News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಂಬಂಧ

ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

106

          ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಮನೆನಾದ್ರೂ ಇದೆ. ಪ್ಲೀಸ್ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಬಾಲಕಿ ಸಾವನ್ನಪ್ಪಿದ್ದಾಳೆ.

ಆಂಧ್ರಪ್ರದೇಶ ಮೂಲದ ಬಾಲಕಿಯ ಹೆಸರು ಸಾಯಿ ಶ್ರೀ. ಈಕೆಗೆ ಬೋನ್ ಮ್ಯಾರೋ ಕ್ಯಾನ್ಸರ್ ಇದೆ ಎಂದು 2016 ಆಗಸ್ಟ್ 27ರಂರಂದು ವೈದ್ಯರು ಹೇಳಿದ್ದರು. ಆದ್ರೆ ಚಿಕಿತ್ಸೆಗೆ ಬೇಕಾಗುವಷ್ಟು ಹಣ ಅಮ್ಮನ ಬಳಿ ಇಲ್ಲ. ಮನೆ ಮಾರಿ ಹಣ ಕೊಡಿ. ಅಮ್ಮನಿಗೆ ಹಣ ಕೊಡಲು ಇಷ್ಟವಿಲ್ಲ ಅಂದ್ರೆ ನೀವೇ ಬಂದು ಆಸ್ಪತ್ರೆಯಲ್ಲಿ ಹಣ ಕಟ್ಟಿ ಎಂದು ಸಾಯಿ ಶ್ರೀ ವಿಡಿಯೋ ಮೂಲಕ ತನ್ನ ತಂದೆಗೆ ಹಣ ನೀಡುವಂತೆ ಕೇಳಿದ್ದಳು.

ಸಾಯಿ ಶ್ರೀ ತಂದೆ ಮದಮ್ಶೆಟ್ಟಿ ಶಿವಕುಮಾರ್ ತನ್ನ ಪತ್ನಿ ಸುಮಾ ಶ್ರೀ ಮತ್ತು ಮಗಳಿಂದ 8 ವರ್ಷದ ಹಿಂದೆಯೇ ದೂರವಾಗಿದ್ರು. ವರದಿಯ ಪ್ರಕಾರ ಸಾಯಿ ಶ್ರೀ ತನ್ನ ತಾಯಿಯೊಂದಿಗೆ ವಿಜಯವಾಡದಲ್ಲಿ ನೆಲೆಸಿದ್ದು, ತಂದೆ ಬೆಂಗಳೂರಿನಲ್ಲಿದ್ದರು ಎನ್ನಲಾಗಿದೆ.

ಶಿವ ಕುಮಾರ್ ಮತ್ತು ಸುಮಾ ದೂರವಾಗುವುದಕ್ಕೂ ಮುನ್ನ ಮಗಳಾದ ಸಾಯಿ ಶ್ರೀ ಹೆಸರಲ್ಲಿ ಒಂದು ಫ್ಲಾಟ್ ಖರೀದಿಸಿದ್ರು. ಮನೆ ಮಾರಿ ಮಗಳ ಕ್ಯಾನ್ಸರ್ ಚಿಕಿತ್ಸೆಗೆ ಹಣ ಹೊಂದಿಸಲು ಮುಂದಾದಾಗ ಗಂಡ ಶಿವ ಕುಮಾರ್, ತೆಲುಗು ದೇಶಂ ಪಾರ್ಟಿಯ ಶಾಸಕ ಬೋಂಡಾ ಉಮಾಮಹೇಶ್ವರ್ ರಾವ್ ಅವರ ನೆರವಿನಿಂದ ಮನೆ ಮಾರಾಟ ಮಾಡದಂತೆ ತಡೆದಿದ್ದರು ಎಂದು ಸುಮಾ ಆರೋಪಿಸಿದ್ದಾರೆ.

ಶಾಸಕರ ಬೆಂಬಲ ಇದ್ದ ಕಾರಣ ಶಿವ ಕುಮಾರ್ ಕಳಿದಿದ್ದ ಗೂಂಡಾಗಳ ವಿರುದ್ಧ ದೂರು ದಾಖಲಿಸಿಕೊಳ್ಳಲು ಆಂಧ್ರಪ್ರದೇಶದ ಪೊಲೀಸರು ನಿರಾಕರಿಸಿದ್ರು ಎಂದು ಸುದ್ದಿ ಸಂಸ್ಥೆ ಎಎನ್ ವರದಿ ಮಾಡಿದೆ.

ಬಗ್ಗೆ ಹೇಳಿಕೆ ನೀಡಿರೋ ಬಾಲಾಲ ಹಕ್ಕುಳ ಸಂಗಂನ ಅಧ್ಯಕ್ಷರಾದ ಅಚ್ಯುತ್ ರಾವ್, ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗದಲ್ಲಿ ಅರ್ಜಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಹಣ ನೀಡಲು ಶಕ್ತರಾಗಿದ್ದರೂ ತಂದೆ ಮಗಳ ಚಿಕಿತ್ಸೆಗೆ ಹಣ ನೀಡಿಲ್ಲವೆಂಬುದನ್ನು ಮನಗಂಡ ರಾಜ್ಯ ಮಾನವ ಹಕ್ಕುಗಳ ಆಯೋಗ, ಬಗ್ಗೆ ವಿಸ್ತø ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ.

ವಿಡಿಯೋ ಸದ್ಯ ದೇಶದಾದ್ಯಂತ ವೈರಲ್ ಆಗಿದ್ದು, ತಂದೆಯ ವರ್ತನೆಗೆ ಖಂಡನೆ ವ್ಯಕ್ತವಾಗಿದೆ.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನಿಮಗೆ ಕೂದಲು ಉದುರುವ ಸಮಸ್ಯಯೇ?ಹಾಗಾದ್ರೆ ಇಲ್ಲಿದೆ ನೋಡಿ ಮನೆಮದ್ದು ಪರಿಹಾರ……

    ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.

  • ಸುದ್ದಿ

    ಸೂರ್ಯನ ಬೆಳಕಿನಿಂದ ನಾಶವಾಗುತ್ತಾ ಕೊರೋನಾ ವೈರಸ್, ಇಲ್ಲಿದೆ ನೋಡಿ ಅಸಲಿ ಸತ್ಯ.

    ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…

  • ಸುದ್ದಿ

    ಅಮ್ಮನಿಗೆ ಪತ್ರವನ್ನು ಬರೆದು ಮನೆ ಬಿಟ್ಟು ಹೋದಂತಹ ಬಾಲಕಿಯ ಬಣ್ಣವನ್ನು ಬಯಲು ಮಾಡಿದ ಪೊಲೀಸರು…!

    ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…

  • ಜೀವನಶೈಲಿ

    ನಿಮ್ಮ ‘ಬಾತ್ ರೂಂ’ ಸ್ವಚ್ಛವಾಗಿದ್ದರೆ ದೂರವಾಗುತ್ತೆ ನಿಮ್ಮ ಬಡತನ ..!ತಿಳಿಯಲು ಈ ಲೇಖನ ಓದಿ …

    ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.

  • ಸುದ್ದಿ

    ಕೌನ್ ಬನೇಗಾ ಕರೋಡ್‍ಪತಿ ಹಾಟ್ ಸೀಟ್‌ನಲ್ಲಿ ನಮ್ಮ ಹೆಮ್ಮೆಯ ಕನ್ನಡತಿ.!ಯಾರು ಅಂತ ಗೊತ್ತಾದರೆ ಶಾಕ್ ಆಗ್ತೀರಾ…

    ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್‌ಪತಿ 11’ರ (ಕೆಬಿಸಿ) ಹಾಟ್ ಸೀಟ್‌ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್‌ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್‌ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…