ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.
ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ ಸೇವಿಸದಿರುವುದು ಬಹಳ ಮುಖ್ಯ. ಗ್ರೀನ್ ಟೀ ಸೇವನೆಯನ್ನು ಹಿತ-ಮಿತವಾಗಿ ಕುಡಿಯುವುದರಿಂದ ಉತ್ತಮ ಆರೋಗ್ಯ ನಿಮ್ಮದಾಗುತ್ತದೆ.

ತ್ವಚೆಗೆ ಹೊಳಪು:
ಹಸಿರು ಚಹಾದಲ್ಲಿ Anti-aging ಅಂಶವು ಕಂಡುಬರುತ್ತದೆ. ಇದು ಮುಖದ ಸುಕ್ಕುಗಳನ್ನು ಕಡಿಮೆ ಮಾಡುತ್ತದೆ. ಇದರೊಂದಿಗೆ, ನಿಮ್ಮ ಮುಖದಲ್ಲಿ ಯಾವಾಗಲೂ ಹೊಳಪು ಮತ್ತು ತಾಜಾತನ ತರುತ್ತದೆ. ಇದಲ್ಲದೆ, ಇದನ್ನು ಕುಡಿಯುವುದರಿಂದ ನೀವು ಸದೃಢವಾಗಿರುತ್ತೀರಿ.
ಮಾನಸಿಕ ಶಾಂತಿ:
ಸ್ವಲ್ಪ ಕೆಲಸ ಮಾಡಿದ ನಂತರ ನೀವು ಮಾನಸಿಕವಾಗಿ ಸುಸ್ತಾಗುತ್ತಿದ್ದರೆ ಈ ಗ್ರೀನ್ ಟೀ ನಿಮಗೆ ಒಳ್ಳೆಯದು. ಹಸಿರು ಚಹಾದಲ್ಲಿ ಥೈನೈನ್ ಅಂಶವಿದೆ, ಇದರಲ್ಲಿ ಅಮೈನೋ ಆಮ್ಲಗಳಿವೆ. ಅಮೈನೊ ಆಮ್ಲಗಳು ದೇಹದಲ್ಲಿ ತಾಜಾತನವನ್ನು ಕಾಪಾಡಿಕೊಳ್ಳುತ್ತವೆ ಮತ್ತು ನಿಮಗೆ ಆಯಾಸವಾಗುವುದಿಲ್ಲ. ಇದು ಯಾವಾಗಲೂ ನಿಮಗೆ ಮಾನಸಿಕ ಶಾಂತಿಯನ್ನು ನೀಡುತ್ತದೆ.
ಹಲ್ಲುಗಳಿಗೆ ವರಧಾನ:
ಇತ್ತೀಚಿನ ದಿನಗಳಲ್ಲಿ ಹಲ್ಲುಗಳಲ್ಲಿನ ಪಯೋರಿಯಾ ಮತ್ತು ಕುಹರದ ಸಮಸ್ಯೆ ಯುವಕರು ಮತ್ತು ಹಿರಿಯರಲ್ಲಿ ವೇಗವಾಗಿ ಹೆಚ್ಚುತ್ತಿದೆ. ಹಸಿರು ಚಹಾದಲ್ಲಿ ಕಂಡುಬರುವ ಕೆಫೀನ್ ಹಲ್ಲುಗಳಲ್ಲಿನ ಸೂಕ್ಷ್ಮಜೀವಿಗಳನ್ನು ಕೊಲ್ಲುವ ಸಾಮರ್ಥ್ಯ ಹೊಂದಿದೆ. ಕಡಿಮೆ ಬ್ಯಾಕ್ಟೀರಿಯಾದಿಂದಾಗಿ, ನಿಮ್ಮ ಹಲ್ಲುಗಳನ್ನು ದೀರ್ಘಕಾಲದವರೆಗೆ ಇದು ರಕ್ಷಿಸುತ್ತದೆ.

ಸಾಮಾನ್ಯ ರಕ್ತದೊತ್ತಡ:
ಪ್ರಸ್ತುತ ಜೀವನಶೈಲಿಯಲ್ಲಿ ಬಿಡುವಿಲ್ಲದೆ ದುಡಿಯುವ ಜನಸಾಮಾನ್ಯರಿಗೆ ದಿನನಿತ್ಯ ಮನೆ, ಕಚೇರಿ ಕೆಲಸದ ಒತ್ತಡದಿಂದಾಗಿ ಉದ್ವೇಗದ ಸಾಮಾನ್ಯವಾಗಿದೆ. ಇದರಿಂದ ಅಧಿಕ ರಕ್ತದೊತ್ತಡದ ಸಮಸ್ಯೆ ವೇಗವಾಗಿ ಹೆಚ್ಚಾಗಿದೆ. ಅಧಿಕ ರಕ್ತದೊತ್ತಡವು ದೇಹದಲ್ಲಿನ ಇತರ ಅನೇಕ ಕಾಯಿಲೆಗಳಿಗೆ ಕಾರಣವಾಗಬಹುದು. ಆದ್ದರಿಂದ ನಿಮಗೆ ರಕ್ತದೊತ್ತಡದ ಸಮಸ್ಯೆ ಇದ್ದರೆ ಗ್ರೀನ್ ಟೀ ಕುಡಿಯಿರಿ. ಗ್ರೀನ್ ಟೀ ಕುಡಿಯುವುದರಿಂದ ನಿಮ್ಮ ಮೈಂಡ್ ಕೊಂಚ ರಿಲಾಕ್ಸ್ ಆಗುತ್ತದೆ. ಇದರಿಂದಾಗಿ ರಕ್ತದೊತ್ತಡ ಇದ್ದರೂ ನಿಮಗೆ ಕೋಪ ಬರುವ ಸಾಧ್ಯತೆ ಕಡಿಮೆ ಎಂದು ಹಲವರು ಹೇಳುತ್ತಾರೆ.
ಕೊಲೆಸ್ಟ್ರಾಲ್ ಕಡಿಮೆ ಮಾಡಲು:
ಗ್ರೀನ್ ಟೀ ಸೇವನೆಯು ಹೃದಯ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಹಲವು ಸಂಶೋಧನೆಗಳು ಸಾಬೀತುಪಡಿಸಿವೆ. ಗ್ರೀನ್ ಟೀ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಮೂಲಕ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ನೀವು ಎಣ್ಣೆಯುಕ್ತ ಆಹಾರವನ್ನು ಸೇವಿಸಿದರೆ ನೀವು ನಿಯಮಿತವಾಗಿ ಹಸಿರು ಚಹಾವನ್ನು ಸೇವಿಸುವುದು ಒಳ್ಳೆಯದು.

ಮಧುಮೇಹಿಗಳಿಗೆ ಪ್ರಯೋಜನಕಾರಿ:
ನಿಮ್ಮ ದೇಹದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುತ್ತಿದ್ದರೆ ಹಸಿರು ಚಹಾದ ಸೇವನೆಯು ನಿಮಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಇದಲ್ಲದೆ, ಮಧುಮೇಹ ಸಮಸ್ಯೆಯಿರುವವರು ಪ್ರತಿದಿನ ಬೆಳಿಗ್ಗೆ ಎದ್ದ ಬಳಿಕ ಒಂದು ಕಪ್ ಗ್ರೀನ್ ಟೀ ಕುಡಿಯಬೇಕು. ಇದು ನಿಮ್ಮ ದೇಹದಲ್ಲಿ ಇರುವ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
ತೂಕ ಕಡಿಮೆ ಮಾಡಲು:
ತೂಕವನ್ನು ಕಡಿಮೆ ಮಾಡಲು ಗ್ರೀನ್ ಟೀ ತುಂಬಾ ಸಹಾಯ ಮಾಡುತ್ತದೆ. ಹಸಿರು ಚಹಾವನ್ನು ಕುಡಿಯುವುದರಿಂದ ನಿಮ್ಮ ದೇಹದ ಚಯಾಪಚಯ ಕ್ರಿಯೆಯು ಹೆಚ್ಚಾಗುತ್ತದೆ, ಇದು ಜೀರ್ಣಾಂಗ ವ್ಯವಸ್ಥೆಯನ್ನು ಸಮತೋಲನದಲ್ಲಿರಿಸುತ್ತದೆ. ಇದು ವ್ಯಕ್ತಿಯು ಹೆಚ್ಚುವರಿ ತೂಕವನ್ನು ಕಳೆದುಕೊಳ್ಳಲು ಬಹಳ ಸಹಾಯಕವಾಗಿದೆ.
source internet
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…
ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….