National, Place, tourism

ಜಂತರ್ ಮಂತರ್

151

ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735 ರ ಸಮಯದಲ್ಲಿ ಈ ರಚನೆಗಳು ನಿರ್ಮಾಣಗೊಂಡಿವೆ. ಪ್ರಸ್ತುತ, ಲೇಖನವು ಜೈಪುರದಲ್ಲಿರುವ ಜಂತ ಮಂತರ್ ರಚನೆಗಳ ಕುರಿತು ತಿಳಿಸುತ್ತದೆ.

ಜಂತರ್ ಮಂತರ್: ಜೈಸಿಂಗನು ಖಗೋಳ ಶಾಸ್ತ್ರದಲ್ಲಿ ಅತೀವ ಆಸಕ್ತಿವುಳ್ಳವನಾಗಿದ್ದನು ಹಾಗೂ ಈ ರಚನೆಗಳ ಹಿಂದಿರುವ ಮುಖ್ಯ ಉದ್ದೇಶವೆಂದರೆ ಖಗೋಳಕ್ಕೆ ಸಂಬಂಧಿಸಿದ ವಿಷಯಗಳನ್ನು ಅವಲೋಕಿಸುವುದು ಹಾಗೂ ತಾರಾ ಮಂಡಲದಲ್ಲುಂಟಾಗುವ ಹಲವು ಬದಲಾವಣೆಗಳು, ಗ್ರಹಣಗಳ ಕುರಿತು ತಿಳಿಯುವುದು.

ಈ ಒಂದು ಸಂಗ್ರಹಾಲಯದ ಗುಚ್ಛಕ್ಕೆ ಹಿಂದಿನ ಕಾಲದ ತಾರಾಲಯ ಎಂದೂ ಸಹ ಕರೆಯಭುದು. ಒಟ್ಟು 14 ಬಗೆಯ ಪ್ರಮುಖ ಜಾಮಿತಿಯ (ರೇಖಾಗಣಿತ) ರಚನೆಗಳನ್ನು ಈ ವೀಕ್ಷಣಾಲಯದಲ್ಲಿ ಕಾಣಬಹುದಾಗಿದೆ.
ವಿವಿಧ ಭಂಗಿ ಹಾಗೂ ಕೋನಗಳಲ್ಲಿ ರಚಿಸಲಾದ ಈ ರಚನೆಗಳನ್ನು ವಿಶ್ಲೇಷಿಸುವ ಮೂಲಕ ಅಂದಿನ ಕಾಲದಲ್ಲಿ ತಾರೆಗಳ ಭ್ರಮಣೆ, ಗ್ರಹಣ, ಭೂಮಿಯ ಪ್ರದಕ್ಷಿಣೆಗಳ ಕುರಿತು ತಿಳಿಯಲಾಗುತ್ತಿತ್ತು.

ಇಲ್ಲಿನ ಪ್ರತಿಯೊಂದು ರಚನೆಗಳು ತಮ್ಮದೆ ಆದ ವಿಶೇಷತೆಗಳನ್ನು ಹೊಂದಿದ್ದು, ಯಾವುದೇ ರೀತಿಯ ಚಲನ ವಲನ ಸ್ಥಿತಿಯಲ್ಲಿರದೆ ಸ್ಥಿರವಾಗಿ ಭೂಮಿಯ ಮೇಲೆ ಸ್ಥಾಪಿಸಲ್ಪಟ್ಟಿವೆ.
ಇವುಗಳಲ್ಲಿ ಸಾಮ್ರಾಟ್ ಯಂತ್ರ ಎಂಬ ರಚನೆಯು ಎಲ್ಲಕ್ಕಿಂತ ದೊಡ್ಡದಾಗಿದ್ದು, 90 ಅಡಿಗಳಷ್ಟು ಎತ್ತರವಿದೆ. ಇದರ ಮುಖವು ಜೈಪುರ ನಗರದ ಅಕ್ಷಾಂಶಕ್ಕೆ 27 ಡಿಗ್ರಿಯಷ್ಟು ಕೋನದಲ್ಲಿ ನಿರ್ಮಿಸಲ್ಪಟ್ಟಿದೆ.
ಈ ರಚನೆಯು ದಿನದ ಸಮಯವನ್ನು ತನ್ನ ನೆರಳಿನ ಮೂಲಕ ಕರಾರುವಕ್ಕಾಗಿ ತಿಳಿಸುತ್ತದೆ. ಇದರ ಮೇಲಿರುವ ಚಿಕ್ಕದಾದ ಒಂದು ನಿಲ್ಲುವ ಜಾಗವು ಅಂದಿನ ಸಮಯದಲ್ಲಿ ಗ್ರಹಣ ಹಾಗೂ ಮಳೆಯ ಸೂಚನೆಯನ್ನು ಘೋಷಿಸಲು ಬಳಸಲಾಗುತ್ತಿತ್ತು

ಇಲ್ಲಿನ ಪ್ರತಿಯೊಂದು ರಚನೆಗಳು ಅಳತೆ ಮಾಪಕವನ್ನು ಒಳಗೊಂಡಿವೆ. ಸ್ಥಳೀಯವಾಗಿ ದೊರೆತ ಕಲ್ಲಿನಿಂದಲೆ ನಿರ್ಮಿಸಲಾದ ಈ ರಚನೆಗಳಲ್ಲಿ ಅಳತೆಗಳನ್ನು ಕರಾರುವಕ್ಕಾಗಿ ಮುದ್ರಿಸಲಾಗಿದೆ. 1948 ರಲ್ಲಿ ಇದನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲಾಯಿತು.
ಸಾಮ್ರಾಟ್ ಯಂತ್ರವು (ರಚನೆ) ಸನ್ ಡಯಲ್ (ಸೂರ್ಯನ ಬೆಳಕಿನಿಂದ ಸಮಯ ಹೇಳುವ ಗಡಿಯಾರ) ಜೈಪುರದ ಸಮಯಕ್ಕೆ ಎರಡು ಕ್ಷಣಗಳ ವ್ಯತ್ಯಾಸ ಹೊಂದಿದ್ದು, ಇದರ ನೆರಳು ಪ್ರತಿ ಸೆಕೇಂಡಿಗೆ ಒಂದು ಮಿ.ಮೀ ಗಳಷ್ಟು ದೂರ ಚಲಿಸುತ್ತದೆ.
ಅಲ್ಲದೆ ಜ್ಯೋತಿಷ್ಯ ಹಾಗೂ ವೇದ ಜ್ಯೋತಿಷ್ಯ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಇದು ಭೇಟಿ ನೀಡಲೇಬೇಕಾದ ತಾಣವಾಗಿದೆ. ವೇದಗಳಲ್ಲಿ ನಮಗಿರುವ ನಂಬಿಕೆಯನ್ನು ಪ್ರಚುರಪಡಿಸುವಂತಹ ರಚನೆ ಇದಾಗಿದ್ದು ಭವ್ಯ ಭಾರತದ ಪುರಾತನ ಜ್ಞಾನದ ಪರಿಚಯ ಇಲ್ಲಿ ಭೇಟಿ ನೀಡಿದಾಗ ನಮಗುಂಟಾಗುತ್ತದೆ.
ಹೀಗೆ ಉತ್ತರ ಭಾರತದಲ್ಲಿ ಐದು ಜಂತರ್ ಮಂತರ್ ಗಳನ್ನು ನೋಡಬಹುದಾಗಿದ್ದು ಅವುಗಳಲ್ಲಿ ಜೈಪುರ ಹಾಗೂ ದೆಹಲಿಯ ಜಂತರ್ ಮಂತರ್ ಗಳು ಪ್ರಮುಖವಾಗಿವೆ ಮತ್ತು ಪ್ರಸಿದ್ಧಿ ಪಡೆದ ಪ್ರವಾಸಿ ಆಕರ್ಷಣೆಗಳಾಗಿವೆ.
ಜೈಪುರವು ರಾಜಸ್ಥಾನದ ರಾಜಧಾನಿ ಪಟ್ಟಣವಾಗಿದ್ದು, ಭಾರತದ ಬಹುತೇಕ ಎಲ್ಲ ಮಹಾನಗರಗಳಿಂದ ಇಲ್ಲಿಗೆ ಸುಲಭವಾಗಿ ತೆರಳಬಹುದು.



About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗುಡ್ ನ್ಯೂಸ್ ; ಅಂತೂ ಇಂತು ರಾಜ್ಯಕ್ಕೆ ನೆರೆ ಪರಿಹಾರವನ್ನು ಘೋಷಿಸಿದ ಕೇಂದ್ರ ಸರ್ಕಾರ…!!

    ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು  [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು  ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್​ಡಿಆರ್​ಎಫ್​) ಒಟ್ಟು1813.75 ಕೋಟಿ…

  • ಸುದ್ದಿ

    ಸೇತುವೆ ಮೇಲಿಂದ ಬಸ್ ಪಲ್ಟಿ…..29 ಪ್ರಯಾಣಿಕರ ಮರಣ…..!

    ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…

  • ಸುದ್ದಿ

    ಮಧ್ಯಾನ ಊಟದ ನಂತರ ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಶಾಲಾ ಮಕ್ಕಳು….!

    ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….

  • ಉಪಯುಕ್ತ ಮಾಹಿತಿ

    ಬಾಯಿ ಹುಣ್ಣಿಗೆ ಇಲ್ಲಿವೆ ಸುಲಭ ಮನೆ ಮದ್ದುಗಳು..!ತಿಳಿಯಲು ಈ ಲೇಖನ ಓದಿ ಮರೆಯದೇ ಎಲ್ಲರಿಗ್ಗು ಶೇರ್ ಮಾಡಿ ಉಪಯೋಗವಾಗಲಿ…

    ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…

  • ಸುದ್ದಿ

    ನಮ್ಮ ವೀರ ಯೋಧರ ದಾಳಿಯ ಭೀತಿಯಿಂದ ಓಡಿಹೋದ ಶಿಖಂಡಿ ಉಗ್ರರು…

    ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…