ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735 ರ ಸಮಯದಲ್ಲಿ ಈ ರಚನೆಗಳು ನಿರ್ಮಾಣಗೊಂಡಿವೆ. ಪ್ರಸ್ತುತ, ಲೇಖನವು ಜೈಪುರದಲ್ಲಿರುವ ಜಂತ ಮಂತರ್ ರಚನೆಗಳ ಕುರಿತು ತಿಳಿಸುತ್ತದೆ.

ಜಂತರ್ ಮಂತರ್: ಜೈಸಿಂಗನು ಖಗೋಳ ಶಾಸ್ತ್ರದಲ್ಲಿ ಅತೀವ ಆಸಕ್ತಿವುಳ್ಳವನಾಗಿದ್ದನು ಹಾಗೂ ಈ ರಚನೆಗಳ ಹಿಂದಿರುವ ಮುಖ್ಯ ಉದ್ದೇಶವೆಂದರೆ ಖಗೋಳಕ್ಕೆ ಸಂಬಂಧಿಸಿದ ವಿಷಯಗಳನ್ನು ಅವಲೋಕಿಸುವುದು ಹಾಗೂ ತಾರಾ ಮಂಡಲದಲ್ಲುಂಟಾಗುವ ಹಲವು ಬದಲಾವಣೆಗಳು, ಗ್ರಹಣಗಳ ಕುರಿತು ತಿಳಿಯುವುದು.

ಈ ಒಂದು ಸಂಗ್ರಹಾಲಯದ ಗುಚ್ಛಕ್ಕೆ ಹಿಂದಿನ ಕಾಲದ ತಾರಾಲಯ ಎಂದೂ ಸಹ ಕರೆಯಭುದು. ಒಟ್ಟು 14 ಬಗೆಯ ಪ್ರಮುಖ ಜಾಮಿತಿಯ (ರೇಖಾಗಣಿತ) ರಚನೆಗಳನ್ನು ಈ ವೀಕ್ಷಣಾಲಯದಲ್ಲಿ ಕಾಣಬಹುದಾಗಿದೆ.
ವಿವಿಧ ಭಂಗಿ ಹಾಗೂ ಕೋನಗಳಲ್ಲಿ ರಚಿಸಲಾದ ಈ ರಚನೆಗಳನ್ನು ವಿಶ್ಲೇಷಿಸುವ ಮೂಲಕ ಅಂದಿನ ಕಾಲದಲ್ಲಿ ತಾರೆಗಳ ಭ್ರಮಣೆ, ಗ್ರಹಣ, ಭೂಮಿಯ ಪ್ರದಕ್ಷಿಣೆಗಳ ಕುರಿತು ತಿಳಿಯಲಾಗುತ್ತಿತ್ತು.

ಇಲ್ಲಿನ ಪ್ರತಿಯೊಂದು ರಚನೆಗಳು ತಮ್ಮದೆ ಆದ ವಿಶೇಷತೆಗಳನ್ನು ಹೊಂದಿದ್ದು, ಯಾವುದೇ ರೀತಿಯ ಚಲನ ವಲನ ಸ್ಥಿತಿಯಲ್ಲಿರದೆ ಸ್ಥಿರವಾಗಿ ಭೂಮಿಯ ಮೇಲೆ ಸ್ಥಾಪಿಸಲ್ಪಟ್ಟಿವೆ.
ಇವುಗಳಲ್ಲಿ ಸಾಮ್ರಾಟ್ ಯಂತ್ರ ಎಂಬ ರಚನೆಯು ಎಲ್ಲಕ್ಕಿಂತ ದೊಡ್ಡದಾಗಿದ್ದು, 90 ಅಡಿಗಳಷ್ಟು ಎತ್ತರವಿದೆ. ಇದರ ಮುಖವು ಜೈಪುರ ನಗರದ ಅಕ್ಷಾಂಶಕ್ಕೆ 27 ಡಿಗ್ರಿಯಷ್ಟು ಕೋನದಲ್ಲಿ ನಿರ್ಮಿಸಲ್ಪಟ್ಟಿದೆ.
ಈ ರಚನೆಯು ದಿನದ ಸಮಯವನ್ನು ತನ್ನ ನೆರಳಿನ ಮೂಲಕ ಕರಾರುವಕ್ಕಾಗಿ ತಿಳಿಸುತ್ತದೆ. ಇದರ ಮೇಲಿರುವ ಚಿಕ್ಕದಾದ ಒಂದು ನಿಲ್ಲುವ ಜಾಗವು ಅಂದಿನ ಸಮಯದಲ್ಲಿ ಗ್ರಹಣ ಹಾಗೂ ಮಳೆಯ ಸೂಚನೆಯನ್ನು ಘೋಷಿಸಲು ಬಳಸಲಾಗುತ್ತಿತ್ತು

ಇಲ್ಲಿನ ಪ್ರತಿಯೊಂದು ರಚನೆಗಳು ಅಳತೆ ಮಾಪಕವನ್ನು ಒಳಗೊಂಡಿವೆ. ಸ್ಥಳೀಯವಾಗಿ ದೊರೆತ ಕಲ್ಲಿನಿಂದಲೆ ನಿರ್ಮಿಸಲಾದ ಈ ರಚನೆಗಳಲ್ಲಿ ಅಳತೆಗಳನ್ನು ಕರಾರುವಕ್ಕಾಗಿ ಮುದ್ರಿಸಲಾಗಿದೆ. 1948 ರಲ್ಲಿ ಇದನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲಾಯಿತು.
ಸಾಮ್ರಾಟ್ ಯಂತ್ರವು (ರಚನೆ) ಸನ್ ಡಯಲ್ (ಸೂರ್ಯನ ಬೆಳಕಿನಿಂದ ಸಮಯ ಹೇಳುವ ಗಡಿಯಾರ) ಜೈಪುರದ ಸಮಯಕ್ಕೆ ಎರಡು ಕ್ಷಣಗಳ ವ್ಯತ್ಯಾಸ ಹೊಂದಿದ್ದು, ಇದರ ನೆರಳು ಪ್ರತಿ ಸೆಕೇಂಡಿಗೆ ಒಂದು ಮಿ.ಮೀ ಗಳಷ್ಟು ದೂರ ಚಲಿಸುತ್ತದೆ.
ಅಲ್ಲದೆ ಜ್ಯೋತಿಷ್ಯ ಹಾಗೂ ವೇದ ಜ್ಯೋತಿಷ್ಯ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಇದು ಭೇಟಿ ನೀಡಲೇಬೇಕಾದ ತಾಣವಾಗಿದೆ. ವೇದಗಳಲ್ಲಿ ನಮಗಿರುವ ನಂಬಿಕೆಯನ್ನು ಪ್ರಚುರಪಡಿಸುವಂತಹ ರಚನೆ ಇದಾಗಿದ್ದು ಭವ್ಯ ಭಾರತದ ಪುರಾತನ ಜ್ಞಾನದ ಪರಿಚಯ ಇಲ್ಲಿ ಭೇಟಿ ನೀಡಿದಾಗ ನಮಗುಂಟಾಗುತ್ತದೆ.
ಹೀಗೆ ಉತ್ತರ ಭಾರತದಲ್ಲಿ ಐದು ಜಂತರ್ ಮಂತರ್ ಗಳನ್ನು ನೋಡಬಹುದಾಗಿದ್ದು ಅವುಗಳಲ್ಲಿ ಜೈಪುರ ಹಾಗೂ ದೆಹಲಿಯ ಜಂತರ್ ಮಂತರ್ ಗಳು ಪ್ರಮುಖವಾಗಿವೆ ಮತ್ತು ಪ್ರಸಿದ್ಧಿ ಪಡೆದ ಪ್ರವಾಸಿ ಆಕರ್ಷಣೆಗಳಾಗಿವೆ.
ಜೈಪುರವು ರಾಜಸ್ಥಾನದ ರಾಜಧಾನಿ ಪಟ್ಟಣವಾಗಿದ್ದು, ಭಾರತದ ಬಹುತೇಕ ಎಲ್ಲ ಮಹಾನಗರಗಳಿಂದ ಇಲ್ಲಿಗೆ ಸುಲಭವಾಗಿ ತೆರಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…