News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

89

ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ.

ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ ಮೊದಲಾದ ಪೋಷಕಾಂಶಗಳು ಸಮೃದ್ಧವಾಗಿವೆ. ನಿಮ್ಮ ಆಹಾರದಲ್ಲಿ ಚಿಯಾ ಬೀಜಗಳನ್ನು ಅಳವಡಿಸಿಕೊಳ್ಳಲು ಹಲವಾರು ಮಾರ್ಗಗಳಿವೆ.

ನೀರಿನಲ್ಲಿ ನೆನೆಸಿಟ್ಟು ಸೇವಿಸಿ

ನಿಮ್ಮ ಆಹಾರದಲ್ಲಿ ಬೆರೆಸಿ ಗರಿಮುರಿಯಾಗಿಸಬಹುದು ಅಥವಾ ನೀವು ಅವುಗಳನ್ನು ನಿಮ್ಮ ಸಲಾಡ್‌ಗಳ ಮೇಲೆ ಸಿಂಪಡಿಸಬಹುದು, ಅಥವಾ ನೀವು ಅವುಗಳನ್ನು ಒಣಬೀಜಗಳ ಮಿಶ್ರಣದ ಭಾಗವಾಗಿ ಹೊಂದಬಹುದು. ಚಿಯಾ ಬೀಜಗಳನ್ನು ಸೇವಿಸುವ ಮತ್ತೊಂದು ಆಸಕ್ತಿದಾಯಕ ವಿಧಾನವೆಂದರೆ ಅವುಗಳನ್ನು ನೀರಿನಲ್ಲಿ ನೆನೆಸಿಟ್ಟು ಬಳಿಕ ಸೇವಿಸುವುದು.

ನೀವು ಮಾಡಬೇಕಾಗಿರುವುದು ಏನೆಂದರೆ ಚಿಯಾ ಬೀಜಗಳನ್ನು ನೀರಿನಲ್ಲಿ ರಾತ್ರಿ ಮಲಗುವ ಮುನ್ನ ತಣ್ಣೀರಿನಲ್ಲಿ ನೆನೆಸಿಟ್ಟು ಮರುದಿನ ಬೆಳಿಗ್ಗೆ ದಿನದ ಮೊದಲ ಆಹಾರದ ರೂಪದಲ್ಲಿ ಅಥವಾ ದಿನದ ಇತರ ಯಾವುದೇ ಸಮಯದಲ್ಲಿ ನೀರಿನ ಜೊತೆಗೇ ಸೇವಿಸಬೇಕು.

ಈ ಮೂಲಕ ನೀವು ಈ ಬೀಜಗಳ ಹಲವಾರು ಆರೋಗ್ಯದ ಪ್ರಯೋಜನಗಳನ್ನು ಪಡೆಯಬಹುದು. ನೆನೆಸಿಟ್ಟ ಚಿಯಾ ಬೀಜಗಳ ಸೇವನೆ: ಇದರ ಆರೋಗ್ಯಕರ ಪರಿಣಾಮಗಳು ನಿಮಗೆ ಅಚ್ಚರಿ ಮೂಡಿಸಬಹುದು.

ಕ್ಯಾನ್ಸರ್ ರೋಗಕ್ಕೂ ರಾಮಬಾಣ

ಚಿಯಾ ಬೀಜಗಳು ಆಂಟಿ ಆಕ್ಸಿಡೆಂಟು ಅಥವಾ ಉತ್ಕರ್ಷಣ ನಿರೋಧಕ ಗುಣಗಳ ಸಮೃದ್ಧ ಮೂಲವಾಗಿದೆ. ಈ ಉತ್ಕರ್ಷಣ ನಿರೋಧಕಗಳು ಬೀಜಗಳಲ್ಲಿನ ಸೂಕ್ಷ್ಮ ಕೊಬ್ಬಗಳು ರಾನ್ಸಿಡ್ (rancid-ನಾತದ ಜಿಡ್ಡು) ಆಗಿ ಪರಿವರ್ತನೆಯಾಗದಂತೆ ರಕ್ಷಿಸುತ್ತದೆ.

ಇದಕ್ಕಿಂತಲೂ ಹೆಚ್ಚಾಗಿ, ಈ ಉತ್ಕರ್ಷಣ ನಿರೋಧಕಗಳು ದೇಹಕ್ಕೆ ಕ್ಯಾನ್ಸರ್ ಆವರಿಸಲು ಕಾರಣವಾಗುವ ಫ್ರೀ ರ್‍ಯಾಡಿಕಲ್ ಎಂಬ ಕಣಗಳ ಧಾಳಿಯಿಂದ ಎದುರಾಗಬಹುದಾದ ಹಾನಿಯಿಂದ ರಕ್ಷಣೆ ನೀಡುತ್ತದೆ. ಬನ್ನಿ, ನಿತ್ಯವೂ ಈ ನೀರಿನ ಸೇವನೆಯಿಂದ ಪಡೆಯುವ ಪ್ರಯೋಜನಗಳ ಬಗ್ಗೆ ಅರಿಯೋಣ.

ಜೀರ್ಣಕ್ರಿಯೆಗೆ ನೆರವು

ಚಿಯಾ ಬೀಜಗಳಲ್ಲಿ ಉತ್ತಮ ಪ್ರಮಾಣದ ಕರಗದ ನಾರಿನಂಶವಿದೆ. ಚಿಯಾ ಬೀಜಗಳನ್ನು ನೆನೆಸಿಟ್ಟ ನೀರನ್ನು ಬೆಳಿಗ್ಗೆ ಪ್ರಥಮ ಆಹಾರವಾಗಿ ಸೇವಿಸುವುದರಿಂದ ನಿಮ್ಮ ಜೀರ್ಣಕ್ರಿಯೆಗೆ ಉತ್ತೇಜನ ನೀಡುತ್ತದೆ ಮತ್ತು ಕರುಳಿನಲ್ಲಿ ಆಹಾರದ ಚಲನೆ ಸುಗಮಗೊಳ್ಳುತ್ತದೆ.

ತೂಕ ಇಳಿಸುವ ಪ್ರಯತ್ನದಲ್ಲಿರುವ ವ್ಯಕ್ತಿಗಳಿಗೆ ಆರೋಗ್ಯಕರ ಜೀರ್ಣಕ್ರಿಯೆ ಅತಿ ಮಹತ್ವದ್ದಾಗಿದ್ದು ಚಿಯಾ ಬೀಜಗಳು ಈ ಪ್ರಯತ್ನಕ್ಕೆ ಅತಿ ಹೆಚ್ಚಿನ ಬೆಂಬಲವನ್ನು ಒದಗಿಸುತ್ತವೆ

ತೂಕ ಇಳಿಕೆಗೆ ನೆರವು

ಚಿಯಾ ಬೀಜಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕರಗುವ ನಾರಿನಂಶವೂ ಇದೆ. ಈ ಬೀಜಗಳ ಇನ್ನೊಂದು ಮಹತ್ವವೆಂದರೆ ನೆನೆಸಿಟ್ಟ ಬಳಿಕ ಇವು ತಮ್ಮ ಮೂಲ ಗಾತ್ರಕ್ಕೂ 10-12 ಪಟ್ಟು ನೀರನ್ನು ಹೀರಿಕೊಂಡು ಉಬ್ಬಿಕೊಳ್ಳುತ್ತವೆ. ಹೀಗೆ ನೀರಿನಿಂದ ಉಬ್ಬಿಕೊಂಡ ಬೀಜಗಳು ಸ್ನಿಗ್ಧ ದ್ರವ ಅಥವಾ ಜೆಲ್ ನಂತೆ ಇರುತ್ತದೆ.

ಜೀರ್ಣಕ್ರಿಯೆಯಲ್ಲಿ ಈ ಬೀಜಗಳಿಂದ ನೀರಿನಂಶ ಅತಿ ನಿಧಾನವಾಗಿ ಬಿಡುಗಡೆಯಾಗುತ್ತಾ ತನ್ನೊಂದಿಗೆ ಪೋಷಕಾಂಶ ಮತ್ತು ನಾರಿನಂಶಗಳನ್ನೂ ಜೀರ್ಣಾಂಗಗಳಿಗೆ ಲಭಿಸುವಂತೆ ಮಾಡುತ್ತದೆ.

ಈ ಮೂಲಕ ಹೊಟ್ಟೆ ಸದಾ ತುಂಬಿರುವ ಭಾವನೆ ಮೂಡುತ್ತದೆ ಹಾಗೂ ಅನಗತ್ಯ ಆಹಾರ ಸೇವನೆಯಿಂದ ತಡೆಯುತ್ತದೆ. ಈ ಮೂಲಕ ನೀವು ಕಡಿಮೆ ಕ್ಯಾಲೋರಿಗಳನ್ನು ಸೇವಿಸುತ್ತೀರಿ ಹಾಗೂ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಇದು ತೂಕ ಇಳಿಕೆಯ ಪ್ರಯತ್ನಗಳಿಗೆ ಹೆಚ್ಚಿನ ನೆರವು ನೀಡುತ್ತದೆ.

ಪ್ರೋಟೀನ್ ಲಭ್ಯತೆ

ಚಿಯಾ ಬೀಜಗಳು 14% ಪ್ರೋಟೀನ್‌ನಿಂದ ಕೂಡಿದೆ. ಇವುಗಳಲ್ಲಿ ಪ್ರಭಾವಶಾಲಿ ಅಮೈನೋ ಆಮ್ಲಗಳೂ ಇವೆ. ಪ್ರೋಟೀನ್ ತೂಕ ಇಳಿಕೆ ಮತ್ತು ಸ್ನಾಯುಗಳ ಬೆಳವಣಿಗೆ ಎರಡಕ್ಕೂ ಅಗತ್ಯವಾದ ಸೂಕ್ಷ್ಮ ಪೋಷಕಾಂಶ ಅಥವಾ ಮ್ಯಾಕ್ರೋನ್ಯೂಟ್ರಿಯೆಂಟ್ ಆಗಿದೆ. ಪ್ರೋಟೀನ್ ಭರಿತ ಆಹಾರವನ್ನು ಸೇವಿಸುವುದರಿಂದ ಹೊಟ್ಟೆ ತುಂಬಿರುವ ಭಾವನೆ ಉಂಟಾಗುತ್ತದೆ ಮತ್ತು ಅನಗತ್ಯ ಕ್ಯಾಲೊರಿ ಸೇವನೆಯಿಂದ ತಡೆಯುತ್ತದೆ..

ಹೃದಯದ ಆರೋಗ್ಯ ಉತ್ತಮಗೊಳ್ಳುತ್ತದೆ

ಚಿಯಾ ಬೀಜಗಳಲ್ಲಿ ಒಮೆಗಾ -3 ಕೊಬ್ಬಿನಾಮ್ಲಗಳ (alpha-linolenic acid ಅಥವಾ ALA) ಪ್ರಭಾವಶಾಲಿ ಪ್ರಮಾಣವಿದೆ. ಈ ಆಲ್ಫಾ-ಲಿನೋಲೆನಿಕ್ ಆಮ್ಲ ಅತ್ಯಂತ ಹೃದಯಸ್ನೇಹಿ ಪೋಷಕಾಂಶವಾಗಿದೆ.

ತನ್ಮೂಲಕ ಚಿಯಾ ಬೀಜಗಳನ್ನು ಹೃದಯದ ಆರೋಗ್ಯಕ್ಕೆ ಉತ್ತಮವಾದ ಆಹಾರವಾಗಿದೆ. ಚಿಯಾ ಬೀಜಗಳನ್ನು ನೆನೆಸಿಟ್ಟ ನೀರನ್ನು ಕುಡಿಯುವುದು ಅಥವಾ ನಿಮ್ಮ ದೈನಂದಿನ ಆಹಾರದಲ್ಲಿ ಚಿಯಾ ಬೀಜಗಳನ್ನು ಅಳವಡಿಸಿಕೊಳ್ಳುವುದರಿಂದ ಹೃದ್ರೋಗ ಎದುರಾಗುವ ಅಪಾಯವನ್ನು ಅಪಾರ ಮಟ್ಟಿಗೆ ಕಡಿಮೆ ಮಾಡಬಹುದು.

ಮೂಳೆಗಳ ಆರೋಗ್ಯ ಉತ್ತಮಗೊಳ್ಳುತ್ತದೆ

ಚಿಯಾ ಬೀಜಗಳಲ್ಲಿನ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ರಂಜಕಗಳು ಮೂಳೆಯ ಆರೋಗ್ಯವನ್ನು ವೃದ್ದಿಸುತ್ತವೆ. ಚಿಯಾ ಬೀಜಗಳು ದೈನಂದಿನ ಶಿಫಾರಸು ಮಾಡಿದ ಕ್ಯಾಲ್ಸಿಯಂನ 18% ಅನ್ನು ಹೊಂದಿರುತ್ತವೆ. ನೈಸರ್ಗಿಕ ಪ್ರೋಟೀನ್ ಮೂಲದ ಆಹಾರಗಳನ್ನು ಸೇವಿಸದ ವ್ಯಕ್ತಿಗಳು ಅಥವಾ ಸಸ್ಯಾಹಾರಿಗಳಿಗೆ ಚಿಯಾ ಬೀಜಗಳನ್ನು ಕ್ಯಾಲ್ಸಿಯಂನ ಉತ್ತಮ ಮೂಲವೆಂದು ಪರಿಗಣಿಸಬಹುದು.

ರಕ್ತದಲ್ಲಿನ ಸಕ್ಕರೆಯ ಮಟ್ಟದ ನಿಯಂತ್ರಣ

ಚಿಯಾ ಬೀಜಗಳು ಇನ್ಸುಲಿನ್ ಸಂವೇದನೆ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುವಲ್ಲಿ ನೆರವಾಗುತ್ತವೆ.

ಊಟದ ಬಳಿಕ ರಕ್ತದಲ್ಲಿ ಏರುವ ಸಕ್ಕರೆಯ ಮಟ್ಟವನ್ನು ಸ್ಥಿರಗೊಳಿಸಲು ಚಿಯಾ ಬೀಜಗಳು ಸಹಾಯ ಮಾಡುತ್ತವೆ ಎಂದು ಅಧ್ಯಯನಗಳಿಂದ ಈಗಾಗಲೇ ಸಾಬೀತುಗೊಂಡಿದೆ.

ಈ ಗುಣ ಮಧುಮೇಹ ಇರುವ ವ್ಯಕ್ತಿಗಳಿಗೆ ಅತ್ಯುತ್ತಮವಾಗಿದ್ದು ಮಧುಮೇಹಿಗಳು ತಮ್ಮ ಆಹಾರದಲ್ಲಿ ಚಿಯಾ ಬೀಜಗಳನ್ನು ಸೇರಿಸುವುದರಿಂದ ಹೆಚ್ಚಿನ ಪ್ರಯೋಜನವನ್ನು ಪಡೆಯಬಹುದು.

ಆಹಾರದಲ್ಲಿ ಚಿಯಾ ಬೀಜಗಳನ್ನು ಸೇರಿಸಿಕೊಳ್ಳುವ ಸೂಕ್ತ ಮಾರ್ಗಗಳು

ಚಿಯಾ ಬೀಜಗಳನ್ನು ನೇರವಾಗಿ ಸೇವಿಸಲೂಬಹುದು ಅಥವಾ ಚಿಯಾ ಬೀಜವನ್ನು ನೆನೆಸಿಟ್ಟ ನೀರನ್ನು ನಿಯಮಿತವಾಗಿ ಕುಡಿಯಲೂಬಹುದು. ಇವೆರಡೂ ಸುಲಭ ಮತ್ತು ಪರಿಣಾಮಕಾರಿ. ವಿಧಾನಗಳಾಗಿವೆ. ಅವುಗಳನ್ನು ಹಾಗೇ ಜಗಿದು ತಿನ್ನಬಹುದು ಅಥವಾ ಹಣ್ಣುಗಳ ರಸ, ಪುಡಿಂಗ್, ಗಂಜಿ ಮತ್ತು ಸ್ಮೂಥಿಗಳಿಗೆ ಬೆರೆಸಿಕೊಂಡೂ ಸೇವಿಸಬಹುದು.

ವಿವಿಧ ಪಾಕವಿಧಾನಗಳಲ್ಲಿ ಚಿಯಾ ಬೀಜಗಳನ್ನು ಸೇರಿಸುವುದರಿಂದ ಅವುಗಳ ಪೋಷಣೆಯ ಮೌಲ್ಯವನ್ನು ಸ್ವಯಂಚಾಲಿತವಾಗಿ ಹೆಚ್ಚಿಸಬಹುದು.

ಆದರೂ, ಚಿಯಾ ಬೀಜಗಳನ್ನು ಮಿತ ಪ್ರಮಾಣದಲ್ಲಿ ಸೇವಿಸುತ್ತೀದ್ದೀರೆಂದು ಖಚಿತಪಡಿಸಿಕೊಳ್ಳಿ. ಅತಿಯಾದರೆ ಅಮೃತವೂ ವಿಷ ಎಂಬಂತೆ ಯಾವುದೇ ಆಹಾರ ವಸ್ತುಗಳನ್ನು ಮಿತಿಗಿಂತ ಹೆಚ್ಚು ಸೇವಿಸಬಾರದು.

ಅಧ್ಯಯನಗಳ ಬಳಿಕ ತಜ್ಞರು ಸಲಹೆ ಮಾಡುವ ಪ್ರಮಾಣವೆಂದರೆ ಪ್ರತಿ ಬಾರಿ ಇಪ್ಪತ್ತು ಗ್ರಾಂ ನಷ್ಟು (ಸುಮಾರು ಒಂದೂವರೆ ದೊಡ್ಡ ಚಮಚ) ಪ್ರಮಾಣವನ್ನು ದಿನಕ್ಕೆ ಎರಡು ಬಾರಿ ಸೇವಿಸಿದರೆ ಬೇಕಾದಷ್ಟಾಯಿತು. ಇದಕ್ಕೂ ಹೆಚ್ಚಿನ ಪ್ರಮಾಣವನ್ನು ಸೇವಿಸಬಾರದು.

source coorgcitizen / whatsapp

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೊತ್ತಂಬರಿ ಸೊಪ್ಪಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

    ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…

  • ಮಾಡ್ರನ್ ಬೇಸಾಯ

    ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…