ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರು
ಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ ಮಾಡುವುದಿಲ್ಲ. ಅಲ್ಲದೇ ಆತ ಯಾವುದೇ ಹೊರಗಿನ ಪ್ರಪಂಚಕ್ಕೆ ಮೋಹಿತನಾಗಬಾರದೆಂಬ ಭಯದಿಂದ ಶುದ್ಧೋದನನು ತನ್ನ ಮಗನಿಗಾಗಿ ಎಲ್ಲಾ ರೀತಿಯ ಸಕಲ ಸೌಕರ್ಯಗಳನ್ನು ಒಳಗೊಂಡ ವೈಭವದಿಂದ ಕೂಡಿದ ಮೂರು ಅರಮನೆಗಳನ್ನು ಕಟ್ಟಿಸುತ್ತಾನೆ. ಹೀಗಾಗಿ ಗೌತಮ ಬುದ್ಧನು ಹೊರಗಿನ ಜಗತ್ತಿನ ಅರಿವಿಲ್ಲದೆಯೇ ಅರಮನೆಯಲ್ಲಿ ಬಂಧನಕ್ಕೆ ಒಳಗಾದಂತೆ ಬದುಕುತ್ತಾನೆ.


ಆದರೆ ಬುದ್ಧನು ಯಾವುದೇ ಧಾರ್ಮಿಕವಾದ ಭೋಧನೆಗಳನ್ನು ಪಡೆದುಕೊಳ್ಳದಿದ್ದರೂ ಕೂಡ ಒಂದು ದಿನ ಜಗತ್ತೇ ಮೆಚ್ಚುವಂತಹ ಮಹಾಪುರುಷನಾಗುವ ಎಲ್ಲಾ ಲಕ್ಷಣಗಳನ್ನು ಹೊಂದಿರುತ್ತಾನೆ. ಅತ್ಯಂತ ಸರಳ ಜೀವನವನ್ನು ನಡೆಸಿದ ಈತ ನೇಪಾಳದ ಶಾಕ್ಯ ಕುಲದ ರಾಜ ಶುದ್ಧೋದನ ಹಾಗೂ ರಾಣಿ ಮಾಯಾದೇವಿಯ ಪುತ್ರನಾದರೂ ಕೂಡ ಅಲ್ಲಿಯ ಜನರಿಗೆ ಈ ವಿಚಾರದ ಬಗೆಗೆ ಮಾಹಿತಿ ಇರುವುದಿಲ್ಲ. ನೇಪಾಳದ ಲುಂಬಿನಿ ಗ್ರಾಮದಲ್ಲಿ ಜನಿಸಿದ ಗೌತಮನು ಯಶೋಧರೆಯನ್ನು ಮದುವೆಯಾಗಿ ರಾಹುಲ ಎಂಬ ಪುತ್ರನ ತಂದೆಯಾಗುತ್ತಾನೆ.
ಆಧ್ಯಾತ್ಮದತ್ತ ಒಲವು
ತಾನು ಒಬ್ಬ ಮಹಾ ಯೋಗಿಯಾಗಬೇಕು, ಜ್ಞಾನಿಯಾಗಬೇಕೆಂಬ ತುಡಿತ ಇದ್ದುದರಿಂದ ಗೌತಮ ಬುದ್ದನು ಈ ವೈಭೋಗದ ಜೀವನದಿಂದ ಮುಕ್ತಿ ಪಡೆಯಲು ಹಾತೊರೆಯುತ್ತಾನೆ. ಅಲ್ಲದೇ ತಾನಿರುವ ಅರಮನೆಯ ಹೊರಗೆ ಏನಿದೆ ಎಂಬ ಕೌತುಕವೂ ತನ್ನಲ್ಲಿ ಹುಟ್ಟಿಕೊಳ್ಳಲಾರಂಭಿಸುತ್ತದೆ. ಹೀಗಿರುವಾಗ ಒಂದು ದಿನ ತನ್ನ 29 ನೇ ವಯಸ್ಸಿನಲ್ಲಿ ವಾಯುವಿಹಾರಕ್ಕಾಗಿ ಅರಮನೆಯಿಂದ ಹೊರಗಡೆ ಬಂದಾಗ ಅಲ್ಲಿ ನಾಲ್ಕು ವಿಚಾರಗಳನ್ನು ನೋಡಿ ಜೀವನದಲ್ಲಿ ತನಗರಿವಿಲ್ಲದೆಯೇ ಮೊದಲ ಬಾರಿಗೆ ಜಿಗುಪ್ಸೆಗೊಳ್ಳುತ್ತಾನೆ.ಅದೇನೆಂದರೆ ಓರ್ವ ಮುದುಕ, ರೋಗಿ, ಶವಯಾತ್ರೆ ಹಾಗೂ ಅಲೆದಾಡುವ ಓರ್ವ ತಪಸ್ವಿಯನ್ನು ಕಂಡು ದಿವ್ಯದರ್ಶನವಾಗುತ್ತದೆ. ಈ ನಾಲ್ಕು ವಿಚಾರಗಳನ್ನು ಕಂಡ ಕೂಡಲೇ ಗೌತಮನು ಕುತೂಹಲಕ್ಕೆ ಒಳಗಾಗುತ್ತಾನೆ.ನಂತರ ಅರಮನೆಗೆ ಹಿಂತಿರುಗಿ ನಿಜ ಜೀವನದ ಬಗೆಗೆ ತಿಳಿದುಕೊಳ್ಳಲು ಗುರುಗಳ ಹುಡುಕಾಟ ಮಾಡಲು ಬಹಳಷ್ಟು ಕಷ್ಟಪಡುತ್ತಾನೆ.ಆದರೆ ಯಾರೂ ಕೂಡ ಗೌತಮನಿಗೆ ಜೀವನದ ಬಗೆಗೆ ಸತ್ಯ ವಿಚಾರಗಳನ್ನು ತಿಳಿಸದೇ ಇದ್ದುದರಿಂದ ಬೇಸರಗೊಂಡ ಬುದ್ಧ ಸಂಸಾರ ಹಾಗೂ ಅರಮನೆಯನ್ನು ತ್ಯಾಗ ಮಾಡಿ ಜೀವನದ ಬಗೆಗೆ ತನಗಿರುವ ಪ್ರಶ್ನೆಗಳಿಗೆ ಉತ್ತರ ಹುಡುಕಲು ಒಂಟಿಯಾಗಿ ತೆರಳುತ್ತಾನೆ.
ಆಧ್ಯಾತ್ಮಕ್ಕಾಗಿ

ನಾಲ್ಕು ವಿಚಾರಗಳನ್ನು ಕಂಡ ನಂತರ ಬುದ್ಧನಿಗೆ ಜೀವನದ ಸತ್ಯತೆಯನ್ನು ತಿಳಿದುಕೊಳ್ಳುವ ಕುತೂಹಲ ಆತನ ಮನಸ್ಸನ್ನು ಬೆಂಬಿಡದೆ ಕಾಡಲಾರಂಭಿಸುತ್ತದೆ.ಹೀಗಾಗಿ ಜೀವನದ ಬಗೆಗೆ ಸಾಕ್ಷಾತ್ಕಾರ ಮಾಡಲು ತಾನು ಸನ್ಯಾಸಿಯಾಗುವ ವಿಚಾರವನ್ನು ತನ್ನ ತಂದೆ ಶುದ್ಧೋದನ ಹಾಗೂ ಮಡದಿ ಯಶೋಧರೆಗೆ ತಿಳಿಸಿ ಮನ ಒಲಿಸಲು ಪ್ರಯತ್ನಿಸುತ್ತಾನೆ.ಅಲ್ಲದೇ ಆತನ ಮಗ ರಾಹುಲನು ಕೂಡ ತನ್ನ ಏಳನೇಯ ವಯಸ್ಸಿಗೆ ಸನ್ಯಾಸಿಯಾಗಲು ತಂದೆಯೊಂದಿಗೆ ತೆರಳುತ್ತಾನೆ.
ಸತ್ಯ ಶೋಧಕ್ಕಾಗಿ ಪ್ರಪಂಚ ಪರ್ಯಟನೆ
ಜೀವನದ ಸತ್ಯತೆಯನ್ನು ತಿಳಿಯುವುದಕ್ಕಾಗಿ ಬುದ್ಧನು ತನ್ನ ಎಂಭತ್ತು ವರ್ಷದವರೆಗೆ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಪರ್ಯಟನೆಯ ಜೊತೆಜೊತೆಗೆ ಸತ್ಯ ದರ್ಶನದ ಬಗೆಗೆ ಜನರಿಗೆ ಭೋಧನೆಗಳನ್ನು ನಿರಂತರವಾಗಿ ಮಾಡುತ್ತಾನೆ ಹಾಗೂ ಬಡವ ಹಾಗೂ ದುರ್ಬಲರ ಸೇವೆಯನ್ನು ಮಾಡುತ್ತಾನೆ.ವಿಮೋಚನೆಗಾಗಿ ಕೆಲಸ ಕಾರ್ಯಗಳನ್ನು ಮಾಡಬೇಕು ಹಾಗೂ ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ ಹಾಗಾಗಿ ನಾವು ಪರರಿಗೆ ಹಾಗೂ ಮಾನವೀಯತೆಗೆ ಬೆಲೆ ಕೊಡಬೇಕು ಎಂಬುವುದು ಗೌತಮ ಬುದ್ಧನು ಭೋಧಿಸಿದ ಮುಖ್ಯ ತತ್ವಗಳು.
ಬುದ್ಧನು ಇಹ ಲೋಕವನ್ನು ತ್ಯಜಿಸುವಾಗ ಎಂಭತ್ತು ವರುಷಗಳಾಗಿದ್ದರೂ ಕೂಡ ಯಾವುದೇ ದಣಿವಿಲ್ಲದೇ ಸತ್ಯ ದರ್ಶನಕ್ಕಾಗಿ ನಿರಂತವಾದ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಕೊನೆಗೆ ತನ್ನ ಅನುಯಾಯಿಗಳಿಗೆ ಈ ಜಗತ್ತಿನಲ್ಲಿ ಯಾವುದೂ ಶಾಶ್ವತ ಅಲ್ಲ.ಹಾಗಾಗಿ ನಿಮ್ಮ ವಿಮೋಚನೆಗಾಗಿ ಮಾತ್ರ ಕೆಲಸ ಮಾಡಿ ಎಂಬ ಕೊನೆಯ ನುಡಿಗಳನ್ನು ನೀಡಿ ಲೋಕದಲ್ಲಿ ಅಜರಾಮರನಾಗುತ್ತಾನೆ.
Published by : MAYOON N
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್,…
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…