ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ.
ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ ಮೊದಲಾದ ಪೋಷಕಾಂಶಗಳು ಸಮೃದ್ಧವಾಗಿವೆ. ನಿಮ್ಮ ಆಹಾರದಲ್ಲಿ ಚಿಯಾ ಬೀಜಗಳನ್ನು ಅಳವಡಿಸಿಕೊಳ್ಳಲು ಹಲವಾರು ಮಾರ್ಗಗಳಿವೆ.
ನೀರಿನಲ್ಲಿ ನೆನೆಸಿಟ್ಟು ಸೇವಿಸಿ
ನಿಮ್ಮ ಆಹಾರದಲ್ಲಿ ಬೆರೆಸಿ ಗರಿಮುರಿಯಾಗಿಸಬಹುದು ಅಥವಾ ನೀವು ಅವುಗಳನ್ನು ನಿಮ್ಮ ಸಲಾಡ್ಗಳ ಮೇಲೆ ಸಿಂಪಡಿಸಬಹುದು, ಅಥವಾ ನೀವು ಅವುಗಳನ್ನು ಒಣಬೀಜಗಳ ಮಿಶ್ರಣದ ಭಾಗವಾಗಿ ಹೊಂದಬಹುದು. ಚಿಯಾ ಬೀಜಗಳನ್ನು ಸೇವಿಸುವ ಮತ್ತೊಂದು ಆಸಕ್ತಿದಾಯಕ ವಿಧಾನವೆಂದರೆ ಅವುಗಳನ್ನು ನೀರಿನಲ್ಲಿ ನೆನೆಸಿಟ್ಟು ಬಳಿಕ ಸೇವಿಸುವುದು.

ನೀವು ಮಾಡಬೇಕಾಗಿರುವುದು ಏನೆಂದರೆ ಚಿಯಾ ಬೀಜಗಳನ್ನು ನೀರಿನಲ್ಲಿ ರಾತ್ರಿ ಮಲಗುವ ಮುನ್ನ ತಣ್ಣೀರಿನಲ್ಲಿ ನೆನೆಸಿಟ್ಟು ಮರುದಿನ ಬೆಳಿಗ್ಗೆ ದಿನದ ಮೊದಲ ಆಹಾರದ ರೂಪದಲ್ಲಿ ಅಥವಾ ದಿನದ ಇತರ ಯಾವುದೇ ಸಮಯದಲ್ಲಿ ನೀರಿನ ಜೊತೆಗೇ ಸೇವಿಸಬೇಕು.
ಈ ಮೂಲಕ ನೀವು ಈ ಬೀಜಗಳ ಹಲವಾರು ಆರೋಗ್ಯದ ಪ್ರಯೋಜನಗಳನ್ನು ಪಡೆಯಬಹುದು. ನೆನೆಸಿಟ್ಟ ಚಿಯಾ ಬೀಜಗಳ ಸೇವನೆ: ಇದರ ಆರೋಗ್ಯಕರ ಪರಿಣಾಮಗಳು ನಿಮಗೆ ಅಚ್ಚರಿ ಮೂಡಿಸಬಹುದು.

ಕ್ಯಾನ್ಸರ್ ರೋಗಕ್ಕೂ ರಾಮಬಾಣ
ಚಿಯಾ ಬೀಜಗಳು ಆಂಟಿ ಆಕ್ಸಿಡೆಂಟು ಅಥವಾ ಉತ್ಕರ್ಷಣ ನಿರೋಧಕ ಗುಣಗಳ ಸಮೃದ್ಧ ಮೂಲವಾಗಿದೆ. ಈ ಉತ್ಕರ್ಷಣ ನಿರೋಧಕಗಳು ಬೀಜಗಳಲ್ಲಿನ ಸೂಕ್ಷ್ಮ ಕೊಬ್ಬಗಳು ರಾನ್ಸಿಡ್ (rancid-ನಾತದ ಜಿಡ್ಡು) ಆಗಿ ಪರಿವರ್ತನೆಯಾಗದಂತೆ ರಕ್ಷಿಸುತ್ತದೆ.
ಇದಕ್ಕಿಂತಲೂ ಹೆಚ್ಚಾಗಿ, ಈ ಉತ್ಕರ್ಷಣ ನಿರೋಧಕಗಳು ದೇಹಕ್ಕೆ ಕ್ಯಾನ್ಸರ್ ಆವರಿಸಲು ಕಾರಣವಾಗುವ ಫ್ರೀ ರ್ಯಾಡಿಕಲ್ ಎಂಬ ಕಣಗಳ ಧಾಳಿಯಿಂದ ಎದುರಾಗಬಹುದಾದ ಹಾನಿಯಿಂದ ರಕ್ಷಣೆ ನೀಡುತ್ತದೆ. ಬನ್ನಿ, ನಿತ್ಯವೂ ಈ ನೀರಿನ ಸೇವನೆಯಿಂದ ಪಡೆಯುವ ಪ್ರಯೋಜನಗಳ ಬಗ್ಗೆ ಅರಿಯೋಣ.
ಜೀರ್ಣಕ್ರಿಯೆಗೆ ನೆರವು
ಚಿಯಾ ಬೀಜಗಳಲ್ಲಿ ಉತ್ತಮ ಪ್ರಮಾಣದ ಕರಗದ ನಾರಿನಂಶವಿದೆ. ಚಿಯಾ ಬೀಜಗಳನ್ನು ನೆನೆಸಿಟ್ಟ ನೀರನ್ನು ಬೆಳಿಗ್ಗೆ ಪ್ರಥಮ ಆಹಾರವಾಗಿ ಸೇವಿಸುವುದರಿಂದ ನಿಮ್ಮ ಜೀರ್ಣಕ್ರಿಯೆಗೆ ಉತ್ತೇಜನ ನೀಡುತ್ತದೆ ಮತ್ತು ಕರುಳಿನಲ್ಲಿ ಆಹಾರದ ಚಲನೆ ಸುಗಮಗೊಳ್ಳುತ್ತದೆ.
ತೂಕ ಇಳಿಸುವ ಪ್ರಯತ್ನದಲ್ಲಿರುವ ವ್ಯಕ್ತಿಗಳಿಗೆ ಆರೋಗ್ಯಕರ ಜೀರ್ಣಕ್ರಿಯೆ ಅತಿ ಮಹತ್ವದ್ದಾಗಿದ್ದು ಚಿಯಾ ಬೀಜಗಳು ಈ ಪ್ರಯತ್ನಕ್ಕೆ ಅತಿ ಹೆಚ್ಚಿನ ಬೆಂಬಲವನ್ನು ಒದಗಿಸುತ್ತವೆ

ತೂಕ ಇಳಿಕೆಗೆ ನೆರವು
ಚಿಯಾ ಬೀಜಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕರಗುವ ನಾರಿನಂಶವೂ ಇದೆ. ಈ ಬೀಜಗಳ ಇನ್ನೊಂದು ಮಹತ್ವವೆಂದರೆ ನೆನೆಸಿಟ್ಟ ಬಳಿಕ ಇವು ತಮ್ಮ ಮೂಲ ಗಾತ್ರಕ್ಕೂ 10-12 ಪಟ್ಟು ನೀರನ್ನು ಹೀರಿಕೊಂಡು ಉಬ್ಬಿಕೊಳ್ಳುತ್ತವೆ. ಹೀಗೆ ನೀರಿನಿಂದ ಉಬ್ಬಿಕೊಂಡ ಬೀಜಗಳು ಸ್ನಿಗ್ಧ ದ್ರವ ಅಥವಾ ಜೆಲ್ ನಂತೆ ಇರುತ್ತದೆ.
ಜೀರ್ಣಕ್ರಿಯೆಯಲ್ಲಿ ಈ ಬೀಜಗಳಿಂದ ನೀರಿನಂಶ ಅತಿ ನಿಧಾನವಾಗಿ ಬಿಡುಗಡೆಯಾಗುತ್ತಾ ತನ್ನೊಂದಿಗೆ ಪೋಷಕಾಂಶ ಮತ್ತು ನಾರಿನಂಶಗಳನ್ನೂ ಜೀರ್ಣಾಂಗಗಳಿಗೆ ಲಭಿಸುವಂತೆ ಮಾಡುತ್ತದೆ.
ಈ ಮೂಲಕ ಹೊಟ್ಟೆ ಸದಾ ತುಂಬಿರುವ ಭಾವನೆ ಮೂಡುತ್ತದೆ ಹಾಗೂ ಅನಗತ್ಯ ಆಹಾರ ಸೇವನೆಯಿಂದ ತಡೆಯುತ್ತದೆ. ಈ ಮೂಲಕ ನೀವು ಕಡಿಮೆ ಕ್ಯಾಲೋರಿಗಳನ್ನು ಸೇವಿಸುತ್ತೀರಿ ಹಾಗೂ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಇದು ತೂಕ ಇಳಿಕೆಯ ಪ್ರಯತ್ನಗಳಿಗೆ ಹೆಚ್ಚಿನ ನೆರವು ನೀಡುತ್ತದೆ.

ಪ್ರೋಟೀನ್ ನ ಲಭ್ಯತೆ
ಚಿಯಾ ಬೀಜಗಳು 14% ಪ್ರೋಟೀನ್ನಿಂದ ಕೂಡಿದೆ. ಇವುಗಳಲ್ಲಿ ಪ್ರಭಾವಶಾಲಿ ಅಮೈನೋ ಆಮ್ಲಗಳೂ ಇವೆ. ಪ್ರೋಟೀನ್ ತೂಕ ಇಳಿಕೆ ಮತ್ತು ಸ್ನಾಯುಗಳ ಬೆಳವಣಿಗೆ ಎರಡಕ್ಕೂ ಅಗತ್ಯವಾದ ಸೂಕ್ಷ್ಮ ಪೋಷಕಾಂಶ ಅಥವಾ ಮ್ಯಾಕ್ರೋನ್ಯೂಟ್ರಿಯೆಂಟ್ ಆಗಿದೆ. ಪ್ರೋಟೀನ್ ಭರಿತ ಆಹಾರವನ್ನು ಸೇವಿಸುವುದರಿಂದ ಹೊಟ್ಟೆ ತುಂಬಿರುವ ಭಾವನೆ ಉಂಟಾಗುತ್ತದೆ ಮತ್ತು ಅನಗತ್ಯ ಕ್ಯಾಲೊರಿ ಸೇವನೆಯಿಂದ ತಡೆಯುತ್ತದೆ..
ಹೃದಯದ ಆರೋಗ್ಯ ಉತ್ತಮಗೊಳ್ಳುತ್ತದೆ
ಚಿಯಾ ಬೀಜಗಳಲ್ಲಿ ಒಮೆಗಾ -3 ಕೊಬ್ಬಿನಾಮ್ಲಗಳ (alpha-linolenic acid ಅಥವಾ ALA) ಪ್ರಭಾವಶಾಲಿ ಪ್ರಮಾಣವಿದೆ. ಈ ಆಲ್ಫಾ-ಲಿನೋಲೆನಿಕ್ ಆಮ್ಲ ಅತ್ಯಂತ ಹೃದಯಸ್ನೇಹಿ ಪೋಷಕಾಂಶವಾಗಿದೆ.
ತನ್ಮೂಲಕ ಚಿಯಾ ಬೀಜಗಳನ್ನು ಹೃದಯದ ಆರೋಗ್ಯಕ್ಕೆ ಉತ್ತಮವಾದ ಆಹಾರವಾಗಿದೆ. ಚಿಯಾ ಬೀಜಗಳನ್ನು ನೆನೆಸಿಟ್ಟ ನೀರನ್ನು ಕುಡಿಯುವುದು ಅಥವಾ ನಿಮ್ಮ ದೈನಂದಿನ ಆಹಾರದಲ್ಲಿ ಚಿಯಾ ಬೀಜಗಳನ್ನು ಅಳವಡಿಸಿಕೊಳ್ಳುವುದರಿಂದ ಹೃದ್ರೋಗ ಎದುರಾಗುವ ಅಪಾಯವನ್ನು ಅಪಾರ ಮಟ್ಟಿಗೆ ಕಡಿಮೆ ಮಾಡಬಹುದು.

ಮೂಳೆಗಳ ಆರೋಗ್ಯ ಉತ್ತಮಗೊಳ್ಳುತ್ತದೆ
ಚಿಯಾ ಬೀಜಗಳಲ್ಲಿನ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ರಂಜಕಗಳು ಮೂಳೆಯ ಆರೋಗ್ಯವನ್ನು ವೃದ್ದಿಸುತ್ತವೆ. ಚಿಯಾ ಬೀಜಗಳು ದೈನಂದಿನ ಶಿಫಾರಸು ಮಾಡಿದ ಕ್ಯಾಲ್ಸಿಯಂನ 18% ಅನ್ನು ಹೊಂದಿರುತ್ತವೆ. ನೈಸರ್ಗಿಕ ಪ್ರೋಟೀನ್ ಮೂಲದ ಆಹಾರಗಳನ್ನು ಸೇವಿಸದ ವ್ಯಕ್ತಿಗಳು ಅಥವಾ ಸಸ್ಯಾಹಾರಿಗಳಿಗೆ ಚಿಯಾ ಬೀಜಗಳನ್ನು ಕ್ಯಾಲ್ಸಿಯಂನ ಉತ್ತಮ ಮೂಲವೆಂದು ಪರಿಗಣಿಸಬಹುದು.
ರಕ್ತದಲ್ಲಿನ ಸಕ್ಕರೆಯ ಮಟ್ಟದ ನಿಯಂತ್ರಣ
ಚಿಯಾ ಬೀಜಗಳು ಇನ್ಸುಲಿನ್ ಸಂವೇದನೆ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುವಲ್ಲಿ ನೆರವಾಗುತ್ತವೆ.
ಊಟದ ಬಳಿಕ ರಕ್ತದಲ್ಲಿ ಏರುವ ಸಕ್ಕರೆಯ ಮಟ್ಟವನ್ನು ಸ್ಥಿರಗೊಳಿಸಲು ಚಿಯಾ ಬೀಜಗಳು ಸಹಾಯ ಮಾಡುತ್ತವೆ ಎಂದು ಅಧ್ಯಯನಗಳಿಂದ ಈಗಾಗಲೇ ಸಾಬೀತುಗೊಂಡಿದೆ.
ಈ ಗುಣ ಮಧುಮೇಹ ಇರುವ ವ್ಯಕ್ತಿಗಳಿಗೆ ಅತ್ಯುತ್ತಮವಾಗಿದ್ದು ಮಧುಮೇಹಿಗಳು ತಮ್ಮ ಆಹಾರದಲ್ಲಿ ಚಿಯಾ ಬೀಜಗಳನ್ನು ಸೇರಿಸುವುದರಿಂದ ಹೆಚ್ಚಿನ ಪ್ರಯೋಜನವನ್ನು ಪಡೆಯಬಹುದು.

ಆಹಾರದಲ್ಲಿ ಚಿಯಾ ಬೀಜಗಳನ್ನು ಸೇರಿಸಿಕೊಳ್ಳುವ ಸೂಕ್ತ ಮಾರ್ಗಗಳು
ಚಿಯಾ ಬೀಜಗಳನ್ನು ನೇರವಾಗಿ ಸೇವಿಸಲೂಬಹುದು ಅಥವಾ ಚಿಯಾ ಬೀಜವನ್ನು ನೆನೆಸಿಟ್ಟ ನೀರನ್ನು ನಿಯಮಿತವಾಗಿ ಕುಡಿಯಲೂಬಹುದು. ಇವೆರಡೂ ಸುಲಭ ಮತ್ತು ಪರಿಣಾಮಕಾರಿ. ವಿಧಾನಗಳಾಗಿವೆ. ಅವುಗಳನ್ನು ಹಾಗೇ ಜಗಿದು ತಿನ್ನಬಹುದು ಅಥವಾ ಹಣ್ಣುಗಳ ರಸ, ಪುಡಿಂಗ್, ಗಂಜಿ ಮತ್ತು ಸ್ಮೂಥಿಗಳಿಗೆ ಬೆರೆಸಿಕೊಂಡೂ ಸೇವಿಸಬಹುದು.
ವಿವಿಧ ಪಾಕವಿಧಾನಗಳಲ್ಲಿ ಚಿಯಾ ಬೀಜಗಳನ್ನು ಸೇರಿಸುವುದರಿಂದ ಅವುಗಳ ಪೋಷಣೆಯ ಮೌಲ್ಯವನ್ನು ಸ್ವಯಂಚಾಲಿತವಾಗಿ ಹೆಚ್ಚಿಸಬಹುದು.
ಆದರೂ, ಚಿಯಾ ಬೀಜಗಳನ್ನು ಮಿತ ಪ್ರಮಾಣದಲ್ಲಿ ಸೇವಿಸುತ್ತೀದ್ದೀರೆಂದು ಖಚಿತಪಡಿಸಿಕೊಳ್ಳಿ. ಅತಿಯಾದರೆ ಅಮೃತವೂ ವಿಷ ಎಂಬಂತೆ ಯಾವುದೇ ಆಹಾರ ವಸ್ತುಗಳನ್ನು ಮಿತಿಗಿಂತ ಹೆಚ್ಚು ಸೇವಿಸಬಾರದು.
ಅಧ್ಯಯನಗಳ ಬಳಿಕ ತಜ್ಞರು ಸಲಹೆ ಮಾಡುವ ಪ್ರಮಾಣವೆಂದರೆ ಪ್ರತಿ ಬಾರಿ ಇಪ್ಪತ್ತು ಗ್ರಾಂ ನಷ್ಟು (ಸುಮಾರು ಒಂದೂವರೆ ದೊಡ್ಡ ಚಮಚ) ಪ್ರಮಾಣವನ್ನು ದಿನಕ್ಕೆ ಎರಡು ಬಾರಿ ಸೇವಿಸಿದರೆ ಬೇಕಾದಷ್ಟಾಯಿತು. ಇದಕ್ಕೂ ಹೆಚ್ಚಿನ ಪ್ರಮಾಣವನ್ನು ಸೇವಿಸಬಾರದು.
source coorgcitizen / whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…