ಸಂಬಂಧ

ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

87

          ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಮನೆನಾದ್ರೂ ಇದೆ. ಪ್ಲೀಸ್ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಬಾಲಕಿ ಸಾವನ್ನಪ್ಪಿದ್ದಾಳೆ.

ಆಂಧ್ರಪ್ರದೇಶ ಮೂಲದ ಬಾಲಕಿಯ ಹೆಸರು ಸಾಯಿ ಶ್ರೀ. ಈಕೆಗೆ ಬೋನ್ ಮ್ಯಾರೋ ಕ್ಯಾನ್ಸರ್ ಇದೆ ಎಂದು 2016 ಆಗಸ್ಟ್ 27ರಂರಂದು ವೈದ್ಯರು ಹೇಳಿದ್ದರು. ಆದ್ರೆ ಚಿಕಿತ್ಸೆಗೆ ಬೇಕಾಗುವಷ್ಟು ಹಣ ಅಮ್ಮನ ಬಳಿ ಇಲ್ಲ. ಮನೆ ಮಾರಿ ಹಣ ಕೊಡಿ. ಅಮ್ಮನಿಗೆ ಹಣ ಕೊಡಲು ಇಷ್ಟವಿಲ್ಲ ಅಂದ್ರೆ ನೀವೇ ಬಂದು ಆಸ್ಪತ್ರೆಯಲ್ಲಿ ಹಣ ಕಟ್ಟಿ ಎಂದು ಸಾಯಿ ಶ್ರೀ ವಿಡಿಯೋ ಮೂಲಕ ತನ್ನ ತಂದೆಗೆ ಹಣ ನೀಡುವಂತೆ ಕೇಳಿದ್ದಳು.

ಸಾಯಿ ಶ್ರೀ ತಂದೆ ಮದಮ್ಶೆಟ್ಟಿ ಶಿವಕುಮಾರ್ ತನ್ನ ಪತ್ನಿ ಸುಮಾ ಶ್ರೀ ಮತ್ತು ಮಗಳಿಂದ 8 ವರ್ಷದ ಹಿಂದೆಯೇ ದೂರವಾಗಿದ್ರು. ವರದಿಯ ಪ್ರಕಾರ ಸಾಯಿ ಶ್ರೀ ತನ್ನ ತಾಯಿಯೊಂದಿಗೆ ವಿಜಯವಾಡದಲ್ಲಿ ನೆಲೆಸಿದ್ದು, ತಂದೆ ಬೆಂಗಳೂರಿನಲ್ಲಿದ್ದರು ಎನ್ನಲಾಗಿದೆ.

ಶಿವ ಕುಮಾರ್ ಮತ್ತು ಸುಮಾ ದೂರವಾಗುವುದಕ್ಕೂ ಮುನ್ನ ಮಗಳಾದ ಸಾಯಿ ಶ್ರೀ ಹೆಸರಲ್ಲಿ ಒಂದು ಫ್ಲಾಟ್ ಖರೀದಿಸಿದ್ರು. ಮನೆ ಮಾರಿ ಮಗಳ ಕ್ಯಾನ್ಸರ್ ಚಿಕಿತ್ಸೆಗೆ ಹಣ ಹೊಂದಿಸಲು ಮುಂದಾದಾಗ ಗಂಡ ಶಿವ ಕುಮಾರ್, ತೆಲುಗು ದೇಶಂ ಪಾರ್ಟಿಯ ಶಾಸಕ ಬೋಂಡಾ ಉಮಾಮಹೇಶ್ವರ್ ರಾವ್ ಅವರ ನೆರವಿನಿಂದ ಮನೆ ಮಾರಾಟ ಮಾಡದಂತೆ ತಡೆದಿದ್ದರು ಎಂದು ಸುಮಾ ಆರೋಪಿಸಿದ್ದಾರೆ.

ಶಾಸಕರ ಬೆಂಬಲ ಇದ್ದ ಕಾರಣ ಶಿವ ಕುಮಾರ್ ಕಳಿದಿದ್ದ ಗೂಂಡಾಗಳ ವಿರುದ್ಧ ದೂರು ದಾಖಲಿಸಿಕೊಳ್ಳಲು ಆಂಧ್ರಪ್ರದೇಶದ ಪೊಲೀಸರು ನಿರಾಕರಿಸಿದ್ರು ಎಂದು ಸುದ್ದಿ ಸಂಸ್ಥೆ ಎಎನ್ ವರದಿ ಮಾಡಿದೆ.

ಬಗ್ಗೆ ಹೇಳಿಕೆ ನೀಡಿರೋ ಬಾಲಾಲ ಹಕ್ಕುಳ ಸಂಗಂನ ಅಧ್ಯಕ್ಷರಾದ ಅಚ್ಯುತ್ ರಾವ್, ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗದಲ್ಲಿ ಅರ್ಜಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಹಣ ನೀಡಲು ಶಕ್ತರಾಗಿದ್ದರೂ ತಂದೆ ಮಗಳ ಚಿಕಿತ್ಸೆಗೆ ಹಣ ನೀಡಿಲ್ಲವೆಂಬುದನ್ನು ಮನಗಂಡ ರಾಜ್ಯ ಮಾನವ ಹಕ್ಕುಗಳ ಆಯೋಗ, ಬಗ್ಗೆ ವಿಸ್ತø ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ.

ವಿಡಿಯೋ ಸದ್ಯ ದೇಶದಾದ್ಯಂತ ವೈರಲ್ ಆಗಿದ್ದು, ತಂದೆಯ ವರ್ತನೆಗೆ ಖಂಡನೆ ವ್ಯಕ್ತವಾಗಿದೆ.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

  • ದೇವರು-ಧರ್ಮ, ರಾಜಕೀಯ

    ‘ಪ್ರಧಾನಿ ಮೋದಿ’ಆಜಾನ್(ನಮಾಜ್) ಧ್ವನಿ ಕೇಳಿಸಿ ಭಾಷಣ ನಿಲ್ಲಿಸಿದರು..!ಏಕೆ ಗೊತ್ತಾ?ಶಾಕ್ ಆಗ್ತೀರಾ!ಮುಂದೆ ಓದಿ…

    ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.

  • ಜ್ಯೋತಿಷ್ಯ

    ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೇಕೆ ಗೊತ್ತಾ?

    ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಳಿಗಾಲದಲ್ಲಿ ಗೋಡಂಬಿ ಸೇವನೆ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ!

    ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್​ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್​…

  • ಸ್ಪೂರ್ತಿ

    ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಮನರಂಜನೆ

    ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

    ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…