ಆರೋಗ್ಯ, ಉಪಯುಕ್ತ ಮಾಹಿತಿ

ಚಿಕನ್ ಪ್ರಿಯರೇ ಕೋಳಿಯ ಚರ್ಮ ತಿನ್ನುತ್ತೀರಾ..!ಹಾಗಾದ್ರೆ ತಿನ್ನುವ ಮೊದಲು ಈ ಲೇಖನ ಓದಿ..ಶೇರ್ ಮಾಡಿ…

2110

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

ಹಾಗಾದರೆ ಇದುವರೆಗೆ ನಾವೆಲ್ಲ ತಿಳಿದಿರುವಂತೆ ಕೋಳಿಮಾಂಸದ ಚರ್ಮ ಅಷ್ಟು ಕೆಟ್ಟದಲ್ಲ. ಬನ್ನಿ, ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅರಿಯೋಣ…

ಕೋಳಿಮಾಂಸದ ಅಂಗಡಿಗೆ ಹೋದಾಗ ಅಂಗಡಿಯವರು ಸ್ಕಿನ್ ಔಟ್ ಅಥವಾ ಸ್ಕಿನ್ ಬರ್ನ್ ಮಾಡಬೇಕೇ ಎಂದು ಕೇಳುತ್ತಾರೆ. ಇದರ ಅರ್ಥ ಚರ್ಮವನ್ನು ಉಳಿಸಬೇಕೇ ಬೇಡವೇ ಎಂದು. ಕೆಲವರು ಚರ್ಮವನ್ನು ಉಳಿಸಿ ಎಂದು ಹೇಳುತ್ತಾರೆ.

ಆಗ ಪುಕ್ಕವನ್ನು ನಿವಾರಿಸಿ ಚರ್ಮಸಹಿತ ಮಾಂಸವನ್ನು ನೀಡುತ್ತಾರೆ. ಚರ್ಮ ಬೇಡವೆನ್ನುವವರು ಇದರಲ್ಲಿ ಕೊಬ್ಬು ಇದೆ, ಇದರಲ್ಲಿ ಕೊಲೆಸ್ಟ್ರಾಲ್ ಇದೆ, ಇದು ಹೃದಯಕ್ಕೆ ಒಳ್ಳೆಯದಲ್ಲ ಎಂಬ ಕಾರಣಗಳನ್ನು ನೀಡುತ್ತಾರೆ.

ವಾಸ್ತವಾಂಶ #1

ಕೊಬ್ಬಿನ ಬಗ್ಗೆ ಅರಿಯುವುದಾದರೆ ಒಂದು ಔನ್ಸ್ ನಷ್ಟು ಚರ್ಮದಲ್ಲಿ ಕೇವಲ ಎಂಟು ಗ್ರಾಂ ಅಪರ್ಯಾಪ್ತ ಕೊಬ್ಬು ಮತ್ತು ಮೂರು ಗ್ರಾಂ ಪರ್ಯಾಪ್ತ ಕೊಬ್ಬು ಇದೆ.

ವಾಸ್ತವಾಂಶ #2

ಚರ್ಮದಲ್ಲಿ ಯಾವ ಬಗೆಯ ಕೊಬ್ಬು ಇದೆ?  ಚರ್ಮವನ್ನು ಪರೀಕ್ಷಿಸಿದ ತಜ್ಞರಿಗೆ ಇದರಲ್ಲಿ ಮೋನೋ ಅಪರ್ಯಾಪ್ತ ಕೊಬ್ಬು (ಅಥವಾ ಓಲಿಕ್ ಅಮ್ಲ) ಕಂಡುಬಂದಿದೆ. ಈ ಆಮ್ಲದ ಹೆಗ್ಗಳಿಕೆ ಎಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಅಂದರೆ ಇದುವರೆಗೆ ನಾವು ಹೆದರಿದಂತೆ ಹೃದಯ ಸ್ತಂಭನದ ಸಾಧ್ಯತೆಯನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿಮೆಗೊಳಿಸುತ್ತದೆ. ಅಲ್ಲದೇ ದೇಹದಲ್ಲಿ ಹಾರ್ಮೋನುಗಳ ಪ್ರಮಾಣವನ್ನೂ ನಿಯಂತ್ರಿಸುತ್ತದೆ.

 

ವಾಸ್ತವಾಂಶ #3

ಕೋಳಿಮಾಂಸ ತಿನ್ನುವವರು ಕ್ಯಾಲೋರಿಗಳ ಬಗ್ಗೆ ಭಾರೀ ಚಿಂತಾಕ್ರಾಂತರಾಗಿರುತ್ತಾರೆ. ಆದರೆ ಚರ್ಮಸಹಿತ ಮತ್ತು ಚರ್ಮರಹಿತ ಮಾಂಸದಲ್ಲಿ ಕ್ಯಾಲೋರಿಗಳಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಇರುವುದಿಲ್ಲ. ಚರ್ಮಸಹಿತ ಮಾಂಸದಲ್ಲಿ ಕೆಲವೇ ಕ್ಯಾಲೋರಿಗಳು ಹೆಚ್ಚಿರುತ್ತವೆ ಅಷ್ಟೇ.

 

ವಾಸ್ತವಾಂಶ #4

ಇನ್ನೊಂದು ಉತ್ತಮ ಗುಣವೆಂದರೆ ಚರ್ಮಸಹಿತ ಮಾಂಸ ಕಡಿಮೆ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಚರ್ಮರಹಿತ ಮಾಂಸ ಎಣ್ಣೆಯನ್ನು ಹೆಚ್ಚಾಗಿ ಹೀರಿಕೊಳ್ಳುವ ಕಾರಣ ಅಡುಗೆಯ ಸಮಯದಲ್ಲಿ ಹೆಚ್ಚಿನ ಎಣ್ಣೆಯನ್ನು ಹಾಕಬೇಕಾಗುತ್ತದೆ.

ವಾಸ್ತವಾಂಶ #5

ಆದರೆ ಚರ್ಮಸಹಿತ ಮಾಂಸವನ್ನು ಹೆಚ್ಚು ತಿನ್ನಬಹುದೇ? ತಜ್ಞರ ಪ್ರಕಾರ ಇಲ್ಲ! ಏಕೆಂದರೆ ಚರ್ಮದ ಪ್ರಮಾಣ ಹೆಚ್ಚಾದರೆ ಇದು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಆದ್ದರಿಂದ ಚರ್ಮದ ಪ್ರಮಾಣ ಮಿತವಾಗಿರುವುದು ತುಂಬಾ ಅಗತ್ಯ.

 

ವಾಸ್ತವಾಂಶ #6

ಚರ್ಮಸಹಿತ ಮಾಂಸ ಸೇವಿಸಿದರೆ ಕೊಂಚ ಪ್ರಮಾಣಕ್ಕೇ ತೃಪ್ತಿಯಾಗುವ ಕಾರಣ ಹೆಚ್ಚಿನ ಪ್ರಮಾಣ ಸೇವಿಸುವ ಅಗತ್ಯವಿಲ್ಲ. ಆದರೆ ಚರ್ಮರಹಿತ ಮಾಂಸ ತಿಂದರೆ ಎಷ್ಟು ತಿಂದರೂ ತೃಪ್ತಿ ಸಿಗದ ಕಾರಣ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ.

 

ವಾಸ್ತವಾಂಶ #7

ಒಂದು ವೇಳೆ ನೀವು ಮಾಂಸವನ್ನು ಹುರಿಯುವುದಾದರೆ ಚರ್ಮ ಗರಿಗರಿಯಾಗುವಷ್ಟು ಹುರಿಯಬೇಡಿ. ಏಕೆಂದರೆ ಕಪ್ಪಗಾದ ಚರ್ಮ ಎಲ್ಲಾ ಒಳ್ಳೆಯ ಗುಣಗಳನ್ನು ಕಳೆದುಕೊಳ್ಳುತ್ತದೆ ಹಾಗೂ ಕಪ್ಪಗಾದ ಭಾಗ ಇಂಗಾಲಕ್ಕೆ ಪರಿವರ್ತನೆಗೊಂಡು ಆರೋಗ್ಯಕ್ಕೆ ಮಾರಕವಾಗುತ್ತದೆ.

ಈ ನಾಣ್ಯಗಳು ನಿಮ್ಮಲ್ಲಿದೆಯಾ..!ಹಾಗಾದ್ರೆ ಈ ಕೆಳಗಿನ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…

  • ದೇಶ-ವಿದೇಶ

    ಹಾಡು ಹಗಲಲ್ಲೇ ಯುವತಿಯ ಮೇಲೆ ಕಾಮುಕರ ಗುಂಪಿನ ಅಟ್ಟಹಾಸ, ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ !!!

    ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್‌ ಆಗಿದೆ.

  • ಸುದ್ದಿ

    ಬಿಗ್ ಶಾಕಿಂಗ್!ತರಗತಿಯಲ್ಲೇ ಕುಡಿದು ರಂಪಾಟ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿನಿಯರು…

    ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…

  • ಕವಿ

    ಸಾಹಿತಿ ಕಾಮರೂಪಿ ಇನ್ನಿಲ್ಲ

    ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…

  • ಸುದ್ದಿ

    ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

    ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…

  • ರಾಜಕೀಯ

    ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

    ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…