ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.
ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ ಸೇವಿಸದಿರುವುದು ಬಹಳ ಮುಖ್ಯ. ಗ್ರೀನ್ ಟೀ ಸೇವನೆಯನ್ನು ಹಿತ-ಮಿತವಾಗಿ ಕುಡಿಯುವುದರಿಂದ ಉತ್ತಮ ಆರೋಗ್ಯ ನಿಮ್ಮದಾಗುತ್ತದೆ.

ತ್ವಚೆಗೆ ಹೊಳಪು:
ಹಸಿರು ಚಹಾದಲ್ಲಿ Anti-aging ಅಂಶವು ಕಂಡುಬರುತ್ತದೆ. ಇದು ಮುಖದ ಸುಕ್ಕುಗಳನ್ನು ಕಡಿಮೆ ಮಾಡುತ್ತದೆ. ಇದರೊಂದಿಗೆ, ನಿಮ್ಮ ಮುಖದಲ್ಲಿ ಯಾವಾಗಲೂ ಹೊಳಪು ಮತ್ತು ತಾಜಾತನ ತರುತ್ತದೆ. ಇದಲ್ಲದೆ, ಇದನ್ನು ಕುಡಿಯುವುದರಿಂದ ನೀವು ಸದೃಢವಾಗಿರುತ್ತೀರಿ.
ಮಾನಸಿಕ ಶಾಂತಿ:
ಸ್ವಲ್ಪ ಕೆಲಸ ಮಾಡಿದ ನಂತರ ನೀವು ಮಾನಸಿಕವಾಗಿ ಸುಸ್ತಾಗುತ್ತಿದ್ದರೆ ಈ ಗ್ರೀನ್ ಟೀ ನಿಮಗೆ ಒಳ್ಳೆಯದು. ಹಸಿರು ಚಹಾದಲ್ಲಿ ಥೈನೈನ್ ಅಂಶವಿದೆ, ಇದರಲ್ಲಿ ಅಮೈನೋ ಆಮ್ಲಗಳಿವೆ. ಅಮೈನೊ ಆಮ್ಲಗಳು ದೇಹದಲ್ಲಿ ತಾಜಾತನವನ್ನು ಕಾಪಾಡಿಕೊಳ್ಳುತ್ತವೆ ಮತ್ತು ನಿಮಗೆ ಆಯಾಸವಾಗುವುದಿಲ್ಲ. ಇದು ಯಾವಾಗಲೂ ನಿಮಗೆ ಮಾನಸಿಕ ಶಾಂತಿಯನ್ನು ನೀಡುತ್ತದೆ.
ಹಲ್ಲುಗಳಿಗೆ ವರಧಾನ:
ಇತ್ತೀಚಿನ ದಿನಗಳಲ್ಲಿ ಹಲ್ಲುಗಳಲ್ಲಿನ ಪಯೋರಿಯಾ ಮತ್ತು ಕುಹರದ ಸಮಸ್ಯೆ ಯುವಕರು ಮತ್ತು ಹಿರಿಯರಲ್ಲಿ ವೇಗವಾಗಿ ಹೆಚ್ಚುತ್ತಿದೆ. ಹಸಿರು ಚಹಾದಲ್ಲಿ ಕಂಡುಬರುವ ಕೆಫೀನ್ ಹಲ್ಲುಗಳಲ್ಲಿನ ಸೂಕ್ಷ್ಮಜೀವಿಗಳನ್ನು ಕೊಲ್ಲುವ ಸಾಮರ್ಥ್ಯ ಹೊಂದಿದೆ. ಕಡಿಮೆ ಬ್ಯಾಕ್ಟೀರಿಯಾದಿಂದಾಗಿ, ನಿಮ್ಮ ಹಲ್ಲುಗಳನ್ನು ದೀರ್ಘಕಾಲದವರೆಗೆ ಇದು ರಕ್ಷಿಸುತ್ತದೆ.

ಸಾಮಾನ್ಯ ರಕ್ತದೊತ್ತಡ:
ಪ್ರಸ್ತುತ ಜೀವನಶೈಲಿಯಲ್ಲಿ ಬಿಡುವಿಲ್ಲದೆ ದುಡಿಯುವ ಜನಸಾಮಾನ್ಯರಿಗೆ ದಿನನಿತ್ಯ ಮನೆ, ಕಚೇರಿ ಕೆಲಸದ ಒತ್ತಡದಿಂದಾಗಿ ಉದ್ವೇಗದ ಸಾಮಾನ್ಯವಾಗಿದೆ. ಇದರಿಂದ ಅಧಿಕ ರಕ್ತದೊತ್ತಡದ ಸಮಸ್ಯೆ ವೇಗವಾಗಿ ಹೆಚ್ಚಾಗಿದೆ. ಅಧಿಕ ರಕ್ತದೊತ್ತಡವು ದೇಹದಲ್ಲಿನ ಇತರ ಅನೇಕ ಕಾಯಿಲೆಗಳಿಗೆ ಕಾರಣವಾಗಬಹುದು. ಆದ್ದರಿಂದ ನಿಮಗೆ ರಕ್ತದೊತ್ತಡದ ಸಮಸ್ಯೆ ಇದ್ದರೆ ಗ್ರೀನ್ ಟೀ ಕುಡಿಯಿರಿ. ಗ್ರೀನ್ ಟೀ ಕುಡಿಯುವುದರಿಂದ ನಿಮ್ಮ ಮೈಂಡ್ ಕೊಂಚ ರಿಲಾಕ್ಸ್ ಆಗುತ್ತದೆ. ಇದರಿಂದಾಗಿ ರಕ್ತದೊತ್ತಡ ಇದ್ದರೂ ನಿಮಗೆ ಕೋಪ ಬರುವ ಸಾಧ್ಯತೆ ಕಡಿಮೆ ಎಂದು ಹಲವರು ಹೇಳುತ್ತಾರೆ.
ಕೊಲೆಸ್ಟ್ರಾಲ್ ಕಡಿಮೆ ಮಾಡಲು:
ಗ್ರೀನ್ ಟೀ ಸೇವನೆಯು ಹೃದಯ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಹಲವು ಸಂಶೋಧನೆಗಳು ಸಾಬೀತುಪಡಿಸಿವೆ. ಗ್ರೀನ್ ಟೀ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಮೂಲಕ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ನೀವು ಎಣ್ಣೆಯುಕ್ತ ಆಹಾರವನ್ನು ಸೇವಿಸಿದರೆ ನೀವು ನಿಯಮಿತವಾಗಿ ಹಸಿರು ಚಹಾವನ್ನು ಸೇವಿಸುವುದು ಒಳ್ಳೆಯದು.

ಮಧುಮೇಹಿಗಳಿಗೆ ಪ್ರಯೋಜನಕಾರಿ:
ನಿಮ್ಮ ದೇಹದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುತ್ತಿದ್ದರೆ ಹಸಿರು ಚಹಾದ ಸೇವನೆಯು ನಿಮಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಇದಲ್ಲದೆ, ಮಧುಮೇಹ ಸಮಸ್ಯೆಯಿರುವವರು ಪ್ರತಿದಿನ ಬೆಳಿಗ್ಗೆ ಎದ್ದ ಬಳಿಕ ಒಂದು ಕಪ್ ಗ್ರೀನ್ ಟೀ ಕುಡಿಯಬೇಕು. ಇದು ನಿಮ್ಮ ದೇಹದಲ್ಲಿ ಇರುವ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
ತೂಕ ಕಡಿಮೆ ಮಾಡಲು:
ತೂಕವನ್ನು ಕಡಿಮೆ ಮಾಡಲು ಗ್ರೀನ್ ಟೀ ತುಂಬಾ ಸಹಾಯ ಮಾಡುತ್ತದೆ. ಹಸಿರು ಚಹಾವನ್ನು ಕುಡಿಯುವುದರಿಂದ ನಿಮ್ಮ ದೇಹದ ಚಯಾಪಚಯ ಕ್ರಿಯೆಯು ಹೆಚ್ಚಾಗುತ್ತದೆ, ಇದು ಜೀರ್ಣಾಂಗ ವ್ಯವಸ್ಥೆಯನ್ನು ಸಮತೋಲನದಲ್ಲಿರಿಸುತ್ತದೆ. ಇದು ವ್ಯಕ್ತಿಯು ಹೆಚ್ಚುವರಿ ತೂಕವನ್ನು ಕಳೆದುಕೊಳ್ಳಲು ಬಹಳ ಸಹಾಯಕವಾಗಿದೆ.
source internet
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…
ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…
ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…