ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.
ಹುದ್ದೆಗಳ ವಿವರ
ದಾಖಲಾತಿ ತಜ್ಞರು 01
ಹಿರಿಯ ಭೂ ವಿಜ್ಞಾನಿ o1
ಸಮಾಲೋಚಕರು 02
ಹಿರಿಯ ಸಮಾಲೋಚಕರು 02
ಕಿರಿಯ ಸಮಾಲೋಚಕರು 01
ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05
ಸಪೋರ್ಟ್ ಇಂಜಿನಿಯರ್ 04
ಡೇಟಾ ಎಂಟ್ರಿ ಆಪರೇಟರ್ 02
ಜಿಲ್ಲಾ ಯೋಜನಾ ವ್ಯವಸ್ಥಾಪಕ 08
ಜಿಲ್ಲಾ ಸಮಾಲೋಚಕರು 16 .
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು 01 .
ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು o7 .
ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 02 .
ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ಸಮಾಲೋಚಕರು 02 .
ಈ ಹುದ್ದೆಗಳನ್ನು ಕೇಂದ್ರ ಕಛೇರಿ, ಜಿಲ್ಲಾ ಪಂಚಾಯಿತಿ ಕಛೇರಿ- ಜಲ ಜೀವನ ಮಿಷನ್, ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಈ ಕಛೇರಿಗಳಲ್ಲಿ ನೇಮಕ ಮಾಡಲಾಗುತ್ತದೆ.
ವಯೋಮಾನ ಮತ್ತು ವಿದ್ಯಾರ್ಹತೆ
ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು. ಕೆಳಗೆ ನೀಡಲಾದ ಅಧಿಸೂಚನೆಯಲ್ಲಿ ಯಾವ್ಯಾವ ಹುದ್ದೆಗೆ ಯಾವ ವಿದ್ಯಾರ್ಹತೆ ಅಗತ್ಯ ಎಂದು ತಿಳಿಸಲಾಗಿದ್ದು, ಓದಿ ತಿಳಿಯಿರಿ.
ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳು, ರೆಸ್ಯೂಮ್ ಹಾಗೂ ಅರ್ಜಿ ಜೊತೆಗೆ, ‘ನಾನೂ ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ’ ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ : ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ ರಸ್ತೆ, ಬೆಂಗಳೂರು-560009.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-08-2020 (ಸಂಜೆ-05-30 ಗಂಟೆ) ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಛೇರಿ ಅಥವಾ ಆಯಾ ಜಿಲ್ಲಾ ಪಂಚಾಯಿತಿ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು. ಹಾಗೂ ಸಂದರ್ಶನದಲ್ಲಿ ಆಯ್ಕೆಯಾದ ಕೆಲವು ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು, ನಿಗದಿತ ದಿನಾಂಕದಲ್ಲಿ ಪರೀಕ್ಷೆಗೆ ಹಾಜರಾಗುವುದು.
ಹುದ್ದೆಗಳಿಗೆ ನಿಗದಿಪಡಿಸಿದ ಮಾಸಿಕ ಸಂಭಾವನೆಯನ್ನು ನೀಡಲಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…