾಕ್ಯ ಕುಲದ ರಾಜ ಶುದ್ಧೋದನ ಹಾಗೂ ರಾಣಿ ಮಾಯಾದೇವಿಯ ಪುತ್ರನಾದರೂ ಕೂಡ ಅಲ್ಲಿಯ ಜನರಿಗೆ ಈ ವಿಚಾರದ ಬಗೆಗೆ ಮಾಹಿತಿ ಇರುವುದಿಲ್ಲ. ನೇಪಾಳದ ಲುಂಬಿನಿ ಗ್ರಾಮದಲ್ಲಿ ಜನಿಸಿದ ಗೌತಮನು ಯಶೋಧರೆಯನ್ನು ಮದುವೆಯಾಗಿ ರಾಹುಲ ಎಂಬ ಪುತ್ರನ ತಂದೆಯಾಗುತ್ತಾನೆ.

ಆಧ್ಯಾತ್ಮದತ್ತ ಒಲವು
ತಾನು ಒಬ್ಬ ಮಹಾ ಯೋಗಿಯಾಗಬೇಕು, ಜ್ಞಾನಿಯಾಗಬೇಕೆಂಬ ತುಡಿತ ಇದ್ದುದರಿಂದ ಗೌತಮ ಬುದ್ದನು ಈ ವೈಭೋಗದ ಜೀವನದಿಂದ ಮುಕ್ತಿ‌ ಪಡೆಯಲು ಹಾತೊರೆಯುತ್ತಾನೆ. ಅಲ್ಲದೇ ತಾನಿರುವ ಅರಮನೆಯ ಹೊರಗೆ ಏನಿದೆ ಎಂಬ ಕೌತುಕ‌ವೂ ತನ್ನಲ್ಲಿ ಹುಟ್ಟಿಕೊಳ್ಳಲಾರಂಭಿಸುತ್ತದೆ. ಹೀಗಿರುವಾಗ ಒಂದು ದಿನ ತನ್ನ 29 ನೇ ವಯಸ್ಸಿನಲ್ಲಿ ವಾಯುವಿಹಾರಕ್ಕಾಗಿ ಅರಮನೆಯಿಂದ ಹೊರಗಡೆ ಬಂದಾಗ ಅಲ್ಲಿ ನಾಲ್ಕು ವಿಚಾರಗಳನ್ನು ನೋಡಿ ಜೀವನದಲ್ಲಿ ತನಗರಿವಿಲ್ಲದೆಯೇ ಮೊದಲ ಬಾರಿಗೆ ಜಿಗುಪ್ಸೆಗೊಳ್ಳುತ್ತಾನೆ.ಅದೇನೆಂದರೆ ಓರ್ವ ಮುದುಕ, ರೋಗಿ, ಶವಯಾತ್ರೆ ಹಾಗೂ ಅಲೆದಾಡುವ ಓರ್ವ ತಪಸ್ವಿಯನ್ನು ಕಂಡು ದಿವ್ಯದರ್ಶನವಾಗುತ್ತದೆ. ಈ ನಾಲ್ಕು ವಿಚಾರಗಳನ್ನು ಕಂಡ ಕೂಡಲೇ ಗೌತಮನು ಕುತೂಹಲಕ್ಕೆ ಒಳಗಾಗುತ್ತಾನೆ.ನಂತರ ಅರಮನೆಗೆ ಹಿಂತಿರುಗಿ ನಿಜ ಜೀವನದ ಬಗೆಗೆ ತಿಳಿದುಕೊಳ್ಳಲು ಗುರುಗಳ ಹುಡುಕಾಟ ಮಾಡಲು ಬಹಳಷ್ಟು ಕಷ್ಟಪಡುತ್ತಾನೆ.ಆದರೆ ಯಾರೂ ಕೂಡ ಗೌತಮನಿಗೆ ಜೀವನದ ಬಗೆಗೆ ಸತ್ಯ ವಿಚಾರಗಳನ್ನು ತಿಳಿಸದೇ ಇದ್ದುದರಿಂದ ಬೇಸರಗೊಂಡ ಬುದ್ಧ ಸಂಸಾರ ಹಾಗೂ ಅರಮನೆಯನ್ನು ತ್ಯಾಗ ಮಾಡಿ ಜೀವನದ ಬಗೆಗೆ ತನಗಿರುವ ಪ್ರಶ್ನೆಗಳಿಗೆ ಉತ್ತರ ಹುಡುಕಲು ಒಂಟಿಯಾಗಿ ತೆರಳುತ್ತಾನೆ.

ಆಧ್ಯಾತ್ಮಕ್ಕಾಗಿ

 ನಾಲ್ಕು ವಿಚಾರಗಳನ್ನು ಕಂಡ ನಂತರ ಬುದ್ಧನಿಗೆ ಜೀವನದ ಸತ್ಯತೆಯನ್ನು ತಿಳಿದುಕೊಳ್ಳುವ ಕುತೂಹಲ ಆತನ ಮನಸ್ಸನ್ನು ಬೆಂಬಿಡದೆ ಕಾಡಲಾರಂಭಿಸುತ್ತದೆ.ಹೀಗಾಗಿ ಜೀವನದ ಬಗೆಗೆ ಸಾಕ್ಷಾತ್ಕಾರ ಮಾಡಲು ತಾನು ಸನ್ಯಾಸಿಯಾಗುವ ವಿಚಾರವನ್ನು ತನ್ನ ತಂದೆ ಶುದ್ಧೋದನ ಹಾಗೂ ಮಡದಿ ಯಶೋಧರೆಗೆ ತಿಳಿಸಿ ಮನ‌ ಒಲಿಸಲು ಪ್ರಯತ್ನಿಸುತ್ತಾನೆ.ಅಲ್ಲದೇ ಆತನ ಮಗ ರಾಹುಲನು ಕೂಡ ತನ್ನ ಏಳನೇಯ ವಯಸ್ಸಿಗೆ ಸನ್ಯಾಸಿಯಾಗಲು ತಂದೆಯೊಂದಿಗೆ ತೆರಳುತ್ತಾನೆ.

ಸತ್ಯ ಶೋಧಕ್ಕಾಗಿ ಪ್ರಪಂಚ ಪರ್ಯಟನೆ
ಜೀವನದ ಸತ್ಯತೆಯನ್ನು ತಿಳಿಯುವುದಕ್ಕಾಗಿ ಬುದ್ಧನು ತನ್ನ ಎಂಭತ್ತು ವರ್ಷದವರೆಗೆ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಪರ್ಯಟನೆಯ ಜೊತೆಜೊತೆಗೆ ಸತ್ಯ ದರ್ಶನದ ಬಗೆಗೆ ಜನರಿಗೆ ಭೋಧನೆಗಳನ್ನು ನಿರಂತರವಾಗಿ ಮಾಡುತ್ತಾನೆ ಹಾಗೂ ಬಡವ ಹಾಗೂ ದುರ್ಬಲರ ಸೇವೆಯನ್ನು ಮಾಡುತ್ತಾನೆ.ವಿಮೋಚನೆಗಾಗಿ ಕೆಲಸ ಕಾರ್ಯಗಳನ್ನು ಮಾಡಬೇಕು ಹಾಗೂ ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ ಹಾಗಾಗಿ ನಾವು ಪರರಿಗೆ ಹಾಗೂ ಮಾನವೀಯತೆಗೆ ಬೆಲೆ ಕೊಡಬೇಕು ಎಂಬುವುದು ಗೌತಮ ಬುದ್ಧನು ಭೋಧಿಸಿದ ಮುಖ್ಯ ತತ್ವಗಳು.

ಬುದ್ಧನು ಇಹ ಲೋಕವನ್ನು ತ್ಯಜಿಸುವಾಗ ಎಂಭತ್ತು ವರುಷಗಳಾಗಿದ್ದರೂ ಕೂಡ ಯಾವುದೇ ದಣಿವಿಲ್ಲದೇ ಸತ್ಯ ದರ್ಶನಕ್ಕಾಗಿ ನಿರಂತವಾದ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಕೊನೆಗೆ ತನ್ನ ಅನುಯಾಯಿಗಳಿಗೆ ಈ ಜಗತ್ತಿನಲ್ಲಿ ಯಾವುದೂ ಶಾಶ್ವತ ಅಲ್ಲ.ಹಾಗಾಗಿ ನಿಮ್ಮ ವಿಮೋಚನೆಗಾಗಿ‌ ಮಾತ್ರ ಕೆಲಸ ಮಾಡಿ ಎಂಬ ಕೊನೆಯ ನುಡಿಗಳನ್ನು ನೀಡಿ ಲೋಕದಲ್ಲಿ ಅಜರಾಮರನಾಗುತ್ತಾನೆ.

Published by : MAYOON N

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅರವತ್ತರ ವಯಸ್ಸದರು,ಸೂಪರ್ ಮಾಡೆಲ್….!

    ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…

  • ರೆಸಿಪಿ

    ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

    ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…

  • ಸುದ್ದಿ

    ಮದ್ವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಅರೆಸ್ಟ್ ಮಾಡಿದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್.

    ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.  ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…

  • ವಿಚಿತ್ರ ಆದರೂ ಸತ್ಯ

    ಉತ್ತರ ಕೊರಿಯಾದ ಕಿಮ್ ಜಂಗ್’ನ ನೀಚ ನಿಯಮಗಳು ಹಾಗೊ ಕಾಯ್ದೆಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್‌ ಜಂಗ್‌, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…