ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735 ರ ಸಮಯದಲ್ಲಿ ಈ ರಚನೆಗಳು ನಿರ್ಮಾಣಗೊಂಡಿವೆ. ಪ್ರಸ್ತುತ, ಲೇಖನವು ಜೈಪುರದಲ್ಲಿರುವ ಜಂತ ಮಂತರ್ ರಚನೆಗಳ ಕುರಿತು ತಿಳಿಸುತ್ತದೆ.
ಜಂತರ್ ಮಂತರ್: ಜೈಸಿಂಗನು ಖಗೋಳ ಶಾಸ್ತ್ರದಲ್ಲಿ ಅತೀವ ಆಸಕ್ತಿವುಳ್ಳವನಾಗಿದ್ದನು ಹಾಗೂ ಈ ರಚನೆಗಳ ಹಿಂದಿರುವ ಮುಖ್ಯ ಉದ್ದೇಶವೆಂದರೆ ಖಗೋಳಕ್ಕೆ ಸಂಬಂಧಿಸಿದ ವಿಷಯಗಳನ್ನು ಅವಲೋಕಿಸುವುದು ಹಾಗೂ ತಾರಾ ಮಂಡಲದಲ್ಲುಂಟಾಗುವ ಹಲವು ಬದಲಾವಣೆಗಳು, ಗ್ರಹಣಗಳ ಕುರಿತು ತಿಳಿಯುವುದು.
ಈ ಒಂದು ಸಂಗ್ರಹಾಲಯದ ಗುಚ್ಛಕ್ಕೆ ಹಿಂದಿನ ಕಾಲದ ತಾರಾಲಯ ಎಂದೂ ಸಹ ಕರೆಯಭುದು. ಒಟ್ಟು 14 ಬಗೆಯ ಪ್ರಮುಖ ಜಾಮಿತಿಯ (ರೇಖಾಗಣಿತ) ರಚನೆಗಳನ್ನು ಈ ವೀಕ್ಷಣಾಲಯದಲ್ಲಿ ಕಾಣಬಹುದಾಗಿದೆ.
ವಿವಿಧ ಭಂಗಿ ಹಾಗೂ ಕೋನಗಳಲ್ಲಿ ರಚಿಸಲಾದ ಈ ರಚನೆಗಳನ್ನು ವಿಶ್ಲೇಷಿಸುವ ಮೂಲಕ ಅಂದಿನ ಕಾಲದಲ್ಲಿ ತಾರೆಗಳ ಭ್ರಮಣೆ, ಗ್ರಹಣ, ಭೂಮಿಯ ಪ್ರದಕ್ಷಿಣೆಗಳ ಕುರಿತು ತಿಳಿಯಲಾಗುತ್ತಿತ್ತು.
ಇಲ್ಲಿನ ಪ್ರತಿಯೊಂದು ರಚನೆಗಳು ತಮ್ಮದೆ ಆದ ವಿಶೇಷತೆಗಳನ್ನು ಹೊಂದಿದ್ದು, ಯಾವುದೇ ರೀತಿಯ ಚಲನ ವಲನ ಸ್ಥಿತಿಯಲ್ಲಿರದೆ ಸ್ಥಿರವಾಗಿ ಭೂಮಿಯ ಮೇಲೆ ಸ್ಥಾಪಿಸಲ್ಪಟ್ಟಿವೆ.
ಇವುಗಳಲ್ಲಿ ಸಾಮ್ರಾಟ್ ಯಂತ್ರ ಎಂಬ ರಚನೆಯು ಎಲ್ಲಕ್ಕಿಂತ ದೊಡ್ಡದಾಗಿದ್ದು, 90 ಅಡಿಗಳಷ್ಟು ಎತ್ತರವಿದೆ. ಇದರ ಮುಖವು ಜೈಪುರ ನಗರದ ಅಕ್ಷಾಂಶಕ್ಕೆ 27 ಡಿಗ್ರಿಯಷ್ಟು ಕೋನದಲ್ಲಿ ನಿರ್ಮಿಸಲ್ಪಟ್ಟಿದೆ.
ಈ ರಚನೆಯು ದಿನದ ಸಮಯವನ್ನು ತನ್ನ ನೆರಳಿನ ಮೂಲಕ ಕರಾರುವಕ್ಕಾಗಿ ತಿಳಿಸುತ್ತದೆ. ಇದರ ಮೇಲಿರುವ ಚಿಕ್ಕದಾದ ಒಂದು ನಿಲ್ಲುವ ಜಾಗವು ಅಂದಿನ ಸಮಯದಲ್ಲಿ ಗ್ರಹಣ ಹಾಗೂ ಮಳೆಯ ಸೂಚನೆಯನ್ನು ಘೋಷಿಸಲು ಬಳಸಲಾಗುತ್ತಿತ್ತು
ಇಲ್ಲಿನ ಪ್ರತಿಯೊಂದು ರಚನೆಗಳು ಅಳತೆ ಮಾಪಕವನ್ನು ಒಳಗೊಂಡಿವೆ. ಸ್ಥಳೀಯವಾಗಿ ದೊರೆತ ಕಲ್ಲಿನಿಂದಲೆ ನಿರ್ಮಿಸಲಾದ ಈ ರಚನೆಗಳಲ್ಲಿ ಅಳತೆಗಳನ್ನು ಕರಾರುವಕ್ಕಾಗಿ ಮುದ್ರಿಸಲಾಗಿದೆ. 1948 ರಲ್ಲಿ ಇದನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲಾಯಿತು.
ಸಾಮ್ರಾಟ್ ಯಂತ್ರವು (ರಚನೆ) ಸನ್ ಡಯಲ್ (ಸೂರ್ಯನ ಬೆಳಕಿನಿಂದ ಸಮಯ ಹೇಳುವ ಗಡಿಯಾರ) ಜೈಪುರದ ಸಮಯಕ್ಕೆ ಎರಡು ಕ್ಷಣಗಳ ವ್ಯತ್ಯಾಸ ಹೊಂದಿದ್ದು, ಇದರ ನೆರಳು ಪ್ರತಿ ಸೆಕೇಂಡಿಗೆ ಒಂದು ಮಿ.ಮೀ ಗಳಷ್ಟು ದೂರ ಚಲಿಸುತ್ತದೆ.
ಅಲ್ಲದೆ ಜ್ಯೋತಿಷ್ಯ ಹಾಗೂ ವೇದ ಜ್ಯೋತಿಷ್ಯ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಇದು ಭೇಟಿ ನೀಡಲೇಬೇಕಾದ ತಾಣವಾಗಿದೆ. ವೇದಗಳಲ್ಲಿ ನಮಗಿರುವ ನಂಬಿಕೆಯನ್ನು ಪ್ರಚುರಪಡಿಸುವಂತಹ ರಚನೆ ಇದಾಗಿದ್ದು ಭವ್ಯ ಭಾರತದ ಪುರಾತನ ಜ್ಞಾನದ ಪರಿಚಯ ಇಲ್ಲಿ ಭೇಟಿ ನೀಡಿದಾಗ ನಮಗುಂಟಾಗುತ್ತದೆ.
ಹೀಗೆ ಉತ್ತರ ಭಾರತದಲ್ಲಿ ಐದು ಜಂತರ್ ಮಂತರ್ ಗಳನ್ನು ನೋಡಬಹುದಾಗಿದ್ದು ಅವುಗಳಲ್ಲಿ ಜೈಪುರ ಹಾಗೂ ದೆಹಲಿಯ ಜಂತರ್ ಮಂತರ್ ಗಳು ಪ್ರಮುಖವಾಗಿವೆ ಮತ್ತು ಪ್ರಸಿದ್ಧಿ ಪಡೆದ ಪ್ರವಾಸಿ ಆಕರ್ಷಣೆಗಳಾಗಿವೆ.
ಜೈಪುರವು ರಾಜಸ್ಥಾನದ ರಾಜಧಾನಿ ಪಟ್ಟಣವಾಗಿದ್ದು, ಭಾರತದ ಬಹುತೇಕ ಎಲ್ಲ ಮಹಾನಗರಗಳಿಂದ ಇಲ್ಲಿಗೆ ಸುಲಭವಾಗಿ ತೆರಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…