ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲಕನಿಲ್ಲದ ಕಾರು, ಹಡಗು ತಯಾರಿಕೆಯ ಬಗ್ಗೆ ಕೇಳಿರುತ್ತೀರಿ. ಇದೀಗ ಪೈಲಟ್ ಗಳಿಲ್ಲದಿರುವ ವಿಮಾನ ನೋಡುವ ಕಾಲ ಸಮೀಪಿಸಿದೆ.
ಕಂಪನಿ ಯಾವುದು ಗೊತ್ತಾ?
ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.
ಪೈಲಟ್ ಇಲ್ಲದ ವಿಮಾನ ತಯಾರಿಕೆಗೆ ಅಗತ್ಯವಿರುವ ತಂತ್ರಜ್ಞ್ಯಾನಗಳನ್ನು ಸಿದ್ದಪಡಿಸಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಈಗಾಗಲೇ ಪ್ಯಾಸೆಂಜರ್ ವಿಮಾನಗಳಲ್ಲಿರುತ್ತಿದ್ದ ಪೈಲಟ್ ಗಳ ಸಂಖ್ಯೆ ಮೂರರಿಂದ ಎರಡಕ್ಕೆ ಇಳಿಕೆಯಾಗಿದೆ.
ಈ ವರ್ಷದ ಬೇಸಿಗೆಯಲ್ಲಿ ಕಾಕ್ ಪಿಟ್ ನ ವ್ಯವಸ್ಥೆಗಳನ್ನೇ ಹೋಲುವ ಸಾದನದಲ್ಲಿ ಪರೀಕ್ಷೆ ನಡೆಸಲಿದ್ದು, ಯಶಸ್ವಿಯಾದಲ್ಲಿ ಮುಂದಿನ ವರ್ಷದ ವೇಳೆಗೆ ನಿಜವಾದ ವಿಮಾನದಲ್ಲಿ ಬಳಸಲು ನಿರ್ದರಿಸುವುದಾಗಿ ಬೋಯಿಂಗ್ ಸಂಸ್ಥೆಯ ಉಪಾದ್ಯಕ್ಷ ಮೈಕ್ ಸಿನ್ನೆಟ್ ಹೇಳಿದ್ದಾರೆ.
ಈ ವಿಮಾನಗಳಲ್ಲಿ ಆರ್ಟಿಪಿಶಿಯಲ್ ಇಂಟಲಿಜೆನ್ಸ್ ತಂತ್ರಜ್ಞ್ಯಾನವನ್ನು ಬಳಸಲಾಗುವುದು. ಇದು ವಿಮಾನ ಹಾರಾಟದ ವೇಳೆ ಪೈಲಟ್ ಗಳು ತೆಗೆದುಕೊಳ್ಳುವ ಕೆಲ ನಿರ್ದಾರಗಳನ್ನು ತೆಗೆದುಕೊಳ್ಳಲು ಶಕ್ತ್ಹವಾಗಿವೆಯೇ ಎಂಬ ಬಗೆಗೂ ಪರೀಕ್ಷೆಗಳು ನಡೆಯುತ್ತಿವೆ.
ವಿಮಾನಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದಿನೇದಿನೆ ಏರಿಕೆಯಾಗುತ್ತಿದೆ. ಇದರ ಪರಿಣಾಮವಾಗಿ ವಿಮಾನಗಳ ಸಂಖ್ಯೆ ಮತ್ತು ಅದರ ಪೈಲಟ್ ಗಳ ಸಂಖ್ಯೆಯು ಏರಿಕೆಯಾಗಬೇಕು.
ಈಗಿನ ಪ್ರಮಾಣಗಳನ್ನು ಗಮನಿಸಿದರೆ ಮುಂದಿನ 20 ವರ್ಷಗಳಲ್ಲಿ 15 ಲಕ್ಷ ಪೈಲಟ್ ಗಳ ಅಗತ್ಯಬೀಳಲಿದೆ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಪೈಲಟ್ ಗಳ ನಿಯೋಜನೆ ವಿಮಾನಯಾನ ಸಂಸ್ಥೆಗಳಿಗೆ ಹೆಚ್ಚಿನ ಹೊರೆಯಾಗಲಿದೆ. ಹೀಗಾಗಿಯೇ ಬೋಯಿಂಗ್ ಸಂಸ್ಥೆ ಇಂತಹದ್ದೊಂದು ತಂತ್ರಜ್ಞ್ಯಾನ ಅಭಿವೃದ್ಧಿಪಡಿಸಿ, ಪೈಲಟ್ ಇಲ್ಲದ ವಿಮಾನ ಸಿದ್ದತೆ ನಡೆಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…