ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ.
ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ ಕಡಿದುಕೊಂಡಿತು. ಈ ವೇಳೆ ಇಸ್ರೋ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಸಿಗ್ನಲ್ಗಾಗಿ ಕೆಲ ಹೊತ್ತು ನಿರೀಕ್ಷಿಸಲಾಯಿತು. ಆದರೆ ಯಾವುದೇ ಧನಾತ್ಮಕ ಫಲ ಸಿಗಲಿಲ್ಲ. ಕೊನೆಗೆ ಇಸ್ರೋ ಅಧ್ಯಕ್ಷ ಶಿವನ್ ಅವರು ಲ್ಯಾಂಡರ್ 2.1 ಕಿ. ಮೀ.ವರೆಗೆ ಸುಸೂತ್ರವಾಗಿ ಕೆಲಸ ಮಾಡಿದೆ. ಆ ನಂತರ ಸಿಗ್ನಲ್ ಕಡಿತಗೊಂಡಿದೆ. ಇದರ ಡೇಟಾವನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಘೋಷಿಸಿದರು.
ಮೋದಿ ವೀಕ್ಷಣೆ: ಇಸ್ರೋದ ಕೌತುಕ ಕ್ಷಣವನ್ನು ವೀಕ್ಷಿಸಲು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ವಿಜ್ಞಾನಿಗಳ ಜತೆ ಕೂತು ವೀಕ್ಷಿಸಿದರು. ಸಿಗ್ನಲ್ ಕಡಿತಗೊಂಡ ಬಳಿಕ ವಿಜ್ಞಾನಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದರು. ನಮ್ಮ ವಿಜ್ಞಾನಿಗಳು ದೇಶದ ಹೆಮ್ಮೆ. ನಿಮ್ಮೊಂದಿಗೆ ನಾವಿದ್ದೇವೆ. ಮುಂದೆ ಹೆಜ್ಜೆ ಹಾಕೋಣ ಎಂದು ಹೇಳಿದರು. ಬಳಿಕ ಚಂದ್ರಯಾನ ವೀಕ್ಷಿಸಲು ಆಗಮಿಸಿದ್ದ ಮಕ್ಕಳ ಜತೆ ಸಂವಾದ ನಡೆಸಿದರು.ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ಮೇಲೆ ಸಾಫ್ಟ್ಲ್ಯಾಂಡಿಂಗ್ ಮಾಡುವುದು ರೋಚಕ ಮತ್ತು ಭಯಾನಕ ಕ್ಷಣವಾಗಿದ್ದು, ಇದೊಂದು ರೀತಿ ಮಗುವನ್ನು ತೊಟ್ಟಿಲಿನಲ್ಲಿ ಹಾಕುವ ರೀತಿಯ ಪ್ರಕ್ರಿಯೆಯಾಗಿದೆ ಎಂದು ಹಿರಿಯ ವಿಜ್ಞಾನಿಯೊಬ್ಬರು ಹೇಳಿದ್ದರು. ಹೀಗಾಗಿ ವಿಜ್ಞಾನಿಗಳಲ್ಲಿ ವಿಶ್ವಾಸವಿದ್ದರೂ ಎಲ್ಲೋ ಒಂದು ಕಡೆ ಆತಂಕವೂ ಇತ್ತು.
ಏನಾಯ್ತು? :ಚಂದ್ರನ ಮೇಲ್ಮೈನಿಂದ 30 ಕಿ.ಮೀ. ಎತ್ತರದಲ್ಲಿ ಹಾರಾಡುತ್ತಿದ್ದ ಲ್ಯಾಂಡರ್ ಅನ್ನು ತಡರಾತ್ರಿ 1.35ಕ್ಕೆ ಇಳಿಸುವ ರಫ್ ಬ್ರೇಕಿಂಗ್ ಹಂತವನ್ನು ನೆರವೇರಿಸಲಾಯಿತು. ನಂತರ 10 ನಿಮಿಷಗಳ ನಂತರ 7 ಕಿ.ಮೀ. ಎತ್ತರಕ್ಕೆ ಇಳಿಸುವ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಡೆಯಿತು. ನಂತರ ಲೋಕಲ್ ನೇವಿಗೇಶನ್ ಆರಂಭವಾಗಿ, ಲ್ಯಾಂಡರ್ ಪೋಟೋವನ್ನು ಇಸ್ರೋಗೆ ಕಳುಹಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಬಳಿಕ ಲ್ಯಾಂಡರ್ ಚಂದ್ರನ ಮೇಲೆ ನಿಧಾನವಾಗಿ ಇಳಿಯಬೇಕಿತ್ತು. ಆದರೆ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಂತರ ಲ್ಯಾಂಡರ್ ಸಂಪರ್ಕ ಕಡಿದುಹೋಯಿತು. ಇಸ್ರೋ ಟಿವಿ ಮಾನಿಟರ್ಗಳಲ್ಲಿ ಲ್ಯಾಂಡರ್ ನಿರ್ದಿಷ್ಟ ಪಥ ಬಿಟ್ಟು ಬೇರೆಡೆ ಚಲಿಸಿದ ಬಗ್ಗೆ ಕಾಣಿಸುತ್ತಿತ್ತು. ಈ ವೇಳೆ ಎಲ್ಲರಲ್ಲಿ ಆತಂಕ ಮನೆ ಮಾಡಿತ್ತು. ಕೆಲ ಹೊತ್ತು ಕಾದರೂ ಸಂಪರ್ಕ ಸಿಗಲಿಲ್ಲ. ಆಗ ಇಸ್ರೋ ಅಧ್ಯಕ್ಷ ಶಿವನ್ ಅವರು ಸಿಗ್ನಲ್ ಕಡಿತಗೊಂಡಿದೆ. ಡೇಟಾ ವಿಶ್ಲೇಷಿಸುತ್ತೇವೆ ಎಂದು ಹೇಳಿದರು.
ಜು.22ರಂದು ಆಂಧ್ರದ ಶ್ರೀಹರಿಕೋಟ ನೆಲೆಯಿಂದ ಜಿಎಸ್ ಎಲ್ವಿ ರಾಕೆಟ್ ಮೂಲಕ ಚಂದ್ರಯಾನ-2 ನೌಕೆ ಉಡಾವಣೆಯಾಗಿತ್ತು. ಈ ನೌಕೆಯಲ್ಲಿ ಆರ್ಬಿಟರ್, ರೋವರ್ ಅನ್ನು ಒಡಲಲ್ಲಿಟ್ಟುಕೊಂಡ ಲ್ಯಾಂಡರ್ ಇದ್ದವು. ಸೆ.2ರಂದು ಗಣೇಶ ಹಬ್ಬದ ದಿನದಂದು ಆರ್ಬಿಟರ್ ಹಾಗೂ ಲ್ಯಾಂಡರ್ ಪ್ರತ್ಯೇಕಗೊಂಡಿದ್ದವು
ಸಾಫ್ಟ್ ಲ್ಯಾಂಡಿಂಗ್ ಆಗ ಹುಟ್ಟಿದ ಮಗುವಿದ್ದಂತೆ: ಸಾಫ್ಟ್ಲ್ಯಾಂಡಿಂಗ್ ನಮಗೆ ಹೊಸದಾದ ಹಾಗೂ ಸಂಕೀರ್ಣತೆಯ ಪ್ರಕ್ರಿಯೆ. 15 ನಿಮಿಷವು ನಮಗೆ ಭಯಾನಕ. ಇದೊಂದು ರೀತಿ ಯಾರೋ ಒಬ್ಬರು ಆಗಷ್ಟೇ ಹುಟ್ಟಿದ ಮಗುವನ್ನು ಅನಿರೀಕ್ಷಿತವಾಗಿ ನಿಮ್ಮ ಕೈಗೆ ಇಟ್ಟಂತೆ. ಅಗತ್ಯದ ಸಹಾಯವಿಲ್ಲದೆ ಮಗುವನ್ನು ಎತ್ತಿಕೊಳ್ಳಲು ನಿಮ್ಮಿಂದ ಸಾಧ್ಯವೇ? ಸಹಾಯವಿಲ್ಲದೆ ಮಗುವನ್ನು ಎತ್ತಿಕೊಂಡರೆ, ಆ ಕಡೆಯಿಂದ ಈ ಕಡೆಗೆ ಮಗು ಅಲ್ಲಾಡುತ್ತದೆ. ಅದಕ್ಕಾಗಿ ಮಗುವನ್ನು ನಾವು ಹಿಡಿದಿಟ್ಟುಕೊಳ್ಳಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ಗೆ ಈ ಪ್ರಕರಣ ಹೋಗಬಹುದು ಕೋರ್ಟ್ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…
ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್ ಬರ್ಡ್ ಎಂದು ಹೇಳಲಾಗಿದೆ. ‘ಬ್ಯಾನ್ ಬಾಯ್ ಸಹೀದ್’ ಎನ್ನುವ ಫೇಸ್ಬುಕ್ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್ ಬರ್ಡ್. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ. ಆದರೆ ನಿಜಕ್ಕೂ ಇದು…
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…