ಆರೋಗ್ಯ, ಉಪಯುಕ್ತ ಮಾಹಿತಿ

ಚಿಕನ್ ಪ್ರಿಯರೇ ಕೋಳಿಯ ಚರ್ಮ ತಿನ್ನುತ್ತೀರಾ..!ಹಾಗಾದ್ರೆ ತಿನ್ನುವ ಮೊದಲು ಈ ಲೇಖನ ಓದಿ..ಶೇರ್ ಮಾಡಿ…

2096

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

ಹಾಗಾದರೆ ಇದುವರೆಗೆ ನಾವೆಲ್ಲ ತಿಳಿದಿರುವಂತೆ ಕೋಳಿಮಾಂಸದ ಚರ್ಮ ಅಷ್ಟು ಕೆಟ್ಟದಲ್ಲ. ಬನ್ನಿ, ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅರಿಯೋಣ…

ಕೋಳಿಮಾಂಸದ ಅಂಗಡಿಗೆ ಹೋದಾಗ ಅಂಗಡಿಯವರು ಸ್ಕಿನ್ ಔಟ್ ಅಥವಾ ಸ್ಕಿನ್ ಬರ್ನ್ ಮಾಡಬೇಕೇ ಎಂದು ಕೇಳುತ್ತಾರೆ. ಇದರ ಅರ್ಥ ಚರ್ಮವನ್ನು ಉಳಿಸಬೇಕೇ ಬೇಡವೇ ಎಂದು. ಕೆಲವರು ಚರ್ಮವನ್ನು ಉಳಿಸಿ ಎಂದು ಹೇಳುತ್ತಾರೆ.

ಆಗ ಪುಕ್ಕವನ್ನು ನಿವಾರಿಸಿ ಚರ್ಮಸಹಿತ ಮಾಂಸವನ್ನು ನೀಡುತ್ತಾರೆ. ಚರ್ಮ ಬೇಡವೆನ್ನುವವರು ಇದರಲ್ಲಿ ಕೊಬ್ಬು ಇದೆ, ಇದರಲ್ಲಿ ಕೊಲೆಸ್ಟ್ರಾಲ್ ಇದೆ, ಇದು ಹೃದಯಕ್ಕೆ ಒಳ್ಳೆಯದಲ್ಲ ಎಂಬ ಕಾರಣಗಳನ್ನು ನೀಡುತ್ತಾರೆ.

ವಾಸ್ತವಾಂಶ #1

ಕೊಬ್ಬಿನ ಬಗ್ಗೆ ಅರಿಯುವುದಾದರೆ ಒಂದು ಔನ್ಸ್ ನಷ್ಟು ಚರ್ಮದಲ್ಲಿ ಕೇವಲ ಎಂಟು ಗ್ರಾಂ ಅಪರ್ಯಾಪ್ತ ಕೊಬ್ಬು ಮತ್ತು ಮೂರು ಗ್ರಾಂ ಪರ್ಯಾಪ್ತ ಕೊಬ್ಬು ಇದೆ.

ವಾಸ್ತವಾಂಶ #2

ಚರ್ಮದಲ್ಲಿ ಯಾವ ಬಗೆಯ ಕೊಬ್ಬು ಇದೆ?  ಚರ್ಮವನ್ನು ಪರೀಕ್ಷಿಸಿದ ತಜ್ಞರಿಗೆ ಇದರಲ್ಲಿ ಮೋನೋ ಅಪರ್ಯಾಪ್ತ ಕೊಬ್ಬು (ಅಥವಾ ಓಲಿಕ್ ಅಮ್ಲ) ಕಂಡುಬಂದಿದೆ. ಈ ಆಮ್ಲದ ಹೆಗ್ಗಳಿಕೆ ಎಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಅಂದರೆ ಇದುವರೆಗೆ ನಾವು ಹೆದರಿದಂತೆ ಹೃದಯ ಸ್ತಂಭನದ ಸಾಧ್ಯತೆಯನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿಮೆಗೊಳಿಸುತ್ತದೆ. ಅಲ್ಲದೇ ದೇಹದಲ್ಲಿ ಹಾರ್ಮೋನುಗಳ ಪ್ರಮಾಣವನ್ನೂ ನಿಯಂತ್ರಿಸುತ್ತದೆ.

 

ವಾಸ್ತವಾಂಶ #3

ಕೋಳಿಮಾಂಸ ತಿನ್ನುವವರು ಕ್ಯಾಲೋರಿಗಳ ಬಗ್ಗೆ ಭಾರೀ ಚಿಂತಾಕ್ರಾಂತರಾಗಿರುತ್ತಾರೆ. ಆದರೆ ಚರ್ಮಸಹಿತ ಮತ್ತು ಚರ್ಮರಹಿತ ಮಾಂಸದಲ್ಲಿ ಕ್ಯಾಲೋರಿಗಳಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಇರುವುದಿಲ್ಲ. ಚರ್ಮಸಹಿತ ಮಾಂಸದಲ್ಲಿ ಕೆಲವೇ ಕ್ಯಾಲೋರಿಗಳು ಹೆಚ್ಚಿರುತ್ತವೆ ಅಷ್ಟೇ.

 

ವಾಸ್ತವಾಂಶ #4

ಇನ್ನೊಂದು ಉತ್ತಮ ಗುಣವೆಂದರೆ ಚರ್ಮಸಹಿತ ಮಾಂಸ ಕಡಿಮೆ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಚರ್ಮರಹಿತ ಮಾಂಸ ಎಣ್ಣೆಯನ್ನು ಹೆಚ್ಚಾಗಿ ಹೀರಿಕೊಳ್ಳುವ ಕಾರಣ ಅಡುಗೆಯ ಸಮಯದಲ್ಲಿ ಹೆಚ್ಚಿನ ಎಣ್ಣೆಯನ್ನು ಹಾಕಬೇಕಾಗುತ್ತದೆ.

ವಾಸ್ತವಾಂಶ #5

ಆದರೆ ಚರ್ಮಸಹಿತ ಮಾಂಸವನ್ನು ಹೆಚ್ಚು ತಿನ್ನಬಹುದೇ? ತಜ್ಞರ ಪ್ರಕಾರ ಇಲ್ಲ! ಏಕೆಂದರೆ ಚರ್ಮದ ಪ್ರಮಾಣ ಹೆಚ್ಚಾದರೆ ಇದು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಆದ್ದರಿಂದ ಚರ್ಮದ ಪ್ರಮಾಣ ಮಿತವಾಗಿರುವುದು ತುಂಬಾ ಅಗತ್ಯ.

 

ವಾಸ್ತವಾಂಶ #6

ಚರ್ಮಸಹಿತ ಮಾಂಸ ಸೇವಿಸಿದರೆ ಕೊಂಚ ಪ್ರಮಾಣಕ್ಕೇ ತೃಪ್ತಿಯಾಗುವ ಕಾರಣ ಹೆಚ್ಚಿನ ಪ್ರಮಾಣ ಸೇವಿಸುವ ಅಗತ್ಯವಿಲ್ಲ. ಆದರೆ ಚರ್ಮರಹಿತ ಮಾಂಸ ತಿಂದರೆ ಎಷ್ಟು ತಿಂದರೂ ತೃಪ್ತಿ ಸಿಗದ ಕಾರಣ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ.

 

ವಾಸ್ತವಾಂಶ #7

ಒಂದು ವೇಳೆ ನೀವು ಮಾಂಸವನ್ನು ಹುರಿಯುವುದಾದರೆ ಚರ್ಮ ಗರಿಗರಿಯಾಗುವಷ್ಟು ಹುರಿಯಬೇಡಿ. ಏಕೆಂದರೆ ಕಪ್ಪಗಾದ ಚರ್ಮ ಎಲ್ಲಾ ಒಳ್ಳೆಯ ಗುಣಗಳನ್ನು ಕಳೆದುಕೊಳ್ಳುತ್ತದೆ ಹಾಗೂ ಕಪ್ಪಗಾದ ಭಾಗ ಇಂಗಾಲಕ್ಕೆ ಪರಿವರ್ತನೆಗೊಂಡು ಆರೋಗ್ಯಕ್ಕೆ ಮಾರಕವಾಗುತ್ತದೆ.

ಈ ನಾಣ್ಯಗಳು ನಿಮ್ಮಲ್ಲಿದೆಯಾ..!ಹಾಗಾದ್ರೆ ಈ ಕೆಳಗಿನ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

    ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…

  • ಸರ್ಕಾರದ ಯೋಜನೆಗಳು

    ಈಗ ವಿದ್ಯಾರ್ಥಿಗಳಿಗೆ 1 ಜಿ.ಬಿ. ಉಚಿತ ಡೇಟಾ ಸಿಗಲಿದೆ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…

  • ಉಪಯುಕ್ತ ಮಾಹಿತಿ

    ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…