ಸಂಬಂಧ

ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

86

          ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಮನೆನಾದ್ರೂ ಇದೆ. ಪ್ಲೀಸ್ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಬಾಲಕಿ ಸಾವನ್ನಪ್ಪಿದ್ದಾಳೆ.

ಆಂಧ್ರಪ್ರದೇಶ ಮೂಲದ ಬಾಲಕಿಯ ಹೆಸರು ಸಾಯಿ ಶ್ರೀ. ಈಕೆಗೆ ಬೋನ್ ಮ್ಯಾರೋ ಕ್ಯಾನ್ಸರ್ ಇದೆ ಎಂದು 2016 ಆಗಸ್ಟ್ 27ರಂರಂದು ವೈದ್ಯರು ಹೇಳಿದ್ದರು. ಆದ್ರೆ ಚಿಕಿತ್ಸೆಗೆ ಬೇಕಾಗುವಷ್ಟು ಹಣ ಅಮ್ಮನ ಬಳಿ ಇಲ್ಲ. ಮನೆ ಮಾರಿ ಹಣ ಕೊಡಿ. ಅಮ್ಮನಿಗೆ ಹಣ ಕೊಡಲು ಇಷ್ಟವಿಲ್ಲ ಅಂದ್ರೆ ನೀವೇ ಬಂದು ಆಸ್ಪತ್ರೆಯಲ್ಲಿ ಹಣ ಕಟ್ಟಿ ಎಂದು ಸಾಯಿ ಶ್ರೀ ವಿಡಿಯೋ ಮೂಲಕ ತನ್ನ ತಂದೆಗೆ ಹಣ ನೀಡುವಂತೆ ಕೇಳಿದ್ದಳು.

ಸಾಯಿ ಶ್ರೀ ತಂದೆ ಮದಮ್ಶೆಟ್ಟಿ ಶಿವಕುಮಾರ್ ತನ್ನ ಪತ್ನಿ ಸುಮಾ ಶ್ರೀ ಮತ್ತು ಮಗಳಿಂದ 8 ವರ್ಷದ ಹಿಂದೆಯೇ ದೂರವಾಗಿದ್ರು. ವರದಿಯ ಪ್ರಕಾರ ಸಾಯಿ ಶ್ರೀ ತನ್ನ ತಾಯಿಯೊಂದಿಗೆ ವಿಜಯವಾಡದಲ್ಲಿ ನೆಲೆಸಿದ್ದು, ತಂದೆ ಬೆಂಗಳೂರಿನಲ್ಲಿದ್ದರು ಎನ್ನಲಾಗಿದೆ.

ಶಿವ ಕುಮಾರ್ ಮತ್ತು ಸುಮಾ ದೂರವಾಗುವುದಕ್ಕೂ ಮುನ್ನ ಮಗಳಾದ ಸಾಯಿ ಶ್ರೀ ಹೆಸರಲ್ಲಿ ಒಂದು ಫ್ಲಾಟ್ ಖರೀದಿಸಿದ್ರು. ಮನೆ ಮಾರಿ ಮಗಳ ಕ್ಯಾನ್ಸರ್ ಚಿಕಿತ್ಸೆಗೆ ಹಣ ಹೊಂದಿಸಲು ಮುಂದಾದಾಗ ಗಂಡ ಶಿವ ಕುಮಾರ್, ತೆಲುಗು ದೇಶಂ ಪಾರ್ಟಿಯ ಶಾಸಕ ಬೋಂಡಾ ಉಮಾಮಹೇಶ್ವರ್ ರಾವ್ ಅವರ ನೆರವಿನಿಂದ ಮನೆ ಮಾರಾಟ ಮಾಡದಂತೆ ತಡೆದಿದ್ದರು ಎಂದು ಸುಮಾ ಆರೋಪಿಸಿದ್ದಾರೆ.

ಶಾಸಕರ ಬೆಂಬಲ ಇದ್ದ ಕಾರಣ ಶಿವ ಕುಮಾರ್ ಕಳಿದಿದ್ದ ಗೂಂಡಾಗಳ ವಿರುದ್ಧ ದೂರು ದಾಖಲಿಸಿಕೊಳ್ಳಲು ಆಂಧ್ರಪ್ರದೇಶದ ಪೊಲೀಸರು ನಿರಾಕರಿಸಿದ್ರು ಎಂದು ಸುದ್ದಿ ಸಂಸ್ಥೆ ಎಎನ್ ವರದಿ ಮಾಡಿದೆ.

ಬಗ್ಗೆ ಹೇಳಿಕೆ ನೀಡಿರೋ ಬಾಲಾಲ ಹಕ್ಕುಳ ಸಂಗಂನ ಅಧ್ಯಕ್ಷರಾದ ಅಚ್ಯುತ್ ರಾವ್, ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗದಲ್ಲಿ ಅರ್ಜಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಹಣ ನೀಡಲು ಶಕ್ತರಾಗಿದ್ದರೂ ತಂದೆ ಮಗಳ ಚಿಕಿತ್ಸೆಗೆ ಹಣ ನೀಡಿಲ್ಲವೆಂಬುದನ್ನು ಮನಗಂಡ ರಾಜ್ಯ ಮಾನವ ಹಕ್ಕುಗಳ ಆಯೋಗ, ಬಗ್ಗೆ ವಿಸ್ತø ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ.

ವಿಡಿಯೋ ಸದ್ಯ ದೇಶದಾದ್ಯಂತ ವೈರಲ್ ಆಗಿದ್ದು, ತಂದೆಯ ವರ್ತನೆಗೆ ಖಂಡನೆ ವ್ಯಕ್ತವಾಗಿದೆ.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮೀಸಲಾತಿ ಯಾ‌ರ‌್ಯಾರಿಗೆ ಇದೆ.?ಎಷ್ಟಿದೆ..‌?ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ.?ತಿಳಿಯಲು ಮುಂದೆ ಓದಿ ಶೇರ್ ಮಾಡಿ…

    ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್‌ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾ‌ರ‌್ಯಾರಿಗೆ ಇದೆ..? ಎಷ್ಟಿದೆ..‌? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…

  • ಸಾಧನೆ, ಸುದ್ದಿ

    ಸೆಮಿಫೈನಲ್‍ನಲ್ಲಿ ಪಾಕ್ ವಿರುದ್ಧ ಶತಕ ಸಿಡಿಸಿದ ಪಾನಿಪುರಿ ಮಾರುತ್ತಿದ್ದ 18ರ ಪೋರ ಜೈಸ್ವಾಲ್

    ಅಂಟರ್ 19 ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್‍ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…

  • inspirational, ಸುದ್ದಿ

    ನಿವೃತ್ತಿ ಬಳಿಕ ಮಾಡೋದೇನು? ಎಂಬ ಪ್ರಶ್ನೆಗೆ ಕೊಹ್ಲಿ ಕೊಟ್ಟ ಉತ್ತರ ತಿಳಿದರೆ ಶಾಕ್ ಆಗುತ್ತೀರಾ…!

    ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್‌ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್‌ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್‌ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…

  • ಆಧ್ಯಾತ್ಮ

    ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

    ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….