ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735 ರ ಸಮಯದಲ್ಲಿ ಈ ರಚನೆಗಳು ನಿರ್ಮಾಣಗೊಂಡಿವೆ. ಪ್ರಸ್ತುತ, ಲೇಖನವು ಜೈಪುರದಲ್ಲಿರುವ ಜಂತ ಮಂತರ್ ರಚನೆಗಳ ಕುರಿತು ತಿಳಿಸುತ್ತದೆ.

ಜಂತರ್ ಮಂತರ್: ಜೈಸಿಂಗನು ಖಗೋಳ ಶಾಸ್ತ್ರದಲ್ಲಿ ಅತೀವ ಆಸಕ್ತಿವುಳ್ಳವನಾಗಿದ್ದನು ಹಾಗೂ ಈ ರಚನೆಗಳ ಹಿಂದಿರುವ ಮುಖ್ಯ ಉದ್ದೇಶವೆಂದರೆ ಖಗೋಳಕ್ಕೆ ಸಂಬಂಧಿಸಿದ ವಿಷಯಗಳನ್ನು ಅವಲೋಕಿಸುವುದು ಹಾಗೂ ತಾರಾ ಮಂಡಲದಲ್ಲುಂಟಾಗುವ ಹಲವು ಬದಲಾವಣೆಗಳು, ಗ್ರಹಣಗಳ ಕುರಿತು ತಿಳಿಯುವುದು.

ಈ ಒಂದು ಸಂಗ್ರಹಾಲಯದ ಗುಚ್ಛಕ್ಕೆ ಹಿಂದಿನ ಕಾಲದ ತಾರಾಲಯ ಎಂದೂ ಸಹ ಕರೆಯಭುದು. ಒಟ್ಟು 14 ಬಗೆಯ ಪ್ರಮುಖ ಜಾಮಿತಿಯ (ರೇಖಾಗಣಿತ) ರಚನೆಗಳನ್ನು ಈ ವೀಕ್ಷಣಾಲಯದಲ್ಲಿ ಕಾಣಬಹುದಾಗಿದೆ.
ವಿವಿಧ ಭಂಗಿ ಹಾಗೂ ಕೋನಗಳಲ್ಲಿ ರಚಿಸಲಾದ ಈ ರಚನೆಗಳನ್ನು ವಿಶ್ಲೇಷಿಸುವ ಮೂಲಕ ಅಂದಿನ ಕಾಲದಲ್ಲಿ ತಾರೆಗಳ ಭ್ರಮಣೆ, ಗ್ರಹಣ, ಭೂಮಿಯ ಪ್ರದಕ್ಷಿಣೆಗಳ ಕುರಿತು ತಿಳಿಯಲಾಗುತ್ತಿತ್ತು.

ಇಲ್ಲಿನ ಪ್ರತಿಯೊಂದು ರಚನೆಗಳು ತಮ್ಮದೆ ಆದ ವಿಶೇಷತೆಗಳನ್ನು ಹೊಂದಿದ್ದು, ಯಾವುದೇ ರೀತಿಯ ಚಲನ ವಲನ ಸ್ಥಿತಿಯಲ್ಲಿರದೆ ಸ್ಥಿರವಾಗಿ ಭೂಮಿಯ ಮೇಲೆ ಸ್ಥಾಪಿಸಲ್ಪಟ್ಟಿವೆ.
ಇವುಗಳಲ್ಲಿ ಸಾಮ್ರಾಟ್ ಯಂತ್ರ ಎಂಬ ರಚನೆಯು ಎಲ್ಲಕ್ಕಿಂತ ದೊಡ್ಡದಾಗಿದ್ದು, 90 ಅಡಿಗಳಷ್ಟು ಎತ್ತರವಿದೆ. ಇದರ ಮುಖವು ಜೈಪುರ ನಗರದ ಅಕ್ಷಾಂಶಕ್ಕೆ 27 ಡಿಗ್ರಿಯಷ್ಟು ಕೋನದಲ್ಲಿ ನಿರ್ಮಿಸಲ್ಪಟ್ಟಿದೆ.
ಈ ರಚನೆಯು ದಿನದ ಸಮಯವನ್ನು ತನ್ನ ನೆರಳಿನ ಮೂಲಕ ಕರಾರುವಕ್ಕಾಗಿ ತಿಳಿಸುತ್ತದೆ. ಇದರ ಮೇಲಿರುವ ಚಿಕ್ಕದಾದ ಒಂದು ನಿಲ್ಲುವ ಜಾಗವು ಅಂದಿನ ಸಮಯದಲ್ಲಿ ಗ್ರಹಣ ಹಾಗೂ ಮಳೆಯ ಸೂಚನೆಯನ್ನು ಘೋಷಿಸಲು ಬಳಸಲಾಗುತ್ತಿತ್ತು

ಇಲ್ಲಿನ ಪ್ರತಿಯೊಂದು ರಚನೆಗಳು ಅಳತೆ ಮಾಪಕವನ್ನು ಒಳಗೊಂಡಿವೆ. ಸ್ಥಳೀಯವಾಗಿ ದೊರೆತ ಕಲ್ಲಿನಿಂದಲೆ ನಿರ್ಮಿಸಲಾದ ಈ ರಚನೆಗಳಲ್ಲಿ ಅಳತೆಗಳನ್ನು ಕರಾರುವಕ್ಕಾಗಿ ಮುದ್ರಿಸಲಾಗಿದೆ. 1948 ರಲ್ಲಿ ಇದನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲಾಯಿತು.
ಸಾಮ್ರಾಟ್ ಯಂತ್ರವು (ರಚನೆ) ಸನ್ ಡಯಲ್ (ಸೂರ್ಯನ ಬೆಳಕಿನಿಂದ ಸಮಯ ಹೇಳುವ ಗಡಿಯಾರ) ಜೈಪುರದ ಸಮಯಕ್ಕೆ ಎರಡು ಕ್ಷಣಗಳ ವ್ಯತ್ಯಾಸ ಹೊಂದಿದ್ದು, ಇದರ ನೆರಳು ಪ್ರತಿ ಸೆಕೇಂಡಿಗೆ ಒಂದು ಮಿ.ಮೀ ಗಳಷ್ಟು ದೂರ ಚಲಿಸುತ್ತದೆ.
ಅಲ್ಲದೆ ಜ್ಯೋತಿಷ್ಯ ಹಾಗೂ ವೇದ ಜ್ಯೋತಿಷ್ಯ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಇದು ಭೇಟಿ ನೀಡಲೇಬೇಕಾದ ತಾಣವಾಗಿದೆ. ವೇದಗಳಲ್ಲಿ ನಮಗಿರುವ ನಂಬಿಕೆಯನ್ನು ಪ್ರಚುರಪಡಿಸುವಂತಹ ರಚನೆ ಇದಾಗಿದ್ದು ಭವ್ಯ ಭಾರತದ ಪುರಾತನ ಜ್ಞಾನದ ಪರಿಚಯ ಇಲ್ಲಿ ಭೇಟಿ ನೀಡಿದಾಗ ನಮಗುಂಟಾಗುತ್ತದೆ.
ಹೀಗೆ ಉತ್ತರ ಭಾರತದಲ್ಲಿ ಐದು ಜಂತರ್ ಮಂತರ್ ಗಳನ್ನು ನೋಡಬಹುದಾಗಿದ್ದು ಅವುಗಳಲ್ಲಿ ಜೈಪುರ ಹಾಗೂ ದೆಹಲಿಯ ಜಂತರ್ ಮಂತರ್ ಗಳು ಪ್ರಮುಖವಾಗಿವೆ ಮತ್ತು ಪ್ರಸಿದ್ಧಿ ಪಡೆದ ಪ್ರವಾಸಿ ಆಕರ್ಷಣೆಗಳಾಗಿವೆ.
ಜೈಪುರವು ರಾಜಸ್ಥಾನದ ರಾಜಧಾನಿ ಪಟ್ಟಣವಾಗಿದ್ದು, ಭಾರತದ ಬಹುತೇಕ ಎಲ್ಲ ಮಹಾನಗರಗಳಿಂದ ಇಲ್ಲಿಗೆ ಸುಲಭವಾಗಿ ತೆರಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ…
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…