ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ.
ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಚೀನಾ ನಡುವಿನ ಹೋರಾಟ ಕೊನೆಯ ಕ್ಷಣದವರೆಗೆ ರೋಚಕತೆಯಿಂದ ಕೂಡಿತ್ತು. ನಾಲ್ಕು ಸೆಟ್ಗಳ ಅಂತ್ಯಕ್ಕೆ ಎರಡೂ ತಂಡಗಳು 4-4 ಸಮಬಲ ಸಾಧಿಸಿದ್ದವು. ಬಳಿಕ ನಡೆದ ಶೂಟ್-ಆಫ್ನಲ್ಲಿ ಭಾರತೀಯ ವನಿತೆಯರು ಅದ್ಭುತ ಆತ್ಮವಿಶ್ವಾಸ ತೋರಿಸಿ 28-26 ಅಂತರದಿಂದ ಗೆದ್ದು 5-4 ಅಂತರದಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು.
ಈ ಚಿನ್ನದ ಸಾಧನೆ ಇನ್ನಷ್ಟು ವಿಶೇಷವಾಗಲು ಪ್ರಮುಖ ಕಾರಣವೆಂದರೆ, ಸೆಮಿಫೈನಲ್ನಲ್ಲಿ ಭಾರತ 10 ಬಾರಿ ಒಲಿಂಪಿಕ್ ಚಾಂಪಿಯನ್ ಆಗಿರುವ ಬಲಿಷ್ಠ ದಕ್ಷಿಣ ಕೊರಿಯಾವನ್ನೇ 5-1 ಅಂತರದಲ್ಲಿ ಸೋಲಿಸಿತ್ತು. ಇದು ಭಾರತೀಯ ಆರ್ಚರಿಯ ದೊಡ್ಡ ಸಾಧನೆಗಳಲ್ಲಿ ಒಂದಾಗಿ ಪರಿಗಣಿಸಲಾಗಿದೆ.
ತಂಡದ ಹಿರಿಯ ಆಟಗಾರ್ತಿ ದೀಪಿಕಾ ಕುಮಾರಿ ಒತ್ತಡದ ಕ್ಷಣಗಳಲ್ಲಿ ಅದ್ಭುತ ನಾಯಕತ್ವ ಪ್ರದರ್ಶಿಸಿದರು. ನಿರ್ಣಾಯಕ ಶೂಟ್-ಆಫ್ನಲ್ಲಿ ಭಾರತಕ್ಕೆ ಅಗತ್ಯವಿದ್ದ ಪ್ರಮುಖ ಶಾಟ್ ಅನ್ನು ಅವರು ಯಶಸ್ವಿಯಾಗಿ ಹೊಡೆದು ತಂಡಕ್ಕೆ ಚಿನ್ನ ತಂದುಕೊಟ್ಟರು. ಈ ಮೂಲಕ ದೀಪಿಕಾ ತಮ್ಮ ಕರಿಯರ್ನ ಏಳನೇ ವಿಶ್ವಕಪ್ ತಂಡ ಚಿನ್ನದ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ.
17 ವರ್ಷದ ಯುವ ಆರ್ಚರ್ ಕುಂಕುಮ್ ಮಹೋಡ್ ಈ ಟೂರ್ನಿಯ ಹೊಸ ಸೆನ್ಸೇಶನ್ ಆಗಿ ಹೊರಹೊಮ್ಮಿದ್ದಾರೆ. ವಿಶ್ವಕಪ್ ಮಟ್ಟದ ಕೆಲವೇ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರೂ ಅವರು ಭಯವಿಲ್ಲದೆ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಭಾರತೀಯ ಮಹಿಳಾ ರಿಕರ್ವ್ ತಂಡಕ್ಕೆ ಇದು 2021ರ ನಂತರದ ಮೊದಲ ವಿಶ್ವಕಪ್ ಚಿನ್ನದ ಪದಕವಾಗಿದೆ. 2023ರಲ್ಲಿ ಪ್ಯಾರಿಸ್ ಹಂತದಲ್ಲಿ ಭಾರತ ಪದಕ ಗೆದ್ದಿದ್ದರೂ, ಈಗ ಮತ್ತೆ ಚಿನ್ನ ಗೆದ್ದು ವಿಶ್ವ ವೇದಿಕೆಯಲ್ಲಿ ಭಾರತದ ಬಲವನ್ನು ತೋರಿಸಿದೆ.

ಶಾಂಘೈನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ನಲ್ಲಿ ಭಾರತ ಈಗಾಗಲೇ ಎರಡು ಪದಕಗಳನ್ನು ತನ್ನ ಖಾತೆಗೆ ಸೇರಿಸಿಕೊಂಡಿದೆ. ಪುರುಷರ ಕಾಂಪೌಂಡ್ ವಿಭಾಗದಲ್ಲಿ ಸಾಹಿಲ್ ಜಾಧವ್ ಕಂಚಿನ ಪದಕ ಗೆದ್ದಿದ್ದರು.
ಈಗ ದೀಪಿಕಾ, ಅಂಕಿತಾ ಮತ್ತು ಕುಂಕುಮ್ ಅವರ ಚಿನ್ನದ ಸಾಧನೆ ಭಾರತೀಯ ಕ್ರೀಡಾಭಿಮಾನಿಗಳ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಈ ಗೆಲುವು ಭಾರತಕ್ಕೆ ವಿಶೇಷವಾಗಿದ್ದು, ಸೆಮಿಫೈನಲ್ನಲ್ಲಿ 10 ಬಾರಿ ಒಲಿಂಪಿಕ್ ಚಾಂಪಿಯನ್ ಆಗಿರುವ ದಕ್ಷಿಣ ಕೊರಿಯಾವನ್ನು ಸೋಲಿಸಿ ಭಾರತ ಫೈನಲ್ಗೆ ಪ್ರವೇಶಿಸಿತ್ತು. 2021ರ ಬಳಿಕ ಮಹಿಳಾ ರಿಕರ್ವ್ ತಂಡಕ್ಕೆ ಇದು ಮೊದಲ ವಿಶ್ವಕಪ್ ಚಿನ್ನದ ಪದಕವಾಗಿದೆ.
2010ರಿಂದಲೇ ವಿಶ್ವಕಪ್ನಲ್ಲಿ ಭಾರತದ ಪ್ರಮುಖ ಬಿಲ್ಲುಗಾರ್ತಿಯಾಗಿ ಗುರುತಿಸಿಕೊಂಡಿರುವ ದೀಪಿಕಾ ಕುಮಾರಿ ಇದೀಗ ತಮ ಖಾತೆಗೆ ಏಳನೇ ವಿಶ್ವಕಪ್ ತಂಡ ಚಿನ್ನದ ಪದಕ ಸೇರಿಸಿಕೊಂಡಿದ್ದಾರೆ. 2021ರಲ್ಲಿ ಗ್ವಾಟೆಮಾಲಾ ಸಿಟಿ ಮತ್ತು ಪ್ಯಾರಿಸ್ನಲ್ಲಿ ಗೆದ್ದ ತಂಡದಲ್ಲೂ ಅವರು ಭಾಗಿಯಾಗಿದ್ದರು.
ಶಾಂಘೈನಲ್ಲಿ ಭಾರತದ ಪದಕ ಸಂಖ್ಯೆ ಈಗ ಎರಡುಕ್ಕೇರಿದೆ. ಇದಕ್ಕೂ ಮುನ್ನ ಕಾಂಪೌಂಡ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಭಾರತದ ಖಾತೆ ತೆರೆಯಿದ್ದರು.ಇನ್ನೊಂದೆಡೆ,ಸಿಮ್ರನ್ಜೀತ್ ಕೌರ್ ಮಹಿಳಾ ರಿಕರ್ವ್ ವೈಯಕ್ತಿಕ ವಿಭಾಗದ ಸೆಮಿಫೈನಲ್ಗೆ ಪ್ರವೇಶಿಸಿದ್ದು, ಜಯ ಸಾಧಿಸಿದರೆ ತಮ್ಮ ಮೊದಲ ವಿಶ್ವಕಪ್ ವೈಯಕ್ತಿಕ ಪದಕ ಖಚಿತಪಡಿಸಿಕೊಳ್ಳಲಿದ್ದಾರೆ.
ಪೂರ್ಣಕಾಲಿಕ ರಾಷ್ಟ್ರೀಯ ಕೋಚ್ ಇಲ್ಲದ ಪರಿಸ್ಥಿತಿಯಲ್ಲೂ ದೀಪಿಕಾ ಕುಮಾರಿ ತಂಡವನ್ನು ಮುನ್ನಡೆಸಿದ ರೀತಿ ಗಮನಸೆಳೆಯಿತು. ಬ್ರೇಕ್ಗಳ ವೇಳೆ ಹಾಗೂ ಬದಲಾವಣೆ ಸಂದರ್ಭಗಳಲ್ಲಿ ಅವರು ಸಹ ಆಟಗಾರ್ತಿಯರಿಗೆ ಧೈರ್ಯ ತುಂಬುತ್ತಾ ತಂಡದ ಆತ್ಮವಿಶ್ವಾಸ ಹೆಚ್ಚಿಸಿದರು.
ಫೈನಲ್ ಆರಂಭದಲ್ಲಿ ಭಾರತ ಮೇಲುಗೈ ಸಾಧಿಸಿತು. ಮೊದಲ ಸೆಟ್ನಲ್ಲಿ 54-53 ಅಂತರದಿಂದ ಗೆದ್ದ ಭಾರತಕ್ಕೆ ದೀಪಿಕಾ ಅವರ ನಿರಂತರ 10 ಅಂಕಗಳ ಶಾಟ್ಗಳು ಬಲವಾಯಿತು. ಆದರೆ ಎರಡನೇ ಸೆಟ್ನಲ್ಲಿ ಚೀನಾ ಬಲಿಷ್ಠ ಪ್ರದರ್ಶನ ನೀಡಿ 55-52 ಅಂತರದಿಂದ ಗೆದ್ದು 2-2 ಸಮಬಲ ಸಾಧಿಸಿತು. ಈ ಸೆಟ್ನಲ್ಲಿ ದೀಪಿಕಾ ಕೊನೆಯ ಶಾಟ್ನಲ್ಲಿ 7 ಅಂಕ ಮಾತ್ರ ಪಡೆದಿದ್ದರು.
ಮೂರನೇ ಸೆಟ್ನಲ್ಲಿ ಚೀನಾ 57-56 ಅಂತರದಿಂದ ಗೆದ್ದು 4-2 ಮುನ್ನಡೆ ಪಡೆದಿತು. ನಾಲ್ಕನೇ ಸೆಟ್ನಲ್ಲಿ ಭಾರತ 54 ಅಂಕಗಳಿಗೆ ಸೀಮಿತವಾದಾಗ ಚೀನಾಗೆ ಗೆಲುವಿಗೆ ಕೇವಲ ಒಂದು 9 ಅಂಕದ ಶಾಟ್ ಅಗತ್ಯವಿತ್ತು. ಆದರೆ ಯುವ ಆಟಗಾರ್ತಿ ಯು ಕ್ವಿ 8 ಅಂಕ ಮಾತ್ರ ಪಡೆದ ಕಾರಣ ಪಂದ್ಯ ಶೂಟ್ಆಫ್ಗೆ ತಲುಪಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…
ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್…
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….
ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.