ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

ಕೋಳಿಮಾಂಸದ ಅಂಗಡಿಗೆ ಹೋದಾಗ ಅಂಗಡಿಯವರು ಸ್ಕಿನ್ ಔಟ್ ಅಥವಾ ಸ್ಕಿನ್ ಬರ್ನ್ ಮಾಡಬೇಕೇ ಎಂದು ಕೇಳುತ್ತಾರೆ. ಇದರ ಅರ್ಥ ಚರ್ಮವನ್ನು ಉಳಿಸಬೇಕೇ ಬೇಡವೇ ಎಂದು. ಕೆಲವರು ಚರ್ಮವನ್ನು ಉಳಿಸಿ ಎಂದು ಹೇಳುತ್ತಾರೆ.

ಆಗ ಪುಕ್ಕವನ್ನು ನಿವಾರಿಸಿ ಚರ್ಮಸಹಿತ ಮಾಂಸವನ್ನು ನೀಡುತ್ತಾರೆ. ಚರ್ಮ ಬೇಡವೆನ್ನುವವರು ಇದರಲ್ಲಿ ಕೊಬ್ಬು ಇದೆ, ಇದರಲ್ಲಿ ಕೊಲೆಸ್ಟ್ರಾಲ್ ಇದೆ, ಇದು ಹೃದಯಕ್ಕೆ ಒಳ್ಳೆಯದಲ್ಲ ಎಂಬ ಕಾರಣಗಳನ್ನು ನೀಡುತ್ತಾರೆ.

ಕೊಬ್ಬಿನ ಬಗ್ಗೆ ಅರಿಯುವುದಾದರೆ ಒಂದು ಔನ್ಸ್ ನಷ್ಟು ಚರ್ಮದಲ್ಲಿ ಕೇವಲ ಎಂಟು ಗ್ರಾಂ ಅಪರ್ಯಾಪ್ತ ಕೊಬ್ಬು ಮತ್ತು ಮೂರು ಗ್ರಾಂ ಪರ್ಯಾಪ್ತ ಕೊಬ್ಬು ಇದೆ.
ಚರ್ಮದಲ್ಲಿ ಯಾವ ಬಗೆಯ ಕೊಬ್ಬು ಇದೆ? ಚರ್ಮವನ್ನು ಪರೀಕ್ಷಿಸಿದ ತಜ್ಞರಿಗೆ ಇದರಲ್ಲಿ ಮೋನೋ ಅಪರ್ಯಾಪ್ತ ಕೊಬ್ಬು (ಅಥವಾ ಓಲಿಕ್ ಅಮ್ಲ) ಕಂಡುಬಂದಿದೆ. ಈ ಆಮ್ಲದ ಹೆಗ್ಗಳಿಕೆ ಎಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಅಂದರೆ ಇದುವರೆಗೆ ನಾವು ಹೆದರಿದಂತೆ ಹೃದಯ ಸ್ತಂಭನದ ಸಾಧ್ಯತೆಯನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿಮೆಗೊಳಿಸುತ್ತದೆ. ಅಲ್ಲದೇ ದೇಹದಲ್ಲಿ ಹಾರ್ಮೋನುಗಳ ಪ್ರಮಾಣವನ್ನೂ ನಿಯಂತ್ರಿಸುತ್ತದೆ.

ಕೋಳಿಮಾಂಸ ತಿನ್ನುವವರು ಕ್ಯಾಲೋರಿಗಳ ಬಗ್ಗೆ ಭಾರೀ ಚಿಂತಾಕ್ರಾಂತರಾಗಿರುತ್ತಾರೆ. ಆದರೆ ಚರ್ಮಸಹಿತ ಮತ್ತು ಚರ್ಮರಹಿತ ಮಾಂಸದಲ್ಲಿ ಕ್ಯಾಲೋರಿಗಳಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಇರುವುದಿಲ್ಲ. ಚರ್ಮಸಹಿತ ಮಾಂಸದಲ್ಲಿ ಕೆಲವೇ ಕ್ಯಾಲೋರಿಗಳು ಹೆಚ್ಚಿರುತ್ತವೆ ಅಷ್ಟೇ.

ಇನ್ನೊಂದು ಉತ್ತಮ ಗುಣವೆಂದರೆ ಚರ್ಮಸಹಿತ ಮಾಂಸ ಕಡಿಮೆ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಚರ್ಮರಹಿತ ಮಾಂಸ ಎಣ್ಣೆಯನ್ನು ಹೆಚ್ಚಾಗಿ ಹೀರಿಕೊಳ್ಳುವ ಕಾರಣ ಅಡುಗೆಯ ಸಮಯದಲ್ಲಿ ಹೆಚ್ಚಿನ ಎಣ್ಣೆಯನ್ನು ಹಾಕಬೇಕಾಗುತ್ತದೆ.
ಆದರೆ ಚರ್ಮಸಹಿತ ಮಾಂಸವನ್ನು ಹೆಚ್ಚು ತಿನ್ನಬಹುದೇ? ತಜ್ಞರ ಪ್ರಕಾರ ಇಲ್ಲ! ಏಕೆಂದರೆ ಚರ್ಮದ ಪ್ರಮಾಣ ಹೆಚ್ಚಾದರೆ ಇದು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಆದ್ದರಿಂದ ಚರ್ಮದ ಪ್ರಮಾಣ ಮಿತವಾಗಿರುವುದು ತುಂಬಾ ಅಗತ್ಯ.

ಚರ್ಮಸಹಿತ ಮಾಂಸ ಸೇವಿಸಿದರೆ ಕೊಂಚ ಪ್ರಮಾಣಕ್ಕೇ ತೃಪ್ತಿಯಾಗುವ ಕಾರಣ ಹೆಚ್ಚಿನ ಪ್ರಮಾಣ ಸೇವಿಸುವ ಅಗತ್ಯವಿಲ್ಲ. ಆದರೆ ಚರ್ಮರಹಿತ ಮಾಂಸ ತಿಂದರೆ ಎಷ್ಟು ತಿಂದರೂ ತೃಪ್ತಿ ಸಿಗದ ಕಾರಣ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ.

ಒಂದು ವೇಳೆ ನೀವು ಮಾಂಸವನ್ನು ಹುರಿಯುವುದಾದರೆ ಚರ್ಮ ಗರಿಗರಿಯಾಗುವಷ್ಟು ಹುರಿಯಬೇಡಿ. ಏಕೆಂದರೆ ಕಪ್ಪಗಾದ ಚರ್ಮ ಎಲ್ಲಾ ಒಳ್ಳೆಯ ಗುಣಗಳನ್ನು ಕಳೆದುಕೊಳ್ಳುತ್ತದೆ ಹಾಗೂ ಕಪ್ಪಗಾದ ಭಾಗ ಇಂಗಾಲಕ್ಕೆ ಪರಿವರ್ತನೆಗೊಂಡು ಆರೋಗ್ಯಕ್ಕೆ ಮಾರಕವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.