ರಾಜಕೀಯ

ಚಾಮರಾಜ ಕ್ಷೇತ್ರದಿಂದ ಈ ಬಾರಿ ಹರೀಶ್ ಗೌಡರು!ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

341

ಚಾಮರಾಜ ನಗರ ಮತದಾರರ ಸಂಖ್ಯೆ:-

ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

ಈ ಕ್ಷೇತ್ರದಲ್ಲಿ  ಇದುವರೆಗೂ ಗೆಲುವನ್ನೇ ಕಾಣದ ಜೆಡಿಎಸ್, ಒಂದುಬಾರಿ ಬಿಜೆಪಿ , ಆಲಿ ಕಾಂಗ್ರೆಸ್ ಮದ್ಯೆ ತೀವ್ರ ಅನಾಹಣಿ ಇದೆ ಆದರೂ ಈ ಪಕ್ಷೇತರ ಅಭ್ಯರ್ಥಿ ಯಾರು ತಿಳಿಯಿರಿ:-

ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

ಆ ಪ್ರಕಾರ ನೋಡುವುದಾದರೆ ಇಡೀ ಮೈಸೂರು ಜಿಲ್ಲೆಯಲ್ಲಿ ಪಕ್ಷೇತರವಾಗಿ ಹಾಗೂ ವೈಯುಕ್ತಿಕ ಹೆಚ್ಚು ವರ್ಚಸ್ಸು ಹೊಂದಿರುವ ಗೆಲ್ಲಬಲ್ಲ ವ್ಯಕ್ತಿ ಚಾಮರಾಜ ಅಭ್ಯರ್ಥಿ ಕೆ ಹರೀಶ್ ಗೌಡರು ಒಬ್ಬರೇ.. ಚಾಮರಾಜ ಕ್ಷೇತ್ರದಲ್ಲಿ ತನ್ನದೇ ಆದ ವೈಯಕ್ತಿಕ ಪ್ರಾಬಲ್ಯ ಹೊಂದಿರುವ ಕೆ ಹರೀಶ್ ಗೌಡರು ಸಮಾಜಸೇವೆ ಮೂಲಕ ಮನೆ ಮನೆ ಮಾತಾಗಿರುವವರು, ಕಳೆದ ಹನ್ನೆರಡು ವರ್ಷಗಳಿಂದಲೂ ಚಾಮರಾಜ ಕ್ಷೇತ್ರದ ಜನತೆಯ ಜೊತೆ ನಿರಂತರ ಸಂಪರ್ಕ ಹೊಂದಿ ಜನರ ಕಷ್ಟ ನೋವುಗಳಿಗೆ ನೆರವಾಗುತ್ತಾ ಜನಾನುರಾಗಿ ಮನ್ನಣೆ ಪಡೆದವರು… ಮೈಸೂರಿನ ಇನ್ಯಾವ ಕ್ಷೇತ್ರಗಳಲ್ಲೂ ಪಕ್ಷೇತರವಾಗಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿ ಇಲ್ಲ ಯಾಕೆಂದರೆ ಇನ್ನೆಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ತಮ್ಮ ಪ್ರಾಬಲ್ಯ ಹೊಂದಿವೆ… ಹೆಮ್ಮೆಯಿಂದ ಶೇರ್ ಮಾಡಿ ಚಾಮರಾಜ ಕ್ಷೇತ್ರದಲ್ಲಿ ಕೆ ಹರೀಶ್ ಗೌಡರ ಗೆಲ್ಲುವ ಖಚಿತ…

ಇಲ್ಲಿ ಓದಿ…ರಾಜಕಾರಣಕ್ಕೆ ಎಂಟ್ರಿ ಕೊಟ್ರು, ದೇವೇಗೌಡರ ಈ ಪುತ್ರ…

ಮೂವತ್ತು ವರ್ಷಗಳ ಜೆಡಿಎಸ್ ಸೋಲು ಮುಂದುವರಿಯುತ್ತಾ? ಮೈಸೂರು ನಗರ ಪ್ರದೇಶದ ಹೃದಯ ಭಾಗ ಎಂದು ಕರೆಸಿಕೊಳ್ಳುವ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಕಳೆದ ಮೂವತ್ತೆರಡು ವರ್ಷಗಳಿಂದ ಗೆಲ್ಲಲು ಸಾಧ್ಯವಾಗಿಲ್ಲ, 1986 ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಿ ಎಂ ಚಿಕ್ಕಬೋರಯ್ಯರವರು ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ ಜನತಾ ಪಕ್ಷ ಜನತಾದಳ ಆದ ನಂತರ ಒಮ್ಮೆಯೂ ಚಾಮರಾಜ ಕ್ಷೇತ್ರ ಜೆಡಿಎಸ್ ವಶವಾಗಿಲ್ಲ, ಮೂವತ್ತು ವರ್ಷಗಳ ಸೋಲಿಗೆ ಕಾರಣ ಹಲವಾರಿವೆ ಆದರೆ ಸೋಲನ್ನು ಮೆಟ್ಟು ನಿಂತು ಗೆಲ್ಲುವ ಕಡೆ ಜೆಡಿಎಸ್ ಪಕ್ಷವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿ ಶ್ರಮ ಹಾಕಿದ್ದು ಪಕ್ಷ ಕಟ್ಟಿದ್ದು ಜನರು ಜೆಡಿಎಸ್ ಪಕ್ಷದ ಹೆಸರು ಹೇಳುವಂತೆ ಮಾಡಿದ್ದು ಕೆ ಹರೀಶ್ ಗೌಡ…

ಜೆಡಿಎಸ್ ಪಕ್ಷ ನಿಂತಿರುವುದು ದೇವೇಗೌಡ್ರು ಹಾಗೂ ಕುಮಾರಣ್ಣರಿಂದ ಹಾಗೂ ಎರಡನೇ ಹಂತದ ನಾಯಕರು ಹಾಗೂ ಸಾವಿರಾರು ನಿಷ್ಟಾವಂತ ಕಾರ್ಯಕರ್ತರಿಂದ, ಪಕ್ಷ ಕಟ್ಟಲು ವರಿಷ್ಠರ ಶ್ರಮದ ಜೊತೆ ಎರಡನೇ ಹಂತದ ನಾಯಕರ ಶ್ರಮವೂ ಸಹಾ ಇರತ್ತೆ ಎಂಬುದನ್ನು ಮರೆಯಬಾರದು, ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂಬುದಾದರೆ ಮೂವತ್ತೆರಡು ವರ್ಷದಿಂದ ಯಾಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ಪ್ರಶ್ನೆ ಮೂಡತ್ತೆ?? ಒಂದು ವರ್ಷದ ಹಿಂದಿನಿಂದಲೂ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲತ್ತೆ ಎಂಬ ಪ್ರಬಲವಾದ ಮಾತಿತ್ತು ಕಾರಣ ಕೆ ಹರೀಶ್ ಗೌಡ ಅಭ್ಯರ್ಥಿಯಾಗುತ್ತಾರೆ ಹರೀಶ್ ಗೌಡ ಪಕ್ಷ ಸಂಘಟನೆ ಮಾಡಿದ್ದಾರೆ ಜನರ ಸೇವೆ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಹಾಗೂ ಕೆ ಹರೀಶ್ ಗೌಡ ಸ್ಥಳೀಯ ಅಭ್ಯರ್ಥಿ ಜನರ ನಾಡಿಮಿಡಿತ ಅರಿತಿದ್ದಾರೆ ಸಾವಿರಾರು ಜನ ಅಭಿಮಾನಿಗಳು ಬೆಂಬಲಿಗರು ಹೊಂದಿದ್ದಾರೆ.

 

ಈ ಕಾರಣಕ್ಕಾಗಿ ಜೆಡಿಎಸ್ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಚಲವಾದ ನಂಬಿಕೆ ಇತ್ತು ಆದರೆ ಈಗ ನಂಬಿಕೆ ಹುಸಿಯಾಗಿದೆ ಜೆಡಿಎಸ್ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಲ್ಲಿ ಎಡವಿದೆ, ಅಂಗೈಯಲ್ಲಿ ಗೆಲ್ಲುವ ಅಭ್ಯರ್ಥಿ ಇಟ್ಟುಕೊಂಡು ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ರಾಜಕೀಯ ಗಂಧ ತಿಳಿಯದವರನ್ನು ಅಭ್ಯರ್ಥಿ ಮಾಡಲು ಹೊರಟಿದೆ ಆ ಮೂಲಕ ಜೆಡಿಎಸ್ ಪಕ್ಷ ಹಾಗೂ ನಿಷ್ಠಾವಂತ ಕಾರ್ಯಕರ್ತರ ನಡುವಿನ ಅವಿನಾಭಾವ ಸಂಬಂಧಕ್ಕೆ ಎಳ್ಳುನೀರು ಬಿಟ್ಟಿದೆ, ನಿಷ್ಠಾವಂತ ನಾಯಕ ಕೆ ಹರೀಶ್ ಗೌಡರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ನಿಷ್ಠಾವಂತರು ಪಕ್ಷದಿಂದ ದೂರ ಉಳಿದಿದ್ದಾರೆ ಹಾಗೂ ಕ್ಷೇತ್ರಾದ್ಯಂತ ಕೆ ಹರೀಶ್ ಗೌಡರ ಬೆಂಬಲಿಗರು ಹಿತೈಷಿಗಳು ಅಭಿಮಾನಿಗಳು ಕೆ ಹರೀಶ್ ಗೌಡರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಈ ಭಾರಿ ಶಾಸಕರನ್ನಾಗಿ ಮಾಡಿಯೇ ತಿರುತ್ತೇವೆ ಎಂಬ ದೃಡಸಂಕಲ್ಪ ಮಾಡಿದ್ದಾರೆ.

ಕಳೆದ ಒಂದು ತಿಂಗಳಿನಿಂದಲೂ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲೂ ಹರೀಶ್ ಗೌಡರ ಹಿತೈಷಿಗಳ ಸಭೆ ನಡೆದಿದ್ದು ಎಲ್ಲಾ ಭಾಗದಲ್ಲೂ ಕೆ ಹರೀಶ್ ಗೌಡರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.. ಹನ್ನೆರಡು ವರ್ಷಗಳಿಂದ ಕ್ಷೇತ್ರದ ಜನರ ಜೊತೆ ನಿಕಟ ಸಂಬಂಧ ಹೊಂದಿರುವ ಹರೀಶ್ ಗೌಡರಿಗೆ ಪಕ್ಷೇತರವಾಗಿ ಚುನಾವಣೆ ಎದುರಿಸುವುದು ಕಷ್ಟವೇನಲ್ಲ ಎಂಬುದು ಸಾರ್ವಜನಿಕರ ಮಾತು.. ಯಾವ ಪಕ್ಷದಲ್ಲಿ ಯಾರು ಅಭ್ಯರ್ಥಿಯಾದರೂ ನಿಷ್ಠಾವಂತ ನಾಯಕ ಜನಾನುರಾಗಿ ಕೆ ಹರೀಶ್ ಗೌಡರನ್ನು ಗೆಲ್ಲಿಸಿಕೊಳ್ಳಬೇಕು ಅವರು ಜನರ ಕೆಲಸ ಮಾಡುತ್ತಾರೆ ಕೆ ಹರೀಶ್ ಗೌಡರಿಂದ ಚಾಮರಾಜ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಜನ ತಿರ್ಮಾನಿಸಿದ್ದಾರೆ.

 

ಚುನಾವಣೆ ಇನ್ನೂ ನೂರು ದಿನ ಇದೆ ಹನ್ನೆರಡು ವರ್ಷಗಳ ಕೆ ಹರೀಶ್ ಗೌಡರ ದುಡಿಮೆಗೆ ಬೆಲೆ ಕೊಡಬೇಕು, ಕೆ ಹರೀಶ್ ಗೌಡರ ವ್ಯಕ್ತಿತ್ವಕ್ಕೆ ಬೆಲ ಕೊಡಬೇಕು ಎಂದು ಮತದಾರ ಮನಸ್ಸು ಮಾಡಿದ್ದಾನೆ ಈ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಜನತೆ ಜಾತಿ ಧರ್ಮ ಪಕ್ಷ ಮರೆತು ನಿಷ್ಠಾವಂತ ನಾಯಕನ ಉಳಿಸುತ್ತಾರೆ ಎಂಬ ಭರವಸೆ ನಮಗೂ ಇದೆ.. ಈಗಲೂ ಜೆಡಿಎಸ್ ಪಕ್ಷದಿಂದ ಕೆ ಹರೀಶ್ ಗೌಡರಿಗೆ ಟಿಕೆಟ್ ನೀಡಿದ್ದಲ್ಲಿ ಜೆಡಿಎಸ್ ಪಕ್ಷ ಮೂವತ್ತೆರಡು ವರ್ಷಗಳ ನಂತರ ಈ ಕ್ಷೇತ್ರದಲ್ಲಿ ಗದ್ದುಗೇರುವುದು ಖಚಿತ, ಈಗಲೂ ಕಾಲ ಮಿಂಚಿಲ್ಲ ವರಿಷ್ಠರು ಮತ್ತೊಮ್ಮೆ ಯೋಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿ.. ಕಾದು ನೋಡೋಣಾ‌. ಧನ್ಯವಾದಗಳು

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

  • modi, ಮನೆ

    ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

    ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

  • ಸುದ್ದಿ

    ಪ್ರೇಯಸಿಯೊಂದಿಗೆ ಪತ್ನಿಯನ್ನೂ ಮರುಮದ್ವೆಯಾದ ಸಿಆರ್‌ಪಿಎಫ್ ಯೋಧ…ಕಾರಣ?

    ರಾಯ್ಪುರ್: ಸಿಆರ್‌ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್‍ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್‌ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್‌ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…