ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ. ನಾವೆಲ್ಲ ಪರ್ಸಿನಲ್ಲಿ ದುಡ್ಡು ಇಟ್ಟುಕೊಳ್ಳುತ್ತೇವಲ್ಲ, ಬಿಟ್ಕಾಯಿನ್ಗಳನ್ನು ಕಂಪ್ಯೂಟರಿನಲ್ಲಿರುವ ಡಿಜಿಟಲ್ ವ್ಯಾಲೆಟ್ಗಳಲ್ಲಷ್ಟೆ ಇಟ್ಟುಕೊಳ್ಳುವುದು ಸಾಧ್ಯ

ಬಳಕೆದಾರರು ಹೇಳುವ ಪ್ರಕಾರ ಇದು ಒಂದು ಡಿಜಿಟಲ್ ಕರೆನ್ಸಿ. ಜಗತ್ತಿನ ಯಾವುದೇ ಭಾಗದಿಂದ ಕೆಲವೇ ನಿಮಿಷಗಳಲ್ಲಿ ಹಣ ಕಳಿಸಲು ಅಥವಾ ಪಡೆಯಲು ಬಳಸಬಹುದು. ಕೆಲವು ಕಡೆಗಳಲ್ಲಿ ಉತ್ಪನ್ನ ಮತ್ತು ಸೇವೆಗಳನ್ನು ಪಡೆಯಲು ಕೂಡ ಉಪಯೋಗಿಸಬಹುದು. ಷೇರು ಮತ್ತು ಚಿನ್ನದಲ್ಲಿ ಹೂಡಿಕೆ ಬೇಕಾದರೂ ಮಾಡಬಹುದು. ಆದರೆ ಇಲ್ಲಿ ವರ್ಗಾವಣೆಗಳೆಲ್ಲವೂ ಇಂಟರ್ನೆಟ್ ಮೂಲಕ ನಡೆಯುತ್ತದೆ. ಬಿಟ್ಕಾಯಿನ್ನ ಮೌಲ್ಯವನ್ನು ಕೊನೆಯಲ್ಲಿ ನಿಮ್ಮ ಆಯ್ಕೆಯ ಕರೆನ್ಸಿಗೆ ಪರಿವರ್ತಿಸಿಕೊಳ್ಳಬಹುದು.

ಬಿಟ್ಕಾಯಿನ್ ವ್ಯವಸ್ಥೆ ಪರಿಚಯವಾದದ್ದು 2009ರಲ್ಲಿ. ಸಟೋಶಿ ನಕಾಮೋಟೋ ಎಂಬ ಹೆಸರಿನ ಅಜ್ಞಾತ ವ್ಯಕ್ತಿಯನ್ನು ಬಿಟ್ಕಾಯಿನ್ ಸೃಷ್ಟಿಕರ್ತ ಎಂದು ಗುರುತಿಸಲಾಗುತ್ತದೆ. ಆದರೆ, ಅದು ಯಾರಾದರೂ ನಿಜವಾದ ಹೆಸರೋ ಅಲ್ಲವೋ ಎನ್ನುವುದರ ಬಗ್ಗೆ ಸಾಕಷ್ಟು ಸಂದೇಹಗಳಿವೆ. ಅಷ್ಟೇ ಅಲ್ಲ, ಬಿಟ್ಕಾಯಿನ್ ಸೃಷ್ಟಿಯ ಹಿಂದೆ ದೊಡ್ಡದೊಂದು ತಂಡವೇ ಇರುವ ಸಂಶಯ ಕೂಡ ಇದೆ.
ಪ್ರತಿ ದೇಶದಲ್ಲೂ ಚಲಾವಣೆಯಲ್ಲಿರುವ ಕರೆನ್ಸಿಗಳಂತೆ ಬಿಟ್ಕಾಯಿನ್ ಅನ್ನು ಯಾವುದೇ ಬ್ಯಾಂಕ್ ಅಥವಾ ಸರಕಾರ ನಿಯಂತ್ರಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಬಿಟ್ಕಾಯಿನ್ ಕರೆನ್ಸಿಯನ್ನು ಗೊತ್ತುಗುರಿಯಿಲ್ಲದಂತೆ ಚಲಾವಣೆಗೆ ತರಲಾಗುತ್ತದೆ ಎಂದೇನೂ ಇಲ್ಲ, ಪೂರೈಕೆ ಹೆಚ್ಚಾಗಿ ಹಣದುಬ್ಬರ ಉಂಟಾಗದಂತೆ ತಡೆಯಲು ಪ್ರತಿ ಬಾರಿಯೂ ನಿರ್ದಿಷ್ಟ ಪ್ರಮಾಣದ ಬಿಟ್ಕಾಯಿನ್ಗಳಷ್ಟೆ ಹೊಸದಾಗಿ ಚಲಾವಣೆಗೆ ಬರುತ್ತವೆ.

ಬಿಟ್ಕಾಯಿನ್ ಸಂಪಾದಿಸಬೇಕು ಎನ್ನುವವರು ತಮ್ಮ ಕಂಪ್ಯೂಟರುಗಳಲ್ಲಿ ಒಂದು ವಿಶೇಷ ತಂತ್ರಾಂಶವನ್ನು ಅನುಸ್ಥಾಪಿಸಿಕೊಳ್ಳಬೇಕು. ಅನೇಕ ಜನರು ಹೀಗೆ ಸೇರಿದಾಗ ದೊರಕುವ ಸಂಸ್ಕರಣಾ ಸಾಮರ್ಥಯವನ್ನು ಬಳಸಿಕೊಂಡು ವಿಶ್ವದೆಲ್ಲೆಡೆ ಬಿಟ್ಕಾಯಿನ್ ಬಳಕೆದಾರರು ನಡೆಸುವ ವಹಿವಾಟನ್ನೆಲ್ಲ ಸಂಸ್ಕರಿಸುವ ಕೆಲಸ ನಡೆಯುತ್ತದೆ. ಈ ಪ್ರಕ್ರಿಯೆಯಲ್ಲಿ ಹಲವಾರು ಸಂಕೀರ್ಣ ಲೆಕ್ಕಾಚಾರಗಳನ್ನು ಕೈಗೊಳ್ಳಬೇಕಾದ್ದರಿಂದ ಅದು ಕ್ಲಿಷ್ಟವಷ್ಟೇ ಅಲ್ಲ, ನಿಧಾನವೂ ಹೌದು. ಈ ಪ್ರಕ್ರಿಯೆ ಮುಂದುವರಿಯುತ್ತ ಹೋದಂತೆ ಅದರಲ್ಲಿ ನೆರವಾದವರಿಗೆ ಬಿಟ್ಕಾಯಿನ್ ರೂಪದ ಹಣ ದೊರಕುತ್ತ ಹೋಗುತ್ತದೆ, ಆ ಮೂಲಕ ಚಲಾವಣೆಯಲ್ಲಿರುವ ಬಿಟ್ಕಾಯಿನ್ಗಳ ಪ್ರಮಾಣವೂ ಹೆಚ್ಚುತ್ತದೆ. ಬಳ್ಳಾರಿಯಲ್ಲಿ ಮಣ್ಣು ಬಗೆಯುವ ಬದಲು ಕಂಪ್ಯೂಟರಿನಲ್ಲಿ ಬಿಟ್ಕಾಯಿನ್ ಕೂಡಿಸುವ ಈ ಪ್ರಕ್ರಿಯೆಗೂ ಮೈನಿಂಗ್ ಎಂದೇ ಹೆಸರು. ಈಚೆಗೆ ಬಿಟ್ಕಾಯಿನ್ ಗಣಿಗಾರಿಕೆಯ ಈ ಕೆಲಸ ಸಾಧಾರಣ ಕಂಪ್ಯೂಟರುಗಳ ಸಾಮರ್ಥಯವನ್ನು ಮೀರಿ ಬೆಳೆದುಬಿಟ್ಟಿರುವುದರಿಂದ ಅದಕ್ಕೆಂದೇ ಮೈನರ್ಗಳೆಂಬ ವಿಶೇಷ ಯಂತ್ರಾಂಶಗಳೂ ತಯಾರಾಗುತ್ತಿವೆ.

ಇತ್ತೀಚೆಗೆ ಒಂದು ಬಿಟ್ಕಾಯಿನ್ನ ಬೆಲೆ 10,000 ಡಾಲರ್ನಷ್ಟು ಏರಿರುವುದು ವಿಶ್ವದೆಲ್ಲೆಡೆ ಆತಂಕಕ್ಕೆ ಕಾರಣವಾಗಿದ್ದು, ಇದನ್ನು ಷೇರು ಮಾರುಕಟ್ಟೆ ಜೂಜು ಎಂದು ಕರೆಯುತ್ತಿದ್ದಾರೆ. ಕೇವಲ 4 ತಿಂಗಳಿನಲ್ಲಿ 6 ಲಕ್ಷ ಬೆಲೆ ಏರಿಕೆಯಾಗಿರುವುದು ಇದಕ್ಕೆ ಉದಾಹರಣೆಯಾಗಿದ್ದು, ಇಷ್ಟೆಲ್ಲ ದುಡ್ಡು ಯಾಕೆ ಸುರಿಯುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ.!!

ಇದರ ಅನುಕೂಲಗಳು ಮತ್ತು ಅನಾನುಕುಲಗಳ ಬಗ್ಗೆ ತಿಳಿಯಿರಿ…

ಹಣದ ತ್ವರಿತ ವರ್ಗಾವಣೆಗೆ ಇಲ್ಲಿ ಸಂಸ್ಕರಣೆ ಶುಲ್ಕ ಇರುವುದಿಲ್ಲ. ಇದ್ದರೂ ಅತ್ಯಲ್ಪ. ವಿಶ್ವಾದ್ಯಂತ ಚಲಾವಣೆ ಮಾಡಬಹುದು. ಆದರೆ ಚೀನಾ ಇತ್ತೀಚೆಗೆ ತನ್ನ ಬ್ಯಾಂಕಿಂಗ್ ವಲಯದಲ್ಲಿ ಬಳಕೆಯನ್ನು ನಿಷೇಧಿಸಿದೆ. ಉತ್ಪನ್ನ, ಸೇವೆಗಳ ಖರೀದಿಗೆ ಬಳಸಬಹುದು. ಒಂದು ವೇಳೆ ನಷ್ಟವಾದರೆ ತಡೆದುಕೊಳ್ಳಬಲ್ಲೆ ಎಂಬ ನಂಬಿಕೆ ಇದ್ದರೆ ಹೂಡಿಕೆಯನ್ನೂ ಮಾಡಬಹುದು. ವರ್ಡ್ಪ್ರೆಸ್, ರೆಡಿಟ್, ನೇಮ್ಚೀಪ್ ಮತ್ತು ಫ್ಲಾಟ್ಟರ್ ಮುಂತಾದ ಆನ್ಲೈನ್ ತಾಣಗಳು ಬಿಟ್ಕಾಯಿನ್ಗಳನ್ನು ನೇರವಾಗಿ ಸ್ವೀಕರಿಸುತ್ತವೆ.

ಬಿಟ್ಕಾಯಿನ್ಗಳು ಅಪರಾಧಿಗಳಿಗೆ ಆರ್ಥಿಕ ಅಪರಾಧಗಳನ್ನು ಎಸಗಲು ಹಾದಿ ಮಾಡಿಕೊಟ್ಟಿದೆ. ಮಾದಕ ದ್ರವ್ಯಗಳ ಕಳ್ಳಸಾಗಣೆದಾರರಿಗೆ ಹಣ ವರ್ಗಾವಣೆಗೆ ಬಿಟ್ಕಾಯಿನ್ಗಳು ಬಳಕೆಯಾಗುತ್ತದೆ. ಯಾಕೆಂದರೆ ಇಲ್ಲಿ ಹಣದ ವರ್ಗಾವಣೆ ಯಾರು ಯಾರಿಗೆ ಮಾಡಿದರು ಎಂಬ ವಿವರವನ್ನು ಪತ್ತೆ ಹಚ್ಚಲಾಗುವುದಿಲ್ಲ. ಇದರ ಬೆಲೆ ಕೂಡ ಕ್ಷಣ ಕ್ಷಣಕ್ಕೆ ತೀವ್ರ ಏರಿಳಿತವಾಗುತ್ತಿರುವುದರಿಂದ ಹೂಡಿಕೆದಾರರಿಗೆ ಯಾವಾಗ ಬೇಕಾದರೂ ಭಾರಿ ನಷ್ಟವಾಗಬಹುದು. ಅಲ್ಲದೆ ಬಳಕೆದಾರರು ಹೆಚ್ಚಿದಂತೆ ಲಭ್ಯತೆ ಕಡಿಮೆಯಾಗುತ್ತದೆ.

ಈಗ ಬೇರೊಬ್ಬರ ಬಿಟ್ಕಾಯಿನ್ಗಳನ್ನು ಕದ್ದು ಬಳಸುವ ವಂಚಕರೂ ಹುಟ್ಟಿಕೊಂಡಿದ್ದಾರೆ. ಕಳೆದ ಎರಡು-ಮೂರು ವರ್ಷಗಳಲ್ಲಿ ಬಳಕೆದಾರರ ಸಾವಿರಾರು ಬಿಟ್ಕಾಯಿನ್ಗಳು ಕಳ್ಳತನವಾದ ಅನೇಕ ಘಟನೆಗಳು ವರದಿಯಾಗಿವೆ. ಅಂತರಜಾಲದಲ್ಲಿರುವ ಬಿಟ್ಕಾಯಿನ್ ವಿನಿಮಯ ಕೇಂದ್ರಗಳಿಗೂ ಹಲವುಬಾರಿ ಕನ್ನಹಾಕಿದ ಕಳ್ಳರು ಅಲ್ಲೂ ತಮ್ಮ ಕೈಚಳಕ ತೋರಿಸಿದ್ದರು. ಅಂತಹ ಒಂದು ಸಂದರ್ಭದಲ್ಲಿ ಉಂಟಾದ ಗೊಂದಲ ಎಷ್ಟರಮಟ್ಟಿಗಿತ್ತು ಎಂದರೆ ಬಿಟ್ಕಾಯಿನ್ಗಳ ವಿನಿಮಯ ದರ ಒಮ್ಮೆಲೇ ಹತ್ತಾರು ಪಟ್ಟು ಕುಸಿದು ಅವುಗಳ ಅಸ್ತಿತ್ವಕ್ಕೇ ಸಂಚಕಾರ ಬರುವಂತಹ ಪರಿಸ್ಥಿತಿ ಉಂಟಾಗಿತ್ತು.

ಈ ಡಿಜಿಟಲ್ ಕರೆನ್ಸಿಗೆ ದೇಶದಲ್ಲಿ ಕಾನೂನಿನ ಮಾನ್ಯತೆ ಇಲ್ಲ. ಇವುಗಳ ಖರೀದಿ ಮತ್ತು ವಹಿವಾಟಿನ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗಲೇ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಸದ್ಯ ಬಿಟ್ಕಾಯಿನ್ ಮೇಲೆ ಯಾವುದೇ ಸರಕಾರ ಅಥವಾ ಕೇಂದ್ರೀಯ ಪ್ರಾಧಿಕಾರದ ನಿಯಂತ್ರಣ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ವಿವಿಧ ಸರಕಾರಗಳು ಬಿಟ್ಕಾಯಿನ್ ಮೇಲೆ ನಿರ್ಬಂಧ ಹೇರಲು ಪ್ರಯತ್ನಿಸಬಹುದು ಎಂಬ ಊಹೆ ಕೂಡ ಇದೆ. ಹಣಕಾಸು ಸಂಸ್ಥೆಗಳು ಬಿಟ್ಕಾಯಿನ್ ವಹಿವಾಟಿನಲ್ಲಿ ತೊಡಗದಂತೆ ಕೆಲದಿನಗಳ ಹಿಂದೆ ಚೀನಾದಲ್ಲಿ ಘೋಷಣೆಯಾದ ನಿರ್ಬಂಧ ಇದಕ್ಕೊಂದು ಉದಾಹರಣೆ.
ಸದ್ಯ ಬಿಟ್ಕಾಯಿನ್ ಮೇಲೆ ಯಾವುದೇ ಸರಕಾರ ಅಥವಾ ಕೇಂದ್ರೀಯ ಪ್ರಾಧಿಕಾರದ ನಿಯಂತ್ರಣ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ವಿವಿಧ ಸರಕಾರಗಳು ಬಿಟ್ಕಾಯಿನ್ ಮೇಲೆ ನಿರ್ಬಂಧ ಹೇರಲು ಪ್ರಯತ್ನಿಸಬಹುದು ಎಂಬ ಊಹೆ ಇದೆ.ಬಿಟ್ಕಾಯಿನ್ ಮೌಲ್ಯದಲ್ಲಿ ಬಹಳ ಕ್ಷಿಪ್ರವಾಗಿ ಸಂಭವಿಸುವ ಏರಿಳಿತಗಳಿಂದ ಅವುಗಳ ಸ್ಥಿರತೆಯ ಬಗೆಗೂ ಅನುಮಾನ ಮೂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…
ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.