ಸುದ್ದಿ

ಜಗತ್ತನ್ನ ಆಳಲು ಸಿದ್ದವಾಗಿವೆ ಟೆಕ್ನಾಲಜಿ ಕಂಪನಿಗಳು…!

32

ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು?

http://www.dreamstime.com/royalty-free-stock-images-top-computer-companies-world-kiev-ukraine-may-logotype-collection-well-known-technologies-monitor-screen-image41023829

ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ ಕಂಪನಿಗಳು. ಮೊದಲೇ ಹೇಳಿದಂತೆ 2007 ರ ವರೆಗೆ ಜಗತ್ತನ್ನ ಆಳುತ್ತಿದ್ದದ್ದು ಬ್ಯಾಂಕಿಂಗ್ ವ್ಯವಸ್ಥೆ . ಇದೀಗ ಇದು ಟೆಕ್ನಾಲಜಿ ಕಂಪನಿಗಳ ಕೈ ಸೇರಿದೆ . ಜಗತ್ತು ಹೆಚ್ಚೆಚ್ಚು ನಗದನ್ನ ತೊರೆದು ಡಿಜಿಟಲ್ ಹಣವನ್ನ ಅಪ್ಪುವುದಕ್ಕೆ ಶುರು ಮಾಡಿದೆ. ಹಾಗಾಗಿ ಟೆಕ್ನಾಲಜಿ ಕಂಪನಿಗಳು ಹಣಕಾಸು ವಹಿವಾಟಿನ ಮೇಲೆ ತಮ್ಮ ಪ್ರಭಾವವನ್ನ ಹೆಚ್ಚು ಮಾಡಿಕೊಂಡಿವೆ. ಇಂದು ಜಗತ್ತನ್ನ ಆಳುತ್ತಿರುವ ಪ್ರಮುಖ ಟೆಕ್ನಾಲಜಿ ಕಂಪೆನಿಗಳಲ್ಲಿ ಐದು ಅತ್ಯಂತ ಪ್ರಮುಖವಾದವು. ಅವೆಂದರೆ 1.ಗೂಗಲ್ 2.ಆಪಲ್ 3.ಮೈಕ್ರೋಸಾಫ್ಟ್ 4. ಅಮೆಜಾನ್ 5.ಫೇಸ್ಬುಕ್.ಇಷ್ಟಕ್ಕೂ ನಮಗೇಕೆ ಬ್ಯಾಂಕ್ಗಳ ಮೇಲೆ ಅಷ್ಟೊಂದು ವ್ಯಾಮೋಹ ? ಬ್ಯಾಂಕ್ ಏನು ಬದಲಿಸಲಾಗದ ಶಾಶ್ವತ ವ್ಯವಸ್ಥೆಯೇನು ಅಲ್ಲ . ಬ್ಯಾಂಕ್ ಅಂದರೇನು ? ಬೇರೊಬ್ಬರ ಹಣವನ್ನ ಪಡೆದು ಇನ್ನೊಬ್ಬರಿಗೆ ಸಾಲ ಕೊಡುವ ದಲ್ಲಾಳಿ ಸಂಸ್ಥೆಯಷ್ಟೇ . ತಾನು ಹಣ ಪಡೆದವರಿಗೆ ಒಂದಷ್ಟು ಕೊಟ್ಟು ತಾನು ಕೊಟ್ಟವರಿಂದ ಒಂದಷ್ಟು ವಸೂಲಿ ಮಾಡಿ ಮಧ್ಯದಲ್ಲಿ ಒಂದಷ್ಟು ಹಣವನ್ನ ಲಾಭವನ್ನಾಗಿ ಮಾಡಿಕೊಳ್ಳುವ ಒಂದು ದಲ್ಲಾಳಿ ಮನಸ್ಥಿತಿಯ ಸಂಸ್ಥೆ ಇಷ್ಟು ಬಿಟ್ಟು ಬೇರೇನೂ ಅಲ್ಲ . ಇದೆ ಕಾರಣಕ್ಕೆ ಬ್ಯಾಂಕ್ಗಳು ನೇಪಥ್ಯಕ್ಕೆ ಸೇರುತ್ತದೆ ಅಂದದ್ದು . ಗಮನಿಸಿ ನೋಡಿ ಈ ಕೆಲಸವನ್ನ ಬ್ಯಾಂಕಿನ ಸಹಾಯವಿಲ್ಲದೆ ಟೆಕ್ನಾಲಜಿ ಕಂಪನಿಗಳು ಮಾಡಬಲ್ಲವು .

ಆದರೆ ಇಂದಿನ ಕಾಲಘಟ್ಟದಲ್ಲಿ ಬ್ಯಾಂಕ್ ಇದೆ ಕಾರ್ಯವನ್ನ ಟೆಕ್ನಾಲಜಿ ಸಂಸ್ಥೆಗಳ ಸಹಾಯವಿಲ್ಲದೆ ಮಾಡಲಾರವು . ಅಂದರೆ ಸರಳವಾಗಿ ಬ್ಯಾಂಕಿಗೆ ಟೆಕ್ನಾಲಜಿ ಕಂಪನಿ ಬೇಕು ಟೆಕ್ನಾಲಜಿ ಕಂಪನಿಗೆ ಬ್ಯಾಂಕಿನ ಅವಶ್ಯಕತೆ ಇಲ್ಲ . ಇಂತಹ ಸಂದರ್ಭದಲ್ಲಿ ಬ್ಯಾಂಕ್ಗಳು ಹೇಗೆ ತಾನೇ ಉಳಿದಾವು ? ಬ್ಯಾಂಕ್ ಎನ್ನುವುದು ಇಂದಲ್ಲ ನಾಳೆ ತೆರೆಮರೆಗೆ ಸರಿಯಲಿರುವ ಹಳೆಯ ಪಾತ್ರಧಾರಿ ಅಷ್ಟೇ . ಹಾಗಾದರೆ ಟೆಕ್ನಾಲಜಿ ಕಂಪನಿಗಳು ಮುಳುಗುವುದಿಲ್ಲವೇ ? ಎನ್ನುವ ಪ್ರಶ್ನೆ ಕೂಡ ಸಹಜವಾಗಿ ಓದುಗರಲ್ಲಿ ಹುಟ್ಟುತ್ತದೆ . ಇದಕ್ಕೆ ಉತ್ತರ ಬಹಳ ಸರಳ . ಗಮನಿಸಿ ನೋಡಿ 2007 ಕ್ಕೂ ಮುಂಚೆ ಬ್ಯಾಂಕಿನ ಬಗ್ಗೆ ಮೇಲಿನ ಸಾಲಿನಲ್ಲಿ ಹೇಳಿದ ಹಾಗೆ ಹೇಳಿದ್ದರೆ ಜನ ಹಾಗೆ ಹೇಳಿದವನ ಮಾತನ್ನ ಸಂಶಯದಿಂದ ನೋಡುತ್ತಿದ್ದರು . ಏಕೆಂದರೆ ಅಂದಿನ ಕಾಲಘಟ್ಟದಲ್ಲಿ ಅದೇ ವ್ಯವಸ್ಥೆಯಾಗಿತ್ತು . ಅರ್ಥ ಇಷ್ಟೇ ಟೆಕ್ನಾಲಜಿ ಕಂಪನಿಗಳು ಸದ್ಯದ ನಮ್ಮ ಜಗತ್ತಿನ ಹೊಸ ವ್ಯವಸ್ಥೆ . ಅವು ತಮ್ಮ ಆಟದ ಅತ್ಯುನ್ನತ ಸ್ಥಿತಿಯನ್ನ ತಲುಪುವ ಹಂತದಲ್ಲಿದೆ . ಪರಿಸ್ಥಿತಿ ಹೀಗಿರುವಾಗ ಅವುಗಳ ಕುಸಿತದ ಬಗ್ಗೆ ಈಗಲೇ ಮಾತಾಡುವುದಕ್ಕೆ ಇದು ಸರಿಯಾದ ಸಮಯವಲ್ಲ .

ಅಲ್ಲದೆ ಟೆಕ್ನಾಲಜಿ ಕಂಪನಿಗಳು ತಮ್ಮ ಲಾಭದ ಬಹು ದೊಡ್ಡ ಮೊತ್ತವನ್ನ ರಿಸೆರ್ಚ್ ಅಂಡ್ ಡೆವಲಪ್ಮೆಂಟ್ ಗಾಗಿ ವಿನಿಯೋಗಿಸುತ್ತವೆ . ಮುಂದಿನ ಹತ್ತು ವರ್ಷದಲ್ಲಿ ಜಗತ್ತಿನಲ್ಲಿ ಆಗಬಹದುದಾದ ಬದಲಾವಣೆಗಳ ಊಹೆ ಮಾಡಿಕೊಂಡು ಅದಕ್ಕೆ ಬೇಕಾದ ಸಿದ್ಧತೆಗಳನ್ನ ನೆಡೆಸುತ್ತದೆ . ನಮ್ಮ ಬ್ಯಾಂಕಿಂಗ್ ವ್ಯವಸ್ಥೆ ಮುದೊಂದು ದಿನ ಹೀಗಾಗಬಹದು ಎನ್ನುವ ಪರಿಕಲ್ಪನೆ ಕೂಡ ಇಟ್ಟುಕೊಂಡಿರಲಿಲ್ಲ . ಹೀಗಾಗಿ ಅವು ಸೋತು ಟೆಕ್ನಾಲಜಿ ಕಂಪನಿಗಳಿಗೆ ಅಧಿಕಾರದ ಚುಕ್ಕಾಣಿ ಬಿಟ್ಟು ಕೊಡಲಿವೆ .
ಕೊನೆ ಮಾತು : ಮೈಕ್ರೋಸಾಫ್ಟ್ ಸಂಸ್ಥೆಯ ಸ್ಥಾಪಕ ಬಿಲ್ ಗೇಟ್ಸ್ ಹೇಳುತ್ತಾರೆ ‘ ನಾವು ಮುಂದಿನ ಎರಡು ವರ್ಷದಲ್ಲಿ ಸಾಧಿಸಬಹುದಾದ ವಿಷಯಗಳನ್ನ ಅತಿಯಾಗಿ ವರ್ಣಿಸಿ ಹೇಳುತ್ತೇವೆ . ಆದರೆ ಮುಂದಿನ ಹತ್ತು ವರ್ಷಗಳಲ್ಲಿ ಸಾಧಿಸಬಹದುದಾದ ವಿಷಯಗಳ ಬಗ್ಗೆ ನಮಗೆ ನಿಖರತೆಯಿಲ್ಲ ಹೀಗಾಗಿ ಅವುಗಳನ್ನ ನಾವು ಕಡೆಗಾಣಿಸುತ್ತೇವೆ ‘ . ಟೆಕ್ನಾಲಜಿ ಕಂಪನಿಗಳು ನಮ್ಮನ್ನಾಳುವ ಸಂಸ್ಥೆಗಳು ಇದರಲ್ಲಿ ಸಂಶಯ ಬೇಡ . .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • karnataka

    ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

    ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…

  • ಆಧ್ಯಾತ್ಮ, ವಿಜ್ಞಾನ

    ವ್ಯಾಸ ಮಹರ್ಷಿಗಳು ಆ ಕಾಲದಲ್ಲೇ ಹೇಳಿದ್ದನ್ನು, ಕಂಡುಹಿಡಿಯುತ್ತಿರುವ ವಿಜ್ಞಾನಿಗಳು..!ನಿಜ..!ತಿಳಿಯಲು ಈ ಲೇಖನ ಓದಿ…

    ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….

  • ಸುದ್ದಿ

    ಕುಮಾರಣ್ಣ ಬಜೆಟ್ ನಲ್ಲಿ ರೈತರಿಗಾಗಿ ಮತ್ತೊಂದು ಭರ್ಜರಿ ಆಫರ್…

    ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…