ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು?

ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ ಕಂಪನಿಗಳು. ಮೊದಲೇ ಹೇಳಿದಂತೆ 2007 ರ ವರೆಗೆ ಜಗತ್ತನ್ನ ಆಳುತ್ತಿದ್ದದ್ದು ಬ್ಯಾಂಕಿಂಗ್ ವ್ಯವಸ್ಥೆ . ಇದೀಗ ಇದು ಟೆಕ್ನಾಲಜಿ ಕಂಪನಿಗಳ ಕೈ ಸೇರಿದೆ . ಜಗತ್ತು ಹೆಚ್ಚೆಚ್ಚು ನಗದನ್ನ ತೊರೆದು ಡಿಜಿಟಲ್ ಹಣವನ್ನ ಅಪ್ಪುವುದಕ್ಕೆ ಶುರು ಮಾಡಿದೆ. ಹಾಗಾಗಿ ಟೆಕ್ನಾಲಜಿ ಕಂಪನಿಗಳು ಹಣಕಾಸು ವಹಿವಾಟಿನ ಮೇಲೆ ತಮ್ಮ ಪ್ರಭಾವವನ್ನ ಹೆಚ್ಚು ಮಾಡಿಕೊಂಡಿವೆ. ಇಂದು ಜಗತ್ತನ್ನ ಆಳುತ್ತಿರುವ ಪ್ರಮುಖ ಟೆಕ್ನಾಲಜಿ ಕಂಪೆನಿಗಳಲ್ಲಿ ಐದು ಅತ್ಯಂತ ಪ್ರಮುಖವಾದವು. ಅವೆಂದರೆ 1.ಗೂಗಲ್ 2.ಆಪಲ್ 3.ಮೈಕ್ರೋಸಾಫ್ಟ್ 4. ಅಮೆಜಾನ್ 5.ಫೇಸ್ಬುಕ್.ಇಷ್ಟಕ್ಕೂ ನಮಗೇಕೆ ಬ್ಯಾಂಕ್ಗಳ ಮೇಲೆ ಅಷ್ಟೊಂದು ವ್ಯಾಮೋಹ ? ಬ್ಯಾಂಕ್ ಏನು ಬದಲಿಸಲಾಗದ ಶಾಶ್ವತ ವ್ಯವಸ್ಥೆಯೇನು ಅಲ್ಲ . ಬ್ಯಾಂಕ್ ಅಂದರೇನು ? ಬೇರೊಬ್ಬರ ಹಣವನ್ನ ಪಡೆದು ಇನ್ನೊಬ್ಬರಿಗೆ ಸಾಲ ಕೊಡುವ ದಲ್ಲಾಳಿ ಸಂಸ್ಥೆಯಷ್ಟೇ . ತಾನು ಹಣ ಪಡೆದವರಿಗೆ ಒಂದಷ್ಟು ಕೊಟ್ಟು ತಾನು ಕೊಟ್ಟವರಿಂದ ಒಂದಷ್ಟು ವಸೂಲಿ ಮಾಡಿ ಮಧ್ಯದಲ್ಲಿ ಒಂದಷ್ಟು ಹಣವನ್ನ ಲಾಭವನ್ನಾಗಿ ಮಾಡಿಕೊಳ್ಳುವ ಒಂದು ದಲ್ಲಾಳಿ ಮನಸ್ಥಿತಿಯ ಸಂಸ್ಥೆ ಇಷ್ಟು ಬಿಟ್ಟು ಬೇರೇನೂ ಅಲ್ಲ . ಇದೆ ಕಾರಣಕ್ಕೆ ಬ್ಯಾಂಕ್ಗಳು ನೇಪಥ್ಯಕ್ಕೆ ಸೇರುತ್ತದೆ ಅಂದದ್ದು . ಗಮನಿಸಿ ನೋಡಿ ಈ ಕೆಲಸವನ್ನ ಬ್ಯಾಂಕಿನ ಸಹಾಯವಿಲ್ಲದೆ ಟೆಕ್ನಾಲಜಿ ಕಂಪನಿಗಳು ಮಾಡಬಲ್ಲವು .

ಆದರೆ ಇಂದಿನ ಕಾಲಘಟ್ಟದಲ್ಲಿ ಬ್ಯಾಂಕ್ ಇದೆ ಕಾರ್ಯವನ್ನ ಟೆಕ್ನಾಲಜಿ ಸಂಸ್ಥೆಗಳ ಸಹಾಯವಿಲ್ಲದೆ ಮಾಡಲಾರವು . ಅಂದರೆ ಸರಳವಾಗಿ ಬ್ಯಾಂಕಿಗೆ ಟೆಕ್ನಾಲಜಿ ಕಂಪನಿ ಬೇಕು ಟೆಕ್ನಾಲಜಿ ಕಂಪನಿಗೆ ಬ್ಯಾಂಕಿನ ಅವಶ್ಯಕತೆ ಇಲ್ಲ . ಇಂತಹ ಸಂದರ್ಭದಲ್ಲಿ ಬ್ಯಾಂಕ್ಗಳು ಹೇಗೆ ತಾನೇ ಉಳಿದಾವು ? ಬ್ಯಾಂಕ್ ಎನ್ನುವುದು ಇಂದಲ್ಲ ನಾಳೆ ತೆರೆಮರೆಗೆ ಸರಿಯಲಿರುವ ಹಳೆಯ ಪಾತ್ರಧಾರಿ ಅಷ್ಟೇ . ಹಾಗಾದರೆ ಟೆಕ್ನಾಲಜಿ ಕಂಪನಿಗಳು ಮುಳುಗುವುದಿಲ್ಲವೇ ? ಎನ್ನುವ ಪ್ರಶ್ನೆ ಕೂಡ ಸಹಜವಾಗಿ ಓದುಗರಲ್ಲಿ ಹುಟ್ಟುತ್ತದೆ . ಇದಕ್ಕೆ ಉತ್ತರ ಬಹಳ ಸರಳ . ಗಮನಿಸಿ ನೋಡಿ 2007 ಕ್ಕೂ ಮುಂಚೆ ಬ್ಯಾಂಕಿನ ಬಗ್ಗೆ ಮೇಲಿನ ಸಾಲಿನಲ್ಲಿ ಹೇಳಿದ ಹಾಗೆ ಹೇಳಿದ್ದರೆ ಜನ ಹಾಗೆ ಹೇಳಿದವನ ಮಾತನ್ನ ಸಂಶಯದಿಂದ ನೋಡುತ್ತಿದ್ದರು . ಏಕೆಂದರೆ ಅಂದಿನ ಕಾಲಘಟ್ಟದಲ್ಲಿ ಅದೇ ವ್ಯವಸ್ಥೆಯಾಗಿತ್ತು . ಅರ್ಥ ಇಷ್ಟೇ ಟೆಕ್ನಾಲಜಿ ಕಂಪನಿಗಳು ಸದ್ಯದ ನಮ್ಮ ಜಗತ್ತಿನ ಹೊಸ ವ್ಯವಸ್ಥೆ . ಅವು ತಮ್ಮ ಆಟದ ಅತ್ಯುನ್ನತ ಸ್ಥಿತಿಯನ್ನ ತಲುಪುವ ಹಂತದಲ್ಲಿದೆ . ಪರಿಸ್ಥಿತಿ ಹೀಗಿರುವಾಗ ಅವುಗಳ ಕುಸಿತದ ಬಗ್ಗೆ ಈಗಲೇ ಮಾತಾಡುವುದಕ್ಕೆ ಇದು ಸರಿಯಾದ ಸಮಯವಲ್ಲ .

ಅಲ್ಲದೆ ಟೆಕ್ನಾಲಜಿ ಕಂಪನಿಗಳು ತಮ್ಮ ಲಾಭದ ಬಹು ದೊಡ್ಡ ಮೊತ್ತವನ್ನ ರಿಸೆರ್ಚ್ ಅಂಡ್ ಡೆವಲಪ್ಮೆಂಟ್ ಗಾಗಿ ವಿನಿಯೋಗಿಸುತ್ತವೆ . ಮುಂದಿನ ಹತ್ತು ವರ್ಷದಲ್ಲಿ ಜಗತ್ತಿನಲ್ಲಿ ಆಗಬಹದುದಾದ ಬದಲಾವಣೆಗಳ ಊಹೆ ಮಾಡಿಕೊಂಡು ಅದಕ್ಕೆ ಬೇಕಾದ ಸಿದ್ಧತೆಗಳನ್ನ ನೆಡೆಸುತ್ತದೆ . ನಮ್ಮ ಬ್ಯಾಂಕಿಂಗ್ ವ್ಯವಸ್ಥೆ ಮುದೊಂದು ದಿನ ಹೀಗಾಗಬಹದು ಎನ್ನುವ ಪರಿಕಲ್ಪನೆ ಕೂಡ ಇಟ್ಟುಕೊಂಡಿರಲಿಲ್ಲ . ಹೀಗಾಗಿ ಅವು ಸೋತು ಟೆಕ್ನಾಲಜಿ ಕಂಪನಿಗಳಿಗೆ ಅಧಿಕಾರದ ಚುಕ್ಕಾಣಿ ಬಿಟ್ಟು ಕೊಡಲಿವೆ .
ಕೊನೆ ಮಾತು : ಮೈಕ್ರೋಸಾಫ್ಟ್ ಸಂಸ್ಥೆಯ ಸ್ಥಾಪಕ ಬಿಲ್ ಗೇಟ್ಸ್ ಹೇಳುತ್ತಾರೆ ‘ ನಾವು ಮುಂದಿನ ಎರಡು ವರ್ಷದಲ್ಲಿ ಸಾಧಿಸಬಹುದಾದ ವಿಷಯಗಳನ್ನ ಅತಿಯಾಗಿ ವರ್ಣಿಸಿ ಹೇಳುತ್ತೇವೆ . ಆದರೆ ಮುಂದಿನ ಹತ್ತು ವರ್ಷಗಳಲ್ಲಿ ಸಾಧಿಸಬಹದುದಾದ ವಿಷಯಗಳ ಬಗ್ಗೆ ನಮಗೆ ನಿಖರತೆಯಿಲ್ಲ ಹೀಗಾಗಿ ಅವುಗಳನ್ನ ನಾವು ಕಡೆಗಾಣಿಸುತ್ತೇವೆ ‘ . ಟೆಕ್ನಾಲಜಿ ಕಂಪನಿಗಳು ನಮ್ಮನ್ನಾಳುವ ಸಂಸ್ಥೆಗಳು ಇದರಲ್ಲಿ ಸಂಶಯ ಬೇಡ . .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …
ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…
ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…
ಡಿಜಿಟಲ್ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.