ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು?

ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ ಕಂಪನಿಗಳು. ಮೊದಲೇ ಹೇಳಿದಂತೆ 2007 ರ ವರೆಗೆ ಜಗತ್ತನ್ನ ಆಳುತ್ತಿದ್ದದ್ದು ಬ್ಯಾಂಕಿಂಗ್ ವ್ಯವಸ್ಥೆ . ಇದೀಗ ಇದು ಟೆಕ್ನಾಲಜಿ ಕಂಪನಿಗಳ ಕೈ ಸೇರಿದೆ . ಜಗತ್ತು ಹೆಚ್ಚೆಚ್ಚು ನಗದನ್ನ ತೊರೆದು ಡಿಜಿಟಲ್ ಹಣವನ್ನ ಅಪ್ಪುವುದಕ್ಕೆ ಶುರು ಮಾಡಿದೆ. ಹಾಗಾಗಿ ಟೆಕ್ನಾಲಜಿ ಕಂಪನಿಗಳು ಹಣಕಾಸು ವಹಿವಾಟಿನ ಮೇಲೆ ತಮ್ಮ ಪ್ರಭಾವವನ್ನ ಹೆಚ್ಚು ಮಾಡಿಕೊಂಡಿವೆ. ಇಂದು ಜಗತ್ತನ್ನ ಆಳುತ್ತಿರುವ ಪ್ರಮುಖ ಟೆಕ್ನಾಲಜಿ ಕಂಪೆನಿಗಳಲ್ಲಿ ಐದು ಅತ್ಯಂತ ಪ್ರಮುಖವಾದವು. ಅವೆಂದರೆ 1.ಗೂಗಲ್ 2.ಆಪಲ್ 3.ಮೈಕ್ರೋಸಾಫ್ಟ್ 4. ಅಮೆಜಾನ್ 5.ಫೇಸ್ಬುಕ್.ಇಷ್ಟಕ್ಕೂ ನಮಗೇಕೆ ಬ್ಯಾಂಕ್ಗಳ ಮೇಲೆ ಅಷ್ಟೊಂದು ವ್ಯಾಮೋಹ ? ಬ್ಯಾಂಕ್ ಏನು ಬದಲಿಸಲಾಗದ ಶಾಶ್ವತ ವ್ಯವಸ್ಥೆಯೇನು ಅಲ್ಲ . ಬ್ಯಾಂಕ್ ಅಂದರೇನು ? ಬೇರೊಬ್ಬರ ಹಣವನ್ನ ಪಡೆದು ಇನ್ನೊಬ್ಬರಿಗೆ ಸಾಲ ಕೊಡುವ ದಲ್ಲಾಳಿ ಸಂಸ್ಥೆಯಷ್ಟೇ . ತಾನು ಹಣ ಪಡೆದವರಿಗೆ ಒಂದಷ್ಟು ಕೊಟ್ಟು ತಾನು ಕೊಟ್ಟವರಿಂದ ಒಂದಷ್ಟು ವಸೂಲಿ ಮಾಡಿ ಮಧ್ಯದಲ್ಲಿ ಒಂದಷ್ಟು ಹಣವನ್ನ ಲಾಭವನ್ನಾಗಿ ಮಾಡಿಕೊಳ್ಳುವ ಒಂದು ದಲ್ಲಾಳಿ ಮನಸ್ಥಿತಿಯ ಸಂಸ್ಥೆ ಇಷ್ಟು ಬಿಟ್ಟು ಬೇರೇನೂ ಅಲ್ಲ . ಇದೆ ಕಾರಣಕ್ಕೆ ಬ್ಯಾಂಕ್ಗಳು ನೇಪಥ್ಯಕ್ಕೆ ಸೇರುತ್ತದೆ ಅಂದದ್ದು . ಗಮನಿಸಿ ನೋಡಿ ಈ ಕೆಲಸವನ್ನ ಬ್ಯಾಂಕಿನ ಸಹಾಯವಿಲ್ಲದೆ ಟೆಕ್ನಾಲಜಿ ಕಂಪನಿಗಳು ಮಾಡಬಲ್ಲವು .

ಆದರೆ ಇಂದಿನ ಕಾಲಘಟ್ಟದಲ್ಲಿ ಬ್ಯಾಂಕ್ ಇದೆ ಕಾರ್ಯವನ್ನ ಟೆಕ್ನಾಲಜಿ ಸಂಸ್ಥೆಗಳ ಸಹಾಯವಿಲ್ಲದೆ ಮಾಡಲಾರವು . ಅಂದರೆ ಸರಳವಾಗಿ ಬ್ಯಾಂಕಿಗೆ ಟೆಕ್ನಾಲಜಿ ಕಂಪನಿ ಬೇಕು ಟೆಕ್ನಾಲಜಿ ಕಂಪನಿಗೆ ಬ್ಯಾಂಕಿನ ಅವಶ್ಯಕತೆ ಇಲ್ಲ . ಇಂತಹ ಸಂದರ್ಭದಲ್ಲಿ ಬ್ಯಾಂಕ್ಗಳು ಹೇಗೆ ತಾನೇ ಉಳಿದಾವು ? ಬ್ಯಾಂಕ್ ಎನ್ನುವುದು ಇಂದಲ್ಲ ನಾಳೆ ತೆರೆಮರೆಗೆ ಸರಿಯಲಿರುವ ಹಳೆಯ ಪಾತ್ರಧಾರಿ ಅಷ್ಟೇ . ಹಾಗಾದರೆ ಟೆಕ್ನಾಲಜಿ ಕಂಪನಿಗಳು ಮುಳುಗುವುದಿಲ್ಲವೇ ? ಎನ್ನುವ ಪ್ರಶ್ನೆ ಕೂಡ ಸಹಜವಾಗಿ ಓದುಗರಲ್ಲಿ ಹುಟ್ಟುತ್ತದೆ . ಇದಕ್ಕೆ ಉತ್ತರ ಬಹಳ ಸರಳ . ಗಮನಿಸಿ ನೋಡಿ 2007 ಕ್ಕೂ ಮುಂಚೆ ಬ್ಯಾಂಕಿನ ಬಗ್ಗೆ ಮೇಲಿನ ಸಾಲಿನಲ್ಲಿ ಹೇಳಿದ ಹಾಗೆ ಹೇಳಿದ್ದರೆ ಜನ ಹಾಗೆ ಹೇಳಿದವನ ಮಾತನ್ನ ಸಂಶಯದಿಂದ ನೋಡುತ್ತಿದ್ದರು . ಏಕೆಂದರೆ ಅಂದಿನ ಕಾಲಘಟ್ಟದಲ್ಲಿ ಅದೇ ವ್ಯವಸ್ಥೆಯಾಗಿತ್ತು . ಅರ್ಥ ಇಷ್ಟೇ ಟೆಕ್ನಾಲಜಿ ಕಂಪನಿಗಳು ಸದ್ಯದ ನಮ್ಮ ಜಗತ್ತಿನ ಹೊಸ ವ್ಯವಸ್ಥೆ . ಅವು ತಮ್ಮ ಆಟದ ಅತ್ಯುನ್ನತ ಸ್ಥಿತಿಯನ್ನ ತಲುಪುವ ಹಂತದಲ್ಲಿದೆ . ಪರಿಸ್ಥಿತಿ ಹೀಗಿರುವಾಗ ಅವುಗಳ ಕುಸಿತದ ಬಗ್ಗೆ ಈಗಲೇ ಮಾತಾಡುವುದಕ್ಕೆ ಇದು ಸರಿಯಾದ ಸಮಯವಲ್ಲ .

ಅಲ್ಲದೆ ಟೆಕ್ನಾಲಜಿ ಕಂಪನಿಗಳು ತಮ್ಮ ಲಾಭದ ಬಹು ದೊಡ್ಡ ಮೊತ್ತವನ್ನ ರಿಸೆರ್ಚ್ ಅಂಡ್ ಡೆವಲಪ್ಮೆಂಟ್ ಗಾಗಿ ವಿನಿಯೋಗಿಸುತ್ತವೆ . ಮುಂದಿನ ಹತ್ತು ವರ್ಷದಲ್ಲಿ ಜಗತ್ತಿನಲ್ಲಿ ಆಗಬಹದುದಾದ ಬದಲಾವಣೆಗಳ ಊಹೆ ಮಾಡಿಕೊಂಡು ಅದಕ್ಕೆ ಬೇಕಾದ ಸಿದ್ಧತೆಗಳನ್ನ ನೆಡೆಸುತ್ತದೆ . ನಮ್ಮ ಬ್ಯಾಂಕಿಂಗ್ ವ್ಯವಸ್ಥೆ ಮುದೊಂದು ದಿನ ಹೀಗಾಗಬಹದು ಎನ್ನುವ ಪರಿಕಲ್ಪನೆ ಕೂಡ ಇಟ್ಟುಕೊಂಡಿರಲಿಲ್ಲ . ಹೀಗಾಗಿ ಅವು ಸೋತು ಟೆಕ್ನಾಲಜಿ ಕಂಪನಿಗಳಿಗೆ ಅಧಿಕಾರದ ಚುಕ್ಕಾಣಿ ಬಿಟ್ಟು ಕೊಡಲಿವೆ .
ಕೊನೆ ಮಾತು : ಮೈಕ್ರೋಸಾಫ್ಟ್ ಸಂಸ್ಥೆಯ ಸ್ಥಾಪಕ ಬಿಲ್ ಗೇಟ್ಸ್ ಹೇಳುತ್ತಾರೆ ‘ ನಾವು ಮುಂದಿನ ಎರಡು ವರ್ಷದಲ್ಲಿ ಸಾಧಿಸಬಹುದಾದ ವಿಷಯಗಳನ್ನ ಅತಿಯಾಗಿ ವರ್ಣಿಸಿ ಹೇಳುತ್ತೇವೆ . ಆದರೆ ಮುಂದಿನ ಹತ್ತು ವರ್ಷಗಳಲ್ಲಿ ಸಾಧಿಸಬಹದುದಾದ ವಿಷಯಗಳ ಬಗ್ಗೆ ನಮಗೆ ನಿಖರತೆಯಿಲ್ಲ ಹೀಗಾಗಿ ಅವುಗಳನ್ನ ನಾವು ಕಡೆಗಾಣಿಸುತ್ತೇವೆ ‘ . ಟೆಕ್ನಾಲಜಿ ಕಂಪನಿಗಳು ನಮ್ಮನ್ನಾಳುವ ಸಂಸ್ಥೆಗಳು ಇದರಲ್ಲಿ ಸಂಶಯ ಬೇಡ . .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…